Homeಅಂಕಣಗಳುಮಳೆ ಬಂದರೆ  ಹಂದಿಗಳೂ ಬರುತ್ತವೆ: ಕಾಡು ಹಂದಿಗಳ ಗೂಟಾಟ

ಮಳೆ ಬಂದರೆ  ಹಂದಿಗಳೂ ಬರುತ್ತವೆ: ಕಾಡು ಹಂದಿಗಳ ಗೂಟಾಟ

ಹಂದಿಗಳು ಒಂಟಿಯಾಗಿರುವುದು ಅಪರೂಪ. ಇವು ನಮ್ಮಂತೆಯೇ ಸಂಘ ಜೀವಿಗಳು. ಹಿಂಡು ಹಿಂಡಾಗಿ ಇವು ತಿರುಗುವುದರಿಂದ ಬೇಟೆಗಾರರಿಗೆ ಸ್ವರ್ಗ, ಒಂದು ತಪ್ಪಿಸಿಕೊಂಡರೆ ಇನ್ನೊಂದು.

- Advertisement -
- Advertisement -

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ…: ಭಾಗ-11 

ಮಳೆ ಬಂದರೆ  ಹಂದಿಗಳೂ ಬರುತ್ತವೆ. ಇದು ರೈತರೆಲ್ಲರ ಅನುಭವ. ಹೀಗೆ ಮಳೆ ಬಂದ ಮಾರನೆಯ ದಿನ ಹಂದಿಗಳ ಹಸಿ ಹೆಜ್ಜೆಗಳ ಜಾಡು ಹಿಡಿದು ಒಂದಷ್ಟು ದೂರ ಹೋಗಿಬರುವುದು ನನಗೊಂದು ಚಟವಾಗಿ ಬೆಳೆದಿದೆ. ಅವುಗಳಲ್ಲಿ ಒಂದಾದರೂ ಹಂದಿ ನನ್ನ ಕೈಗೆ ಸಿಕ್ಕಿಬಿಡಬಹುದೆಂದು ಭ್ರಮೆಪಡುವುದು ನನಗಿಷ್ಟ. ಒಳಗೆ ಕುದಿಯುವ ಪೋರ್ಕ್‌ ನಿಜದಾಸೆ ಇರುವುದಿಲ್ಲವೆಂದು ಯಾವ ಬಾಯಿಯಿಂದ ಹೇಳುವುದು.

