Homeಅಂಕಣಗಳುಮಳೆ ಬಂದರೆ  ಹಂದಿಗಳೂ ಬರುತ್ತವೆ: ಕಾಡು ಹಂದಿಗಳ ಗೂಟಾಟ

ಮಳೆ ಬಂದರೆ  ಹಂದಿಗಳೂ ಬರುತ್ತವೆ: ಕಾಡು ಹಂದಿಗಳ ಗೂಟಾಟ

ಹಂದಿಗಳು ಒಂಟಿಯಾಗಿರುವುದು ಅಪರೂಪ. ಇವು ನಮ್ಮಂತೆಯೇ ಸಂಘ ಜೀವಿಗಳು. ಹಿಂಡು ಹಿಂಡಾಗಿ ಇವು ತಿರುಗುವುದರಿಂದ ಬೇಟೆಗಾರರಿಗೆ ಸ್ವರ್ಗ, ಒಂದು ತಪ್ಪಿಸಿಕೊಂಡರೆ ಇನ್ನೊಂದು.

- Advertisement -
- Advertisement -

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ…: ಭಾಗ-11 

ಮಳೆ ಬಂದರೆ  ಹಂದಿಗಳೂ ಬರುತ್ತವೆ. ಇದು ರೈತರೆಲ್ಲರ ಅನುಭವ. ಹೀಗೆ ಮಳೆ ಬಂದ ಮಾರನೆಯ ದಿನ ಹಂದಿಗಳ ಹಸಿ ಹೆಜ್ಜೆಗಳ ಜಾಡು ಹಿಡಿದು ಒಂದಷ್ಟು ದೂರ ಹೋಗಿಬರುವುದು ನನಗೊಂದು ಚಟವಾಗಿ ಬೆಳೆದಿದೆ. ಅವುಗಳಲ್ಲಿ ಒಂದಾದರೂ ಹಂದಿ ನನ್ನ ಕೈಗೆ ಸಿಕ್ಕಿಬಿಡಬಹುದೆಂದು ಭ್ರಮೆಪಡುವುದು ನನಗಿಷ್ಟ. ಒಳಗೆ ಕುದಿಯುವ ಪೋರ್ಕ್‌ ನಿಜದಾಸೆ ಇರುವುದಿಲ್ಲವೆಂದು ಯಾವ ಬಾಯಿಯಿಂದ ಹೇಳುವುದು.

