Homeಕರ್ನಾಟಕ‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

- Advertisement -
- Advertisement -

ಪ್ರಧಾನಿ ಮೋದಿ ಸೆಪ್ಟೆಂಬರ್‌ 2 ರಂದು ಮಂಗಳೂರಿಗೆ ಆಗಮಿಸಲಿದ್ದು, ಈ ವೇಳೆ ನಗರದ ಹೊರವಲಯದಲ್ಲಿ ಇರುವ ಬಂಗ್ರ ಕೂಳೂರಿನ ಗೋಲ್ಡ್‌ ಫಿಂಚ್‌ ಮೈದಾನದಲ್ಲಿ ಸಮಾವೇಶ ಆಯೋಜನೆಯಾಗಿದೆ. ಮೋದಿ ಭಾಷಣ ನೀಡಲಿರುವ ಮೈದಾನದ ಬಳಿ ಶೆಡ್‌ ಮನೆಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯಗಳನ್ನು ಜಿಲ್ಲಾ ಪೊಲೀಸರು ಸ್ಥಳಾಂತರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ನೀಡಿದ ನೋಟಿಸ್‌ನಲ್ಲಿ ಮುಂಜಾಗೃತ ಕ್ರಮವಾಗಿ ಯಾವುದೇ ಚಟುವಟಿಕೆಯನ್ನು ಸ್ಥಗಿತಗೊಳಿಸಬೇಕು ಎಂದು ಹೇಳಲಾಗಿದೆ.

ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಕೂಳೂರು ಪೊಲೀಸರು ಬಂಗ್ರಕೂಳೂರು ಪ್ರದೇಶಕ್ಕೆ ತೆರಳಿ ಅಲ್ಲಿ ಶೆಡ್ ಹಾಕಿಕೊಂಡು ಬದುಕು ಸಾಗಿಸುತ್ತಿದ್ದ ಒಂಬತ್ತು ಅಲೆಮಾರಿ ಕುಟುಂಬಗಳನ್ನು ಸ್ಥಳಾಂತರ ಮಾಡಿದ್ದಾರೆ. ಆದರೆ ಅವರಿಗೆ ಸಮರ್ಪಕವಾದ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಕುಟುಂಬಗಳು ಆರೋಪಿಸಿದ್ದು, ಇದರಿಂದ ಮಕ್ಕಳು, ವೃದ್ಧರು ಸೇರಿದಂತೆ ಸುಮಾರು 30ಕ್ಕೂ ಅಧಿಕ ಮಂದಿ ಬೀದಿ ಪಾಲಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ಬಸವ ಆಡಿಸುವ ಸಮುದಾಯಕ್ಕೆ ಸೇರಿರುವ ತಾವು ಕಳೆದ 8 ರಿಂದ 9 ವರ್ಷಗಳಿಂದ ಶೆಡ್‌ ಹಾಕಿಕೊಂಡು ವಾಸಿಸುತ್ತಿರುವುದಾಗಿ ಹೇಳಿದ್ದಾರೆ. ಪ್ರಸ್ತುತ ಸಮಾವೇಶ ನಡೆಯಲಿರುವ 1 ಕಿ.ಮೀ. ದೂರದಲ್ಲಿ ಇರುವ ಈ ಸಮುದಾಯದ ಶೆಡ್‌ಗಳಲ್ಲಿ 9 ಕುಟುಂಬಗಳು ವಾಸಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ. ಇದೀಗ ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆ ನೆಪ ಮಾಡಿಕೊಂಡು ಅಲೆಮಾರಿ ಸಮುದಾಯಗಳನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

ಕಾವೂರು ಪೊಲೀಸರು ಹೊರಡಿಸಿರುವ ನೋಟಿಸ್‌ನಲ್ಲಿ,“ಪ್ರಧಾನಿ ನರೇಂದ್ರ ಮೋದಿಯ ಭೇಟಿಯ ಪ್ರಯುಕ್ತ ಮುಂಜಾಗರೂಕತಾ ಕ್ರಮವಾಗಿ ಕಾರ್ಯಕ್ರಮ ನಡೆಯುವ ಪರಿಸರದಲ್ಲಿ ನಿಗಾ ಇಡಬೇಕಾದ ಕಾರಣ, ಸೆಪ್ಟೆಂಬರ್ 2ರವರೆಗೆ ಸಂಬಂಧಪಟ್ಟ ಕಟ್ಟಡದಲ್ಲಿ ಯಾವುದೇ ಚಟುವಟಿಕೆ ಸ್ಥಗಿತಗೊಳಿಸಲು ಈ ಮೂಲಕ ಕೋರಲಾಗಿದೆ” ಎಂದು ಕಾವೂರು ಠಾಣೆಯ ಇನ್ಸ್‌ಪೆಕ್ಟರ್ ಸಹಿಯೊಂದಿಗೆ ಶೇಡ್‌ನಲ್ಲಿ ವಾಸಿಸುವ ನಿವಾಸಿಗಳಿಗೆ ನೀಡಲಾಗಿದೆ.