ಒಮ್ಮೆ ನಾನು ಗೆಳೆಯ ಉಜ್ಜಜ್ಜಿ ರಾಜಣ್ಣ ನಮ್ಮೂರಿನ ಪಕ್ಕದ ಗೊಲ್ಲರ ಗುಡ್ಡ ಸುತ್ತುವ ಉಮೇದಿನಲ್ಲಿ ಹೊರಟೆವು. ಅದನ್ನು ಟ್ರಕ್ಕಿಂಗ್‌ ಎಂದು ಕರೆಯುವುದಕ್ಕಿಂತ ಮೊಲದ ಆಸೆಯ ಪಯಣ ಎಂದು ಕರೆದರೆ ಸರಿಯೆನಿಸುತ್ತದೆ. ಕೈಯ್ಯಲ್ಲಿ ದೊಣ್ಣೆಗಳನ್ನು ಹಿಡಿದು ಸಾಗುತ್ತಿದ್ದೆವು. ನಾವೊಂದು ಬಗೆದರೆ ಹಂದಿಯೊಂದು ಬಗೆಯಿತು ಎನ್ನುವಂತೆ, ಇದ್ದಕ್ಕಿದ್ದಂತೆ ಪೊದೆಯೊಳಗಿಂದ ತಾಯಿ ಹಂದಿಯೊಂದು ಗಾಬರಿಗೊಂಡು ತನ್ನ ಪಗಡದಸ್ತಾದ ಆರು ಮರಿಗಳೊಂದಿಗೆ ನಮ್ಮತ್ತ ಧಾವಿಸಿ ಕಾಲು ಸಂದಿಯಲ್ಲಿ ನುಗ್ಗಲು ಏರ್ಪಾಟು ಮಾಡಿಕೊಳ್ಳುತ್ತಿದ್ದಾಗ ಸಕಾಲಕ್ಕೆ ಎಚ್ಚೆತ್ತ ನಾವಿಬ್ಬರೂ ಅದಕ್ಕೆ ಜಾಗ ತೆರವು ಮಾಡಿ ದಿಕ್ಕಾ ಪಾಲಾಗಿ ಓಡಿದೆವು. ಕುಡಿದಿದ್ದ ಮೂರು ಚಿಪ್ಪು ನೀರಾದ ಮತ್ತು ಇಳಿದು ಹೋಗಿತ್ತು. ಕೈಯ್ಯಲ್ಲಿದ್ದ ದೊಣ್ಣೆಯಿಂದ ಒಂದು ಮರಿಯನ್ನಾದರೂ ಹೊಡೆಯಬಹುದಿತ್ತು ಎಂದು ನಿರಾಸೆಯಿಂದ ನಾನು ಹೇಳಿದಾಗ, “ಸ್ವಾಮಿ ಮರಿಯುಳ್ಳ ತಾಯಿ ಹಂದಿ ನಮ್ಮಿಬ್ಬರನ್ನು ಮುಗಿಸುವ ಹುನ್ನಾರದಲ್ಲಿದ್ದುದನ್ನು ನೀವು ಗಮನಿಸಲಿಲ್ಲವೆಂದು ಕಾಣುತ್ತದೆ”  ಎಂದಾಗ ಎದೆ ಝಲ್‌ ಎಂದಿತು. ಹಂದಿಗಳು ಬೇಕಾದಷ್ಟು ಜನ ಬೇಟೆಗಾರರ ತೊಡೆ ಸೀಳಿ ಕೊಂದ ಕತೆಯನ್ನೂ, ಅಮಾಯಕ ರೈತರನ್ನು ಗೂಟಾಡಿದ ವ್ಯಥೆಗಳನ್ನು ಹೇಳಿ ನನ್ನ ಮರಿಹಂದಿ ಬೇಟೆಯ ಕನಸನ್ನು ನುಚ್ಚು ನೂರು ಮಾಡಿದ.

ನಮ್ಮ ತೋಟಕ್ಕೆ ಯಾವ ಹಂದಿಗಳು ರೂಢಿಯಾಗಿರುತ್ತವೋ ಅವು ಅವೇ ಹಂದಿಗಳು ಬರುತ್ತವೆಂದು ಕಾಣುತ್ತದೆ. ಒಂದೇ ದಾರಿಯಲ್ಲಿ ಬಂದು ನಮ್ಮ ಉಳುಮೆ ಇಲ್ಲದ ತೋಟದ ಕೆಲ ಭಾಗಗಳನ್ನು ಗೂಟಾಡಿ ಉಳುಮೆ ಮಾಡುತ್ತಾ ಶುಂಠಿಗೆಡ್ಡೆ, ಗೆಣಸುಗಳನ್ನು ತಿಂದು ಬಂದ ದಾರಿಯಲ್ಲೇ ಅವು ತಮ್ಮ ಗುಡ್ಡದ ತಾವಿಗೆ ಹಿಂದಿರುಗುತ್ತವೆ.

ಮಳೆ ಬಂದರೆ ಹಂದಿಗಳಿಗೆ ಎಲ್ಲಿಲ್ಲದ ಹರುಷ. ರಾತ್ರಿ ಕತ್ತಲಲ್ಲೂ ನೆಲದೊಳಗೆ ಅಡಗಿ ಬೆಚ್ಚಗೆ ಮಲಗಿರುತ್ತಿದ್ದ, ಗೊಣ್ಣೆ ಹುಳ, ಎರೆಹುಳ, ಶುಂಠಿಗೆಡ್ಡೆ, ಗೆಣಸು ಎಂಬ ಯಾವ ಭೇದ ಭಾವವೂ ಇಲ್ಲದೆ ಏಕಪ್ರಕಾರವಾಗಿ ಹಸಿಮಣ್ಣಿನೊಂದಿಗೆ ನೆಂಚಿಕೊಂಡು ತಿಂದು ಬೆಳಗಾಗುವುದಕ್ಕೆ ಮೊದಲೆ ತಮ್ಮ ಗೂಡು ಸೇರುವುದು ಅವುಗಳ ಪರಿಪಾಠ.

