Homeಮುಖಪುಟ"ನ್ಯಾಯವು ವಿಜಯ ಸಾಧಿಸಬೇಕಾದಾಗ, ಅದು ವಿಜಯಶಾಲಿಯಾಗುತ್ತದೆ... ಸತ್ಯದೊಂದಿಗೆ ಇರಿ, ನ್ಯಾಯವು ದೊರೆಯುತ್ತದೆ." ನ್ಯಾ.ಎಸ್ ಮುರಳೀಧರ್‌

“ನ್ಯಾಯವು ವಿಜಯ ಸಾಧಿಸಬೇಕಾದಾಗ, ಅದು ವಿಜಯಶಾಲಿಯಾಗುತ್ತದೆ… ಸತ್ಯದೊಂದಿಗೆ ಇರಿ, ನ್ಯಾಯವು ದೊರೆಯುತ್ತದೆ.” ನ್ಯಾ.ಎಸ್ ಮುರಳೀಧರ್‌

ನ್ಯಾ.ಎಸ್ ಮುರಳೀಧರ್‌ಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಕಿಕ್ಕಿರಿದ ವಕೀಲರು..

- Advertisement -
- Advertisement -

ದೆಹಲಿಯಿಂದ ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌‌ಗೆ ವರ್ಗಾವಣೆಯಾದ ಖ್ಯಾತ ನ್ಯಾಯಮೂರ್ತಿ ಎಸ್ ಮುರಳೀಧರ್ ಅವರಿಗೆ ದೆಹಲಿ ಹೈಕೋರ್ಟ್ ಬಾರ್ ಅಸೋಸಿಯೇಷನ್ ವತಿಯಿಂದ ಕಿಕ್ಕಿರದ ಸಭಾಂಗಣದಲ್ಲಿ ಅಭೂತಪೂರ್ವ ಬೀಳ್ಕೊಡುಗೆ ನೀಡಲಾಯಿತು. ಕಟ್ಟಡದ ಎಲ್ಲಾ ಅಂತಸ್ತುಗಳಲ್ಲಿಯೂ ವಕೀಲರು ಕಿಕ್ಕಿರಿದು ನೆರೆದು ಶುಭಾಶಯ ಕೋರಿದರು.

“ಯಾವುದೇ ಕಾನೂನಿನ ವಿಷಯದ ಬಗ್ಗೆ ಚರ್ಚಿಸಬಹುದಾದ ಮತ್ತು ಯಾವುದೇ ರೀತಿಯ ವಿಷಯಗಳಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಪ್ರಖ್ಯಾತ ನ್ಯಾಯಾಧೀಶರನ್ನು ನಾವು ಕಳೆದುಕೊಳ್ಳುತ್ತಿದ್ದೇವೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಇಂದು ಮಧ್ಯಾಹ್ನ ನಡೆದ ವಿದಾಯ ಸಮಾರಂಭದಲ್ಲಿ ಹೇಳಿದ್ದಾರೆ.

ದೆಹಲಿ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಕಾರ್ಯದರ್ಶಿ ಅಭಿಜತ್ ಮಾತನಾಡಿ “ಹೈಕೋರ್ಟ್‌ನ ಕೊಹಿನೂರ್‌, ಕೇವಲ 100 ಕಿಲೋ ಮೀಟರ್ ದೂರಕ್ಕಷ್ಟೇ ಹೋಗುತ್ತಿದೆ” ಎಂದಿದ್ದಾರೆ.

ನಂತರ ನ್ಯಾಯಮೂರ್ತಿ ಮುರಳೀಧರ್‌ರವರು ಮಾತನಾಡಿ, “ನಾನು ವಕೀಲ ಅಥವಾ ನ್ಯಾಯಾಧೀಶನಾಗಬೇಕೆಂದು ಚಿಕ್ಕವನಿದ್ದಾಗ ತೀರ್ಮಾನಿಸಿರಲಿಲ್ಲ. ಈ ನ್ಯಾಯಾಲಯಕ್ಕೆ ಬಂದಿರುವುದು ನಂಬಲಾಗದ ವ್ಯಂಗ್ಯವಾಗಿದೆ” ಎಂದಿದ್ದಾರೆ.

