Homeಕರ್ನಾಟಕ‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

- Advertisement -
- Advertisement -

ಪ್ರಧಾನಿ ಮೋದಿ ಸೆಪ್ಟೆಂಬರ್‌ 2 ರಂದು ಮಂಗಳೂರಿಗೆ ಆಗಮಿಸಲಿದ್ದು, ಈ ವೇಳೆ ನಗರದ ಹೊರವಲಯದಲ್ಲಿ ಇರುವ ಬಂಗ್ರ ಕೂಳೂರಿನ ಗೋಲ್ಡ್‌ ಫಿಂಚ್‌ ಮೈದಾನದಲ್ಲಿ ಸಮಾವೇಶ ಆಯೋಜನೆಯಾಗಿದೆ. ಮೋದಿ ಭಾಷಣ ನೀಡಲಿರುವ ಮೈದಾನದ ಬಳಿ ಶೆಡ್‌ ಮನೆಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯಗಳನ್ನು ಜಿಲ್ಲಾ ಪೊಲೀಸರು ಸ್ಥಳಾಂತರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ನೀಡಿದ ನೋಟಿಸ್‌ನಲ್ಲಿ ಮುಂಜಾಗೃತ ಕ್ರಮವಾಗಿ ಯಾವುದೇ ಚಟುವಟಿಕೆಯನ್ನು ಸ್ಥಗಿತಗೊಳಿಸಬೇಕು ಎಂದು ಹೇಳಲಾಗಿದೆ.

ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಕೂಳೂರು ಪೊಲೀಸರು ಬಂಗ್ರಕೂಳೂರು ಪ್ರದೇಶಕ್ಕೆ ತೆರಳಿ ಅಲ್ಲಿ ಶೆಡ್ ಹಾಕಿಕೊಂಡು ಬದುಕು ಸಾಗಿಸುತ್ತಿದ್ದ ಒಂಬತ್ತು ಅಲೆಮಾರಿ ಕುಟುಂಬಗಳನ್ನು ಸ್ಥಳಾಂತರ ಮಾಡಿದ್ದಾರೆ. ಆದರೆ ಅವರಿಗೆ ಸಮರ್ಪಕವಾದ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಕುಟುಂಬಗಳು ಆರೋಪಿಸಿದ್ದು, ಇದರಿಂದ ಮಕ್ಕಳು, ವೃದ್ಧರು ಸೇರಿದಂತೆ ಸುಮಾರು 30ಕ್ಕೂ ಅಧಿಕ ಮಂದಿ ಬೀದಿ ಪಾಲಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ಬಸವ ಆಡಿಸುವ ಸಮುದಾಯಕ್ಕೆ ಸೇರಿರುವ ತಾವು ಕಳೆದ 8 ರಿಂದ 9 ವರ್ಷಗಳಿಂದ ಶೆಡ್‌ ಹಾಕಿಕೊಂಡು ವಾಸಿಸುತ್ತಿರುವುದಾಗಿ ಹೇಳಿದ್ದಾರೆ. ಪ್ರಸ್ತುತ ಸಮಾವೇಶ ನಡೆಯಲಿರುವ 1 ಕಿ.ಮೀ. ದೂರದಲ್ಲಿ ಇರುವ ಈ ಸಮುದಾಯದ ಶೆಡ್‌ಗಳಲ್ಲಿ 9 ಕುಟುಂಬಗಳು ವಾಸಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ. ಇದೀಗ ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆ ನೆಪ ಮಾಡಿಕೊಂಡು ಅಲೆಮಾರಿ ಸಮುದಾಯಗಳನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

ಕಾವೂರು ಪೊಲೀಸರು ಹೊರಡಿಸಿರುವ ನೋಟಿಸ್‌ನಲ್ಲಿ,“ಪ್ರಧಾನಿ ನರೇಂದ್ರ ಮೋದಿಯ ಭೇಟಿಯ ಪ್ರಯುಕ್ತ ಮುಂಜಾಗರೂಕತಾ ಕ್ರಮವಾಗಿ ಕಾರ್ಯಕ್ರಮ ನಡೆಯುವ ಪರಿಸರದಲ್ಲಿ ನಿಗಾ ಇಡಬೇಕಾದ ಕಾರಣ, ಸೆಪ್ಟೆಂಬರ್ 2ರವರೆಗೆ ಸಂಬಂಧಪಟ್ಟ ಕಟ್ಟಡದಲ್ಲಿ ಯಾವುದೇ ಚಟುವಟಿಕೆ ಸ್ಥಗಿತಗೊಳಿಸಲು ಈ ಮೂಲಕ ಕೋರಲಾಗಿದೆ” ಎಂದು ಕಾವೂರು ಠಾಣೆಯ ಇನ್ಸ್‌ಪೆಕ್ಟರ್ ಸಹಿಯೊಂದಿಗೆ ಶೇಡ್‌ನಲ್ಲಿ ವಾಸಿಸುವ ನಿವಾಸಿಗಳಿಗೆ ನೀಡಲಾಗಿದೆ.