ಅವು ಇತ್ತೀಚೆಗೆ ಅವು ನಮ್ಮ ತೋಟದ ಪಕ್ಕದಲ್ಲಿನ ಹಳ್ಳದ ಸರದಲ್ಲಿ ಬೀಡುಬಿಟ್ಟು ಹಗಲು ಕಳೆಯುವುದನ್ನು ರೂಢಿ ಮಾಡಿಕೊಂಡಿವೆ. ಆ ದೂರದ ಕಣಿವೆ ಸಾಲಿನ ಗುಡ್ಡಕ್ಕೆ ಹೋಗಿಬರುವುದು ವ್ಯರ್ಥವೆಂದೂ ಈ ಹಳ್ಳದ ಪೊದೆಗಳಲ್ಲಿ ಹಾಯಾಗಿ ಮಲಗುವುದೇ ಸೂಕ್ತವೆಂದು ಅವು ಅರ್ಥಮಾಡಿಕೊಂಡಿರಬೇಕು.

ಹಂದಿಗಳು ಒಂಟಿಯಾಗಿರುವುದು ಅಪರೂಪ. ಇವು ನಮ್ಮಂತೆಯೇ ಸಂಘ ಜೀವಿಗಳು. ಹಿಂಡು ಹಿಂಡಾಗಿ ಇವು ತಿರುಗುವುದರಿಂದ ಬೇಟೆಗಾರರಿಗೆ ಸ್ವರ್ಗ, ಒಂದು ತಪ್ಪಿಸಿಕೊಂಡರೆ ಇನ್ನೊಂದು. ಬಂದೂಕದಿಂದ ಬೇಟೆ ಆಡುವವರದು ಮೊದಲ ವರ್ಗ. ದಪ್ಪ ದಪ್ಪ ಹಗ್ಗದಿಂದ ಮಾಡಿದ ಬಲೆಯಲ್ಲಿ ಹಿಡಿಯುವವರದ್ದು ಎರಡನೇ ಆದರೆ ಸಾಹಸೀ ವರ್ಗ. ಇವರು ನೇರಾನೇರ ಕಾಡುಹಂದಿಗಳ ಜೊತೆ ಮುಖಾಮಖಿಗೆ ಇಳಿಯುತ್ತಾರೆ, ಇವರು ಹಂದಿಗಳನ್ನು ಹಿಡಿಯುವುದಕ್ಕೂ ಸೈ, ಪ್ರಾಣ ಕಳೆದುಕೊಳ್ಳುವುದಕ್ಕೂ ಸೈ. ಇನ್ನೂ ಒಂದು ವರ್ಗವಿದೆ ಅವರು ಹಂದಿಗಳ ಹಿಂಡು ಓಡಾಡುವ ಜಾಗ ಊಹಿಸಿ ಅಲ್ಲಲ್ಲಿ ದವಡೆ ಬಾಂಬುಗಳನ್ನು ಇಟ್ಟು, ಹಂದಿಗಳ ದವಡೆ ಸ್ಪೋಟಿಸಿ ಅವುಗಳನ್ನು ಪಾಲು ಹಾಕಿಕೊಂಡು ರುಚಿ ನೋಡುತ್ತಾರೆ. ಈ ಎಲ್ಲಾ ವರ್ಗದ ಬೇಟೆಗಾರರಿಗೂ ಮಳೆ ಬಂದ ಮಾರನೇ ದಿನ ಹಂದಿ ಬೇಟೆಗೆ ಪ್ರಶಸ್ತ ಕಾಲ. ಹೆಜ್ಜೆ ಗುರುತುಗಳನ್ನು ಹಿಂಬಾಲಿಸಿ ಅವುಗಳ ಮೂಲ ತಾಣವನ್ನು ಕಂಡುಹಿಡಿದು ಅಲ್ಲೆ ಅವುಗಳ ಬೇಟೆಗೆ ಹೊಂಚು ಹಾಕುತ್ತಾರೆ. ಹಂದಿ ಹೊಡೆಯುವುದು ಕಾನೂನಿನ ಉಲ್ಲಂಘನೆಯೆಂಬುದು ನಿಜವಾದರೂ ಯಾರೂ ಅದಕ್ಕೆ ತಲೆ ಕೆಡಿಸಿಕೊಂಡಿಲ್ಲ. ಅವುಗಳ ಸಂಖ್ಯೆ ವಿಪರೀತ ಎನ್ನುವಷ್ಟು ಹೆಚ್ಚಿರುವುದೂ ಇದಕ್ಕೆ ಕಾರಣವಿರಬೇಕು. ಇದಕ್ಕಿಂತ ಮುಖ್ಯ ಕಾರಣ ಇನ್ನೊಂದಿದೆ. ಚಿಕ್ಕನಾಯಕನ ಹಳ್ಳಿ ಗುಡ್ಡ ಸಾಲಿನಲ್ಲಿ ಕೊನೆಯಿಲ್ಲವೆಂಬಂತೆ ನಡೆದ ಭೀಕರ ಗಣಿಗಾರಿಕೆಯು ಹಂದಿಗಳು ಗುಡ್ಡಗೋರಣ್ಯ ಬಿಟ್ಟು ತೋಟದ ಸಾಲು ಸೇರುವುದಕ್ಕೆ ಕಾರಣವಾಯಿತು.

