Homeಕರ್ನಾಟಕ‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

- Advertisement -
- Advertisement -

ಪ್ರಧಾನಿ ಮೋದಿ ಸೆಪ್ಟೆಂಬರ್‌ 2 ರಂದು ಮಂಗಳೂರಿಗೆ ಆಗಮಿಸಲಿದ್ದು, ಈ ವೇಳೆ ನಗರದ ಹೊರವಲಯದಲ್ಲಿ ಇರುವ ಬಂಗ್ರ ಕೂಳೂರಿನ ಗೋಲ್ಡ್‌ ಫಿಂಚ್‌ ಮೈದಾನದಲ್ಲಿ ಸಮಾವೇಶ ಆಯೋಜನೆಯಾಗಿದೆ. ಮೋದಿ ಭಾಷಣ ನೀಡಲಿರುವ ಮೈದಾನದ ಬಳಿ ಶೆಡ್‌ ಮನೆಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯಗಳನ್ನು ಜಿಲ್ಲಾ ಪೊಲೀಸರು ಸ್ಥಳಾಂತರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ನೀಡಿದ ನೋಟಿಸ್‌ನಲ್ಲಿ ಮುಂಜಾಗೃತ ಕ್ರಮವಾಗಿ ಯಾವುದೇ ಚಟುವಟಿಕೆಯನ್ನು ಸ್ಥಗಿತಗೊಳಿಸಬೇಕು ಎಂದು ಹೇಳಲಾಗಿದೆ.

ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಕೂಳೂರು ಪೊಲೀಸರು ಬಂಗ್ರಕೂಳೂರು ಪ್ರದೇಶಕ್ಕೆ ತೆರಳಿ ಅಲ್ಲಿ ಶೆಡ್ ಹಾಕಿಕೊಂಡು ಬದುಕು ಸಾಗಿಸುತ್ತಿದ್ದ ಒಂಬತ್ತು ಅಲೆಮಾರಿ ಕುಟುಂಬಗಳನ್ನು ಸ್ಥಳಾಂತರ ಮಾಡಿದ್ದಾರೆ. ಆದರೆ ಅವರಿಗೆ ಸಮರ್ಪಕವಾದ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಕುಟುಂಬಗಳು ಆರೋಪಿಸಿದ್ದು, ಇದರಿಂದ ಮಕ್ಕಳು, ವೃದ್ಧರು ಸೇರಿದಂತೆ ಸುಮಾರು 30ಕ್ಕೂ ಅಧಿಕ ಮಂದಿ ಬೀದಿ ಪಾಲಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ಬಸವ ಆಡಿಸುವ ಸಮುದಾಯಕ್ಕೆ ಸೇರಿರುವ ತಾವು ಕಳೆದ 8 ರಿಂದ 9 ವರ್ಷಗಳಿಂದ ಶೆಡ್‌ ಹಾಕಿಕೊಂಡು ವಾಸಿಸುತ್ತಿರುವುದಾಗಿ ಹೇಳಿದ್ದಾರೆ. ಪ್ರಸ್ತುತ ಸಮಾವೇಶ ನಡೆಯಲಿರುವ 1 ಕಿ.ಮೀ. ದೂರದಲ್ಲಿ ಇರುವ ಈ ಸಮುದಾಯದ ಶೆಡ್‌ಗಳಲ್ಲಿ 9 ಕುಟುಂಬಗಳು ವಾಸಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ. ಇದೀಗ ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆ ನೆಪ ಮಾಡಿಕೊಂಡು ಅಲೆಮಾರಿ ಸಮುದಾಯಗಳನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

ಕಾವೂರು ಪೊಲೀಸರು ಹೊರಡಿಸಿರುವ ನೋಟಿಸ್‌ನಲ್ಲಿ,“ಪ್ರಧಾನಿ ನರೇಂದ್ರ ಮೋದಿಯ ಭೇಟಿಯ ಪ್ರಯುಕ್ತ ಮುಂಜಾಗರೂಕತಾ ಕ್ರಮವಾಗಿ ಕಾರ್ಯಕ್ರಮ ನಡೆಯುವ ಪರಿಸರದಲ್ಲಿ ನಿಗಾ ಇಡಬೇಕಾದ ಕಾರಣ, ಸೆಪ್ಟೆಂಬರ್ 2ರವರೆಗೆ ಸಂಬಂಧಪಟ್ಟ ಕಟ್ಟಡದಲ್ಲಿ ಯಾವುದೇ ಚಟುವಟಿಕೆ ಸ್ಥಗಿತಗೊಳಿಸಲು ಈ ಮೂಲಕ ಕೋರಲಾಗಿದೆ” ಎಂದು ಕಾವೂರು ಠಾಣೆಯ ಇನ್ಸ್‌ಪೆಕ್ಟರ್ ಸಹಿಯೊಂದಿಗೆ ಶೇಡ್‌ನಲ್ಲಿ ವಾಸಿಸುವ ನಿವಾಸಿಗಳಿಗೆ ನೀಡಲಾಗಿದೆ.