“ನಾನು ಕಾನೂನು ವ್ಯಾಸಂಗ ಮಾಡಲು ಉದ್ದೇಶಿಸಿರಲಿಲ್ಲ. ಎಂಎಸ್ಸಿಗೆ ಸೇರಿದ್ದ ನಾನು ವಕೀಲರ ಮಗನೊಂದಿಗೆ ಕ್ರಿಕೆಟ್ ಆಡುತ್ತಿದ್ದೆ ಮತ್ತು ನನ್ನ ಕ್ರಿಕೆಟ್ ಚೀಲವನ್ನು ಅವನ ಕೋಣೆಗಳಲ್ಲಿ ಬಿಡುತ್ತಿದ್ದೆ. ನಂತರ ನಾನು ಆತನೊಂದಿಗೆ ಕಾನೂನು ಓದಬೇಕಾಯಿತು” ಎಂದು ತಿಳಿಸಿದರು.

ಅಂತಿಮವಾಗಿ 1984 ರ ಸೆಪ್ಟೆಂಬರ್‌ನಲ್ಲಿ ಚೆನ್ನೈನಲ್ಲಿ ಕಾನೂನು ಅಭ್ಯಾಸವನ್ನು ಪ್ರಾರಂಭಿಸಿದ ಅವರು 1987 ರಲ್ಲಿ ಸುಪ್ರೀಂ ಕೋರ್ಟ್ ಮತ್ತು ದೆಹಲಿ ಹೈಕೋರ್ಟ್‌ನಲ್ಲಿ ಅಭ್ಯಾಸ ಮಾಡಲು ದೆಹಲಿಗೆ ತೆರಳಿದರು. ಮಾಜಿ ಅಟಾರ್ನಿ ಜನರಲ್ ಜಿ ರಾಮಸ್ವಾಮಿ ಅವರ ಅಡಿಯಲ್ಲಿ ಜೂನಿಯರ್ ಆಗಿ ಕೆಲಸ ಮಾಡಿದ ದಿನಗಳನ್ನು ಅವರು ನೆನಪಿಸಿಕೊಂಡಿದ್ದಾರೆ.

ಯುವ ವಕೀಲರ ಕುರಿತು ಮಾತನಾಡಿದ ಅವರು “ಯಾವುದೇ ಸಮರ್ಪಕ ದಾಖಲೆಗಳಿಲ್ಲದೆ, ಕೇವಲ ಚೀಟಿಯೊಂದನ್ನು ಇಟ್ಟುಕೊಂಡು ಕೋರ್ಟ್‌‌ಗೆ ಬರುವ ಯುವಜನರನ್ನು ನೋಡಿದರೆ ನನಗೆ ಕಿರಿಕಿರಿಯಾಗುತ್ತದೆ. ಕಿರಿಯರು ಸಮರ್ಪಕವಾಗಿ ಸಿದ್ಧರಾಗಿ ಬಂದು ವಾದಿಸಲು ಅವಕಾಶಗಳನ್ನು ಬಳಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ.” ಎಂದಿದ್ದಾರೆ.

“ನ್ಯಾಯವು ವಿಜಯ ಸಾಧಿಸಬೇಕಾದಾಗ, ಅದು ವಿಜಯಶಾಲಿಯಾಗುತ್ತದೆ… ಸತ್ಯದೊಂದಿಗೆ ಇರಿ, ನ್ಯಾಯವು ದೊರೆಯುತ್ತದೆ.” ಎಂದು ಹೇಳಿ ತಮ್ಮ ಮಾತುಗಳನ್ನು ಮುಗಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...