ನಮ್ಮ ತೋಟಕ್ಕೆ ಬರುವ ಹಂದಿಗಳು ಸ್ವಂತ ತೋಟಕ್ಕೆ ಬರುವಷ್ಟೆ ಧೈರ್ಯವಾಗಿ ಬಂದು ಹೋಗುತ್ತವೆ. ಇಲ್ಲಿ ಎಂದೂ ಅವುಗಳಿಗೆ ಘಾಸಿ ಆಗಿಯೇ ಇಲ್ಲ. ಅವುಗಳ ಮೇಲೆ ಯಾವ ಚಿಕ್ಕ ದಾಳಿಯ ಪ್ರಯತ್ನವೂ ನಡೆದಿಲ್ಲದಿರುವುದು ಒಂದು ಕಾರಣವಾದರೆ ಇಲ್ಲಿ ಸಿಕ್ಕುವ ನೀರು ಆಹಾರ ಇನ್ನೊಂದು ಕಾರಣ. ಹಂದಿಗಳಿಗೆ ಕೆಸರಿನಾಟ ಬಲುಪ್ರಿಯ. ಉಣ್ಣೆ, ಚಿಗಟ, ಹೇನು, ಸೊಳ್ಳೆಗಳೇ ಮುಂತಾದ ಕೀಟಗಳ ಕಾಟದಿಂದ ತಪ್ಪಿಸಿಕೊಳ್ಳಲು ಕಾಲಾಂತರದಲ್ಲಿ ಅವು ಕಂಡ ಪ್ಲಾನ್‌ ಇದು. ನಮ್ಮ ತೋಟದಲ್ಲಿ ಹಂದಿಗಳಿಗೆ ಊಟವಿಲ್ಲದ ದಿನವೇ ಇಲ್ಲ. ಆದರೂ ಒಮ್ಮೊಮ್ಮೆ ಸಂಭವಿಸಿದ ಆಹಾರದ ಕೊರತೆಯ ಕಾರಣಕ್ಕೊ ಏನೋ ಹಂದಿಗಳು ತೆಂಗಿನ ಕಾಯಿ ಸುಲಿಯುವುದನ್ನು ಕಲಿತು ತಿನ್ನಲಾರಂಭಿಸಿವೆ. ಮೊದ ಮೊದಲು ತಮ್ಮ ಬುದ್ಧಿಯನ್ನೆಲ್ಲಾ ಖರ್ಚುಮಾಡಿ ಇಡೀ ರಾತ್ರಿ ಸುಲಿದ ಕಾಯಿಯನ್ನು ಒಡೆಯಲಾಗದೆ, ಅಷ್ಟೊತ್ತಿಗೆ ಬೆಳಗಾಗುತ್ತಿದ್ದ ಪರಿಣಾಮ ಆ ಸುಲಿದ ಕಾಯಿಯನ್ನು ಅಲ್ಲೇ ಬಿಟ್ಟು ಖಾಲಿ ಹೊಟ್ಟೆಯಲ್ಲಿ ತಮ್ಮ ತಾವಿಗೆ ಹಿಂದಿರುಗುತ್ತಿದ್ದವು. ನಾವು ಬೆಳಗ್ಗೆ ಎದ್ದು ತೋಟಕ್ಕೆ ಹೋದಾಗ ಅವು ಸುಲಿದು ಬಿಟ್ಟುಹೋದ ಈ ತರದ ನುಣ್ಣಗೆ ಬೋಳಿಸಿದ ಒಂಚೂರು ಗುಂಜಿಲ್ಲದ ಮೊಟ್ಟೆಯಂತಾ ಕಾಯಿಗಳು ಸಿಗುತ್ತದ್ದವು. ಆಗ ಅವುಗಳ ಬಗೆಗೆ ಪಾಪ ಎನಿಸುತ್ತಿತ್ತು. ಈ ಬಗೆಯ ಕಸರತ್ತಿನ ಬದಲು ಅವು ತಮ್ಮ ಮಾಮೂಲಿ ಆಹಾರವನ್ನು ಮಣ್ಣಿನಲ್ಲಿ ದೊಗೆದು ಹುಡುಕಿದ್ದರೆ ಆಗುತ್ತಿತ್ತಲ್ಲ ಎನಿಸುತ್ತಿತ್ತು. ಅವು ನೀರಿಗಾಗಿ ಬಾಳೆ ಕಂದುಗಳನ್ನು ಸಿಗಿದು ಹಾಕುವುದನ್ನು ನೋಡಿದರೆ ಅದು ಮನುಷ್ಯರ ವಿರುದ್ದದ ಕಾರ್ಯಾಚರಣೆಯಂತೆ ಗೋಚರಿಸುತ್ತದೆ.