ಒಮ್ಮೆ ನಾನು ಗೆಳೆಯ ಉಜ್ಜಜ್ಜಿ ರಾಜಣ್ಣ ನಮ್ಮೂರಿನ ಪಕ್ಕದ ಗೊಲ್ಲರ ಗುಡ್ಡ ಸುತ್ತುವ ಉಮೇದಿನಲ್ಲಿ ಹೊರಟೆವು. ಅದನ್ನು ಟ್ರಕ್ಕಿಂಗ್‌ ಎಂದು ಕರೆಯುವುದಕ್ಕಿಂತ ಮೊಲದ ಆಸೆಯ ಪಯಣ ಎಂದು ಕರೆದರೆ ಸರಿಯೆನಿಸುತ್ತದೆ. ಕೈಯ್ಯಲ್ಲಿ ದೊಣ್ಣೆಗಳನ್ನು ಹಿಡಿದು ಸಾಗುತ್ತಿದ್ದೆವು. ನಾವೊಂದು ಬಗೆದರೆ ಹಂದಿಯೊಂದು ಬಗೆಯಿತು ಎನ್ನುವಂತೆ, ಇದ್ದಕ್ಕಿದ್ದಂತೆ ಪೊದೆಯೊಳಗಿಂದ ತಾಯಿ ಹಂದಿಯೊಂದು ಗಾಬರಿಗೊಂಡು ತನ್ನ ಪಗಡದಸ್ತಾದ ಆರು ಮರಿಗಳೊಂದಿಗೆ ನಮ್ಮತ್ತ ಧಾವಿಸಿ ಕಾಲು ಸಂದಿಯಲ್ಲಿ ನುಗ್ಗಲು ಏರ್ಪಾಟು ಮಾಡಿಕೊಳ್ಳುತ್ತಿದ್ದಾಗ ಸಕಾಲಕ್ಕೆ ಎಚ್ಚೆತ್ತ ನಾವಿಬ್ಬರೂ ಅದಕ್ಕೆ ಜಾಗ ತೆರವು ಮಾಡಿ ದಿಕ್ಕಾ ಪಾಲಾಗಿ ಓಡಿದೆವು. ಕುಡಿದಿದ್ದ ಮೂರು ಚಿಪ್ಪು ನೀರಾದ ಮತ್ತು ಇಳಿದು ಹೋಗಿತ್ತು. ಕೈಯ್ಯಲ್ಲಿದ್ದ ದೊಣ್ಣೆಯಿಂದ ಒಂದು ಮರಿಯನ್ನಾದರೂ ಹೊಡೆಯಬಹುದಿತ್ತು ಎಂದು ನಿರಾಸೆಯಿಂದ ನಾನು ಹೇಳಿದಾಗ, “ಸ್ವಾಮಿ ಮರಿಯುಳ್ಳ ತಾಯಿ ಹಂದಿ ನಮ್ಮಿಬ್ಬರನ್ನು ಮುಗಿಸುವ ಹುನ್ನಾರದಲ್ಲಿದ್ದುದನ್ನು ನೀವು ಗಮನಿಸಲಿಲ್ಲವೆಂದು ಕಾಣುತ್ತದೆ”  ಎಂದಾಗ ಎದೆ ಝಲ್‌ ಎಂದಿತು. ಹಂದಿಗಳು ಬೇಕಾದಷ್ಟು ಜನ ಬೇಟೆಗಾರರ ತೊಡೆ ಸೀಳಿ ಕೊಂದ ಕತೆಯನ್ನೂ, ಅಮಾಯಕ ರೈತರನ್ನು ಗೂಟಾಡಿದ ವ್ಯಥೆಗಳನ್ನು ಹೇಳಿ ನನ್ನ ಮರಿಹಂದಿ ಬೇಟೆಯ ಕನಸನ್ನು ನುಚ್ಚು ನೂರು ಮಾಡಿದ.

ನಮ್ಮ ತೋಟಕ್ಕೆ ಯಾವ ಹಂದಿಗಳು ರೂಢಿಯಾಗಿರುತ್ತವೋ ಅವು ಅವೇ ಹಂದಿಗಳು ಬರುತ್ತವೆಂದು ಕಾಣುತ್ತದೆ. ಒಂದೇ ದಾರಿಯಲ್ಲಿ ಬಂದು ನಮ್ಮ ಉಳುಮೆ ಇಲ್ಲದ ತೋಟದ ಕೆಲ ಭಾಗಗಳನ್ನು ಗೂಟಾಡಿ ಉಳುಮೆ ಮಾಡುತ್ತಾ ಶುಂಠಿಗೆಡ್ಡೆ, ಗೆಣಸುಗಳನ್ನು ತಿಂದು ಬಂದ ದಾರಿಯಲ್ಲೇ ಅವು ತಮ್ಮ ಗುಡ್ಡದ ತಾವಿಗೆ ಹಿಂದಿರುಗುತ್ತವೆ.

ಮಳೆ ಬಂದರೆ ಹಂದಿಗಳಿಗೆ ಎಲ್ಲಿಲ್ಲದ ಹರುಷ. ರಾತ್ರಿ ಕತ್ತಲಲ್ಲೂ ನೆಲದೊಳಗೆ ಅಡಗಿ ಬೆಚ್ಚಗೆ ಮಲಗಿರುತ್ತಿದ್ದ, ಗೊಣ್ಣೆ ಹುಳ, ಎರೆಹುಳ, ಶುಂಠಿಗೆಡ್ಡೆ, ಗೆಣಸು ಎಂಬ ಯಾವ ಭೇದ ಭಾವವೂ ಇಲ್ಲದೆ ಏಕಪ್ರಕಾರವಾಗಿ ಹಸಿಮಣ್ಣಿನೊಂದಿಗೆ ನೆಂಚಿಕೊಂಡು ತಿಂದು ಬೆಳಗಾಗುವುದಕ್ಕೆ ಮೊದಲೆ ತಮ್ಮ ಗೂಡು ಸೇರುವುದು ಅವುಗಳ ಪರಿಪಾಠ.

