Homeಕರ್ನಾಟಕ‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

- Advertisement -
- Advertisement -

ಪ್ರಧಾನಿ ಮೋದಿ ಸೆಪ್ಟೆಂಬರ್‌ 2 ರಂದು ಮಂಗಳೂರಿಗೆ ಆಗಮಿಸಲಿದ್ದು, ಈ ವೇಳೆ ನಗರದ ಹೊರವಲಯದಲ್ಲಿ ಇರುವ ಬಂಗ್ರ ಕೂಳೂರಿನ ಗೋಲ್ಡ್‌ ಫಿಂಚ್‌ ಮೈದಾನದಲ್ಲಿ ಸಮಾವೇಶ ಆಯೋಜನೆಯಾಗಿದೆ. ಮೋದಿ ಭಾಷಣ ನೀಡಲಿರುವ ಮೈದಾನದ ಬಳಿ ಶೆಡ್‌ ಮನೆಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯಗಳನ್ನು ಜಿಲ್ಲಾ ಪೊಲೀಸರು ಸ್ಥಳಾಂತರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ನೀಡಿದ ನೋಟಿಸ್‌ನಲ್ಲಿ ಮುಂಜಾಗೃತ ಕ್ರಮವಾಗಿ ಯಾವುದೇ ಚಟುವಟಿಕೆಯನ್ನು ಸ್ಥಗಿತಗೊಳಿಸಬೇಕು ಎಂದು ಹೇಳಲಾಗಿದೆ.

ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಕೂಳೂರು ಪೊಲೀಸರು ಬಂಗ್ರಕೂಳೂರು ಪ್ರದೇಶಕ್ಕೆ ತೆರಳಿ ಅಲ್ಲಿ ಶೆಡ್ ಹಾಕಿಕೊಂಡು ಬದುಕು ಸಾಗಿಸುತ್ತಿದ್ದ ಒಂಬತ್ತು ಅಲೆಮಾರಿ ಕುಟುಂಬಗಳನ್ನು ಸ್ಥಳಾಂತರ ಮಾಡಿದ್ದಾರೆ. ಆದರೆ ಅವರಿಗೆ ಸಮರ್ಪಕವಾದ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಕುಟುಂಬಗಳು ಆರೋಪಿಸಿದ್ದು, ಇದರಿಂದ ಮಕ್ಕಳು, ವೃದ್ಧರು ಸೇರಿದಂತೆ ಸುಮಾರು 30ಕ್ಕೂ ಅಧಿಕ ಮಂದಿ ಬೀದಿ ಪಾಲಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ಬಸವ ಆಡಿಸುವ ಸಮುದಾಯಕ್ಕೆ ಸೇರಿರುವ ತಾವು ಕಳೆದ 8 ರಿಂದ 9 ವರ್ಷಗಳಿಂದ ಶೆಡ್‌ ಹಾಕಿಕೊಂಡು ವಾಸಿಸುತ್ತಿರುವುದಾಗಿ ಹೇಳಿದ್ದಾರೆ. ಪ್ರಸ್ತುತ ಸಮಾವೇಶ ನಡೆಯಲಿರುವ 1 ಕಿ.ಮೀ. ದೂರದಲ್ಲಿ ಇರುವ ಈ ಸಮುದಾಯದ ಶೆಡ್‌ಗಳಲ್ಲಿ 9 ಕುಟುಂಬಗಳು ವಾಸಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ. ಇದೀಗ ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆ ನೆಪ ಮಾಡಿಕೊಂಡು ಅಲೆಮಾರಿ ಸಮುದಾಯಗಳನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

ಕಾವೂರು ಪೊಲೀಸರು ಹೊರಡಿಸಿರುವ ನೋಟಿಸ್‌ನಲ್ಲಿ,“ಪ್ರಧಾನಿ ನರೇಂದ್ರ ಮೋದಿಯ ಭೇಟಿಯ ಪ್ರಯುಕ್ತ ಮುಂಜಾಗರೂಕತಾ ಕ್ರಮವಾಗಿ ಕಾರ್ಯಕ್ರಮ ನಡೆಯುವ ಪರಿಸರದಲ್ಲಿ ನಿಗಾ ಇಡಬೇಕಾದ ಕಾರಣ, ಸೆಪ್ಟೆಂಬರ್ 2ರವರೆಗೆ ಸಂಬಂಧಪಟ್ಟ ಕಟ್ಟಡದಲ್ಲಿ ಯಾವುದೇ ಚಟುವಟಿಕೆ ಸ್ಥಗಿತಗೊಳಿಸಲು ಈ ಮೂಲಕ ಕೋರಲಾಗಿದೆ” ಎಂದು ಕಾವೂರು ಠಾಣೆಯ ಇನ್ಸ್‌ಪೆಕ್ಟರ್ ಸಹಿಯೊಂದಿಗೆ ಶೇಡ್‌ನಲ್ಲಿ ವಾಸಿಸುವ ನಿವಾಸಿಗಳಿಗೆ ನೀಡಲಾಗಿದೆ.

