Homeಕರ್ನಾಟಕನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ಕೇರಳದಲ್ಲಿ 20,000 ಕೋಟಿ ಪ್ಯಾಕೇಜ್‌‌ ಘೋಷಿಸಲಾಗಿದೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ 1200 ಕೋಟಿ ಪರಿಹಾರ ಸಾಕೆ ಎಂದು ಅವರು ಕೇಳಿದ್ದಾರೆ.

- Advertisement -
- Advertisement -

ಜನಹಿತದ ಲಾಕ್‌ಡೌನ್‌ ಘೋಷಿಸಬೇಕು, ಅದರಲ್ಲಿ ಜನರಿಗೆ ಉಪಯೋಗವಾಗುವ ಪ್ಯಾಕೇಜ್‌ ಇರಬೇಕು ಎಂಬ ಜೆಡಿಎಸ್‌ನ ಆಗ್ರಹದ ನಂತರ ರಾಜ್ಯ ಸರ್ಕಾರ ಪ್ಯಾಕೇಜ್‌ ಘೋಷಿಸಿದೆ. ಆದರೆ, 6.5 ಕೋಟಿ ಜನಸಂಖ್ಯೆ ಇರುವ, ದೇಶಕ್ಕಾಗಿ ಅಪಾರ ಅರ್ಥಿಕ ಕೊಡುಗೆ ನೀಡುವ ಕರ್ನಾಟಕದಂತ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್‌ ಅತ್ಯಂತ ಕಡಿಮೆ. ಇದು ಅವೈಜ್ಞಾನಿ, ಅಸಮರ್ಪಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌. ಡಿ. ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.

ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಅವರು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ. ಟ್ವೀಟ್‌ನಲ್ಲಿ “ಲಾಕ್‌ಡೌನ್‌ ಮಾಡಿ ಎಂದು ನಾನು ಮಾರ್ಚ್‌ನಲ್ಲೇ ಹೇಳಿದ್ದೆ. ಆದರೆ, ಘೋಷಿಸಲಿಲ್ಲ. ನೆರೆಯ ಕೇರಳದಲ್ಲಿ ಮಾರ್ಚ್‌ನಲ್ಲೇ ಲಾಕ್‌ಡೌನ್‌ ಜಾರಿಯಾಯಿತು. 20,000 ಕೋಟಿ ಪ್ಯಾಕೇಜ್‌ ಅನ್ನೂ ಘೋಷಿಸಲಾಯಿತು. ಕರ್ನಾಕಟದ ಎದುರು ಕೇರಳ ಎಲ್ಲ ದೃಷ್ಟಿಯಿಂದಲೂ ಸಣ್ಣ ರಾಜ್ಯ. ಆದರೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ ಈ 1200 ಕೋಟಿ ಪರಿಹಾರ ಸಾಕೆ?” ಎಂದು ಪ್ರಶ್ನಿಸಿದ್ದಾರೆ.

“ಆರ್ಥಿಕ ಸಂಕಷ್ಟದ ಮಧ್ಯೆ ಪ್ಯಾಕೇಜ್‌ ನೀಡುತ್ತಿರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ನನ್ನಿಂದ ಅಧಿಕಾರ ಕಸಿದಾಗ ಇದೇ ಬಿಎಸ್‌ವೈ ಅವರು ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದಿದ್ದರು. 2 ವರ್ಷದಲ್ಲಿ ಆರ್ಥಿಕ ದುಸ್ಥಿತಿ ಬಂದಿದ್ದು ಹೇಗೆ? ರಾಜಕೀಯಕ್ಕಾಗಿ ಮಾಡಿಕೊಂಡ ನಿಗಮಗಳಿಗೆ ನೂರಾರು ಕೋಟಿ ಹಣವಿರುವಾಗ ಜನರ ಪರಿಹಾರಕ್ಕಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಸೋಂಕಿನಿಂದ ಸಾವು ಹೆಚ್ಚುತ್ತಿದೆ; ಕೇಂದ್ರ ಜನರ ಗಮನ ಬೇರೆಡೆ ಸೆಳೆಯುತ್ತಿದೆ: ರಾಹುಲ್ ಗಾಂಧಿ ಆಕ್ರೋಶ

“ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ ಎಂಬ ಯಡಿಯೂರಪ್ಪ ಮಾತು ಒಪ್ಪೋಣ. ಆದರೆ, ನಿಗಮ-ಮಂಡಳಿಗಳಿಗೆ ಅನಗತ್ಯವಾಗಿ ತುಂಬಲಾಗಿರುವ ಬಿಜೆಪಿ ಕಾರ್ಯಕರ್ತರಿಗೆ ಹಣ ನೀಡಲು ಆರ್ಥಿಕ ಸಂಕಷ್ಟ ಇಲ್ಲವೇ? ಜನರೇ ನೀಡಿದ ಹಣವನ್ನು ಜನರಿಗೆ ನೀಡಲು ಮಾತ್ರ ಸಂಕಷ್ಟ ಎದುರಾಗಿದೆಯೇ? ನಿಮ್ಮ ಕಾರ್ಯಕರ್ತರಿಗೆ ನಿಗಮ-ಮಂಡಳಿ ನೆಪದಲ್ಲಿ ನೀಡುತ್ತಿರುವುದು ಜನರ ಹಣವಲ್ಲವೇ?” ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪ್ಯಾಕೇಜ್‌ನಲ್ಲಿ ಕೃಷಿ ರಂಗವನ್ನು ಹೂ ಬೆಳೆಗಾರರು, ಹಣ್ಣ-ತರಕಾರಿ ಬೆಳೆಗಾರರೆಂದು ಪ್ರತ್ಯೇಕಿಸಲಾಗಿದೆ. ಅತ್ಯಂತ ಅವೈಜ್ಞಾನಿಕ ಕ್ರಮವಿದು. ಒಟ್ಟು ಕೃಷಿ ಕ್ಷೇತ್ರ, ಒಟ್ಟು ರೈತ ಸಮುದಾಯ ಎಂಬ ಪರಿಕಲ್ಪನೆಯೇ ಇಲ್ಲಿಲ್ಲ. ಕೃಷಿ ಕ್ಷೇತ್ರದ ಇತರೆ ಕಸುಬುದಾರರನ್ನು ಪ್ಯಾಕೇಜ್‌ನಿಂದ ಹೊರಗಿಟ್ಟಿದ್ದು ಯಾಕೆ? ಪ್ಯಾಕೇಜ್‌ ಹಿಗ್ಗುತ್ತದೆ ಎಂಬ ಭಯವೇ?” ಅವರು ರಾಜ್ಯ ಸರ್ಕಾರಕ್ಕೆ ಪಶ್ನಿಸಿದ್ದಾರೆ.

