Homeಕರ್ನಾಟಕ‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

‘ಪ್ರಧಾನಿಗೆ ನಿಮ್ಮ ಶೆಡ್‌ಗಳು ಕಾಣಬಾರದು’: ಅಲೆಮಾರಿ ಸಮುದಾಯವನ್ನು ಸ್ಥಳಾಂತರಿಸಿದ ಮಂಗಳೂರು ಪೊಲೀಸರು

- Advertisement -
- Advertisement -

ಪ್ರಧಾನಿ ಮೋದಿ ಸೆಪ್ಟೆಂಬರ್‌ 2 ರಂದು ಮಂಗಳೂರಿಗೆ ಆಗಮಿಸಲಿದ್ದು, ಈ ವೇಳೆ ನಗರದ ಹೊರವಲಯದಲ್ಲಿ ಇರುವ ಬಂಗ್ರ ಕೂಳೂರಿನ ಗೋಲ್ಡ್‌ ಫಿಂಚ್‌ ಮೈದಾನದಲ್ಲಿ ಸಮಾವೇಶ ಆಯೋಜನೆಯಾಗಿದೆ. ಮೋದಿ ಭಾಷಣ ನೀಡಲಿರುವ ಮೈದಾನದ ಬಳಿ ಶೆಡ್‌ ಮನೆಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯಗಳನ್ನು ಜಿಲ್ಲಾ ಪೊಲೀಸರು ಸ್ಥಳಾಂತರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ನೀಡಿದ ನೋಟಿಸ್‌ನಲ್ಲಿ ಮುಂಜಾಗೃತ ಕ್ರಮವಾಗಿ ಯಾವುದೇ ಚಟುವಟಿಕೆಯನ್ನು ಸ್ಥಗಿತಗೊಳಿಸಬೇಕು ಎಂದು ಹೇಳಲಾಗಿದೆ.

ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಕೂಳೂರು ಪೊಲೀಸರು ಬಂಗ್ರಕೂಳೂರು ಪ್ರದೇಶಕ್ಕೆ ತೆರಳಿ ಅಲ್ಲಿ ಶೆಡ್ ಹಾಕಿಕೊಂಡು ಬದುಕು ಸಾಗಿಸುತ್ತಿದ್ದ ಒಂಬತ್ತು ಅಲೆಮಾರಿ ಕುಟುಂಬಗಳನ್ನು ಸ್ಥಳಾಂತರ ಮಾಡಿದ್ದಾರೆ. ಆದರೆ ಅವರಿಗೆ ಸಮರ್ಪಕವಾದ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಕುಟುಂಬಗಳು ಆರೋಪಿಸಿದ್ದು, ಇದರಿಂದ ಮಕ್ಕಳು, ವೃದ್ಧರು ಸೇರಿದಂತೆ ಸುಮಾರು 30ಕ್ಕೂ ಅಧಿಕ ಮಂದಿ ಬೀದಿ ಪಾಲಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ಬಸವ ಆಡಿಸುವ ಸಮುದಾಯಕ್ಕೆ ಸೇರಿರುವ ತಾವು ಕಳೆದ 8 ರಿಂದ 9 ವರ್ಷಗಳಿಂದ ಶೆಡ್‌ ಹಾಕಿಕೊಂಡು ವಾಸಿಸುತ್ತಿರುವುದಾಗಿ ಹೇಳಿದ್ದಾರೆ. ಪ್ರಸ್ತುತ ಸಮಾವೇಶ ನಡೆಯಲಿರುವ 1 ಕಿ.ಮೀ. ದೂರದಲ್ಲಿ ಇರುವ ಈ ಸಮುದಾಯದ ಶೆಡ್‌ಗಳಲ್ಲಿ 9 ಕುಟುಂಬಗಳು ವಾಸಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ. ಇದೀಗ ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆ ನೆಪ ಮಾಡಿಕೊಂಡು ಅಲೆಮಾರಿ ಸಮುದಾಯಗಳನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

ಕಾವೂರು ಪೊಲೀಸರು ಹೊರಡಿಸಿರುವ ನೋಟಿಸ್‌ನಲ್ಲಿ,“ಪ್ರಧಾನಿ ನರೇಂದ್ರ ಮೋದಿಯ ಭೇಟಿಯ ಪ್ರಯುಕ್ತ ಮುಂಜಾಗರೂಕತಾ ಕ್ರಮವಾಗಿ ಕಾರ್ಯಕ್ರಮ ನಡೆಯುವ ಪರಿಸರದಲ್ಲಿ ನಿಗಾ ಇಡಬೇಕಾದ ಕಾರಣ, ಸೆಪ್ಟೆಂಬರ್ 2ರವರೆಗೆ ಸಂಬಂಧಪಟ್ಟ ಕಟ್ಟಡದಲ್ಲಿ ಯಾವುದೇ ಚಟುವಟಿಕೆ ಸ್ಥಗಿತಗೊಳಿಸಲು ಈ ಮೂಲಕ ಕೋರಲಾಗಿದೆ” ಎಂದು ಕಾವೂರು ಠಾಣೆಯ ಇನ್ಸ್‌ಪೆಕ್ಟರ್ ಸಹಿಯೊಂದಿಗೆ ಶೇಡ್‌ನಲ್ಲಿ ವಾಸಿಸುವ ನಿವಾಸಿಗಳಿಗೆ ನೀಡಲಾಗಿದೆ.

