Homeಮುಖಪುಟರಫೇಲ್ ಹಗರಣ: ಸತ್ಯ ನಿಮ್ಮೊಂದಿಗೆ, ಭಯವಿಲ್ಲದೆ ಹೋರಾಡಿ - ಕಾಂಗ್ರೆಸ್ಸಿಗರಿಗೆ ರಾಹುಲ್ ಗಾಂಧಿ ಕರೆ

ರಫೇಲ್ ಹಗರಣ: ಸತ್ಯ ನಿಮ್ಮೊಂದಿಗೆ, ಭಯವಿಲ್ಲದೆ ಹೋರಾಡಿ – ಕಾಂಗ್ರೆಸ್ಸಿಗರಿಗೆ ರಾಹುಲ್ ಗಾಂಧಿ ಕರೆ

ಮೀಡಿಯಾ ಪಾರ್ಟ್ ಪತ್ರಿಕೆ ರಾಫೇಲ್ ಹಗರಣದ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸಿದೆ. ಇದು ಫ್ರಾನ್ಸ್‌ನಲ್ಲಿ ನ್ಯಾಯಾಂಗ ತನಿಖೆಗೆ ಕಾರಣವಾಗಿದೆ.

- Advertisement -
- Advertisement -

ಫ್ರೆಂಚ್ ಯುದ್ಧ ವಿಮಾನ ರಫೇಲ್ ತಯಾರಕರಾದ ಡಸಾಲ್ಟ್ ಕಂಪನಿಯು 36 ರಫೇಲ್‌ ವಿಮಾನಗಳನ್ನು ಭಾರತಕ್ಕೆ ಮಾರುವುದಕ್ಕಾಗಿ ಭಾರತದ ಮಧ್ಯವರ್ತಿಯೊಬ್ಬರಿಗೆ 7.5 ಮಿಲಿಯನ್ ಯೂರೋ (65 ಕೋಟಿ ರೂ) ಲಂಚ ನೀಡಿದ್ದು, ಈ ಕುರಿತು ಸ್ಪಷ್ಟ ದಾಖಲೆಗಳಿದ್ದರೂ ಸಹ CBI ತನಿಖೆ ಮಾಡಲು ವಿಫಲವಾಗಿದೆ ಎಂದು ಫ್ರೆಂಚ್ ಪತ್ರಿಕೆ “ಮೀಡಿಯಾಪಾರ್ಟ್” ಆರೋಪಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸತ್ಯ ನಿಮ್ಮೊಂದಿರುವಾಗ ತಡವೇಕೆ, ಭಯವಿಲ್ಲದೆ ಹೋರಾಡಿ ಎಂದು ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಪ್ರತಿ ಹೆಜ್ಜೆಯಲ್ಲೂ ಸತ್ಯ ನಿಮ್ಮೊಂದಿಗಿರುವಾಗ, ತಡವೇಕೆ? ನನ್ನ ಕಾಂಗ್ರೆಸ್ ಸಂಗಾತಿಗಳೆ, ಭ್ರಷ್ಟ ಕೇಂದ್ರ ಸರ್ಕಾರದ ವಿರುದ್ಧ ಇದೇ ರೀತಿ ಹೋರಾಟ ಮುಂದುವರಿಸಿ. ಕಾಯಬೇಡಿ, ಆಯಾಸಗೊಳ್ಳಬೇಡಿ, ಭಯಪಡಬೇಡಿ” ಎಂದು ತಿಳಿಸಿದ್ದಾರೆ.

ತಮ್ಮ ಟ್ವೀಟ್‌ನೊಂದಿಗೆ ಹಿಂದಿ ಪತ್ರಿಕೆಯ ತುಣುಕೊಂದನ್ನು ರಾಹುಲ್ ಗಾಂಧಿ ಲಗತ್ತಿಸಿದ್ದಾರೆ. “ರಫೇಲ್ ಡೀಲ್‌ನಲ್ಲಿ ನಕಲಿ ರಶೀದಿಗಳನ್ನು ಬಳಸಿ ಮಧ್ಯವರ್ತಿಗಳಿಗೆ ಕಮಿಷನ್ ನೀಡಲಾಗಿದೆ. ಈ ದಾಖಲೆಗಳಿದ್ದರೂ ಭಾರತೀಯ ತನಿಖಾ ಸಂಸ್ಥೆಗಳು ಪ್ರಕರಣವನ್ನು ಮುಂದುವರಿಸಲಿಲ್ಲ ಎಂದು ಫ್ರೆಂಚ್ ನಿಯತಕಾಲಿಕ ಆರೋಪಿಸಿದೆ” ಎಂದು ಅದರಲ್ಲಿ ಬರೆಯಲಾಗಿದೆ.

59,000 ಕೋಟಿ ರೂಗಳ ರಾಫೇಲ್ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮೀಡಿಯಾಪಾರ್ಟ್ 2013 ಕ್ಕೆ ಮುಂಚೆಯೇ ಕಂಪನಿಯು ಮಧ್ಯವರ್ತಿಗೆ ಹಣ ನೀಡಿದೆ ಎಂದು ಹೇಳಿದೆ. ಆ ದಾಖಲೆಗಳನ್ನು ಸಿಬಿಐ ಕಚೇರಿಗೆ ಕಳುಹಿಸಿದೆ. ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ ಎಂದು ಪತ್ರಿಕೆ ದೂರಿದೆ.

ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ಮೇಲೆ ಈ ಪ್ರಕರಣದಲ್ಲಿ ಏಕೆ ತನಿಖೆಯಿಲ್ಲ ಎಂದು ಮೀಡಿಯಾಪಾರ್ಟ್ ಪ್ರಶ್ನಿಸಿದೆ.

ಮೀಡಿಯಾ ಪಾರ್ಟ್ ಪತ್ರಿಕೆ ರಾಫೇಲ್ ಹಗರಣದ ದಾಖಲೆಗಳ ತನಿಖೆಯ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸಿದೆ. ಇದು ರಾಫೇಲ್ ಭ್ರಷ್ಟಾಚಾರದ ಕುರಿತು ಫ್ರಾನ್ಸ್‌ನಲ್ಲಿ ನ್ಯಾಯಾಂಗ ತನಿಖೆಗೆ ಕಾರಣವಾಗಿದೆ.


ಇದನ್ನೂ ಓದಿ: ರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...