‘ಪುಧಾನಿ ಬರುವಾಗ ನಿಮ್ಮ ಶೆಡ್ ಅವರಿಗೆ ಕಾಣಿಸಬಾರದು’

“ನಿನ್ನೆ ರಾತ್ರಿ ಮತ್ತು ಇಂದು ಬೆಳಗ್ಗೆ ಪೊಲೀಸರು ಬಂದು ಬೆತ್ತ ತೋರಿಸಿ ಬೇಗ ತೆರವುಗೊಳಿಸಬೇಕು ಎಂದು ಏರಿದ ಧ್ವನಿಯಲ್ಲಿ ಹೇಳಿದ್ದಾರೆ. ಇಲ್ಲದಿದ್ದರೆ ನಿಮ್ಮನ್ನೆಲ್ಲ 15 ದಿನಗಳ ಕಾಲ ಬಂಧನದಲ್ಲಿಡಲಾಗುವುದು ಎಂದು ಬೆದರಿಸಿದ್ದಾರೆ” ಎಂದು ಅಲೆಮಾರಿ ಸಮುದಾಯದ ಜನರು ಹೇಳಿದ್ದಾರೆ.

“ಪ್ರಧಾನಿ ಬರುವಾಗ ನಿಮ್ಮ ಶೆಡ್‌ಗಳು ಅವರಿಗೆ ಕಾಣಿಸಬಾರದು. ಬೇಗನೇ ಟೆಂಟುಗಳನ್ನು ತೆರವುಗೊಳಿಸಿ ಎನ್ನುತ್ತಾ ಒತ್ತಾಯ ಪೂರ್ವಕವಾಗಿ ನಮ್ಮ ಟೆಂಟ್‌ಗಳನ್ನೆಲ್ಲಾ ಬಿಚ್ಚಿಸಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಟ್ರಂಪ್‌ ಗುಜರಾತ್‌ ಭೇಟಿ ಹಿನ್ನೆಲೆ; ಗೋಡೆ ಆಯ್ತು, ಈಗ ಸ್ಲಂ ಎತ್ತಂಗಡಿಗೆ ಮುಂದಾದ ಅಧಿಕಾರಿಗಳು

ಬಾಣಂತಿ, ಸಣ್ಣ ಮಕ್ಕಳಿದ್ದಾರೆ

“ನಾವು ಮೂಲತಃ ಆಂಧ್ರಪ್ರದೇಶದವರಾಗಿದ್ದು, ಕಳೆದ 8 ರಿಂದ 9 ವರ್ಷದಿಂದ ಇಲ್ಲಿ ಶೆಡ್ ಹಾಕಿಸಿಕೊಂಡು ಬದುಕು ಸಾಗಿಸುತ್ತಿದ್ದವು. ನಮ್ಮಲ್ಲಿ ಬಾಣಂತಿಯರು ಸೇರಿದಂತೆ ಸಣ್ಣ ಮಕ್ಕಳು ಕೂಡಾ ಇದ್ದಾರೆ. ಏಕಾಏಕಿ ನಮ್ಮನ್ನು ಇಲ್ಲಿಂದ ಎಬ್ಬಿಸಿದ್ದಾರೆ. ಬೇರೆ ವ್ಯವಸ್ಥೆಯನ್ನೂ ಮಾಡಿಲ್ಲ. ಹಾಗಾಗಿ ನಾವೀಗ ಬೀದಿ ಪಾಲಾಗಿದ್ದೇವೆ” ಎಂದು ಮೀರೇಶ್ ಎಂಬವರು ನೋವು ತೋಡಿಕೊಂಡಿದ್ದಾರೆ.

“ನಮ್ಮ ಸಾಮಗ್ರಿಗಳನ್ನು ಇಡಲು ಸ್ಥಳೀಯ ವ್ಯಕ್ತಿಯೊಬ್ಬರು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ, ನಮಗೆ ಇನ್ನೂ ಉಳಿದುಕೊಳ್ಳಲು ವ್ಯವಸ್ಥೆ ಆಗಿಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...