ಅವು ಇತ್ತೀಚೆಗೆ ಅವು ನಮ್ಮ ತೋಟದ ಪಕ್ಕದಲ್ಲಿನ ಹಳ್ಳದ ಸರದಲ್ಲಿ ಬೀಡುಬಿಟ್ಟು ಹಗಲು ಕಳೆಯುವುದನ್ನು ರೂಢಿ ಮಾಡಿಕೊಂಡಿವೆ. ಆ ದೂರದ ಕಣಿವೆ ಸಾಲಿನ ಗುಡ್ಡಕ್ಕೆ ಹೋಗಿಬರುವುದು ವ್ಯರ್ಥವೆಂದೂ ಈ ಹಳ್ಳದ ಪೊದೆಗಳಲ್ಲಿ ಹಾಯಾಗಿ ಮಲಗುವುದೇ ಸೂಕ್ತವೆಂದು ಅವು ಅರ್ಥಮಾಡಿಕೊಂಡಿರಬೇಕು.

ಹಂದಿಗಳು ಒಂಟಿಯಾಗಿರುವುದು ಅಪರೂಪ. ಇವು ನಮ್ಮಂತೆಯೇ ಸಂಘ ಜೀವಿಗಳು. ಹಿಂಡು ಹಿಂಡಾಗಿ ಇವು ತಿರುಗುವುದರಿಂದ ಬೇಟೆಗಾರರಿಗೆ ಸ್ವರ್ಗ, ಒಂದು ತಪ್ಪಿಸಿಕೊಂಡರೆ ಇನ್ನೊಂದು. ಬಂದೂಕದಿಂದ ಬೇಟೆ ಆಡುವವರದು ಮೊದಲ ವರ್ಗ. ದಪ್ಪ ದಪ್ಪ ಹಗ್ಗದಿಂದ ಮಾಡಿದ ಬಲೆಯಲ್ಲಿ ಹಿಡಿಯುವವರದ್ದು ಎರಡನೇ ಆದರೆ ಸಾಹಸೀ ವರ್ಗ. ಇವರು ನೇರಾನೇರ ಕಾಡುಹಂದಿಗಳ ಜೊತೆ ಮುಖಾಮಖಿಗೆ ಇಳಿಯುತ್ತಾರೆ, ಇವರು ಹಂದಿಗಳನ್ನು ಹಿಡಿಯುವುದಕ್ಕೂ ಸೈ, ಪ್ರಾಣ ಕಳೆದುಕೊಳ್ಳುವುದಕ್ಕೂ ಸೈ. ಇನ್ನೂ ಒಂದು ವರ್ಗವಿದೆ ಅವರು ಹಂದಿಗಳ ಹಿಂಡು ಓಡಾಡುವ ಜಾಗ ಊಹಿಸಿ ಅಲ್ಲಲ್ಲಿ ದವಡೆ ಬಾಂಬುಗಳನ್ನು ಇಟ್ಟು, ಹಂದಿಗಳ ದವಡೆ ಸ್ಪೋಟಿಸಿ ಅವುಗಳನ್ನು ಪಾಲು ಹಾಕಿಕೊಂಡು ರುಚಿ ನೋಡುತ್ತಾರೆ. ಈ ಎಲ್ಲಾ ವರ್ಗದ ಬೇಟೆಗಾರರಿಗೂ ಮಳೆ ಬಂದ ಮಾರನೇ ದಿನ ಹಂದಿ ಬೇಟೆಗೆ ಪ್ರಶಸ್ತ ಕಾಲ. ಹೆಜ್ಜೆ ಗುರುತುಗಳನ್ನು ಹಿಂಬಾಲಿಸಿ ಅವುಗಳ ಮೂಲ ತಾಣವನ್ನು ಕಂಡುಹಿಡಿದು ಅಲ್ಲೆ ಅವುಗಳ ಬೇಟೆಗೆ ಹೊಂಚು ಹಾಕುತ್ತಾರೆ. ಹಂದಿ ಹೊಡೆಯುವುದು ಕಾನೂನಿನ ಉಲ್ಲಂಘನೆಯೆಂಬುದು ನಿಜವಾದರೂ ಯಾರೂ ಅದಕ್ಕೆ ತಲೆ ಕೆಡಿಸಿಕೊಂಡಿಲ್ಲ. ಅವುಗಳ ಸಂಖ್ಯೆ ವಿಪರೀತ ಎನ್ನುವಷ್ಟು ಹೆಚ್ಚಿರುವುದೂ ಇದಕ್ಕೆ ಕಾರಣವಿರಬೇಕು. ಇದಕ್ಕಿಂತ ಮುಖ್ಯ ಕಾರಣ ಇನ್ನೊಂದಿದೆ. ಚಿಕ್ಕನಾಯಕನ ಹಳ್ಳಿ ಗುಡ್ಡ ಸಾಲಿನಲ್ಲಿ ಕೊನೆಯಿಲ್ಲವೆಂಬಂತೆ ನಡೆದ ಭೀಕರ ಗಣಿಗಾರಿಕೆಯು ಹಂದಿಗಳು ಗುಡ್ಡಗೋರಣ್ಯ ಬಿಟ್ಟು ತೋಟದ ಸಾಲು ಸೇರುವುದಕ್ಕೆ ಕಾರಣವಾಯಿತು.

