Homeಮುಖಪುಟತನ್ನ ಮಗಳಿಗೆ ಮದುವೆ ಮಾಡಿರುವ ಜಗ್ಗಿ ವಾಸುದೇವ್, ಬೇರೆಯವರ ಹೆಣ್ಣು ಮಗಳು ಸನ್ಯಾಸಿನಿಯಾಗಲು ಹುರಿದುಂಬಿಸುವುದು ಏಕೆ?...

ತನ್ನ ಮಗಳಿಗೆ ಮದುವೆ ಮಾಡಿರುವ ಜಗ್ಗಿ ವಾಸುದೇವ್, ಬೇರೆಯವರ ಹೆಣ್ಣು ಮಗಳು ಸನ್ಯಾಸಿನಿಯಾಗಲು ಹುರಿದುಂಬಿಸುವುದು ಏಕೆ? ಮದ್ರಾಸ್ ಹೈಕೋರ್ಟ್

- Advertisement -
- Advertisement -

“ತಮ್ಮ ಮಗಳಿಗೆ ಮದುವೆ ಮಾಡಿಸಿ ಸುಂದರವಾದ ಬದುಕು ಕಟ್ಟಿಕೊಟ್ಟಿರುವ ಜಗ್ಗಿ ವಾಸುದೇವ್ ಅಲಿಯಾಸ್ ಸದ್ಗುರು, ಬೇರೆಯವರ ಹೆಣ್ಣು ಮಕ್ಕಳು ಸನ್ಯಾಸಿನಿಯಂತೆ ಬದುಕಲು ಹುರಿದುಂಬಿಸುವುದು ಏಕೆ?” ಎಂದು ಮದ್ರಾಸ್ ಹೈಕೋರ್ಟ್ ಪ್ರಶ್ನಿಸಿರುವುದಾಗಿ ವರದಿಯಾಗಿದೆ.

ಜಗ್ಗಿ ವಾಸುದೇವ್ ನಡೆಸುತ್ತಿರುವ ಇಶಾ ಫೌಂಡೇಶನ್‌ನಲ್ಲಿ ತನ್ನ ಇಬ್ಬರು ಪುತ್ರಿಯರನ್ನು ಬಂಧಿಯಾಗಿಸಿ, ಅಲ್ಲಿ ಬ್ರೈನ್‌ವಾಶ್ ಮಾಡಲಾಗಿದೆ ಎಂದು ವ್ಯಕ್ತಿಯೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌ಎಂ ಸುಬ್ರಮಣ್ಯಂ ಮತ್ತು ವಿ ಶಿವಜ್ಞಾನಂ ಅವರ ಪೀಠ ಮೇಲಿನಂತೆ ಪ್ರಶ್ನಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಇಶಾ ಫೌಂಡೇಶನ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳ ವಿವರಗಳನ್ನು ನೀಡುವಂತೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರಿಗೆ ನ್ಯಾಯಾಲಯ ಆದೇಶಿಸಿದೆ.

ತಮ್ಮ ಇಬ್ಬರು ಪುತ್ರಿಯರಾದ ಗೀತಾ ಕಾಮರಾಜ್ ಅಲಿಯಾಸ್ ಮಾ ಮತಿ (42) ಮತ್ತು ಲತಾ ಕಾಮರಾಜ್ ಅಲಿಯಾಸ್ ಮಾ ಮಾಯು(39) ಅವರು ಇಶಾ ಸಂಸ್ಥೆಯೊಳಗೆ ಬಂಧಿಯಾಗಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಎಸ್ ಕಾಮರಾಜ್ ಎಂಬವರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.

ಇಶಾ ಯೋಗ ಕೇಂದ್ರದಲ್ಲಿನ ಬೋಧನೆಗಳಿಂದ ಪ್ರಭಾವಿತರಾದ ನನ್ನ ಹೆಣ್ಣುಮಕ್ಕಳು ಬ್ರೈನ್ ವಾಶ್ ಆಗಿದ್ದು, ಸನ್ಯಾಸಿ ಮಾರ್ಗವನ್ನು ಅನುಸರಿಸಿದ್ದಾರೆ. ಅವರ ಹೆಸರನ್ನು ಬದಲಾಯಿಸಲಾಗಿದೆ. ಈಗ ಪೋಷಕರನ್ನೂ ಭೇಟಿ ಮಾಡಲು ಅವರು ನಿರಾಕರಿಸುತ್ತಿದ್ದಾರೆ ಎಂದು ಅರ್ಜಿದಾರ ಕಾಮರಾಜ್ ಆರೋಪಿಸಿದ್ದರು.

ಕಾಮರಾಜ್ ಅವರು 2016ರಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಆಗ ನ್ಯಾಯಾಲಯವು ಯೋಗ ಕೇಂದ್ರಕ್ಕೆ ತೆರಳಿ, ಬಂಧಿತರನ್ನು ಭೇಟಿಯಾಗಿ, ಅವರ ಹೇಳಿಕೆಗಳನ್ನು ದಾಖಲಿಸಿ ವಿವರವಾದ ವರದಿ ನೀಡುವಂತೆ ಪ್ರಧಾನ ಜಿಲ್ಲಾ ನ್ಯಾಯಾಧೀಶರಿಗೆ ಸೂಚಿಸಿತ್ತು.

