Homeಮುಖಪುಟತನ್ನ ಮಗಳಿಗೆ ಮದುವೆ ಮಾಡಿರುವ ಜಗ್ಗಿ ವಾಸುದೇವ್, ಬೇರೆಯವರ ಹೆಣ್ಣು ಮಗಳು ಸನ್ಯಾಸಿನಿಯಾಗಲು ಹುರಿದುಂಬಿಸುವುದು ಏಕೆ?...

ತನ್ನ ಮಗಳಿಗೆ ಮದುವೆ ಮಾಡಿರುವ ಜಗ್ಗಿ ವಾಸುದೇವ್, ಬೇರೆಯವರ ಹೆಣ್ಣು ಮಗಳು ಸನ್ಯಾಸಿನಿಯಾಗಲು ಹುರಿದುಂಬಿಸುವುದು ಏಕೆ? ಮದ್ರಾಸ್ ಹೈಕೋರ್ಟ್

- Advertisement -
- Advertisement -

“ತಮ್ಮ ಮಗಳಿಗೆ ಮದುವೆ ಮಾಡಿಸಿ ಸುಂದರವಾದ ಬದುಕು ಕಟ್ಟಿಕೊಟ್ಟಿರುವ ಜಗ್ಗಿ ವಾಸುದೇವ್ ಅಲಿಯಾಸ್ ಸದ್ಗುರು, ಬೇರೆಯವರ ಹೆಣ್ಣು ಮಕ್ಕಳು ಸನ್ಯಾಸಿನಿಯಂತೆ ಬದುಕಲು ಹುರಿದುಂಬಿಸುವುದು ಏಕೆ?” ಎಂದು ಮದ್ರಾಸ್ ಹೈಕೋರ್ಟ್ ಪ್ರಶ್ನಿಸಿರುವುದಾಗಿ ವರದಿಯಾಗಿದೆ.

ಜಗ್ಗಿ ವಾಸುದೇವ್ ನಡೆಸುತ್ತಿರುವ ಇಶಾ ಫೌಂಡೇಶನ್‌ನಲ್ಲಿ ತನ್ನ ಇಬ್ಬರು ಪುತ್ರಿಯರನ್ನು ಬಂಧಿಯಾಗಿಸಿ, ಅಲ್ಲಿ ಬ್ರೈನ್‌ವಾಶ್ ಮಾಡಲಾಗಿದೆ ಎಂದು ವ್ಯಕ್ತಿಯೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌ಎಂ ಸುಬ್ರಮಣ್ಯಂ ಮತ್ತು ವಿ ಶಿವಜ್ಞಾನಂ ಅವರ ಪೀಠ ಮೇಲಿನಂತೆ ಪ್ರಶ್ನಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಇಶಾ ಫೌಂಡೇಶನ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳ ವಿವರಗಳನ್ನು ನೀಡುವಂತೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರಿಗೆ ನ್ಯಾಯಾಲಯ ಆದೇಶಿಸಿದೆ.

ತಮ್ಮ ಇಬ್ಬರು ಪುತ್ರಿಯರಾದ ಗೀತಾ ಕಾಮರಾಜ್ ಅಲಿಯಾಸ್ ಮಾ ಮತಿ (42) ಮತ್ತು ಲತಾ ಕಾಮರಾಜ್ ಅಲಿಯಾಸ್ ಮಾ ಮಾಯು(39) ಅವರು ಇಶಾ ಸಂಸ್ಥೆಯೊಳಗೆ ಬಂಧಿಯಾಗಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಎಸ್ ಕಾಮರಾಜ್ ಎಂಬವರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.

ಇಶಾ ಯೋಗ ಕೇಂದ್ರದಲ್ಲಿನ ಬೋಧನೆಗಳಿಂದ ಪ್ರಭಾವಿತರಾದ ನನ್ನ ಹೆಣ್ಣುಮಕ್ಕಳು ಬ್ರೈನ್ ವಾಶ್ ಆಗಿದ್ದು, ಸನ್ಯಾಸಿ ಮಾರ್ಗವನ್ನು ಅನುಸರಿಸಿದ್ದಾರೆ. ಅವರ ಹೆಸರನ್ನು ಬದಲಾಯಿಸಲಾಗಿದೆ. ಈಗ ಪೋಷಕರನ್ನೂ ಭೇಟಿ ಮಾಡಲು ಅವರು ನಿರಾಕರಿಸುತ್ತಿದ್ದಾರೆ ಎಂದು ಅರ್ಜಿದಾರ ಕಾಮರಾಜ್ ಆರೋಪಿಸಿದ್ದರು.

ಕಾಮರಾಜ್ ಅವರು 2016ರಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಆಗ ನ್ಯಾಯಾಲಯವು ಯೋಗ ಕೇಂದ್ರಕ್ಕೆ ತೆರಳಿ, ಬಂಧಿತರನ್ನು ಭೇಟಿಯಾಗಿ, ಅವರ ಹೇಳಿಕೆಗಳನ್ನು ದಾಖಲಿಸಿ ವಿವರವಾದ ವರದಿ ನೀಡುವಂತೆ ಪ್ರಧಾನ ಜಿಲ್ಲಾ ನ್ಯಾಯಾಧೀಶರಿಗೆ ಸೂಚಿಸಿತ್ತು.

