Homeಕರ್ನಾಟಕ‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

- Advertisement -
- Advertisement -

ಪ್ರಧಾನಿ ಮೋದಿ ಸೆಪ್ಟೆಂಬರ್‌ 2 ರಂದು ಮಂಗಳೂರಿಗೆ ಆಗಮಿಸಲಿದ್ದು, ಈ ವೇಳೆ ನಗರದ ಹೊರವಲಯದಲ್ಲಿ ಇರುವ ಬಂಗ್ರ ಕೂಳೂರಿನ ಗೋಲ್ಡ್‌ ಫಿಂಚ್‌ ಮೈದಾನದಲ್ಲಿ ಸಮಾವೇಶ ಆಯೋಜನೆಯಾಗಿದೆ. ಮೋದಿ ಭಾಷಣ ನೀಡಲಿರುವ ಮೈದಾನದ ಬಳಿ ಶೆಡ್‌ ಮನೆಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯಗಳನ್ನು ಜಿಲ್ಲಾ ಪೊಲೀಸರು ಸ್ಥಳಾಂತರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ನೀಡಿದ ನೋಟಿಸ್‌ನಲ್ಲಿ ಮುಂಜಾಗೃತ ಕ್ರಮವಾಗಿ ಯಾವುದೇ ಚಟುವಟಿಕೆಯನ್ನು ಸ್ಥಗಿತಗೊಳಿಸಬೇಕು ಎಂದು ಹೇಳಲಾಗಿದೆ.

ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಕೂಳೂರು ಪೊಲೀಸರು ಬಂಗ್ರಕೂಳೂರು ಪ್ರದೇಶಕ್ಕೆ ತೆರಳಿ ಅಲ್ಲಿ ಶೆಡ್ ಹಾಕಿಕೊಂಡು ಬದುಕು ಸಾಗಿಸುತ್ತಿದ್ದ ಒಂಬತ್ತು ಅಲೆಮಾರಿ ಕುಟುಂಬಗಳನ್ನು ಸ್ಥಳಾಂತರ ಮಾಡಿದ್ದಾರೆ. ಆದರೆ ಅವರಿಗೆ ಸಮರ್ಪಕವಾದ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಕುಟುಂಬಗಳು ಆರೋಪಿಸಿದ್ದು, ಇದರಿಂದ ಮಕ್ಕಳು, ವೃದ್ಧರು ಸೇರಿದಂತೆ ಸುಮಾರು 30ಕ್ಕೂ ಅಧಿಕ ಮಂದಿ ಬೀದಿ ಪಾಲಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ಬಸವ ಆಡಿಸುವ ಸಮುದಾಯಕ್ಕೆ ಸೇರಿರುವ ತಾವು ಕಳೆದ 8 ರಿಂದ 9 ವರ್ಷಗಳಿಂದ ಶೆಡ್‌ ಹಾಕಿಕೊಂಡು ವಾಸಿಸುತ್ತಿರುವುದಾಗಿ ಹೇಳಿದ್ದಾರೆ. ಪ್ರಸ್ತುತ ಸಮಾವೇಶ ನಡೆಯಲಿರುವ 1 ಕಿ.ಮೀ. ದೂರದಲ್ಲಿ ಇರುವ ಈ ಸಮುದಾಯದ ಶೆಡ್‌ಗಳಲ್ಲಿ 9 ಕುಟುಂಬಗಳು ವಾಸಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ. ಇದೀಗ ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆ ನೆಪ ಮಾಡಿಕೊಂಡು ಅಲೆಮಾರಿ ಸಮುದಾಯಗಳನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

ಕಾವೂರು ಪೊಲೀಸರು ಹೊರಡಿಸಿರುವ ನೋಟಿಸ್‌ನಲ್ಲಿ,“ಪ್ರಧಾನಿ ನರೇಂದ್ರ ಮೋದಿಯ ಭೇಟಿಯ ಪ್ರಯುಕ್ತ ಮುಂಜಾಗರೂಕತಾ ಕ್ರಮವಾಗಿ ಕಾರ್ಯಕ್ರಮ ನಡೆಯುವ ಪರಿಸರದಲ್ಲಿ ನಿಗಾ ಇಡಬೇಕಾದ ಕಾರಣ, ಸೆಪ್ಟೆಂಬರ್ 2ರವರೆಗೆ ಸಂಬಂಧಪಟ್ಟ ಕಟ್ಟಡದಲ್ಲಿ ಯಾವುದೇ ಚಟುವಟಿಕೆ ಸ್ಥಗಿತಗೊಳಿಸಲು ಈ ಮೂಲಕ ಕೋರಲಾಗಿದೆ” ಎಂದು ಕಾವೂರು ಠಾಣೆಯ ಇನ್ಸ್‌ಪೆಕ್ಟರ್ ಸಹಿಯೊಂದಿಗೆ ಶೇಡ್‌ನಲ್ಲಿ ವಾಸಿಸುವ ನಿವಾಸಿಗಳಿಗೆ ನೀಡಲಾಗಿದೆ.

