Homeಕರ್ನಾಟಕ‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

- Advertisement -
- Advertisement -

ಪ್ರಧಾನಿ ಮೋದಿ ಸೆಪ್ಟೆಂಬರ್‌ 2 ರಂದು ಮಂಗಳೂರಿಗೆ ಆಗಮಿಸಲಿದ್ದು, ಈ ವೇಳೆ ನಗರದ ಹೊರವಲಯದಲ್ಲಿ ಇರುವ ಬಂಗ್ರ ಕೂಳೂರಿನ ಗೋಲ್ಡ್‌ ಫಿಂಚ್‌ ಮೈದಾನದಲ್ಲಿ ಸಮಾವೇಶ ಆಯೋಜನೆಯಾಗಿದೆ. ಮೋದಿ ಭಾಷಣ ನೀಡಲಿರುವ ಮೈದಾನದ ಬಳಿ ಶೆಡ್‌ ಮನೆಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯಗಳನ್ನು ಜಿಲ್ಲಾ ಪೊಲೀಸರು ಸ್ಥಳಾಂತರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ನೀಡಿದ ನೋಟಿಸ್‌ನಲ್ಲಿ ಮುಂಜಾಗೃತ ಕ್ರಮವಾಗಿ ಯಾವುದೇ ಚಟುವಟಿಕೆಯನ್ನು ಸ್ಥಗಿತಗೊಳಿಸಬೇಕು ಎಂದು ಹೇಳಲಾಗಿದೆ.

ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಕೂಳೂರು ಪೊಲೀಸರು ಬಂಗ್ರಕೂಳೂರು ಪ್ರದೇಶಕ್ಕೆ ತೆರಳಿ ಅಲ್ಲಿ ಶೆಡ್ ಹಾಕಿಕೊಂಡು ಬದುಕು ಸಾಗಿಸುತ್ತಿದ್ದ ಒಂಬತ್ತು ಅಲೆಮಾರಿ ಕುಟುಂಬಗಳನ್ನು ಸ್ಥಳಾಂತರ ಮಾಡಿದ್ದಾರೆ. ಆದರೆ ಅವರಿಗೆ ಸಮರ್ಪಕವಾದ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಕುಟುಂಬಗಳು ಆರೋಪಿಸಿದ್ದು, ಇದರಿಂದ ಮಕ್ಕಳು, ವೃದ್ಧರು ಸೇರಿದಂತೆ ಸುಮಾರು 30ಕ್ಕೂ ಅಧಿಕ ಮಂದಿ ಬೀದಿ ಪಾಲಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ಬಸವ ಆಡಿಸುವ ಸಮುದಾಯಕ್ಕೆ ಸೇರಿರುವ ತಾವು ಕಳೆದ 8 ರಿಂದ 9 ವರ್ಷಗಳಿಂದ ಶೆಡ್‌ ಹಾಕಿಕೊಂಡು ವಾಸಿಸುತ್ತಿರುವುದಾಗಿ ಹೇಳಿದ್ದಾರೆ. ಪ್ರಸ್ತುತ ಸಮಾವೇಶ ನಡೆಯಲಿರುವ 1 ಕಿ.ಮೀ. ದೂರದಲ್ಲಿ ಇರುವ ಈ ಸಮುದಾಯದ ಶೆಡ್‌ಗಳಲ್ಲಿ 9 ಕುಟುಂಬಗಳು ವಾಸಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ. ಇದೀಗ ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆ ನೆಪ ಮಾಡಿಕೊಂಡು ಅಲೆಮಾರಿ ಸಮುದಾಯಗಳನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

ಕಾವೂರು ಪೊಲೀಸರು ಹೊರಡಿಸಿರುವ ನೋಟಿಸ್‌ನಲ್ಲಿ,“ಪ್ರಧಾನಿ ನರೇಂದ್ರ ಮೋದಿಯ ಭೇಟಿಯ ಪ್ರಯುಕ್ತ ಮುಂಜಾಗರೂಕತಾ ಕ್ರಮವಾಗಿ ಕಾರ್ಯಕ್ರಮ ನಡೆಯುವ ಪರಿಸರದಲ್ಲಿ ನಿಗಾ ಇಡಬೇಕಾದ ಕಾರಣ, ಸೆಪ್ಟೆಂಬರ್ 2ರವರೆಗೆ ಸಂಬಂಧಪಟ್ಟ ಕಟ್ಟಡದಲ್ಲಿ ಯಾವುದೇ ಚಟುವಟಿಕೆ ಸ್ಥಗಿತಗೊಳಿಸಲು ಈ ಮೂಲಕ ಕೋರಲಾಗಿದೆ” ಎಂದು ಕಾವೂರು ಠಾಣೆಯ ಇನ್ಸ್‌ಪೆಕ್ಟರ್ ಸಹಿಯೊಂದಿಗೆ ಶೇಡ್‌ನಲ್ಲಿ ವಾಸಿಸುವ ನಿವಾಸಿಗಳಿಗೆ ನೀಡಲಾಗಿದೆ.

