Homeಮುಖಪುಟಚುನಾವಣೆ ಬಂದರೆ ಒಂದಷ್ಟು ನಾಯಕರು ಕಾಣಿಸುತ್ತಾರೆ; ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ: ಮೋದಿ

ಚುನಾವಣೆ ಬಂದರೆ ಒಂದಷ್ಟು ನಾಯಕರು ಕಾಣಿಸುತ್ತಾರೆ; ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ: ಮೋದಿ

ಬಿಹಾರವನ್ನು ಶಿಲಾಯುಗಕ್ಕೆ ತಳ್ಳಿದವರಿಗೆ ಬಿಹಾರದ ಜನರ ಬಳಿ ಮತ ಕೇಳುವ ಯಾವ ಮುಖವೂ ಇಲ್ಲ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಗರಿಗೆದರಿದ್ದು ಪ್ರಧಾನಿ ನರೇಂದ್ರ ಮೋದಿ ಇಂದು ಬಿಹಾರಕ್ಕೆ ತೆರಳಿ ಎನ್‌‌ಡಿಎ ಪರವಾಗಿ ಪ್ರಚಾರ ಭಾಷಣ ಮಾಡಿದರು. ಸಾಸಾರಾಮ್​ನಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ಚುನಾವಣೆ ಬಂದರೆ ಒಂದಷ್ಟು ಮುಖಂಡರು ಕಾಣಿಸಿಕೊಳ್ಳುತ್ತಾರೆ. ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ” ಎಂದು ಹೇಳಿದ್ದಾರೆ.

“ಮತ್ತೊಮ್ಮ ಎನ್​ಡಿಎ ಸರ್ಕಾರ” ಎಂಬ ಘೋಷಣೆಯೊಂದಿಗೆ ಭಾಷಣ ಪ್ರಾರಂಭಿಸಿದ ಮೋದಿ, ವಿಪಕ್ಷಗಳಾದ ಆರ್​ಜೆಡಿ ಮತ್ತು ಕಾಂಗ್ರೆಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. “ಬಿಹಾರವನ್ನು ಶಿಲಾಯುಗಕ್ಕೆ ತಳ್ಳಿದವರು ಮತ್ತು ಸಂವಿಧಾನಕ್ಕೆ 370ನೇ ಆರ್ಟಿಕಲ್ ಅನ್ನು ಪುನಃ ಸೇರಿಸುತ್ತೇನೆ ಎನ್ನುವವರಿಗೆ ಬಿಹಾರದ ಜನರ ಬಳಿ ಮತ ಕೇಳುವ ಯಾವ ಮುಖವೂ ಇಲ್ಲ ಎಂದು ಮೋದಿ ಟೀಕಿಸಿದರು. ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕಾಶ್ಮೀರಕ್ಕೆ ಸಂವಿಧಾನದಲ್ಲಿನ ವಿಶೇಷ ಸ್ಥಾನಮಾನವನ್ನು ಮತ್ತೇ ನೀಡುತ್ತೇವೆ ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

“ಆರ್ಟಿಕಲ್ 370 ಅನ್ನು ರದ್ದುಗೊಳಿಸುವ ನಿರ್ಧಾರವನ್ನು ಹಿಂಪಡೆಯುತ್ತೇವೆ ಎಂದು ಹೇಳುತ್ತಿದ್ದಾರೆ. ಆಶ್ಚರ್ಯ ಎಂದರೆ ಅಂಥ ಹೇಳಿಕೆಗಳನ್ನ ನೀಡಿಯೂ ಬಿಹಾರದ ಜನರ ಬಳಿ ಮತ ಕೇಳುವ ಧೈರ್ಯ ಇದೆಯಲ್ಲಾ” ಎಂದು ಮೋದಿ ಆಶ್ಚರ್ಯ ವ್ಯಕ್ತಪಡಿಸಿದರು.

ಲಾಲೂ ಪ್ರಸಾದ್ ಯಾದವ್ ನೇತೃತ್ವದ ಆರ್​ಜೆಡಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ನರೇಂದ್ರ ಮೋದಿ, ಬಿಹಾರವನ್ನು ರೋಗಗ್ರಸ್ತ ರಾಜ್ಯವನ್ನಾಗಿ ಮಾಡಿದವರಿಗೆ ಜನರು ಮತ್ತೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.

ಆರ್​ಜೆಡಿ ಆಡಳಿತದಲ್ಲಿ “ಸೂರ್ಯಾಸ್ತ ಆಯಿತೆಂದರೆ ಎಲ್ಲವೂ ನಿಂತೇ ಹೋಯಿತು ಎಂದರ್ಥ. ಯಾವ ಕಾನೂನೂ ಬಳಕೆಯಲ್ಲಿರಲಿಲ್ಲ. ಸುಲಿಗೆ, ಕೊಲೆ, ಅಪಹರಣ ಸಾಮಾನ್ಯವಾಗಿದ್ದವು. ಬಿಹಾರದ ಈಗಿನ ತಲೆಮಾರಿನ ಜನರು ಮತ ಹಾಕುವ ಮುನ್ನ ಆ ಕತ್ತಲ ಯುಗವನ್ನೊಮ್ಮೆ ನೆನಪಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಇದನ್ನೂ ಓದಿ: ನಮ್ಮ ಜನತೆಗೆ ಉಚಿತ ಕೊರೊನಾ ಲಸಿಕೆ ಕೊಡಿಸುವ ಧಮ್ ಇದೆಯೇ ನಳಿನ್ ಕುಮಾರ್?- ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಕೃಷಿ ಮಸೂದೆಗಳಿಗೆ ವಿರೋಧ ಪಕ್ಷಗಳು ಮಾಡುತ್ತಿರುವ ವಿರೋಧಗಳನ್ನು ಅಲ್ಲಗಳೆದ ಮೋದಿ “ಮಂಡಿ (ಎಪಿಎಂಸಿ ಮಾರುಕಟ್ಟೆ) ಮತ್ತು ಎಂಎಸ್​ಪಿ ಇವರಿಗೆ ಟೀಕಿಸಲು ಒಂದು ನೆಪ ಮಾತ್ರ. ಇವರಿಗೆ ಮಧ್ಯವರ್ತಿಗಳನ್ನ ಕಾಪಾಡುವ ಉದ್ದೇಶ ಮಾತ್ರ ಇದೆ” ಎಂದು ಆರೋಪಿಸಿದರು.

ಬಿಹಾರದ ಎನ್​ಡಿಎ ಮೈತ್ರಿಕೂಟದಿಂದ ಹೊರಬಂದು ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಎಲ್​ಜೆಪಿಯ ಕುರಿತು ಮಾತನಾಡಿದ ಮೋದಿ, “ಚುನಾವಣೆ ಬಂದರೆ ಒಂದಷ್ಟು ಮುಖಂಡರು ಕಾಣಿಸಿಕೊಳ್ಳುತ್ತಾರೆ. ವಾಸ್ತವದಲ್ಲಿರುವುದಕ್ಕಿಂತ ಅವರನ್ನು ದೊಡ್ಡವರನ್ನಾಗಿ ಬಿಂಬಿಸಲಾಗುತ್ತದೆ. ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ. ಇಂಥ ವದಂತಿ ಮತ್ತು ಮಿಥ್ಯೆಗಳನ್ನ ಬಿಹಾರದ ಬುದ್ಧಿವಂತ ಮತದಾರರು ನಂಬುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...