Homeಮುಖಪುಟ"ನ್ಯಾಯವು ವಿಜಯ ಸಾಧಿಸಬೇಕಾದಾಗ, ಅದು ವಿಜಯಶಾಲಿಯಾಗುತ್ತದೆ... ಸತ್ಯದೊಂದಿಗೆ ಇರಿ, ನ್ಯಾಯವು ದೊರೆಯುತ್ತದೆ." ನ್ಯಾ.ಎಸ್ ಮುರಳೀಧರ್‌

“ನ್ಯಾಯವು ವಿಜಯ ಸಾಧಿಸಬೇಕಾದಾಗ, ಅದು ವಿಜಯಶಾಲಿಯಾಗುತ್ತದೆ… ಸತ್ಯದೊಂದಿಗೆ ಇರಿ, ನ್ಯಾಯವು ದೊರೆಯುತ್ತದೆ.” ನ್ಯಾ.ಎಸ್ ಮುರಳೀಧರ್‌

ನ್ಯಾ.ಎಸ್ ಮುರಳೀಧರ್‌ಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಕಿಕ್ಕಿರಿದ ವಕೀಲರು..

- Advertisement -
- Advertisement -

ದೆಹಲಿಯಿಂದ ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌‌ಗೆ ವರ್ಗಾವಣೆಯಾದ ಖ್ಯಾತ ನ್ಯಾಯಮೂರ್ತಿ ಎಸ್ ಮುರಳೀಧರ್ ಅವರಿಗೆ ದೆಹಲಿ ಹೈಕೋರ್ಟ್ ಬಾರ್ ಅಸೋಸಿಯೇಷನ್ ವತಿಯಿಂದ ಕಿಕ್ಕಿರದ ಸಭಾಂಗಣದಲ್ಲಿ ಅಭೂತಪೂರ್ವ ಬೀಳ್ಕೊಡುಗೆ ನೀಡಲಾಯಿತು. ಕಟ್ಟಡದ ಎಲ್ಲಾ ಅಂತಸ್ತುಗಳಲ್ಲಿಯೂ ವಕೀಲರು ಕಿಕ್ಕಿರಿದು ನೆರೆದು ಶುಭಾಶಯ ಕೋರಿದರು.

“ಯಾವುದೇ ಕಾನೂನಿನ ವಿಷಯದ ಬಗ್ಗೆ ಚರ್ಚಿಸಬಹುದಾದ ಮತ್ತು ಯಾವುದೇ ರೀತಿಯ ವಿಷಯಗಳಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಪ್ರಖ್ಯಾತ ನ್ಯಾಯಾಧೀಶರನ್ನು ನಾವು ಕಳೆದುಕೊಳ್ಳುತ್ತಿದ್ದೇವೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಇಂದು ಮಧ್ಯಾಹ್ನ ನಡೆದ ವಿದಾಯ ಸಮಾರಂಭದಲ್ಲಿ ಹೇಳಿದ್ದಾರೆ.

ದೆಹಲಿ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಕಾರ್ಯದರ್ಶಿ ಅಭಿಜತ್ ಮಾತನಾಡಿ “ಹೈಕೋರ್ಟ್‌ನ ಕೊಹಿನೂರ್‌, ಕೇವಲ 100 ಕಿಲೋ ಮೀಟರ್ ದೂರಕ್ಕಷ್ಟೇ ಹೋಗುತ್ತಿದೆ” ಎಂದಿದ್ದಾರೆ.

ನಂತರ ನ್ಯಾಯಮೂರ್ತಿ ಮುರಳೀಧರ್‌ರವರು ಮಾತನಾಡಿ, “ನಾನು ವಕೀಲ ಅಥವಾ ನ್ಯಾಯಾಧೀಶನಾಗಬೇಕೆಂದು ಚಿಕ್ಕವನಿದ್ದಾಗ ತೀರ್ಮಾನಿಸಿರಲಿಲ್ಲ. ಈ ನ್ಯಾಯಾಲಯಕ್ಕೆ ಬಂದಿರುವುದು ನಂಬಲಾಗದ ವ್ಯಂಗ್ಯವಾಗಿದೆ” ಎಂದಿದ್ದಾರೆ.