‘ಪುಧಾನಿ ಬರುವಾಗ ನಿಮ್ಮ ಶೆಡ್ ಅವರಿಗೆ ಕಾಣಿಸಬಾರದು’

“ನಿನ್ನೆ ರಾತ್ರಿ ಮತ್ತು ಇಂದು ಬೆಳಗ್ಗೆ ಪೊಲೀಸರು ಬಂದು ಬೆತ್ತ ತೋರಿಸಿ ಬೇಗ ತೆರವುಗೊಳಿಸಬೇಕು ಎಂದು ಏರಿದ ಧ್ವನಿಯಲ್ಲಿ ಹೇಳಿದ್ದಾರೆ. ಇಲ್ಲದಿದ್ದರೆ ನಿಮ್ಮನ್ನೆಲ್ಲ 15 ದಿನಗಳ ಕಾಲ ಬಂಧನದಲ್ಲಿಡಲಾಗುವುದು ಎಂದು ಬೆದರಿಸಿದ್ದಾರೆ” ಎಂದು ಅಲೆಮಾರಿ ಸಮುದಾಯದ ಜನರು ಹೇಳಿದ್ದಾರೆ.

“ಪ್ರಧಾನಿ ಬರುವಾಗ ನಿಮ್ಮ ಶೆಡ್‌ಗಳು ಅವರಿಗೆ ಕಾಣಿಸಬಾರದು. ಬೇಗನೇ ಟೆಂಟುಗಳನ್ನು ತೆರವುಗೊಳಿಸಿ ಎನ್ನುತ್ತಾ ಒತ್ತಾಯ ಪೂರ್ವಕವಾಗಿ ನಮ್ಮ ಟೆಂಟ್‌ಗಳನ್ನೆಲ್ಲಾ ಬಿಚ್ಚಿಸಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಟ್ರಂಪ್‌ ಗುಜರಾತ್‌ ಭೇಟಿ ಹಿನ್ನೆಲೆ; ಗೋಡೆ ಆಯ್ತು, ಈಗ ಸ್ಲಂ ಎತ್ತಂಗಡಿಗೆ ಮುಂದಾದ ಅಧಿಕಾರಿಗಳು

ಬಾಣಂತಿ, ಸಣ್ಣ ಮಕ್ಕಳಿದ್ದಾರೆ

“ನಾವು ಮೂಲತಃ ಆಂಧ್ರಪ್ರದೇಶದವರಾಗಿದ್ದು, ಕಳೆದ 8 ರಿಂದ 9 ವರ್ಷದಿಂದ ಇಲ್ಲಿ ಶೆಡ್ ಹಾಕಿಸಿಕೊಂಡು ಬದುಕು ಸಾಗಿಸುತ್ತಿದ್ದವು. ನಮ್ಮಲ್ಲಿ ಬಾಣಂತಿಯರು ಸೇರಿದಂತೆ ಸಣ್ಣ ಮಕ್ಕಳು ಕೂಡಾ ಇದ್ದಾರೆ. ಏಕಾಏಕಿ ನಮ್ಮನ್ನು ಇಲ್ಲಿಂದ ಎಬ್ಬಿಸಿದ್ದಾರೆ. ಬೇರೆ ವ್ಯವಸ್ಥೆಯನ್ನೂ ಮಾಡಿಲ್ಲ. ಹಾಗಾಗಿ ನಾವೀಗ ಬೀದಿ ಪಾಲಾಗಿದ್ದೇವೆ” ಎಂದು ಮೀರೇಶ್ ಎಂಬವರು ನೋವು ತೋಡಿಕೊಂಡಿದ್ದಾರೆ.

“ನಮ್ಮ ಸಾಮಗ್ರಿಗಳನ್ನು ಇಡಲು ಸ್ಥಳೀಯ ವ್ಯಕ್ತಿಯೊಬ್ಬರು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ, ನಮಗೆ ಇನ್ನೂ ಉಳಿದುಕೊಳ್ಳಲು ವ್ಯವಸ್ಥೆ ಆಗಿಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...