‘ಪುಧಾನಿ ಬರುವಾಗ ನಿಮ್ಮ ಶೆಡ್ ಅವರಿಗೆ ಕಾಣಿಸಬಾರದು’

“ನಿನ್ನೆ ರಾತ್ರಿ ಮತ್ತು ಇಂದು ಬೆಳಗ್ಗೆ ಪೊಲೀಸರು ಬಂದು ಬೆತ್ತ ತೋರಿಸಿ ಬೇಗ ತೆರವುಗೊಳಿಸಬೇಕು ಎಂದು ಏರಿದ ಧ್ವನಿಯಲ್ಲಿ ಹೇಳಿದ್ದಾರೆ. ಇಲ್ಲದಿದ್ದರೆ ನಿಮ್ಮನ್ನೆಲ್ಲ 15 ದಿನಗಳ ಕಾಲ ಬಂಧನದಲ್ಲಿಡಲಾಗುವುದು ಎಂದು ಬೆದರಿಸಿದ್ದಾರೆ” ಎಂದು ಅಲೆಮಾರಿ ಸಮುದಾಯದ ಜನರು ಹೇಳಿದ್ದಾರೆ.

“ಪ್ರಧಾನಿ ಬರುವಾಗ ನಿಮ್ಮ ಶೆಡ್‌ಗಳು ಅವರಿಗೆ ಕಾಣಿಸಬಾರದು. ಬೇಗನೇ ಟೆಂಟುಗಳನ್ನು ತೆರವುಗೊಳಿಸಿ ಎನ್ನುತ್ತಾ ಒತ್ತಾಯ ಪೂರ್ವಕವಾಗಿ ನಮ್ಮ ಟೆಂಟ್‌ಗಳನ್ನೆಲ್ಲಾ ಬಿಚ್ಚಿಸಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಟ್ರಂಪ್‌ ಗುಜರಾತ್‌ ಭೇಟಿ ಹಿನ್ನೆಲೆ; ಗೋಡೆ ಆಯ್ತು, ಈಗ ಸ್ಲಂ ಎತ್ತಂಗಡಿಗೆ ಮುಂದಾದ ಅಧಿಕಾರಿಗಳು

ಬಾಣಂತಿ, ಸಣ್ಣ ಮಕ್ಕಳಿದ್ದಾರೆ

“ನಾವು ಮೂಲತಃ ಆಂಧ್ರಪ್ರದೇಶದವರಾಗಿದ್ದು, ಕಳೆದ 8 ರಿಂದ 9 ವರ್ಷದಿಂದ ಇಲ್ಲಿ ಶೆಡ್ ಹಾಕಿಸಿಕೊಂಡು ಬದುಕು ಸಾಗಿಸುತ್ತಿದ್ದವು. ನಮ್ಮಲ್ಲಿ ಬಾಣಂತಿಯರು ಸೇರಿದಂತೆ ಸಣ್ಣ ಮಕ್ಕಳು ಕೂಡಾ ಇದ್ದಾರೆ. ಏಕಾಏಕಿ ನಮ್ಮನ್ನು ಇಲ್ಲಿಂದ ಎಬ್ಬಿಸಿದ್ದಾರೆ. ಬೇರೆ ವ್ಯವಸ್ಥೆಯನ್ನೂ ಮಾಡಿಲ್ಲ. ಹಾಗಾಗಿ ನಾವೀಗ ಬೀದಿ ಪಾಲಾಗಿದ್ದೇವೆ” ಎಂದು ಮೀರೇಶ್ ಎಂಬವರು ನೋವು ತೋಡಿಕೊಂಡಿದ್ದಾರೆ.

“ನಮ್ಮ ಸಾಮಗ್ರಿಗಳನ್ನು ಇಡಲು ಸ್ಥಳೀಯ ವ್ಯಕ್ತಿಯೊಬ್ಬರು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ, ನಮಗೆ ಇನ್ನೂ ಉಳಿದುಕೊಳ್ಳಲು ವ್ಯವಸ್ಥೆ ಆಗಿಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...