Homeಕರ್ನಾಟಕನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ಕೇರಳದಲ್ಲಿ 20,000 ಕೋಟಿ ಪ್ಯಾಕೇಜ್‌‌ ಘೋಷಿಸಲಾಗಿದೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ 1200 ಕೋಟಿ ಪರಿಹಾರ ಸಾಕೆ ಎಂದು ಅವರು ಕೇಳಿದ್ದಾರೆ.

- Advertisement -
- Advertisement -

ಜನಹಿತದ ಲಾಕ್‌ಡೌನ್‌ ಘೋಷಿಸಬೇಕು, ಅದರಲ್ಲಿ ಜನರಿಗೆ ಉಪಯೋಗವಾಗುವ ಪ್ಯಾಕೇಜ್‌ ಇರಬೇಕು ಎಂಬ ಜೆಡಿಎಸ್‌ನ ಆಗ್ರಹದ ನಂತರ ರಾಜ್ಯ ಸರ್ಕಾರ ಪ್ಯಾಕೇಜ್‌ ಘೋಷಿಸಿದೆ. ಆದರೆ, 6.5 ಕೋಟಿ ಜನಸಂಖ್ಯೆ ಇರುವ, ದೇಶಕ್ಕಾಗಿ ಅಪಾರ ಅರ್ಥಿಕ ಕೊಡುಗೆ ನೀಡುವ ಕರ್ನಾಟಕದಂತ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್‌ ಅತ್ಯಂತ ಕಡಿಮೆ. ಇದು ಅವೈಜ್ಞಾನಿ, ಅಸಮರ್ಪಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌. ಡಿ. ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.

ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಅವರು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ. ಟ್ವೀಟ್‌ನಲ್ಲಿ “ಲಾಕ್‌ಡೌನ್‌ ಮಾಡಿ ಎಂದು ನಾನು ಮಾರ್ಚ್‌ನಲ್ಲೇ ಹೇಳಿದ್ದೆ. ಆದರೆ, ಘೋಷಿಸಲಿಲ್ಲ. ನೆರೆಯ ಕೇರಳದಲ್ಲಿ ಮಾರ್ಚ್‌ನಲ್ಲೇ ಲಾಕ್‌ಡೌನ್‌ ಜಾರಿಯಾಯಿತು. 20,000 ಕೋಟಿ ಪ್ಯಾಕೇಜ್‌ ಅನ್ನೂ ಘೋಷಿಸಲಾಯಿತು. ಕರ್ನಾಕಟದ ಎದುರು ಕೇರಳ ಎಲ್ಲ ದೃಷ್ಟಿಯಿಂದಲೂ ಸಣ್ಣ ರಾಜ್ಯ. ಆದರೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ ಈ 1200 ಕೋಟಿ ಪರಿಹಾರ ಸಾಕೆ?” ಎಂದು ಪ್ರಶ್ನಿಸಿದ್ದಾರೆ.

“ಆರ್ಥಿಕ ಸಂಕಷ್ಟದ ಮಧ್ಯೆ ಪ್ಯಾಕೇಜ್‌ ನೀಡುತ್ತಿರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ನನ್ನಿಂದ ಅಧಿಕಾರ ಕಸಿದಾಗ ಇದೇ ಬಿಎಸ್‌ವೈ ಅವರು ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದಿದ್ದರು. 2 ವರ್ಷದಲ್ಲಿ ಆರ್ಥಿಕ ದುಸ್ಥಿತಿ ಬಂದಿದ್ದು ಹೇಗೆ? ರಾಜಕೀಯಕ್ಕಾಗಿ ಮಾಡಿಕೊಂಡ ನಿಗಮಗಳಿಗೆ ನೂರಾರು ಕೋಟಿ ಹಣವಿರುವಾಗ ಜನರ ಪರಿಹಾರಕ್ಕಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಸೋಂಕಿನಿಂದ ಸಾವು ಹೆಚ್ಚುತ್ತಿದೆ; ಕೇಂದ್ರ ಜನರ ಗಮನ ಬೇರೆಡೆ ಸೆಳೆಯುತ್ತಿದೆ: ರಾಹುಲ್ ಗಾಂಧಿ ಆಕ್ರೋಶ

“ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ ಎಂಬ ಯಡಿಯೂರಪ್ಪ ಮಾತು ಒಪ್ಪೋಣ. ಆದರೆ, ನಿಗಮ-ಮಂಡಳಿಗಳಿಗೆ ಅನಗತ್ಯವಾಗಿ ತುಂಬಲಾಗಿರುವ ಬಿಜೆಪಿ ಕಾರ್ಯಕರ್ತರಿಗೆ ಹಣ ನೀಡಲು ಆರ್ಥಿಕ ಸಂಕಷ್ಟ ಇಲ್ಲವೇ? ಜನರೇ ನೀಡಿದ ಹಣವನ್ನು ಜನರಿಗೆ ನೀಡಲು ಮಾತ್ರ ಸಂಕಷ್ಟ ಎದುರಾಗಿದೆಯೇ? ನಿಮ್ಮ ಕಾರ್ಯಕರ್ತರಿಗೆ ನಿಗಮ-ಮಂಡಳಿ ನೆಪದಲ್ಲಿ ನೀಡುತ್ತಿರುವುದು ಜನರ ಹಣವಲ್ಲವೇ?” ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪ್ಯಾಕೇಜ್‌ನಲ್ಲಿ ಕೃಷಿ ರಂಗವನ್ನು ಹೂ ಬೆಳೆಗಾರರು, ಹಣ್ಣ-ತರಕಾರಿ ಬೆಳೆಗಾರರೆಂದು ಪ್ರತ್ಯೇಕಿಸಲಾಗಿದೆ. ಅತ್ಯಂತ ಅವೈಜ್ಞಾನಿಕ ಕ್ರಮವಿದು. ಒಟ್ಟು ಕೃಷಿ ಕ್ಷೇತ್ರ, ಒಟ್ಟು ರೈತ ಸಮುದಾಯ ಎಂಬ ಪರಿಕಲ್ಪನೆಯೇ ಇಲ್ಲಿಲ್ಲ. ಕೃಷಿ ಕ್ಷೇತ್ರದ ಇತರೆ ಕಸುಬುದಾರರನ್ನು ಪ್ಯಾಕೇಜ್‌ನಿಂದ ಹೊರಗಿಟ್ಟಿದ್ದು ಯಾಕೆ? ಪ್ಯಾಕೇಜ್‌ ಹಿಗ್ಗುತ್ತದೆ ಎಂಬ ಭಯವೇ?” ಅವರು ರಾಜ್ಯ ಸರ್ಕಾರಕ್ಕೆ ಪಶ್ನಿಸಿದ್ದಾರೆ.