“ನಾನು ಕಾನೂನು ವ್ಯಾಸಂಗ ಮಾಡಲು ಉದ್ದೇಶಿಸಿರಲಿಲ್ಲ. ಎಂಎಸ್ಸಿಗೆ ಸೇರಿದ್ದ ನಾನು ವಕೀಲರ ಮಗನೊಂದಿಗೆ ಕ್ರಿಕೆಟ್ ಆಡುತ್ತಿದ್ದೆ ಮತ್ತು ನನ್ನ ಕ್ರಿಕೆಟ್ ಚೀಲವನ್ನು ಅವನ ಕೋಣೆಗಳಲ್ಲಿ ಬಿಡುತ್ತಿದ್ದೆ. ನಂತರ ನಾನು ಆತನೊಂದಿಗೆ ಕಾನೂನು ಓದಬೇಕಾಯಿತು” ಎಂದು ತಿಳಿಸಿದರು.

ಅಂತಿಮವಾಗಿ 1984 ರ ಸೆಪ್ಟೆಂಬರ್‌ನಲ್ಲಿ ಚೆನ್ನೈನಲ್ಲಿ ಕಾನೂನು ಅಭ್ಯಾಸವನ್ನು ಪ್ರಾರಂಭಿಸಿದ ಅವರು 1987 ರಲ್ಲಿ ಸುಪ್ರೀಂ ಕೋರ್ಟ್ ಮತ್ತು ದೆಹಲಿ ಹೈಕೋರ್ಟ್‌ನಲ್ಲಿ ಅಭ್ಯಾಸ ಮಾಡಲು ದೆಹಲಿಗೆ ತೆರಳಿದರು. ಮಾಜಿ ಅಟಾರ್ನಿ ಜನರಲ್ ಜಿ ರಾಮಸ್ವಾಮಿ ಅವರ ಅಡಿಯಲ್ಲಿ ಜೂನಿಯರ್ ಆಗಿ ಕೆಲಸ ಮಾಡಿದ ದಿನಗಳನ್ನು ಅವರು ನೆನಪಿಸಿಕೊಂಡಿದ್ದಾರೆ.

ಯುವ ವಕೀಲರ ಕುರಿತು ಮಾತನಾಡಿದ ಅವರು “ಯಾವುದೇ ಸಮರ್ಪಕ ದಾಖಲೆಗಳಿಲ್ಲದೆ, ಕೇವಲ ಚೀಟಿಯೊಂದನ್ನು ಇಟ್ಟುಕೊಂಡು ಕೋರ್ಟ್‌‌ಗೆ ಬರುವ ಯುವಜನರನ್ನು ನೋಡಿದರೆ ನನಗೆ ಕಿರಿಕಿರಿಯಾಗುತ್ತದೆ. ಕಿರಿಯರು ಸಮರ್ಪಕವಾಗಿ ಸಿದ್ಧರಾಗಿ ಬಂದು ವಾದಿಸಲು ಅವಕಾಶಗಳನ್ನು ಬಳಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ.” ಎಂದಿದ್ದಾರೆ.

“ನ್ಯಾಯವು ವಿಜಯ ಸಾಧಿಸಬೇಕಾದಾಗ, ಅದು ವಿಜಯಶಾಲಿಯಾಗುತ್ತದೆ… ಸತ್ಯದೊಂದಿಗೆ ಇರಿ, ನ್ಯಾಯವು ದೊರೆಯುತ್ತದೆ.” ಎಂದು ಹೇಳಿ ತಮ್ಮ ಮಾತುಗಳನ್ನು ಮುಗಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...