“2.10 ಲಕ್ಷ ಚಾಲಕ ವರ್ಗಕ್ಕೆ ₹3000 ಪರಿಹಾರ ನೀಡುವುದಾಗಿ ಹೇಳಲಾಗಿದೆ. ಕಳೆದ ಬಾರಿಯ ಲಾಕ್‌ಡೌನ್‌ನಲ್ಲಿ 7.50 ಲಕ್ಷ ಇದ್ದ ಚಾಲಕರ ಸಂಖ್ಯೆ ಈ ಬಾರಿ 2.10 ಲಕ್ಷಕ್ಕೆ ಇಳಿದಿದೆ. ಚಾಲಕರಿಗೆ ಈಗ ಪರಿಹಾರಕ್ಕಿಂತಲೂ ಮುಖ್ಯವಾಗಿ, ಆರ್‌ಟಿಒ ಶುಲ್ಕಗಳು, ತೆರಿಗೆಯಿಂದ ವಿನಾಯಿತಿ ಸಿಗಬೇಕಿತ್ತು. ಈಗಿನ ಪರಿಹಾರದಿಂದ ಅವರ ಕುಟುಂಬ ನಡೆಯಲು ಸಾಧ್ಯವೇ?” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

“ಕೂಲಿ ಕಾರ್ಮಿಕರು ಸದ್ಯ ನಗರ ತೊರೆದು ಹಳ್ಳಿ ಸೇರಿದ್ದಾರೆ. ಅವರ ಅದಾಯ ವೃದ್ಧಿಗಾಗಿ ನರೇಗಾವನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅವಕಾಶವಿತ್ತು. ನರೇಗಾಕ್ಕೆ ಹೆಚ್ಚಿನ ಅನುದಾನ ಒದಗಿಸಿ, ಗ್ರಾಮೀಣ ಮೂಲಸೌಕರ್ಯ ಹೆಚ್ಚಿಸಿ, ಕೂಲಿ ಕಾರ್ಮಿಕರ ಆದಾಯ ವೃದ್ಧಿಸಲು ಇದ್ದ ಅವಕಾಶವನ್ನು ಸರ್ಕಾರ ಕಳೆದುಕೊಂಡಿದೆ. ಈ ಸರ್ಕಾರಕ್ಕೆ ದೂರಾಲೋಚನೆಗಳೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ಈಗ ನಿಗದಿ ಮಾಡಿರುವ 3 ತಿಂಗಳ ಅವಧಿಯ ಸಾಲ ಮರುಪಾವತಿಯ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕಾಗಿತ್ತು. ಮೂರು ತಿಂಗಳಿಗೆ ಸರ್ಕಾರವೇ ಸಾಲ ಮರು ಪಾವತಿ ಮಾಡಬೇಕಾಗಿತ್ತು ಅಥವಾ ಮರುಪಾವತಿಯನ್ನು ಮನ್ನಾ ಮಾಡಬೇಕಾಗಿತ್ತು. ನಾನು ರೈತರ ಸಾಲ ಮನ್ನಾ ಮಾಡಿ ಸರ್ಕಾರದಿಂದ ಹೊರ ಬಂದಿದ್ದೆ. ಹೀಗಾಗಿ ರೈತರ ಸಾಲದ ಹೊರೆ ದೊಡ್ಡದೇನೂ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

“ನಿತ್ಯ 6 ಲಕ್ಷ ಮಂದಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರ ಪಡೆಯುತ್ತಿರುವುದಾಗಿ ಹೇಳಲಾಗಿದೆ. ಇಂದಿರಾ ಕ್ಯಾಂಟೀನ್‌ಗಳ ಎದುರು ಜನರೇ ಇಲ್ಲ. ಆದರೆ, ಪ್ರತಿ ದಿನ 6 ಲಕ್ಷ ಜನರ ಲೆಕ್ಕ ಕೊಟ್ಟು ಸರ್ಕಾರ ಯಾವ ಕಂಟ್ರಾಕ್ಟರ್‌ ಅನ್ನು ಉದ್ದಾರ ಮಾಡುತ್ತಿದೆ. ಕ್ಯಾಂಟೀನ್‌ಗಳ ಎದುರು ಇರುವ ಜನಸಂದಣಿಯನ್ನು ಸರ್ಕಾರ ವಿಡಿಯೊ ಮಾಡಿ ಬಿಡುಗಡೆ ಮಾಡಬಲ್ಲದೇ?” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ ಉಪ ಚುನಾವಣೆಯಲ್ಲಿ ಕೋವಿಡ್‌ಗೆ ಏಳು ನಾಯಕರು ಬಲಿ: ಸರ್ಕಾರದ ವಿರುದ್ಧ ಮೃತರ ಕುಟುಂಬಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...