ಆದರೆ ಇತ್ತೀಚೆಗೆ ಸದರಿ ಹಂದಿಗಳು ಕಾಯಿ ಸುಲಿದು ಕಷ್ಟಪಟ್ಟಾದರೂ ಒಡೆದು ತಿನ್ನುವ ಮೂಲಕ ಕಲೆ ಕಲಿತು ನಮ್ಮನ್ನು ಆಶ್ಚರ್ಯಗೊಳಿಸಿವೆ ಮತ್ತು ಚಿಂತೆಗೂ ಕಾರಣವಾಗಿವೆ. ಆ ಗವ್ವೆನ್ನು ಕತ್ತಲಲ್ಲಿ ತೆಂಗಿನ ಕಾಯಿಯ ಮೂರು ಕಣ್ಣುಗಳಲ್ಲಿ, ಮೊಳಕೆಯೊಡೆಯುವ ಮೆದು ಕಣ್ಣೆನ ಜಾಗ ಪತ್ತೆ ಮಾಡಿ ಅಲ್ಲಿಗೆ ಹಲ್ಲು ಹಾಕಿ ಮೀಟಿ ಒಡೆದು ತಿನ್ನುತ್ತವೆ ಎಂದರೆ ಹಸಿವೆಂಬುದು ಎಂಥಾ ಮಂತ್ರವಾದಿ ಎಂಬುದು ಅರಿವಿಗೆ ಬರುತ್ತದೆ. ಇದೀಗ ತೋಟದ ಯಾವ ಕಡೆಗೆ ಹೋದರೂ ಹಂದಿಗಳು ಬಿಟ್ಟು ಹೋದ ಗುಂಜು, ಚಿಪ್ಪುಗಳು ಇಟ್ಟಾಡಿರುವುದು ಕಾಣುತ್ತದೆ. ಆಗ ಕನಿಕರ ಈಗ ಸಿಟ್ಟು. ಹಂದಿ ಬೇಟೆಗಾರರು ನಮ್ಮ ತೋಟದತ್ತ ಸುಳಿದರೆ ಅವರನ್ನೀಗ ಬೈದು ಓಡಿಸುತ್ತಿಲ್ಲ.