‘ಪುಧಾನಿ ಬರುವಾಗ ನಿಮ್ಮ ಶೆಡ್ ಅವರಿಗೆ ಕಾಣಿಸಬಾರದು’

“ನಿನ್ನೆ ರಾತ್ರಿ ಮತ್ತು ಇಂದು ಬೆಳಗ್ಗೆ ಪೊಲೀಸರು ಬಂದು ಬೆತ್ತ ತೋರಿಸಿ ಬೇಗ ತೆರವುಗೊಳಿಸಬೇಕು ಎಂದು ಏರಿದ ಧ್ವನಿಯಲ್ಲಿ ಹೇಳಿದ್ದಾರೆ. ಇಲ್ಲದಿದ್ದರೆ ನಿಮ್ಮನ್ನೆಲ್ಲ 15 ದಿನಗಳ ಕಾಲ ಬಂಧನದಲ್ಲಿಡಲಾಗುವುದು ಎಂದು ಬೆದರಿಸಿದ್ದಾರೆ” ಎಂದು ಅಲೆಮಾರಿ ಸಮುದಾಯದ ಜನರು ಹೇಳಿದ್ದಾರೆ.

“ಪ್ರಧಾನಿ ಬರುವಾಗ ನಿಮ್ಮ ಶೆಡ್‌ಗಳು ಅವರಿಗೆ ಕಾಣಿಸಬಾರದು. ಬೇಗನೇ ಟೆಂಟುಗಳನ್ನು ತೆರವುಗೊಳಿಸಿ ಎನ್ನುತ್ತಾ ಒತ್ತಾಯ ಪೂರ್ವಕವಾಗಿ ನಮ್ಮ ಟೆಂಟ್‌ಗಳನ್ನೆಲ್ಲಾ ಬಿಚ್ಚಿಸಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಟ್ರಂಪ್‌ ಗುಜರಾತ್‌ ಭೇಟಿ ಹಿನ್ನೆಲೆ; ಗೋಡೆ ಆಯ್ತು, ಈಗ ಸ್ಲಂ ಎತ್ತಂಗಡಿಗೆ ಮುಂದಾದ ಅಧಿಕಾರಿಗಳು

ಬಾಣಂತಿ, ಸಣ್ಣ ಮಕ್ಕಳಿದ್ದಾರೆ

“ನಾವು ಮೂಲತಃ ಆಂಧ್ರಪ್ರದೇಶದವರಾಗಿದ್ದು, ಕಳೆದ 8 ರಿಂದ 9 ವರ್ಷದಿಂದ ಇಲ್ಲಿ ಶೆಡ್ ಹಾಕಿಸಿಕೊಂಡು ಬದುಕು ಸಾಗಿಸುತ್ತಿದ್ದವು. ನಮ್ಮಲ್ಲಿ ಬಾಣಂತಿಯರು ಸೇರಿದಂತೆ ಸಣ್ಣ ಮಕ್ಕಳು ಕೂಡಾ ಇದ್ದಾರೆ. ಏಕಾಏಕಿ ನಮ್ಮನ್ನು ಇಲ್ಲಿಂದ ಎಬ್ಬಿಸಿದ್ದಾರೆ. ಬೇರೆ ವ್ಯವಸ್ಥೆಯನ್ನೂ ಮಾಡಿಲ್ಲ. ಹಾಗಾಗಿ ನಾವೀಗ ಬೀದಿ ಪಾಲಾಗಿದ್ದೇವೆ” ಎಂದು ಮೀರೇಶ್ ಎಂಬವರು ನೋವು ತೋಡಿಕೊಂಡಿದ್ದಾರೆ.

“ನಮ್ಮ ಸಾಮಗ್ರಿಗಳನ್ನು ಇಡಲು ಸ್ಥಳೀಯ ವ್ಯಕ್ತಿಯೊಬ್ಬರು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ, ನಮಗೆ ಇನ್ನೂ ಉಳಿದುಕೊಳ್ಳಲು ವ್ಯವಸ್ಥೆ ಆಗಿಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...