ಸೋಮವಾರ ಅರ್ಜಿ ವಿಚಾರಣೆ ವೇಳೆ ನ್ಯಾಯಾಧೀಶರ ಅವಲೋಕನವು ಇನ್ನಷ್ಟು ಆತಂಕವನ್ನು ಉಂಟು ಮಾಡಿದೆ ಎಂದಿರುವ ಅರ್ಜಿದಾರ ಕಾಮರಾಜ್, ಹೆಣ್ಣು ಮಕ್ಕಳು 5 ವರ್ಷಕ್ಕಿಂತಲೂ ಹೆಚ್ಚು ಕಾಲ ಯೋಗ ಕೇಂದ್ರದಲ್ಲಿ ಇರುವುದರಿಂದ ಅವರ ಮೇಲೆ ಆ ಕೇಂದ್ರದ ಉಪದೇಶ ಪ್ರಭಾವ ಬೀರಿದೆ ಎಂಬುವುದನ್ನು ತಳ್ಳಿ ಹಾಕಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರ ವರದಿ ಹೇಳಿದೆ ಎಂದು ಹೈಕೋರ್ಟ್ ಮುಂದೆ ಹೇಳಿದ್ದಾರೆ.

“ನ್ಯಾಯಾಲಯದ ನಿರ್ದೇಶನದ ಮೂಲಕ ನಾನು ನನ್ನ ಮಕ್ಕಳನ್ನು ಭೇಟಿ ಮಾಡಲು ಯೋಗ ಕೇಂದ್ರಕ್ಕೆ ತೆರಳಿದ್ದೆ. ಆಗ ನಿಗದಿತ ಸ್ಥಳದಲ್ಲಿ ಯೋಗ ಕೇಂದ್ರದ ಪುರುಷರ ಸಮಕ್ಷಮದಲ್ಲಿ ನನಗೆ ಮಗಳೊಬ್ಬಳ ಜೊತೆ ಮಾತನಾಡಲು ಅವಕಾಶ ನೀಡಲಾಯಿತು. ಸ್ವಲ್ಪ ಸಮಯದ ನಂತರ ನನ್ನ ಹಿರಿಯ ಮಗಳು ನನಗೆ ಕರೆ ಮಾಡಿ, ನಾನು ಯೋಗ ಕೇಂದ್ರದ ವಿರುದ್ದ ದಾಖಲಿಸಿರುವ ದೂರನ್ನು ಹಿಂಪಡೆಯಬೇಕೆಂದು ಕಿರಿಯ ಮಗಳು ಅಮರಣಾಂತ ಉಪವಾಸ ಕೈಗೊಂಡಿದ್ದಾಳೆ ಎಂದು ತಿಳಿಸಿದಳು. ನನಗೆ ಕರೆ ಮಾಡಲು ಯೋಗ ಕೇಂದ್ರದವರೇ ಸೂಚಿಸಿದ್ದಾಗಿ ಹೇಳಿದಳು” ಎಂದು ಕಾಮರಾಜ್ ಹೈಕೋರ್ಟ್‌ಗೆ ತಿಳಿಸಿದ್ದಾರೆ.

“ಯೋಗ ಕೇಂದ್ರದ ಆಡಳಿತ ಮಂಡಳಿಯ ಪ್ರಭಾವ ಮತ್ತು ಅಕ್ರಮ ಬಂಧನದಿಂದ ನನ್ನ ಮಕ್ಕಳ ಜೀವಕ್ಕೆ ಅಪಾಯವಿದೆ ಎಂದಿರುವ ಕಾಮರಾಜ್, ಸ್ಥಳೀಯ ಪೊಲೀಸರು ವಾರಕೊಮ್ಮೆ ಅಥವಾ ಎರಡು ವಾರಕ್ಕೊಮ್ಮೆ ಯೋಗ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಬಂಧಿತರಾಗಿರುವ ಎಲ್ಲರ ಯೋಗ ಕ್ಷೇಮ ವಿಚಾರಿಸಲು ಆದೇಶಿಸಬೇಕು ಮತ್ತು ಯಾವುದೇ ಬೆದರಿಕೆಗೆ ಒಳಗಾದ ಸಂದರ್ಭದಲ್ಲಿ ಹೊರಜಗತ್ತನ್ನು ಸಂಪರ್ಕಿಸಲು ಅವರಿಗೆ ಅವಕಾಶ ಕಲ್ಪಿಸಬೇಕು” ಎಂದು ನ್ಯಾಯಾಲಯವನ್ನು ಕೋರಿದ್ದಾರೆ.

ಕಾಮರಾಜ್ ಅವರ ಇಬ್ಬರು ಪುತ್ರಿಯರು ಹೈಕೋರ್ಟ್ ಮುಂದೆ ಹಾಜರಾಗಿ, ನಮ್ಮನ್ನು ಬಂಧಿಸಿಟ್ಟಿಲ್ಲ, ಸ್ವಇಚ್ಚೆಯಿಂದ ಯೋಗ ಕೇಂದ್ರದಲ್ಲಿ ಇದ್ದೇವೆ ಎಂದು ಹೇಳಿದ್ದಾರೆ. ಆದರೂ, ಸತ್ಯ ತಿಳಿಯಲು ಈ ವಿಷಯದಲ್ಲಿ ಕೆಲ ಪರಿಶೀಲನೆಯ, ಚರ್ಚೆಯ ಅಗತ್ಯವಿದೆ ಎಂದಿರುವ ನ್ಯಾಯಾಲಯ, ಇಶಾ ಯೋಗ ಕೇಂದ್ರದ ವಿರುದ್ಧ ದಾಖಲಾಗಿರುವ ಪ್ರಕರಣಗಳ ವಿವರಗಳನ್ನು ಸಲ್ಲಿಸುವಂತೆ ಅರ್ಜಿದಾರರಿಗೆ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗೆ ಸೂಚಿಸಿದೆ.

ಸೌಜನ್ಯ : ಲೈವ್ ಲಾ

ಇದನ್ನೂ ಓದಿ : ‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...