Homeಕರ್ನಾಟಕ‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

- Advertisement -
- Advertisement -

ಪ್ರಧಾನಿ ಮೋದಿ ಸೆಪ್ಟೆಂಬರ್‌ 2 ರಂದು ಮಂಗಳೂರಿಗೆ ಆಗಮಿಸಲಿದ್ದು, ಈ ವೇಳೆ ನಗರದ ಹೊರವಲಯದಲ್ಲಿ ಇರುವ ಬಂಗ್ರ ಕೂಳೂರಿನ ಗೋಲ್ಡ್‌ ಫಿಂಚ್‌ ಮೈದಾನದಲ್ಲಿ ಸಮಾವೇಶ ಆಯೋಜನೆಯಾಗಿದೆ. ಮೋದಿ ಭಾಷಣ ನೀಡಲಿರುವ ಮೈದಾನದ ಬಳಿ ಶೆಡ್‌ ಮನೆಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯಗಳನ್ನು ಜಿಲ್ಲಾ ಪೊಲೀಸರು ಸ್ಥಳಾಂತರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ನೀಡಿದ ನೋಟಿಸ್‌ನಲ್ಲಿ ಮುಂಜಾಗೃತ ಕ್ರಮವಾಗಿ ಯಾವುದೇ ಚಟುವಟಿಕೆಯನ್ನು ಸ್ಥಗಿತಗೊಳಿಸಬೇಕು ಎಂದು ಹೇಳಲಾಗಿದೆ.

ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಕೂಳೂರು ಪೊಲೀಸರು ಬಂಗ್ರಕೂಳೂರು ಪ್ರದೇಶಕ್ಕೆ ತೆರಳಿ ಅಲ್ಲಿ ಶೆಡ್ ಹಾಕಿಕೊಂಡು ಬದುಕು ಸಾಗಿಸುತ್ತಿದ್ದ ಒಂಬತ್ತು ಅಲೆಮಾರಿ ಕುಟುಂಬಗಳನ್ನು ಸ್ಥಳಾಂತರ ಮಾಡಿದ್ದಾರೆ. ಆದರೆ ಅವರಿಗೆ ಸಮರ್ಪಕವಾದ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಕುಟುಂಬಗಳು ಆರೋಪಿಸಿದ್ದು, ಇದರಿಂದ ಮಕ್ಕಳು, ವೃದ್ಧರು ಸೇರಿದಂತೆ ಸುಮಾರು 30ಕ್ಕೂ ಅಧಿಕ ಮಂದಿ ಬೀದಿ ಪಾಲಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ಬಸವ ಆಡಿಸುವ ಸಮುದಾಯಕ್ಕೆ ಸೇರಿರುವ ತಾವು ಕಳೆದ 8 ರಿಂದ 9 ವರ್ಷಗಳಿಂದ ಶೆಡ್‌ ಹಾಕಿಕೊಂಡು ವಾಸಿಸುತ್ತಿರುವುದಾಗಿ ಹೇಳಿದ್ದಾರೆ. ಪ್ರಸ್ತುತ ಸಮಾವೇಶ ನಡೆಯಲಿರುವ 1 ಕಿ.ಮೀ. ದೂರದಲ್ಲಿ ಇರುವ ಈ ಸಮುದಾಯದ ಶೆಡ್‌ಗಳಲ್ಲಿ 9 ಕುಟುಂಬಗಳು ವಾಸಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ. ಇದೀಗ ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆ ನೆಪ ಮಾಡಿಕೊಂಡು ಅಲೆಮಾರಿ ಸಮುದಾಯಗಳನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

ಕಾವೂರು ಪೊಲೀಸರು ಹೊರಡಿಸಿರುವ ನೋಟಿಸ್‌ನಲ್ಲಿ,“ಪ್ರಧಾನಿ ನರೇಂದ್ರ ಮೋದಿಯ ಭೇಟಿಯ ಪ್ರಯುಕ್ತ ಮುಂಜಾಗರೂಕತಾ ಕ್ರಮವಾಗಿ ಕಾರ್ಯಕ್ರಮ ನಡೆಯುವ ಪರಿಸರದಲ್ಲಿ ನಿಗಾ ಇಡಬೇಕಾದ ಕಾರಣ, ಸೆಪ್ಟೆಂಬರ್ 2ರವರೆಗೆ ಸಂಬಂಧಪಟ್ಟ ಕಟ್ಟಡದಲ್ಲಿ ಯಾವುದೇ ಚಟುವಟಿಕೆ ಸ್ಥಗಿತಗೊಳಿಸಲು ಈ ಮೂಲಕ ಕೋರಲಾಗಿದೆ” ಎಂದು ಕಾವೂರು ಠಾಣೆಯ ಇನ್ಸ್‌ಪೆಕ್ಟರ್ ಸಹಿಯೊಂದಿಗೆ ಶೇಡ್‌ನಲ್ಲಿ ವಾಸಿಸುವ ನಿವಾಸಿಗಳಿಗೆ ನೀಡಲಾಗಿದೆ.

