Homeಮುಖಪುಟಚುನಾವಣೆ ಬಂದರೆ ಒಂದಷ್ಟು ನಾಯಕರು ಕಾಣಿಸುತ್ತಾರೆ; ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ: ಮೋದಿ

ಚುನಾವಣೆ ಬಂದರೆ ಒಂದಷ್ಟು ನಾಯಕರು ಕಾಣಿಸುತ್ತಾರೆ; ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ: ಮೋದಿ

ಬಿಹಾರವನ್ನು ಶಿಲಾಯುಗಕ್ಕೆ ತಳ್ಳಿದವರಿಗೆ ಬಿಹಾರದ ಜನರ ಬಳಿ ಮತ ಕೇಳುವ ಯಾವ ಮುಖವೂ ಇಲ್ಲ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಗರಿಗೆದರಿದ್ದು ಪ್ರಧಾನಿ ನರೇಂದ್ರ ಮೋದಿ ಇಂದು ಬಿಹಾರಕ್ಕೆ ತೆರಳಿ ಎನ್‌‌ಡಿಎ ಪರವಾಗಿ ಪ್ರಚಾರ ಭಾಷಣ ಮಾಡಿದರು. ಸಾಸಾರಾಮ್​ನಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ಚುನಾವಣೆ ಬಂದರೆ ಒಂದಷ್ಟು ಮುಖಂಡರು ಕಾಣಿಸಿಕೊಳ್ಳುತ್ತಾರೆ. ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ” ಎಂದು ಹೇಳಿದ್ದಾರೆ.

“ಮತ್ತೊಮ್ಮ ಎನ್​ಡಿಎ ಸರ್ಕಾರ” ಎಂಬ ಘೋಷಣೆಯೊಂದಿಗೆ ಭಾಷಣ ಪ್ರಾರಂಭಿಸಿದ ಮೋದಿ, ವಿಪಕ್ಷಗಳಾದ ಆರ್​ಜೆಡಿ ಮತ್ತು ಕಾಂಗ್ರೆಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. “ಬಿಹಾರವನ್ನು ಶಿಲಾಯುಗಕ್ಕೆ ತಳ್ಳಿದವರು ಮತ್ತು ಸಂವಿಧಾನಕ್ಕೆ 370ನೇ ಆರ್ಟಿಕಲ್ ಅನ್ನು ಪುನಃ ಸೇರಿಸುತ್ತೇನೆ ಎನ್ನುವವರಿಗೆ ಬಿಹಾರದ ಜನರ ಬಳಿ ಮತ ಕೇಳುವ ಯಾವ ಮುಖವೂ ಇಲ್ಲ ಎಂದು ಮೋದಿ ಟೀಕಿಸಿದರು. ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕಾಶ್ಮೀರಕ್ಕೆ ಸಂವಿಧಾನದಲ್ಲಿನ ವಿಶೇಷ ಸ್ಥಾನಮಾನವನ್ನು ಮತ್ತೇ ನೀಡುತ್ತೇವೆ ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

“ಆರ್ಟಿಕಲ್ 370 ಅನ್ನು ರದ್ದುಗೊಳಿಸುವ ನಿರ್ಧಾರವನ್ನು ಹಿಂಪಡೆಯುತ್ತೇವೆ ಎಂದು ಹೇಳುತ್ತಿದ್ದಾರೆ. ಆಶ್ಚರ್ಯ ಎಂದರೆ ಅಂಥ ಹೇಳಿಕೆಗಳನ್ನ ನೀಡಿಯೂ ಬಿಹಾರದ ಜನರ ಬಳಿ ಮತ ಕೇಳುವ ಧೈರ್ಯ ಇದೆಯಲ್ಲಾ” ಎಂದು ಮೋದಿ ಆಶ್ಚರ್ಯ ವ್ಯಕ್ತಪಡಿಸಿದರು.

ಲಾಲೂ ಪ್ರಸಾದ್ ಯಾದವ್ ನೇತೃತ್ವದ ಆರ್​ಜೆಡಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ನರೇಂದ್ರ ಮೋದಿ, ಬಿಹಾರವನ್ನು ರೋಗಗ್ರಸ್ತ ರಾಜ್ಯವನ್ನಾಗಿ ಮಾಡಿದವರಿಗೆ ಜನರು ಮತ್ತೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.

ಆರ್​ಜೆಡಿ ಆಡಳಿತದಲ್ಲಿ “ಸೂರ್ಯಾಸ್ತ ಆಯಿತೆಂದರೆ ಎಲ್ಲವೂ ನಿಂತೇ ಹೋಯಿತು ಎಂದರ್ಥ. ಯಾವ ಕಾನೂನೂ ಬಳಕೆಯಲ್ಲಿರಲಿಲ್ಲ. ಸುಲಿಗೆ, ಕೊಲೆ, ಅಪಹರಣ ಸಾಮಾನ್ಯವಾಗಿದ್ದವು. ಬಿಹಾರದ ಈಗಿನ ತಲೆಮಾರಿನ ಜನರು ಮತ ಹಾಕುವ ಮುನ್ನ ಆ ಕತ್ತಲ ಯುಗವನ್ನೊಮ್ಮೆ ನೆನಪಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಇದನ್ನೂ ಓದಿ: ನಮ್ಮ ಜನತೆಗೆ ಉಚಿತ ಕೊರೊನಾ ಲಸಿಕೆ ಕೊಡಿಸುವ ಧಮ್ ಇದೆಯೇ ನಳಿನ್ ಕುಮಾರ್?- ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಕೃಷಿ ಮಸೂದೆಗಳಿಗೆ ವಿರೋಧ ಪಕ್ಷಗಳು ಮಾಡುತ್ತಿರುವ ವಿರೋಧಗಳನ್ನು ಅಲ್ಲಗಳೆದ ಮೋದಿ “ಮಂಡಿ (ಎಪಿಎಂಸಿ ಮಾರುಕಟ್ಟೆ) ಮತ್ತು ಎಂಎಸ್​ಪಿ ಇವರಿಗೆ ಟೀಕಿಸಲು ಒಂದು ನೆಪ ಮಾತ್ರ. ಇವರಿಗೆ ಮಧ್ಯವರ್ತಿಗಳನ್ನ ಕಾಪಾಡುವ ಉದ್ದೇಶ ಮಾತ್ರ ಇದೆ” ಎಂದು ಆರೋಪಿಸಿದರು.

ಬಿಹಾರದ ಎನ್​ಡಿಎ ಮೈತ್ರಿಕೂಟದಿಂದ ಹೊರಬಂದು ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಎಲ್​ಜೆಪಿಯ ಕುರಿತು ಮಾತನಾಡಿದ ಮೋದಿ, “ಚುನಾವಣೆ ಬಂದರೆ ಒಂದಷ್ಟು ಮುಖಂಡರು ಕಾಣಿಸಿಕೊಳ್ಳುತ್ತಾರೆ. ವಾಸ್ತವದಲ್ಲಿರುವುದಕ್ಕಿಂತ ಅವರನ್ನು ದೊಡ್ಡವರನ್ನಾಗಿ ಬಿಂಬಿಸಲಾಗುತ್ತದೆ. ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ. ಇಂಥ ವದಂತಿ ಮತ್ತು ಮಿಥ್ಯೆಗಳನ್ನ ಬಿಹಾರದ ಬುದ್ಧಿವಂತ ಮತದಾರರು ನಂಬುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...