Homeಕರ್ನಾಟಕಇರುಳಿಗರ ನೋವಿಗೆ ಕೊನೆ ಯಾವಾಗ? ವ್ಯಕ್ತಿ ಸಾವಿನ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡು

ಇರುಳಿಗರ ನೋವಿಗೆ ಕೊನೆ ಯಾವಾಗ? ವ್ಯಕ್ತಿ ಸಾವಿನ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡು

- Advertisement -
- Advertisement -

ಇರುಳಿಗ ಬುಡಕಟ್ಟು ಸಮುದಾಯದ ನೈಜ ಘಟನೆ ಆಧಾರಿಸಿ ತೆರೆಕಂಡ ‘ಜೈ ಭೀಮ್‌’ ಸಿನಿಮಾ ಬಿಡುಗಡೆಯಾದ ಬಳಿಕ ಬುಡಕಟ್ಟ ಸಮುದಾಯಗಳ ಕುರಿತು ಗಂಭೀರ ಚರ್ಚೆಗಳಾಗುತ್ತಿವೆ. ಅದರಲ್ಲೂ ಇರುಳಿಗರು ನಿತ್ಯವೂ ಅನುಭವಿಸುತ್ತಿರುವ ಕಷ್ಟಗಳು ಬೆಳಕಿಗೆ ಬರುತ್ತಿವೆ.

ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ಇರುಳಿಗ ಕುಟುಂಬಗಳಿದ್ದು, ಕನಿಷ್ಠ ಮೂಲಸೌಕರ್ಯವೂ ಇಲ್ಲದೆ ಈ ಸಮುದಾಯ ಸಂಕಷ್ಟ ಎದುರಿಸುತ್ತಿರುವುದು ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿಯುತ್ತಿದೆ.

ರಾಮನಗರ ತಾಲ್ಲೂಕಿನ ಕೂಟಗಲ್ ಬಳಿ ಇರುವ ಇರುಳಿಗ ಬುಡಕಟ್ಟು ಸಮುದಾಯ ದಶಕಗಳಿಂದಲೂ ಮೂಲಸೌಕರ್ಯವಿಲ್ಲದೆ ಒದ್ದಾಡುತ್ತಿದೆ. ಮಳೆ ಬಂದರಂತೂ ಇಲ್ಲಿರುವ 23 ಗುಡಿಸಲುಗಳಿಗೂ ನೀರು ನುಗ್ಗುತ್ತದೆ.

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ವಿಪರೀತ ನೀರು ಗುಡಿಸಲುಗಳಿಗೆ ನುಗ್ಗಿತ್ತು. ಅದರಿಂದ  ತಪ್ಪಿಸಿಕೊಳ್ಳಲು ಗುಡಿಸಲಿನಲ್ಲಿ ತೂಗುಯ್ಯಾಲೆಯ ರೀತಿ ನಿರ್ಮಿಸಿಕೊಂಡು (50) ಮಲಗಿದ್ದರು. ಆದರೆ ಮಧ್ಯರಾತ್ರಿ ಮೇಲಿನಿಂದ ಕುಸಿದು ಸಾವನ್ನಪ್ಪಿದ್ದಾರೆ.

