Homeಕರ್ನಾಟಕನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ಕೇರಳದಲ್ಲಿ 20,000 ಕೋಟಿ ಪ್ಯಾಕೇಜ್‌‌ ಘೋಷಿಸಲಾಗಿದೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ 1200 ಕೋಟಿ ಪರಿಹಾರ ಸಾಕೆ ಎಂದು ಅವರು ಕೇಳಿದ್ದಾರೆ.

- Advertisement -
- Advertisement -

ಜನಹಿತದ ಲಾಕ್‌ಡೌನ್‌ ಘೋಷಿಸಬೇಕು, ಅದರಲ್ಲಿ ಜನರಿಗೆ ಉಪಯೋಗವಾಗುವ ಪ್ಯಾಕೇಜ್‌ ಇರಬೇಕು ಎಂಬ ಜೆಡಿಎಸ್‌ನ ಆಗ್ರಹದ ನಂತರ ರಾಜ್ಯ ಸರ್ಕಾರ ಪ್ಯಾಕೇಜ್‌ ಘೋಷಿಸಿದೆ. ಆದರೆ, 6.5 ಕೋಟಿ ಜನಸಂಖ್ಯೆ ಇರುವ, ದೇಶಕ್ಕಾಗಿ ಅಪಾರ ಅರ್ಥಿಕ ಕೊಡುಗೆ ನೀಡುವ ಕರ್ನಾಟಕದಂತ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್‌ ಅತ್ಯಂತ ಕಡಿಮೆ. ಇದು ಅವೈಜ್ಞಾನಿ, ಅಸಮರ್ಪಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌. ಡಿ. ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.

ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಅವರು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ. ಟ್ವೀಟ್‌ನಲ್ಲಿ “ಲಾಕ್‌ಡೌನ್‌ ಮಾಡಿ ಎಂದು ನಾನು ಮಾರ್ಚ್‌ನಲ್ಲೇ ಹೇಳಿದ್ದೆ. ಆದರೆ, ಘೋಷಿಸಲಿಲ್ಲ. ನೆರೆಯ ಕೇರಳದಲ್ಲಿ ಮಾರ್ಚ್‌ನಲ್ಲೇ ಲಾಕ್‌ಡೌನ್‌ ಜಾರಿಯಾಯಿತು. 20,000 ಕೋಟಿ ಪ್ಯಾಕೇಜ್‌ ಅನ್ನೂ ಘೋಷಿಸಲಾಯಿತು. ಕರ್ನಾಕಟದ ಎದುರು ಕೇರಳ ಎಲ್ಲ ದೃಷ್ಟಿಯಿಂದಲೂ ಸಣ್ಣ ರಾಜ್ಯ. ಆದರೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ ಈ 1200 ಕೋಟಿ ಪರಿಹಾರ ಸಾಕೆ?” ಎಂದು ಪ್ರಶ್ನಿಸಿದ್ದಾರೆ.

“ಆರ್ಥಿಕ ಸಂಕಷ್ಟದ ಮಧ್ಯೆ ಪ್ಯಾಕೇಜ್‌ ನೀಡುತ್ತಿರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ನನ್ನಿಂದ ಅಧಿಕಾರ ಕಸಿದಾಗ ಇದೇ ಬಿಎಸ್‌ವೈ ಅವರು ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದಿದ್ದರು. 2 ವರ್ಷದಲ್ಲಿ ಆರ್ಥಿಕ ದುಸ್ಥಿತಿ ಬಂದಿದ್ದು ಹೇಗೆ? ರಾಜಕೀಯಕ್ಕಾಗಿ ಮಾಡಿಕೊಂಡ ನಿಗಮಗಳಿಗೆ ನೂರಾರು ಕೋಟಿ ಹಣವಿರುವಾಗ ಜನರ ಪರಿಹಾರಕ್ಕಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಸೋಂಕಿನಿಂದ ಸಾವು ಹೆಚ್ಚುತ್ತಿದೆ; ಕೇಂದ್ರ ಜನರ ಗಮನ ಬೇರೆಡೆ ಸೆಳೆಯುತ್ತಿದೆ: ರಾಹುಲ್ ಗಾಂಧಿ ಆಕ್ರೋಶ

“ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ ಎಂಬ ಯಡಿಯೂರಪ್ಪ ಮಾತು ಒಪ್ಪೋಣ. ಆದರೆ, ನಿಗಮ-ಮಂಡಳಿಗಳಿಗೆ ಅನಗತ್ಯವಾಗಿ ತುಂಬಲಾಗಿರುವ ಬಿಜೆಪಿ ಕಾರ್ಯಕರ್ತರಿಗೆ ಹಣ ನೀಡಲು ಆರ್ಥಿಕ ಸಂಕಷ್ಟ ಇಲ್ಲವೇ? ಜನರೇ ನೀಡಿದ ಹಣವನ್ನು ಜನರಿಗೆ ನೀಡಲು ಮಾತ್ರ ಸಂಕಷ್ಟ ಎದುರಾಗಿದೆಯೇ? ನಿಮ್ಮ ಕಾರ್ಯಕರ್ತರಿಗೆ ನಿಗಮ-ಮಂಡಳಿ ನೆಪದಲ್ಲಿ ನೀಡುತ್ತಿರುವುದು ಜನರ ಹಣವಲ್ಲವೇ?” ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪ್ಯಾಕೇಜ್‌ನಲ್ಲಿ ಕೃಷಿ ರಂಗವನ್ನು ಹೂ ಬೆಳೆಗಾರರು, ಹಣ್ಣ-ತರಕಾರಿ ಬೆಳೆಗಾರರೆಂದು ಪ್ರತ್ಯೇಕಿಸಲಾಗಿದೆ. ಅತ್ಯಂತ ಅವೈಜ್ಞಾನಿಕ ಕ್ರಮವಿದು. ಒಟ್ಟು ಕೃಷಿ ಕ್ಷೇತ್ರ, ಒಟ್ಟು ರೈತ ಸಮುದಾಯ ಎಂಬ ಪರಿಕಲ್ಪನೆಯೇ ಇಲ್ಲಿಲ್ಲ. ಕೃಷಿ ಕ್ಷೇತ್ರದ ಇತರೆ ಕಸುಬುದಾರರನ್ನು ಪ್ಯಾಕೇಜ್‌ನಿಂದ ಹೊರಗಿಟ್ಟಿದ್ದು ಯಾಕೆ? ಪ್ಯಾಕೇಜ್‌ ಹಿಗ್ಗುತ್ತದೆ ಎಂಬ ಭಯವೇ?” ಅವರು ರಾಜ್ಯ ಸರ್ಕಾರಕ್ಕೆ ಪಶ್ನಿಸಿದ್ದಾರೆ.