ನಮ್ಮ ತೋಟಕ್ಕೆ ಬರುವ ಹಂದಿಗಳು ಸ್ವಂತ ತೋಟಕ್ಕೆ ಬರುವಷ್ಟೆ ಧೈರ್ಯವಾಗಿ ಬಂದು ಹೋಗುತ್ತವೆ. ಇಲ್ಲಿ ಎಂದೂ ಅವುಗಳಿಗೆ ಘಾಸಿ ಆಗಿಯೇ ಇಲ್ಲ. ಅವುಗಳ ಮೇಲೆ ಯಾವ ಚಿಕ್ಕ ದಾಳಿಯ ಪ್ರಯತ್ನವೂ ನಡೆದಿಲ್ಲದಿರುವುದು ಒಂದು ಕಾರಣವಾದರೆ ಇಲ್ಲಿ ಸಿಕ್ಕುವ ನೀರು ಆಹಾರ ಇನ್ನೊಂದು ಕಾರಣ. ಹಂದಿಗಳಿಗೆ ಕೆಸರಿನಾಟ ಬಲುಪ್ರಿಯ. ಉಣ್ಣೆ, ಚಿಗಟ, ಹೇನು, ಸೊಳ್ಳೆಗಳೇ ಮುಂತಾದ ಕೀಟಗಳ ಕಾಟದಿಂದ ತಪ್ಪಿಸಿಕೊಳ್ಳಲು ಕಾಲಾಂತರದಲ್ಲಿ ಅವು ಕಂಡ ಪ್ಲಾನ್‌ ಇದು. ನಮ್ಮ ತೋಟದಲ್ಲಿ ಹಂದಿಗಳಿಗೆ ಊಟವಿಲ್ಲದ ದಿನವೇ ಇಲ್ಲ. ಆದರೂ ಒಮ್ಮೊಮ್ಮೆ ಸಂಭವಿಸಿದ ಆಹಾರದ ಕೊರತೆಯ ಕಾರಣಕ್ಕೊ ಏನೋ ಹಂದಿಗಳು ತೆಂಗಿನ ಕಾಯಿ ಸುಲಿಯುವುದನ್ನು ಕಲಿತು ತಿನ್ನಲಾರಂಭಿಸಿವೆ. ಮೊದ ಮೊದಲು ತಮ್ಮ ಬುದ್ಧಿಯನ್ನೆಲ್ಲಾ ಖರ್ಚುಮಾಡಿ ಇಡೀ ರಾತ್ರಿ ಸುಲಿದ ಕಾಯಿಯನ್ನು ಒಡೆಯಲಾಗದೆ, ಅಷ್ಟೊತ್ತಿಗೆ ಬೆಳಗಾಗುತ್ತಿದ್ದ ಪರಿಣಾಮ ಆ ಸುಲಿದ ಕಾಯಿಯನ್ನು ಅಲ್ಲೇ ಬಿಟ್ಟು ಖಾಲಿ ಹೊಟ್ಟೆಯಲ್ಲಿ ತಮ್ಮ ತಾವಿಗೆ ಹಿಂದಿರುಗುತ್ತಿದ್ದವು. ನಾವು ಬೆಳಗ್ಗೆ ಎದ್ದು ತೋಟಕ್ಕೆ ಹೋದಾಗ ಅವು ಸುಲಿದು ಬಿಟ್ಟುಹೋದ ಈ ತರದ ನುಣ್ಣಗೆ ಬೋಳಿಸಿದ ಒಂಚೂರು ಗುಂಜಿಲ್ಲದ ಮೊಟ್ಟೆಯಂತಾ ಕಾಯಿಗಳು ಸಿಗುತ್ತದ್ದವು. ಆಗ ಅವುಗಳ ಬಗೆಗೆ ಪಾಪ ಎನಿಸುತ್ತಿತ್ತು. ಈ ಬಗೆಯ ಕಸರತ್ತಿನ ಬದಲು ಅವು ತಮ್ಮ ಮಾಮೂಲಿ ಆಹಾರವನ್ನು ಮಣ್ಣಿನಲ್ಲಿ ದೊಗೆದು ಹುಡುಕಿದ್ದರೆ ಆಗುತ್ತಿತ್ತಲ್ಲ ಎನಿಸುತ್ತಿತ್ತು. ಅವು ನೀರಿಗಾಗಿ ಬಾಳೆ ಕಂದುಗಳನ್ನು ಸಿಗಿದು ಹಾಕುವುದನ್ನು ನೋಡಿದರೆ ಅದು ಮನುಷ್ಯರ ವಿರುದ್ದದ ಕಾರ್ಯಾಚರಣೆಯಂತೆ ಗೋಚರಿಸುತ್ತದೆ.