‘ಪುಧಾನಿ ಬರುವಾಗ ನಿಮ್ಮ ಶೆಡ್ ಅವರಿಗೆ ಕಾಣಿಸಬಾರದು’

“ನಿನ್ನೆ ರಾತ್ರಿ ಮತ್ತು ಇಂದು ಬೆಳಗ್ಗೆ ಪೊಲೀಸರು ಬಂದು ಬೆತ್ತ ತೋರಿಸಿ ಬೇಗ ತೆರವುಗೊಳಿಸಬೇಕು ಎಂದು ಏರಿದ ಧ್ವನಿಯಲ್ಲಿ ಹೇಳಿದ್ದಾರೆ. ಇಲ್ಲದಿದ್ದರೆ ನಿಮ್ಮನ್ನೆಲ್ಲ 15 ದಿನಗಳ ಕಾಲ ಬಂಧನದಲ್ಲಿಡಲಾಗುವುದು ಎಂದು ಬೆದರಿಸಿದ್ದಾರೆ” ಎಂದು ಅಲೆಮಾರಿ ಸಮುದಾಯದ ಜನರು ಹೇಳಿದ್ದಾರೆ.

“ಪ್ರಧಾನಿ ಬರುವಾಗ ನಿಮ್ಮ ಶೆಡ್‌ಗಳು ಅವರಿಗೆ ಕಾಣಿಸಬಾರದು. ಬೇಗನೇ ಟೆಂಟುಗಳನ್ನು ತೆರವುಗೊಳಿಸಿ ಎನ್ನುತ್ತಾ ಒತ್ತಾಯ ಪೂರ್ವಕವಾಗಿ ನಮ್ಮ ಟೆಂಟ್‌ಗಳನ್ನೆಲ್ಲಾ ಬಿಚ್ಚಿಸಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಟ್ರಂಪ್‌ ಗುಜರಾತ್‌ ಭೇಟಿ ಹಿನ್ನೆಲೆ; ಗೋಡೆ ಆಯ್ತು, ಈಗ ಸ್ಲಂ ಎತ್ತಂಗಡಿಗೆ ಮುಂದಾದ ಅಧಿಕಾರಿಗಳು

ಬಾಣಂತಿ, ಸಣ್ಣ ಮಕ್ಕಳಿದ್ದಾರೆ

“ನಾವು ಮೂಲತಃ ಆಂಧ್ರಪ್ರದೇಶದವರಾಗಿದ್ದು, ಕಳೆದ 8 ರಿಂದ 9 ವರ್ಷದಿಂದ ಇಲ್ಲಿ ಶೆಡ್ ಹಾಕಿಸಿಕೊಂಡು ಬದುಕು ಸಾಗಿಸುತ್ತಿದ್ದವು. ನಮ್ಮಲ್ಲಿ ಬಾಣಂತಿಯರು ಸೇರಿದಂತೆ ಸಣ್ಣ ಮಕ್ಕಳು ಕೂಡಾ ಇದ್ದಾರೆ. ಏಕಾಏಕಿ ನಮ್ಮನ್ನು ಇಲ್ಲಿಂದ ಎಬ್ಬಿಸಿದ್ದಾರೆ. ಬೇರೆ ವ್ಯವಸ್ಥೆಯನ್ನೂ ಮಾಡಿಲ್ಲ. ಹಾಗಾಗಿ ನಾವೀಗ ಬೀದಿ ಪಾಲಾಗಿದ್ದೇವೆ” ಎಂದು ಮೀರೇಶ್ ಎಂಬವರು ನೋವು ತೋಡಿಕೊಂಡಿದ್ದಾರೆ.

“ನಮ್ಮ ಸಾಮಗ್ರಿಗಳನ್ನು ಇಡಲು ಸ್ಥಳೀಯ ವ್ಯಕ್ತಿಯೊಬ್ಬರು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ, ನಮಗೆ ಇನ್ನೂ ಉಳಿದುಕೊಳ್ಳಲು ವ್ಯವಸ್ಥೆ ಆಗಿಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...