“2.10 ಲಕ್ಷ ಚಾಲಕ ವರ್ಗಕ್ಕೆ ₹3000 ಪರಿಹಾರ ನೀಡುವುದಾಗಿ ಹೇಳಲಾಗಿದೆ. ಕಳೆದ ಬಾರಿಯ ಲಾಕ್‌ಡೌನ್‌ನಲ್ಲಿ 7.50 ಲಕ್ಷ ಇದ್ದ ಚಾಲಕರ ಸಂಖ್ಯೆ ಈ ಬಾರಿ 2.10 ಲಕ್ಷಕ್ಕೆ ಇಳಿದಿದೆ. ಚಾಲಕರಿಗೆ ಈಗ ಪರಿಹಾರಕ್ಕಿಂತಲೂ ಮುಖ್ಯವಾಗಿ, ಆರ್‌ಟಿಒ ಶುಲ್ಕಗಳು, ತೆರಿಗೆಯಿಂದ ವಿನಾಯಿತಿ ಸಿಗಬೇಕಿತ್ತು. ಈಗಿನ ಪರಿಹಾರದಿಂದ ಅವರ ಕುಟುಂಬ ನಡೆಯಲು ಸಾಧ್ಯವೇ?” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

“ಕೂಲಿ ಕಾರ್ಮಿಕರು ಸದ್ಯ ನಗರ ತೊರೆದು ಹಳ್ಳಿ ಸೇರಿದ್ದಾರೆ. ಅವರ ಅದಾಯ ವೃದ್ಧಿಗಾಗಿ ನರೇಗಾವನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅವಕಾಶವಿತ್ತು. ನರೇಗಾಕ್ಕೆ ಹೆಚ್ಚಿನ ಅನುದಾನ ಒದಗಿಸಿ, ಗ್ರಾಮೀಣ ಮೂಲಸೌಕರ್ಯ ಹೆಚ್ಚಿಸಿ, ಕೂಲಿ ಕಾರ್ಮಿಕರ ಆದಾಯ ವೃದ್ಧಿಸಲು ಇದ್ದ ಅವಕಾಶವನ್ನು ಸರ್ಕಾರ ಕಳೆದುಕೊಂಡಿದೆ. ಈ ಸರ್ಕಾರಕ್ಕೆ ದೂರಾಲೋಚನೆಗಳೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ಈಗ ನಿಗದಿ ಮಾಡಿರುವ 3 ತಿಂಗಳ ಅವಧಿಯ ಸಾಲ ಮರುಪಾವತಿಯ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕಾಗಿತ್ತು. ಮೂರು ತಿಂಗಳಿಗೆ ಸರ್ಕಾರವೇ ಸಾಲ ಮರು ಪಾವತಿ ಮಾಡಬೇಕಾಗಿತ್ತು ಅಥವಾ ಮರುಪಾವತಿಯನ್ನು ಮನ್ನಾ ಮಾಡಬೇಕಾಗಿತ್ತು. ನಾನು ರೈತರ ಸಾಲ ಮನ್ನಾ ಮಾಡಿ ಸರ್ಕಾರದಿಂದ ಹೊರ ಬಂದಿದ್ದೆ. ಹೀಗಾಗಿ ರೈತರ ಸಾಲದ ಹೊರೆ ದೊಡ್ಡದೇನೂ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

“ನಿತ್ಯ 6 ಲಕ್ಷ ಮಂದಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರ ಪಡೆಯುತ್ತಿರುವುದಾಗಿ ಹೇಳಲಾಗಿದೆ. ಇಂದಿರಾ ಕ್ಯಾಂಟೀನ್‌ಗಳ ಎದುರು ಜನರೇ ಇಲ್ಲ. ಆದರೆ, ಪ್ರತಿ ದಿನ 6 ಲಕ್ಷ ಜನರ ಲೆಕ್ಕ ಕೊಟ್ಟು ಸರ್ಕಾರ ಯಾವ ಕಂಟ್ರಾಕ್ಟರ್‌ ಅನ್ನು ಉದ್ದಾರ ಮಾಡುತ್ತಿದೆ. ಕ್ಯಾಂಟೀನ್‌ಗಳ ಎದುರು ಇರುವ ಜನಸಂದಣಿಯನ್ನು ಸರ್ಕಾರ ವಿಡಿಯೊ ಮಾಡಿ ಬಿಡುಗಡೆ ಮಾಡಬಲ್ಲದೇ?” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ ಉಪ ಚುನಾವಣೆಯಲ್ಲಿ ಕೋವಿಡ್‌ಗೆ ಏಳು ನಾಯಕರು ಬಲಿ: ಸರ್ಕಾರದ ವಿರುದ್ಧ ಮೃತರ ಕುಟುಂಬಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...