ಆದರೆ ಇತ್ತೀಚೆಗೆ ಸದರಿ ಹಂದಿಗಳು ಕಾಯಿ ಸುಲಿದು ಕಷ್ಟಪಟ್ಟಾದರೂ ಒಡೆದು ತಿನ್ನುವ ಮೂಲಕ ಕಲೆ ಕಲಿತು ನಮ್ಮನ್ನು ಆಶ್ಚರ್ಯಗೊಳಿಸಿವೆ ಮತ್ತು ಚಿಂತೆಗೂ ಕಾರಣವಾಗಿವೆ. ಆ ಗವ್ವೆನ್ನು ಕತ್ತಲಲ್ಲಿ ತೆಂಗಿನ ಕಾಯಿಯ ಮೂರು ಕಣ್ಣುಗಳಲ್ಲಿ, ಮೊಳಕೆಯೊಡೆಯುವ ಮೆದು ಕಣ್ಣೆನ ಜಾಗ ಪತ್ತೆ ಮಾಡಿ ಅಲ್ಲಿಗೆ ಹಲ್ಲು ಹಾಕಿ ಮೀಟಿ ಒಡೆದು ತಿನ್ನುತ್ತವೆ ಎಂದರೆ ಹಸಿವೆಂಬುದು ಎಂಥಾ ಮಂತ್ರವಾದಿ ಎಂಬುದು ಅರಿವಿಗೆ ಬರುತ್ತದೆ. ಇದೀಗ ತೋಟದ ಯಾವ ಕಡೆಗೆ ಹೋದರೂ ಹಂದಿಗಳು ಬಿಟ್ಟು ಹೋದ ಗುಂಜು, ಚಿಪ್ಪುಗಳು ಇಟ್ಟಾಡಿರುವುದು ಕಾಣುತ್ತದೆ. ಆಗ ಕನಿಕರ ಈಗ ಸಿಟ್ಟು. ಹಂದಿ ಬೇಟೆಗಾರರು ನಮ್ಮ ತೋಟದತ್ತ ಸುಳಿದರೆ ಅವರನ್ನೀಗ ಬೈದು ಓಡಿಸುತ್ತಿಲ್ಲ.