“2.10 ಲಕ್ಷ ಚಾಲಕ ವರ್ಗಕ್ಕೆ ₹3000 ಪರಿಹಾರ ನೀಡುವುದಾಗಿ ಹೇಳಲಾಗಿದೆ. ಕಳೆದ ಬಾರಿಯ ಲಾಕ್‌ಡೌನ್‌ನಲ್ಲಿ 7.50 ಲಕ್ಷ ಇದ್ದ ಚಾಲಕರ ಸಂಖ್ಯೆ ಈ ಬಾರಿ 2.10 ಲಕ್ಷಕ್ಕೆ ಇಳಿದಿದೆ. ಚಾಲಕರಿಗೆ ಈಗ ಪರಿಹಾರಕ್ಕಿಂತಲೂ ಮುಖ್ಯವಾಗಿ, ಆರ್‌ಟಿಒ ಶುಲ್ಕಗಳು, ತೆರಿಗೆಯಿಂದ ವಿನಾಯಿತಿ ಸಿಗಬೇಕಿತ್ತು. ಈಗಿನ ಪರಿಹಾರದಿಂದ ಅವರ ಕುಟುಂಬ ನಡೆಯಲು ಸಾಧ್ಯವೇ?” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

“ಕೂಲಿ ಕಾರ್ಮಿಕರು ಸದ್ಯ ನಗರ ತೊರೆದು ಹಳ್ಳಿ ಸೇರಿದ್ದಾರೆ. ಅವರ ಅದಾಯ ವೃದ್ಧಿಗಾಗಿ ನರೇಗಾವನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅವಕಾಶವಿತ್ತು. ನರೇಗಾಕ್ಕೆ ಹೆಚ್ಚಿನ ಅನುದಾನ ಒದಗಿಸಿ, ಗ್ರಾಮೀಣ ಮೂಲಸೌಕರ್ಯ ಹೆಚ್ಚಿಸಿ, ಕೂಲಿ ಕಾರ್ಮಿಕರ ಆದಾಯ ವೃದ್ಧಿಸಲು ಇದ್ದ ಅವಕಾಶವನ್ನು ಸರ್ಕಾರ ಕಳೆದುಕೊಂಡಿದೆ. ಈ ಸರ್ಕಾರಕ್ಕೆ ದೂರಾಲೋಚನೆಗಳೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ಈಗ ನಿಗದಿ ಮಾಡಿರುವ 3 ತಿಂಗಳ ಅವಧಿಯ ಸಾಲ ಮರುಪಾವತಿಯ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕಾಗಿತ್ತು. ಮೂರು ತಿಂಗಳಿಗೆ ಸರ್ಕಾರವೇ ಸಾಲ ಮರು ಪಾವತಿ ಮಾಡಬೇಕಾಗಿತ್ತು ಅಥವಾ ಮರುಪಾವತಿಯನ್ನು ಮನ್ನಾ ಮಾಡಬೇಕಾಗಿತ್ತು. ನಾನು ರೈತರ ಸಾಲ ಮನ್ನಾ ಮಾಡಿ ಸರ್ಕಾರದಿಂದ ಹೊರ ಬಂದಿದ್ದೆ. ಹೀಗಾಗಿ ರೈತರ ಸಾಲದ ಹೊರೆ ದೊಡ್ಡದೇನೂ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

“ನಿತ್ಯ 6 ಲಕ್ಷ ಮಂದಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರ ಪಡೆಯುತ್ತಿರುವುದಾಗಿ ಹೇಳಲಾಗಿದೆ. ಇಂದಿರಾ ಕ್ಯಾಂಟೀನ್‌ಗಳ ಎದುರು ಜನರೇ ಇಲ್ಲ. ಆದರೆ, ಪ್ರತಿ ದಿನ 6 ಲಕ್ಷ ಜನರ ಲೆಕ್ಕ ಕೊಟ್ಟು ಸರ್ಕಾರ ಯಾವ ಕಂಟ್ರಾಕ್ಟರ್‌ ಅನ್ನು ಉದ್ದಾರ ಮಾಡುತ್ತಿದೆ. ಕ್ಯಾಂಟೀನ್‌ಗಳ ಎದುರು ಇರುವ ಜನಸಂದಣಿಯನ್ನು ಸರ್ಕಾರ ವಿಡಿಯೊ ಮಾಡಿ ಬಿಡುಗಡೆ ಮಾಡಬಲ್ಲದೇ?” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ ಉಪ ಚುನಾವಣೆಯಲ್ಲಿ ಕೋವಿಡ್‌ಗೆ ಏಳು ನಾಯಕರು ಬಲಿ: ಸರ್ಕಾರದ ವಿರುದ್ಧ ಮೃತರ ಕುಟುಂಬಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...