ರತ್ನಗಿರಯ್ಯ

ಇದನ್ನೂ ಓದಿರಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ದಶಕಗಳಿಂದಲೂ ಇರುಳಿಗರು ಕನಿಷ್ಠ ಮೂಲಸೌಕರ್ಯಕ್ಕಾಗಿ ತಾಲ್ಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಮುಂದೆ ಬೇಡಿಕೆ ಇಡುತ್ತಲೇ ಬಂದಿದ್ದು, ಇರುಳಿಗರ ಕುರಿತು ಗಂಭೀರ ಚರ್ಚೆಗಳಾಗುತ್ತಿರುವ ಹೊತ್ತಿನಲ್ಲಿ ರತ್ನಗಿರಯ್ಯ ಅವರ ದುರಂತ ಸಾವು ಸಂಭವಿಸಿದೆ. ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಸುಮಾರು 40 ವರ್ಷಗಳ ಹಿಂದೆ ಈ ಕುಟುಂಬಗಳನ್ನು ಒಕ್ಕಲೆಬ್ಬಿಸಲಾಯಿತು. ಕಾಡಿನಲ್ಲಿ ನೆಮ್ಮದಿಯಾಗಿ ಇದ್ದವರನ್ನು ಬೀದಿಗೆ ತಂದು ಬಿಡಲಾಯಿತು. ಈಗ ನಿತ್ಯ ನರಕ ಅನುಭವಿಸುತ್ತಿದ್ದಾರೆ. ಈ ಕುಟುಂಬಗಳಿಗೆ ರೇಷನ್‌ಕಾರ್ಡ್, ವೋಟರ್‌ ಐಡಿ ಇದ್ದು, ಚುನಾವಣೆ ಸಂದರ್ಭದಲ್ಲಿ ಮಾತ್ರ ಭರವಸೆಗಳ ಮಹಾಪೂರವನ್ನೇ ರಾಜಕಾರಣಿಗಳು ನೀಡುತ್ತಾರೆ. ಚುನಾವಣೆ ಮುಗಿದ ಮೇಲೆ ಮತ್ತದೇ ಗೋಳು ಮುಂದುವರಿಯುತ್ತಿದೆ.

ಸ್ಥಳೀಯ ಪತ್ರಕರ್ತ ಎಸ್.ರುದ್ರೇಶ್ವರ ರಾಮನಗರ ಅವರು ಸಾಮಾಜಿಕ ಮಾಧ್ಯಮದಲ್ಲಿ ಇರುಳಿಗರ ಪರಿಸ್ಥಿತಿಯ ಕುರಿತು ನಿರಂತರವಾಗಿ ವರದಿ ಮಾಡುತ್ತಿದ್ದಾರೆ. ಜೊತೆಗೆ ‘ಉದಯವಾಣಿ’ ಪತ್ರಿಕೆಯಲ್ಲಿ ಸರಣಿ ವರದಿಗಳನ್ನು ಮಾಡಿದ್ದಾರೆ. ಅವರು ಫೇಸ್‌ಬುಕ್‌ ಮೂಲಕ ನೀಡಿರುವ ಲೈವ್‌ಗಳು ಇರುಳಿಗರ ಸಂಕಷ್ಟವನ್ನು ಡಾಳಾಗಿ ತೋರಿಸುತ್ತಿವೆ. ಸುತ್ತ ಪೊದೆ, ಚಿಕ್ಕಚಿಕ್ಕ ಗುಡಿಸಲುಗಳು, ಮಳೆಯ ರುದ್ರಾವತಾರಕ್ಕೆ ನಲುಗಿರುವ ಇರುಳಿಗರ ನೋವಿಗೆ ಈ ವಿಡಿಯೊಗಳು ಬೆಳಕು ಚೆಲ್ಲಿವೆ.

ಇರುಳಿಗರಿಗೆ ನಿವೇಶನ ನೀಡಲು ಅಧಿಕಾರಿಗಳು ದಿನದೂಡುತ್ತಲೇ ಇದ್ದಾರೆ.  ಆದರೆ ಮಳೆಯ ಬಿರುಸಿಗೆ ಸಿಲುಕಿ ರತ್ನಗಿರಯ್ಯ ಸಾವನ್ನಪ್ಪಿದ ಬಳಿಕ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಕೂಟಗಲ್ ಸರ್ವೇ ನಂಬರ್‌‌ 94ರಲ್ಲಿ 2 ಎಕರೆ ಭೂಮಿಯನ್ನು ಸರ್ವೇ ಮಾಡಿದ್ದಾರೆ. ಶೀಘ್ರವಾಗಿ ಇರುಳಿಗರಿಗೆ ನಿವೇಶನ ಮಂಜೂರು ಮಾಡುವ ಭರವಸೆಯನ್ನೂ ನೀಡಿದ್ದಾರೆ.


 ಇದನ್ನೂ ಓದಿರಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾರ್ವಜನಿಕ ಸೇವಕರೆಂಬ ಅಧಿಕಾರಿಗಳು ಮತ್ತು ಆಡಳಿತಾರೂಢ ರಾಜಕಾರಣಿಗಳು ಮಾನವೀಯತೆಯನ್ನು ಕಳೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...