ಮುಳ್ಳು ಹಂದಿಗಳ ಬಗೆಗೆ ಹೇಳದಿದ್ದರೆ, ತಪ್ಪಾಗುತ್ತದೆ. ಇವು ಯಾಕೋ ಸಂಖ್ಯೆಯಲ್ಲಿ ತೀರಾ ಕಡಿಮೆ ಇವೆ ಅನಿಸುತ್ತದೆ. ಚಿಕ್ಕಡಕವಾದ ಪ್ರಾಣಿಗಳಿವು. ನಮ್ಮ ತೋಟದ ಬೇಲಿಗುಚ್ಚಿಯ ನಾಲ್ಕಾರು ಕಡೆಗಳಲ್ಲಿ ತಮ್ಮ ಆಹಾರ ಸಂಸ್ಕರಣೆಯಲ್ಲಿ ತೊಡಗುತ್ತವೆ. ಗರಗಸದಲ್ಲೆಂಬಂತೆ ತೆಂಗಿನ ಕಾಯಿಯ ಸಿಪ್ಪೆಯನ್ನು ಸರಿಯಾಗಿ ಒಂದು ಇಂಚು ಉದ್ದ ಒಂದು ಇಂಚು ಅಗಲಕ್ಕೆ ಕತ್ತರಿಸಿ ಅಚ್ಚುಕಟ್ಟಾಗಿ ಗುಪ್ಪೆ ಹಾಕಿ ಗಟ್ಟಿಯಾದ ಚಿಪ್ಪನ್ನು ಹಾಗೆ ಚೂರು ಮಾಡಿ ಆಯಕಟ್ಟಿನಲ್ಲಿ ಕೂತು ಅಚ್ಚುಕಟ್ಟಾಗಿ ತಿಂದು ಹೋಗುತ್ತವೆ. ಈ ಮುಳ್ಳು ಹಂದಿಗಳು ಕಲಾಕಾರ ಜೀವಿಗಳೂ ಸಮಾಧಾನಿಗಳೂ ಹೌದು.

