Homeಮುಖಪುಟಚುನಾವಣೆ ಬಂದರೆ ಒಂದಷ್ಟು ನಾಯಕರು ಕಾಣಿಸುತ್ತಾರೆ; ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ: ಮೋದಿ

ಚುನಾವಣೆ ಬಂದರೆ ಒಂದಷ್ಟು ನಾಯಕರು ಕಾಣಿಸುತ್ತಾರೆ; ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ: ಮೋದಿ

ಬಿಹಾರವನ್ನು ಶಿಲಾಯುಗಕ್ಕೆ ತಳ್ಳಿದವರಿಗೆ ಬಿಹಾರದ ಜನರ ಬಳಿ ಮತ ಕೇಳುವ ಯಾವ ಮುಖವೂ ಇಲ್ಲ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಗರಿಗೆದರಿದ್ದು ಪ್ರಧಾನಿ ನರೇಂದ್ರ ಮೋದಿ ಇಂದು ಬಿಹಾರಕ್ಕೆ ತೆರಳಿ ಎನ್‌‌ಡಿಎ ಪರವಾಗಿ ಪ್ರಚಾರ ಭಾಷಣ ಮಾಡಿದರು. ಸಾಸಾರಾಮ್​ನಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ಚುನಾವಣೆ ಬಂದರೆ ಒಂದಷ್ಟು ಮುಖಂಡರು ಕಾಣಿಸಿಕೊಳ್ಳುತ್ತಾರೆ. ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ” ಎಂದು ಹೇಳಿದ್ದಾರೆ.

“ಮತ್ತೊಮ್ಮ ಎನ್​ಡಿಎ ಸರ್ಕಾರ” ಎಂಬ ಘೋಷಣೆಯೊಂದಿಗೆ ಭಾಷಣ ಪ್ರಾರಂಭಿಸಿದ ಮೋದಿ, ವಿಪಕ್ಷಗಳಾದ ಆರ್​ಜೆಡಿ ಮತ್ತು ಕಾಂಗ್ರೆಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. “ಬಿಹಾರವನ್ನು ಶಿಲಾಯುಗಕ್ಕೆ ತಳ್ಳಿದವರು ಮತ್ತು ಸಂವಿಧಾನಕ್ಕೆ 370ನೇ ಆರ್ಟಿಕಲ್ ಅನ್ನು ಪುನಃ ಸೇರಿಸುತ್ತೇನೆ ಎನ್ನುವವರಿಗೆ ಬಿಹಾರದ ಜನರ ಬಳಿ ಮತ ಕೇಳುವ ಯಾವ ಮುಖವೂ ಇಲ್ಲ ಎಂದು ಮೋದಿ ಟೀಕಿಸಿದರು. ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕಾಶ್ಮೀರಕ್ಕೆ ಸಂವಿಧಾನದಲ್ಲಿನ ವಿಶೇಷ ಸ್ಥಾನಮಾನವನ್ನು ಮತ್ತೇ ನೀಡುತ್ತೇವೆ ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

“ಆರ್ಟಿಕಲ್ 370 ಅನ್ನು ರದ್ದುಗೊಳಿಸುವ ನಿರ್ಧಾರವನ್ನು ಹಿಂಪಡೆಯುತ್ತೇವೆ ಎಂದು ಹೇಳುತ್ತಿದ್ದಾರೆ. ಆಶ್ಚರ್ಯ ಎಂದರೆ ಅಂಥ ಹೇಳಿಕೆಗಳನ್ನ ನೀಡಿಯೂ ಬಿಹಾರದ ಜನರ ಬಳಿ ಮತ ಕೇಳುವ ಧೈರ್ಯ ಇದೆಯಲ್ಲಾ” ಎಂದು ಮೋದಿ ಆಶ್ಚರ್ಯ ವ್ಯಕ್ತಪಡಿಸಿದರು.

ಲಾಲೂ ಪ್ರಸಾದ್ ಯಾದವ್ ನೇತೃತ್ವದ ಆರ್​ಜೆಡಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ನರೇಂದ್ರ ಮೋದಿ, ಬಿಹಾರವನ್ನು ರೋಗಗ್ರಸ್ತ ರಾಜ್ಯವನ್ನಾಗಿ ಮಾಡಿದವರಿಗೆ ಜನರು ಮತ್ತೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.

ಆರ್​ಜೆಡಿ ಆಡಳಿತದಲ್ಲಿ “ಸೂರ್ಯಾಸ್ತ ಆಯಿತೆಂದರೆ ಎಲ್ಲವೂ ನಿಂತೇ ಹೋಯಿತು ಎಂದರ್ಥ. ಯಾವ ಕಾನೂನೂ ಬಳಕೆಯಲ್ಲಿರಲಿಲ್ಲ. ಸುಲಿಗೆ, ಕೊಲೆ, ಅಪಹರಣ ಸಾಮಾನ್ಯವಾಗಿದ್ದವು. ಬಿಹಾರದ ಈಗಿನ ತಲೆಮಾರಿನ ಜನರು ಮತ ಹಾಕುವ ಮುನ್ನ ಆ ಕತ್ತಲ ಯುಗವನ್ನೊಮ್ಮೆ ನೆನಪಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಇದನ್ನೂ ಓದಿ: ನಮ್ಮ ಜನತೆಗೆ ಉಚಿತ ಕೊರೊನಾ ಲಸಿಕೆ ಕೊಡಿಸುವ ಧಮ್ ಇದೆಯೇ ನಳಿನ್ ಕುಮಾರ್?- ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಕೃಷಿ ಮಸೂದೆಗಳಿಗೆ ವಿರೋಧ ಪಕ್ಷಗಳು ಮಾಡುತ್ತಿರುವ ವಿರೋಧಗಳನ್ನು ಅಲ್ಲಗಳೆದ ಮೋದಿ “ಮಂಡಿ (ಎಪಿಎಂಸಿ ಮಾರುಕಟ್ಟೆ) ಮತ್ತು ಎಂಎಸ್​ಪಿ ಇವರಿಗೆ ಟೀಕಿಸಲು ಒಂದು ನೆಪ ಮಾತ್ರ. ಇವರಿಗೆ ಮಧ್ಯವರ್ತಿಗಳನ್ನ ಕಾಪಾಡುವ ಉದ್ದೇಶ ಮಾತ್ರ ಇದೆ” ಎಂದು ಆರೋಪಿಸಿದರು.

ಬಿಹಾರದ ಎನ್​ಡಿಎ ಮೈತ್ರಿಕೂಟದಿಂದ ಹೊರಬಂದು ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಎಲ್​ಜೆಪಿಯ ಕುರಿತು ಮಾತನಾಡಿದ ಮೋದಿ, “ಚುನಾವಣೆ ಬಂದರೆ ಒಂದಷ್ಟು ಮುಖಂಡರು ಕಾಣಿಸಿಕೊಳ್ಳುತ್ತಾರೆ. ವಾಸ್ತವದಲ್ಲಿರುವುದಕ್ಕಿಂತ ಅವರನ್ನು ದೊಡ್ಡವರನ್ನಾಗಿ ಬಿಂಬಿಸಲಾಗುತ್ತದೆ. ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ. ಇಂಥ ವದಂತಿ ಮತ್ತು ಮಿಥ್ಯೆಗಳನ್ನ ಬಿಹಾರದ ಬುದ್ಧಿವಂತ ಮತದಾರರು ನಂಬುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...