‘ಪುಧಾನಿ ಬರುವಾಗ ನಿಮ್ಮ ಶೆಡ್ ಅವರಿಗೆ ಕಾಣಿಸಬಾರದು’

“ನಿನ್ನೆ ರಾತ್ರಿ ಮತ್ತು ಇಂದು ಬೆಳಗ್ಗೆ ಪೊಲೀಸರು ಬಂದು ಬೆತ್ತ ತೋರಿಸಿ ಬೇಗ ತೆರವುಗೊಳಿಸಬೇಕು ಎಂದು ಏರಿದ ಧ್ವನಿಯಲ್ಲಿ ಹೇಳಿದ್ದಾರೆ. ಇಲ್ಲದಿದ್ದರೆ ನಿಮ್ಮನ್ನೆಲ್ಲ 15 ದಿನಗಳ ಕಾಲ ಬಂಧನದಲ್ಲಿಡಲಾಗುವುದು ಎಂದು ಬೆದರಿಸಿದ್ದಾರೆ” ಎಂದು ಅಲೆಮಾರಿ ಸಮುದಾಯದ ಜನರು ಹೇಳಿದ್ದಾರೆ.

“ಪ್ರಧಾನಿ ಬರುವಾಗ ನಿಮ್ಮ ಶೆಡ್‌ಗಳು ಅವರಿಗೆ ಕಾಣಿಸಬಾರದು. ಬೇಗನೇ ಟೆಂಟುಗಳನ್ನು ತೆರವುಗೊಳಿಸಿ ಎನ್ನುತ್ತಾ ಒತ್ತಾಯ ಪೂರ್ವಕವಾಗಿ ನಮ್ಮ ಟೆಂಟ್‌ಗಳನ್ನೆಲ್ಲಾ ಬಿಚ್ಚಿಸಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಟ್ರಂಪ್‌ ಗುಜರಾತ್‌ ಭೇಟಿ ಹಿನ್ನೆಲೆ; ಗೋಡೆ ಆಯ್ತು, ಈಗ ಸ್ಲಂ ಎತ್ತಂಗಡಿಗೆ ಮುಂದಾದ ಅಧಿಕಾರಿಗಳು

ಬಾಣಂತಿ, ಸಣ್ಣ ಮಕ್ಕಳಿದ್ದಾರೆ

“ನಾವು ಮೂಲತಃ ಆಂಧ್ರಪ್ರದೇಶದವರಾಗಿದ್ದು, ಕಳೆದ 8 ರಿಂದ 9 ವರ್ಷದಿಂದ ಇಲ್ಲಿ ಶೆಡ್ ಹಾಕಿಸಿಕೊಂಡು ಬದುಕು ಸಾಗಿಸುತ್ತಿದ್ದವು. ನಮ್ಮಲ್ಲಿ ಬಾಣಂತಿಯರು ಸೇರಿದಂತೆ ಸಣ್ಣ ಮಕ್ಕಳು ಕೂಡಾ ಇದ್ದಾರೆ. ಏಕಾಏಕಿ ನಮ್ಮನ್ನು ಇಲ್ಲಿಂದ ಎಬ್ಬಿಸಿದ್ದಾರೆ. ಬೇರೆ ವ್ಯವಸ್ಥೆಯನ್ನೂ ಮಾಡಿಲ್ಲ. ಹಾಗಾಗಿ ನಾವೀಗ ಬೀದಿ ಪಾಲಾಗಿದ್ದೇವೆ” ಎಂದು ಮೀರೇಶ್ ಎಂಬವರು ನೋವು ತೋಡಿಕೊಂಡಿದ್ದಾರೆ.

“ನಮ್ಮ ಸಾಮಗ್ರಿಗಳನ್ನು ಇಡಲು ಸ್ಥಳೀಯ ವ್ಯಕ್ತಿಯೊಬ್ಬರು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ, ನಮಗೆ ಇನ್ನೂ ಉಳಿದುಕೊಳ್ಳಲು ವ್ಯವಸ್ಥೆ ಆಗಿಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...