PC : vijaya karnataka

ಮುಳ್ಳು ಹಂದಿಗಳು ನಮಗೆ ಚಿಕ್ಕಂದಿನಲ್ಲೇ ಪರಿಚಯವಾಗಿದ್ದವು. ಮುಳ್ಳು ಹಂದಿಗಳು ಎನ್ನುವುದಕ್ಕಿಂತ ಅದರ ಮುಳ್ಳುಗಳು ಎಂದರೇ ಸರಿಯಾದೀತು. ಸುಮಾರು ಮುಕ್ಕಾಲು ಅಡಿ ಉದ್ದದ ಮುಳ್ಳಂದಿ ಮುಳ್ಳೊಂದನ್ನು ನಮ್ಮ ಹಿರಿಯ ಸ್ನೇಹಿತನೊಬ್ಬ ಅದು ಹೇಗೋ ಸಂಪಾದಿಸಿಕೊಂಡು ತಂದು ನಮಗೆ ತೋರಿಸುತ್ತಿದ್ದ. ಅವನು ಹೇಳುತ್ತಿದ್ದ ಪ್ರಕಾರ, ಅದನ್ನು ತನ್ನ ಎದುರು ಪಾರ್ಟಿಯವರ ವಿರುದ್ಧ ಒಂದಲ್ಲ ಒಂದು ದಿನ ಬಳಸುವುದಾಗಿಯೂ, ಅದರ ಚೂಪು ತುದಿ ಚರ್ಮದ ಒಳಕ್ಕೆ ಸ್ವಲ್ಪ ತಿವಿಯಲ್ಪಟ್ಟರೂ ಎದುರಾಳಿಯ ಸ್ಥಿತಿ ಖತಂ ಆಗುವುದು ಗ್ಯಾರಂಟಿ ಎಂದು ನಮ್ಮನ್ನು ಹೆದರಿಸುತ್ತಿದ್ದ. ಅಂದಿನಿಂದ ನಾವು ಕೆಲವು ಜನ ಗೆಳೆಯರು ಅವನಿಂದ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯವಾಯಿತು. ನಾನಂತೂ ಅವನ ಕಣ್ಣಲ್ಲಿ ಕಣ್ಣಿಟ್ಟು ನೋಡುವುದನ್ನು ಬಿಟ್ಟೆ.

ಮುಂದೊಂದು ದಿನ ಅವನ ಬಳಿ ಸದರಿ ಸಯನೈಡ್‌ ರೂಪಿ ಅಸ್ತ್ರವಿರುವುದು ಮೇಷ್ಟ್ರಿಗೆ ಗೊತ್ತಾಗಲಾಗಿ, ಅವನಿಗೆ ನಾಲ್ಕು ತದುಕಿ ಅದನ್ನು ಮುಟ್ಟುಗೋಲು ಹಾಕಿಕೊಳ್ಳುವವರೆಗೂ ಅವನ ಆಟ ನಡೆಯುತ್ತಲೇ ಇತ್ತು. ಆ ಅಸ್ತ್ರವನ್ನು ಅವನು ತನ್ನ ಸಹಚರರಿಂದ ಇಂಕು, ಪೆನ್ನು, ಪೆನ್‌ಸಿಲ್, ಸೌತೆಕಾಯಿ, ಬೆಲ್ಲದುಂಡೆ, ಎರದೆಹಣ್ಣು, ಸೀಬೇ ಹಣ್ಣು ಮುಂತಾದುವುಗಳನ್ನು ಸುಲಿಗೆ ಮಾಡಲು ಬಳಸುತ್ತಿದ್ದ ವಿಷಯ ಆ ನಂತರದ ವಿಚಾರಣೆಯಿಂದ ಹೊರಬಂತು.

ಆದರೆ ಆ ಮುಳ್ಳಂದಿ ಮುಳ್ಳು ಅಷ್ಟು ಅಪಾಯಕಾರಿಯಲ್ಲವೆಂಬುದು ನಮಗೆ ತಡವಾಗಿ ತಿಳಿಯಿತು. ಆ ಪುಟ್ಟ ಅಮಾಯಕ ಪ್ರಾಣಿ ತನ್ನ ರಕ್ಷಣೆಗಾಗಿ ಪಡೆದುಕೊಂಡ ರಕ್ಷಾ ಕವಚ ಅದಾಗಿತ್ತು. ಆಗಾಗ ಈಗಲೂ ನಮಗೆ ಎಲ್ಲೋ ಒಂದೊಂದು ಮುಳ್ಳು ಸಿಗುತ್ತವೆ. ಕಾಡು ಪ್ರಾಣಿಗಳು ಮತ್ತು ಮನುಷ್ಯರ ನಡುವಿನ ಸ್ನೇಹಸೇತುವಾಗಿ ಅವುಗಳನ್ನು ಇಟ್ಟುಕೊಳ್ಳುವುದು ಖುಷಿ ಎನಿಸುತ್ತವೆ.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-5: ಗೊಬ್ಬರೋತ್ಪಾದಕ ಗೆದ್ದಲುಗಳಿಗೊಂದು ಸಲಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...