‘ಪುಧಾನಿ ಬರುವಾಗ ನಿಮ್ಮ ಶೆಡ್ ಅವರಿಗೆ ಕಾಣಿಸಬಾರದು’

“ನಿನ್ನೆ ರಾತ್ರಿ ಮತ್ತು ಇಂದು ಬೆಳಗ್ಗೆ ಪೊಲೀಸರು ಬಂದು ಬೆತ್ತ ತೋರಿಸಿ ಬೇಗ ತೆರವುಗೊಳಿಸಬೇಕು ಎಂದು ಏರಿದ ಧ್ವನಿಯಲ್ಲಿ ಹೇಳಿದ್ದಾರೆ. ಇಲ್ಲದಿದ್ದರೆ ನಿಮ್ಮನ್ನೆಲ್ಲ 15 ದಿನಗಳ ಕಾಲ ಬಂಧನದಲ್ಲಿಡಲಾಗುವುದು ಎಂದು ಬೆದರಿಸಿದ್ದಾರೆ” ಎಂದು ಅಲೆಮಾರಿ ಸಮುದಾಯದ ಜನರು ಹೇಳಿದ್ದಾರೆ.

“ಪ್ರಧಾನಿ ಬರುವಾಗ ನಿಮ್ಮ ಶೆಡ್‌ಗಳು ಅವರಿಗೆ ಕಾಣಿಸಬಾರದು. ಬೇಗನೇ ಟೆಂಟುಗಳನ್ನು ತೆರವುಗೊಳಿಸಿ ಎನ್ನುತ್ತಾ ಒತ್ತಾಯ ಪೂರ್ವಕವಾಗಿ ನಮ್ಮ ಟೆಂಟ್‌ಗಳನ್ನೆಲ್ಲಾ ಬಿಚ್ಚಿಸಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಟ್ರಂಪ್‌ ಗುಜರಾತ್‌ ಭೇಟಿ ಹಿನ್ನೆಲೆ; ಗೋಡೆ ಆಯ್ತು, ಈಗ ಸ್ಲಂ ಎತ್ತಂಗಡಿಗೆ ಮುಂದಾದ ಅಧಿಕಾರಿಗಳು

ಬಾಣಂತಿ, ಸಣ್ಣ ಮಕ್ಕಳಿದ್ದಾರೆ

“ನಾವು ಮೂಲತಃ ಆಂಧ್ರಪ್ರದೇಶದವರಾಗಿದ್ದು, ಕಳೆದ 8 ರಿಂದ 9 ವರ್ಷದಿಂದ ಇಲ್ಲಿ ಶೆಡ್ ಹಾಕಿಸಿಕೊಂಡು ಬದುಕು ಸಾಗಿಸುತ್ತಿದ್ದವು. ನಮ್ಮಲ್ಲಿ ಬಾಣಂತಿಯರು ಸೇರಿದಂತೆ ಸಣ್ಣ ಮಕ್ಕಳು ಕೂಡಾ ಇದ್ದಾರೆ. ಏಕಾಏಕಿ ನಮ್ಮನ್ನು ಇಲ್ಲಿಂದ ಎಬ್ಬಿಸಿದ್ದಾರೆ. ಬೇರೆ ವ್ಯವಸ್ಥೆಯನ್ನೂ ಮಾಡಿಲ್ಲ. ಹಾಗಾಗಿ ನಾವೀಗ ಬೀದಿ ಪಾಲಾಗಿದ್ದೇವೆ” ಎಂದು ಮೀರೇಶ್ ಎಂಬವರು ನೋವು ತೋಡಿಕೊಂಡಿದ್ದಾರೆ.

“ನಮ್ಮ ಸಾಮಗ್ರಿಗಳನ್ನು ಇಡಲು ಸ್ಥಳೀಯ ವ್ಯಕ್ತಿಯೊಬ್ಬರು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ, ನಮಗೆ ಇನ್ನೂ ಉಳಿದುಕೊಳ್ಳಲು ವ್ಯವಸ್ಥೆ ಆಗಿಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...