ಮುಳ್ಳು ಹಂದಿಗಳ ಬಗೆಗೆ ಹೇಳದಿದ್ದರೆ, ತಪ್ಪಾಗುತ್ತದೆ. ಇವು ಯಾಕೋ ಸಂಖ್ಯೆಯಲ್ಲಿ ತೀರಾ ಕಡಿಮೆ ಇವೆ ಅನಿಸುತ್ತದೆ. ಚಿಕ್ಕಡಕವಾದ ಪ್ರಾಣಿಗಳಿವು. ನಮ್ಮ ತೋಟದ ಬೇಲಿಗುಚ್ಚಿಯ ನಾಲ್ಕಾರು ಕಡೆಗಳಲ್ಲಿ ತಮ್ಮ ಆಹಾರ ಸಂಸ್ಕರಣೆಯಲ್ಲಿ ತೊಡಗುತ್ತವೆ. ಗರಗಸದಲ್ಲೆಂಬಂತೆ ತೆಂಗಿನ ಕಾಯಿಯ ಸಿಪ್ಪೆಯನ್ನು ಸರಿಯಾಗಿ ಒಂದು ಇಂಚು ಉದ್ದ ಒಂದು ಇಂಚು ಅಗಲಕ್ಕೆ ಕತ್ತರಿಸಿ ಅಚ್ಚುಕಟ್ಟಾಗಿ ಗುಪ್ಪೆ ಹಾಕಿ ಗಟ್ಟಿಯಾದ ಚಿಪ್ಪನ್ನು ಹಾಗೆ ಚೂರು ಮಾಡಿ ಆಯಕಟ್ಟಿನಲ್ಲಿ ಕೂತು ಅಚ್ಚುಕಟ್ಟಾಗಿ ತಿಂದು ಹೋಗುತ್ತವೆ. ಈ ಮುಳ್ಳು ಹಂದಿಗಳು ಕಲಾಕಾರ ಜೀವಿಗಳೂ ಸಮಾಧಾನಿಗಳೂ ಹೌದು.