‘ಪುಧಾನಿ ಬರುವಾಗ ನಿಮ್ಮ ಶೆಡ್ ಅವರಿಗೆ ಕಾಣಿಸಬಾರದು’

“ನಿನ್ನೆ ರಾತ್ರಿ ಮತ್ತು ಇಂದು ಬೆಳಗ್ಗೆ ಪೊಲೀಸರು ಬಂದು ಬೆತ್ತ ತೋರಿಸಿ ಬೇಗ ತೆರವುಗೊಳಿಸಬೇಕು ಎಂದು ಏರಿದ ಧ್ವನಿಯಲ್ಲಿ ಹೇಳಿದ್ದಾರೆ. ಇಲ್ಲದಿದ್ದರೆ ನಿಮ್ಮನ್ನೆಲ್ಲ 15 ದಿನಗಳ ಕಾಲ ಬಂಧನದಲ್ಲಿಡಲಾಗುವುದು ಎಂದು ಬೆದರಿಸಿದ್ದಾರೆ” ಎಂದು ಅಲೆಮಾರಿ ಸಮುದಾಯದ ಜನರು ಹೇಳಿದ್ದಾರೆ.

“ಪ್ರಧಾನಿ ಬರುವಾಗ ನಿಮ್ಮ ಶೆಡ್‌ಗಳು ಅವರಿಗೆ ಕಾಣಿಸಬಾರದು. ಬೇಗನೇ ಟೆಂಟುಗಳನ್ನು ತೆರವುಗೊಳಿಸಿ ಎನ್ನುತ್ತಾ ಒತ್ತಾಯ ಪೂರ್ವಕವಾಗಿ ನಮ್ಮ ಟೆಂಟ್‌ಗಳನ್ನೆಲ್ಲಾ ಬಿಚ್ಚಿಸಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಟ್ರಂಪ್‌ ಗುಜರಾತ್‌ ಭೇಟಿ ಹಿನ್ನೆಲೆ; ಗೋಡೆ ಆಯ್ತು, ಈಗ ಸ್ಲಂ ಎತ್ತಂಗಡಿಗೆ ಮುಂದಾದ ಅಧಿಕಾರಿಗಳು

ಬಾಣಂತಿ, ಸಣ್ಣ ಮಕ್ಕಳಿದ್ದಾರೆ

“ನಾವು ಮೂಲತಃ ಆಂಧ್ರಪ್ರದೇಶದವರಾಗಿದ್ದು, ಕಳೆದ 8 ರಿಂದ 9 ವರ್ಷದಿಂದ ಇಲ್ಲಿ ಶೆಡ್ ಹಾಕಿಸಿಕೊಂಡು ಬದುಕು ಸಾಗಿಸುತ್ತಿದ್ದವು. ನಮ್ಮಲ್ಲಿ ಬಾಣಂತಿಯರು ಸೇರಿದಂತೆ ಸಣ್ಣ ಮಕ್ಕಳು ಕೂಡಾ ಇದ್ದಾರೆ. ಏಕಾಏಕಿ ನಮ್ಮನ್ನು ಇಲ್ಲಿಂದ ಎಬ್ಬಿಸಿದ್ದಾರೆ. ಬೇರೆ ವ್ಯವಸ್ಥೆಯನ್ನೂ ಮಾಡಿಲ್ಲ. ಹಾಗಾಗಿ ನಾವೀಗ ಬೀದಿ ಪಾಲಾಗಿದ್ದೇವೆ” ಎಂದು ಮೀರೇಶ್ ಎಂಬವರು ನೋವು ತೋಡಿಕೊಂಡಿದ್ದಾರೆ.

“ನಮ್ಮ ಸಾಮಗ್ರಿಗಳನ್ನು ಇಡಲು ಸ್ಥಳೀಯ ವ್ಯಕ್ತಿಯೊಬ್ಬರು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ, ನಮಗೆ ಇನ್ನೂ ಉಳಿದುಕೊಳ್ಳಲು ವ್ಯವಸ್ಥೆ ಆಗಿಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...