ಸೋಮವಾರ ಅರ್ಜಿ ವಿಚಾರಣೆ ವೇಳೆ ನ್ಯಾಯಾಧೀಶರ ಅವಲೋಕನವು ಇನ್ನಷ್ಟು ಆತಂಕವನ್ನು ಉಂಟು ಮಾಡಿದೆ ಎಂದಿರುವ ಅರ್ಜಿದಾರ ಕಾಮರಾಜ್, ಹೆಣ್ಣು ಮಕ್ಕಳು 5 ವರ್ಷಕ್ಕಿಂತಲೂ ಹೆಚ್ಚು ಕಾಲ ಯೋಗ ಕೇಂದ್ರದಲ್ಲಿ ಇರುವುದರಿಂದ ಅವರ ಮೇಲೆ ಆ ಕೇಂದ್ರದ ಉಪದೇಶ ಪ್ರಭಾವ ಬೀರಿದೆ ಎಂಬುವುದನ್ನು ತಳ್ಳಿ ಹಾಕಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರ ವರದಿ ಹೇಳಿದೆ ಎಂದು ಹೈಕೋರ್ಟ್ ಮುಂದೆ ಹೇಳಿದ್ದಾರೆ.

“ನ್ಯಾಯಾಲಯದ ನಿರ್ದೇಶನದ ಮೂಲಕ ನಾನು ನನ್ನ ಮಕ್ಕಳನ್ನು ಭೇಟಿ ಮಾಡಲು ಯೋಗ ಕೇಂದ್ರಕ್ಕೆ ತೆರಳಿದ್ದೆ. ಆಗ ನಿಗದಿತ ಸ್ಥಳದಲ್ಲಿ ಯೋಗ ಕೇಂದ್ರದ ಪುರುಷರ ಸಮಕ್ಷಮದಲ್ಲಿ ನನಗೆ ಮಗಳೊಬ್ಬಳ ಜೊತೆ ಮಾತನಾಡಲು ಅವಕಾಶ ನೀಡಲಾಯಿತು. ಸ್ವಲ್ಪ ಸಮಯದ ನಂತರ ನನ್ನ ಹಿರಿಯ ಮಗಳು ನನಗೆ ಕರೆ ಮಾಡಿ, ನಾನು ಯೋಗ ಕೇಂದ್ರದ ವಿರುದ್ದ ದಾಖಲಿಸಿರುವ ದೂರನ್ನು ಹಿಂಪಡೆಯಬೇಕೆಂದು ಕಿರಿಯ ಮಗಳು ಅಮರಣಾಂತ ಉಪವಾಸ ಕೈಗೊಂಡಿದ್ದಾಳೆ ಎಂದು ತಿಳಿಸಿದಳು. ನನಗೆ ಕರೆ ಮಾಡಲು ಯೋಗ ಕೇಂದ್ರದವರೇ ಸೂಚಿಸಿದ್ದಾಗಿ ಹೇಳಿದಳು” ಎಂದು ಕಾಮರಾಜ್ ಹೈಕೋರ್ಟ್‌ಗೆ ತಿಳಿಸಿದ್ದಾರೆ.

“ಯೋಗ ಕೇಂದ್ರದ ಆಡಳಿತ ಮಂಡಳಿಯ ಪ್ರಭಾವ ಮತ್ತು ಅಕ್ರಮ ಬಂಧನದಿಂದ ನನ್ನ ಮಕ್ಕಳ ಜೀವಕ್ಕೆ ಅಪಾಯವಿದೆ ಎಂದಿರುವ ಕಾಮರಾಜ್, ಸ್ಥಳೀಯ ಪೊಲೀಸರು ವಾರಕೊಮ್ಮೆ ಅಥವಾ ಎರಡು ವಾರಕ್ಕೊಮ್ಮೆ ಯೋಗ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಬಂಧಿತರಾಗಿರುವ ಎಲ್ಲರ ಯೋಗ ಕ್ಷೇಮ ವಿಚಾರಿಸಲು ಆದೇಶಿಸಬೇಕು ಮತ್ತು ಯಾವುದೇ ಬೆದರಿಕೆಗೆ ಒಳಗಾದ ಸಂದರ್ಭದಲ್ಲಿ ಹೊರಜಗತ್ತನ್ನು ಸಂಪರ್ಕಿಸಲು ಅವರಿಗೆ ಅವಕಾಶ ಕಲ್ಪಿಸಬೇಕು” ಎಂದು ನ್ಯಾಯಾಲಯವನ್ನು ಕೋರಿದ್ದಾರೆ.

ಕಾಮರಾಜ್ ಅವರ ಇಬ್ಬರು ಪುತ್ರಿಯರು ಹೈಕೋರ್ಟ್ ಮುಂದೆ ಹಾಜರಾಗಿ, ನಮ್ಮನ್ನು ಬಂಧಿಸಿಟ್ಟಿಲ್ಲ, ಸ್ವಇಚ್ಚೆಯಿಂದ ಯೋಗ ಕೇಂದ್ರದಲ್ಲಿ ಇದ್ದೇವೆ ಎಂದು ಹೇಳಿದ್ದಾರೆ. ಆದರೂ, ಸತ್ಯ ತಿಳಿಯಲು ಈ ವಿಷಯದಲ್ಲಿ ಕೆಲ ಪರಿಶೀಲನೆಯ, ಚರ್ಚೆಯ ಅಗತ್ಯವಿದೆ ಎಂದಿರುವ ನ್ಯಾಯಾಲಯ, ಇಶಾ ಯೋಗ ಕೇಂದ್ರದ ವಿರುದ್ಧ ದಾಖಲಾಗಿರುವ ಪ್ರಕರಣಗಳ ವಿವರಗಳನ್ನು ಸಲ್ಲಿಸುವಂತೆ ಅರ್ಜಿದಾರರಿಗೆ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗೆ ಸೂಚಿಸಿದೆ.

ಸೌಜನ್ಯ : ಲೈವ್ ಲಾ

ಇದನ್ನೂ ಓದಿ : ‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...