PC : vijaya karnataka

ಮುಳ್ಳು ಹಂದಿಗಳು ನಮಗೆ ಚಿಕ್ಕಂದಿನಲ್ಲೇ ಪರಿಚಯವಾಗಿದ್ದವು. ಮುಳ್ಳು ಹಂದಿಗಳು ಎನ್ನುವುದಕ್ಕಿಂತ ಅದರ ಮುಳ್ಳುಗಳು ಎಂದರೇ ಸರಿಯಾದೀತು. ಸುಮಾರು ಮುಕ್ಕಾಲು ಅಡಿ ಉದ್ದದ ಮುಳ್ಳಂದಿ ಮುಳ್ಳೊಂದನ್ನು ನಮ್ಮ ಹಿರಿಯ ಸ್ನೇಹಿತನೊಬ್ಬ ಅದು ಹೇಗೋ ಸಂಪಾದಿಸಿಕೊಂಡು ತಂದು ನಮಗೆ ತೋರಿಸುತ್ತಿದ್ದ. ಅವನು ಹೇಳುತ್ತಿದ್ದ ಪ್ರಕಾರ, ಅದನ್ನು ತನ್ನ ಎದುರು ಪಾರ್ಟಿಯವರ ವಿರುದ್ಧ ಒಂದಲ್ಲ ಒಂದು ದಿನ ಬಳಸುವುದಾಗಿಯೂ, ಅದರ ಚೂಪು ತುದಿ ಚರ್ಮದ ಒಳಕ್ಕೆ ಸ್ವಲ್ಪ ತಿವಿಯಲ್ಪಟ್ಟರೂ ಎದುರಾಳಿಯ ಸ್ಥಿತಿ ಖತಂ ಆಗುವುದು ಗ್ಯಾರಂಟಿ ಎಂದು ನಮ್ಮನ್ನು ಹೆದರಿಸುತ್ತಿದ್ದ. ಅಂದಿನಿಂದ ನಾವು ಕೆಲವು ಜನ ಗೆಳೆಯರು ಅವನಿಂದ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯವಾಯಿತು. ನಾನಂತೂ ಅವನ ಕಣ್ಣಲ್ಲಿ ಕಣ್ಣಿಟ್ಟು ನೋಡುವುದನ್ನು ಬಿಟ್ಟೆ.

ಮುಂದೊಂದು ದಿನ ಅವನ ಬಳಿ ಸದರಿ ಸಯನೈಡ್‌ ರೂಪಿ ಅಸ್ತ್ರವಿರುವುದು ಮೇಷ್ಟ್ರಿಗೆ ಗೊತ್ತಾಗಲಾಗಿ, ಅವನಿಗೆ ನಾಲ್ಕು ತದುಕಿ ಅದನ್ನು ಮುಟ್ಟುಗೋಲು ಹಾಕಿಕೊಳ್ಳುವವರೆಗೂ ಅವನ ಆಟ ನಡೆಯುತ್ತಲೇ ಇತ್ತು. ಆ ಅಸ್ತ್ರವನ್ನು ಅವನು ತನ್ನ ಸಹಚರರಿಂದ ಇಂಕು, ಪೆನ್ನು, ಪೆನ್‌ಸಿಲ್, ಸೌತೆಕಾಯಿ, ಬೆಲ್ಲದುಂಡೆ, ಎರದೆಹಣ್ಣು, ಸೀಬೇ ಹಣ್ಣು ಮುಂತಾದುವುಗಳನ್ನು ಸುಲಿಗೆ ಮಾಡಲು ಬಳಸುತ್ತಿದ್ದ ವಿಷಯ ಆ ನಂತರದ ವಿಚಾರಣೆಯಿಂದ ಹೊರಬಂತು.

ಆದರೆ ಆ ಮುಳ್ಳಂದಿ ಮುಳ್ಳು ಅಷ್ಟು ಅಪಾಯಕಾರಿಯಲ್ಲವೆಂಬುದು ನಮಗೆ ತಡವಾಗಿ ತಿಳಿಯಿತು. ಆ ಪುಟ್ಟ ಅಮಾಯಕ ಪ್ರಾಣಿ ತನ್ನ ರಕ್ಷಣೆಗಾಗಿ ಪಡೆದುಕೊಂಡ ರಕ್ಷಾ ಕವಚ ಅದಾಗಿತ್ತು. ಆಗಾಗ ಈಗಲೂ ನಮಗೆ ಎಲ್ಲೋ ಒಂದೊಂದು ಮುಳ್ಳು ಸಿಗುತ್ತವೆ. ಕಾಡು ಪ್ರಾಣಿಗಳು ಮತ್ತು ಮನುಷ್ಯರ ನಡುವಿನ ಸ್ನೇಹಸೇತುವಾಗಿ ಅವುಗಳನ್ನು ಇಟ್ಟುಕೊಳ್ಳುವುದು ಖುಷಿ ಎನಿಸುತ್ತವೆ.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-5: ಗೊಬ್ಬರೋತ್ಪಾದಕ ಗೆದ್ದಲುಗಳಿಗೊಂದು ಸಲಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...