Homeಕರ್ನಾಟಕನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ಕೇರಳದಲ್ಲಿ 20,000 ಕೋಟಿ ಪ್ಯಾಕೇಜ್‌‌ ಘೋಷಿಸಲಾಗಿದೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ 1200 ಕೋಟಿ ಪರಿಹಾರ ಸಾಕೆ ಎಂದು ಅವರು ಕೇಳಿದ್ದಾರೆ.

- Advertisement -
- Advertisement -

ಜನಹಿತದ ಲಾಕ್‌ಡೌನ್‌ ಘೋಷಿಸಬೇಕು, ಅದರಲ್ಲಿ ಜನರಿಗೆ ಉಪಯೋಗವಾಗುವ ಪ್ಯಾಕೇಜ್‌ ಇರಬೇಕು ಎಂಬ ಜೆಡಿಎಸ್‌ನ ಆಗ್ರಹದ ನಂತರ ರಾಜ್ಯ ಸರ್ಕಾರ ಪ್ಯಾಕೇಜ್‌ ಘೋಷಿಸಿದೆ. ಆದರೆ, 6.5 ಕೋಟಿ ಜನಸಂಖ್ಯೆ ಇರುವ, ದೇಶಕ್ಕಾಗಿ ಅಪಾರ ಅರ್ಥಿಕ ಕೊಡುಗೆ ನೀಡುವ ಕರ್ನಾಟಕದಂತ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್‌ ಅತ್ಯಂತ ಕಡಿಮೆ. ಇದು ಅವೈಜ್ಞಾನಿ, ಅಸಮರ್ಪಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌. ಡಿ. ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.

ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಅವರು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ. ಟ್ವೀಟ್‌ನಲ್ಲಿ “ಲಾಕ್‌ಡೌನ್‌ ಮಾಡಿ ಎಂದು ನಾನು ಮಾರ್ಚ್‌ನಲ್ಲೇ ಹೇಳಿದ್ದೆ. ಆದರೆ, ಘೋಷಿಸಲಿಲ್ಲ. ನೆರೆಯ ಕೇರಳದಲ್ಲಿ ಮಾರ್ಚ್‌ನಲ್ಲೇ ಲಾಕ್‌ಡೌನ್‌ ಜಾರಿಯಾಯಿತು. 20,000 ಕೋಟಿ ಪ್ಯಾಕೇಜ್‌ ಅನ್ನೂ ಘೋಷಿಸಲಾಯಿತು. ಕರ್ನಾಕಟದ ಎದುರು ಕೇರಳ ಎಲ್ಲ ದೃಷ್ಟಿಯಿಂದಲೂ ಸಣ್ಣ ರಾಜ್ಯ. ಆದರೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ ಈ 1200 ಕೋಟಿ ಪರಿಹಾರ ಸಾಕೆ?” ಎಂದು ಪ್ರಶ್ನಿಸಿದ್ದಾರೆ.

“ಆರ್ಥಿಕ ಸಂಕಷ್ಟದ ಮಧ್ಯೆ ಪ್ಯಾಕೇಜ್‌ ನೀಡುತ್ತಿರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ನನ್ನಿಂದ ಅಧಿಕಾರ ಕಸಿದಾಗ ಇದೇ ಬಿಎಸ್‌ವೈ ಅವರು ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದಿದ್ದರು. 2 ವರ್ಷದಲ್ಲಿ ಆರ್ಥಿಕ ದುಸ್ಥಿತಿ ಬಂದಿದ್ದು ಹೇಗೆ? ರಾಜಕೀಯಕ್ಕಾಗಿ ಮಾಡಿಕೊಂಡ ನಿಗಮಗಳಿಗೆ ನೂರಾರು ಕೋಟಿ ಹಣವಿರುವಾಗ ಜನರ ಪರಿಹಾರಕ್ಕಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಸೋಂಕಿನಿಂದ ಸಾವು ಹೆಚ್ಚುತ್ತಿದೆ; ಕೇಂದ್ರ ಜನರ ಗಮನ ಬೇರೆಡೆ ಸೆಳೆಯುತ್ತಿದೆ: ರಾಹುಲ್ ಗಾಂಧಿ ಆಕ್ರೋಶ

“ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ ಎಂಬ ಯಡಿಯೂರಪ್ಪ ಮಾತು ಒಪ್ಪೋಣ. ಆದರೆ, ನಿಗಮ-ಮಂಡಳಿಗಳಿಗೆ ಅನಗತ್ಯವಾಗಿ ತುಂಬಲಾಗಿರುವ ಬಿಜೆಪಿ ಕಾರ್ಯಕರ್ತರಿಗೆ ಹಣ ನೀಡಲು ಆರ್ಥಿಕ ಸಂಕಷ್ಟ ಇಲ್ಲವೇ? ಜನರೇ ನೀಡಿದ ಹಣವನ್ನು ಜನರಿಗೆ ನೀಡಲು ಮಾತ್ರ ಸಂಕಷ್ಟ ಎದುರಾಗಿದೆಯೇ? ನಿಮ್ಮ ಕಾರ್ಯಕರ್ತರಿಗೆ ನಿಗಮ-ಮಂಡಳಿ ನೆಪದಲ್ಲಿ ನೀಡುತ್ತಿರುವುದು ಜನರ ಹಣವಲ್ಲವೇ?” ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪ್ಯಾಕೇಜ್‌ನಲ್ಲಿ ಕೃಷಿ ರಂಗವನ್ನು ಹೂ ಬೆಳೆಗಾರರು, ಹಣ್ಣ-ತರಕಾರಿ ಬೆಳೆಗಾರರೆಂದು ಪ್ರತ್ಯೇಕಿಸಲಾಗಿದೆ. ಅತ್ಯಂತ ಅವೈಜ್ಞಾನಿಕ ಕ್ರಮವಿದು. ಒಟ್ಟು ಕೃಷಿ ಕ್ಷೇತ್ರ, ಒಟ್ಟು ರೈತ ಸಮುದಾಯ ಎಂಬ ಪರಿಕಲ್ಪನೆಯೇ ಇಲ್ಲಿಲ್ಲ. ಕೃಷಿ ಕ್ಷೇತ್ರದ ಇತರೆ ಕಸುಬುದಾರರನ್ನು ಪ್ಯಾಕೇಜ್‌ನಿಂದ ಹೊರಗಿಟ್ಟಿದ್ದು ಯಾಕೆ? ಪ್ಯಾಕೇಜ್‌ ಹಿಗ್ಗುತ್ತದೆ ಎಂಬ ಭಯವೇ?” ಅವರು ರಾಜ್ಯ ಸರ್ಕಾರಕ್ಕೆ ಪಶ್ನಿಸಿದ್ದಾರೆ.

“2.10 ಲಕ್ಷ ಚಾಲಕ ವರ್ಗಕ್ಕೆ ₹3000 ಪರಿಹಾರ ನೀಡುವುದಾಗಿ ಹೇಳಲಾಗಿದೆ. ಕಳೆದ ಬಾರಿಯ ಲಾಕ್‌ಡೌನ್‌ನಲ್ಲಿ 7.50 ಲಕ್ಷ ಇದ್ದ ಚಾಲಕರ ಸಂಖ್ಯೆ ಈ ಬಾರಿ 2.10 ಲಕ್ಷಕ್ಕೆ ಇಳಿದಿದೆ. ಚಾಲಕರಿಗೆ ಈಗ ಪರಿಹಾರಕ್ಕಿಂತಲೂ ಮುಖ್ಯವಾಗಿ, ಆರ್‌ಟಿಒ ಶುಲ್ಕಗಳು, ತೆರಿಗೆಯಿಂದ ವಿನಾಯಿತಿ ಸಿಗಬೇಕಿತ್ತು. ಈಗಿನ ಪರಿಹಾರದಿಂದ ಅವರ ಕುಟುಂಬ ನಡೆಯಲು ಸಾಧ್ಯವೇ?” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

“ಕೂಲಿ ಕಾರ್ಮಿಕರು ಸದ್ಯ ನಗರ ತೊರೆದು ಹಳ್ಳಿ ಸೇರಿದ್ದಾರೆ. ಅವರ ಅದಾಯ ವೃದ್ಧಿಗಾಗಿ ನರೇಗಾವನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅವಕಾಶವಿತ್ತು. ನರೇಗಾಕ್ಕೆ ಹೆಚ್ಚಿನ ಅನುದಾನ ಒದಗಿಸಿ, ಗ್ರಾಮೀಣ ಮೂಲಸೌಕರ್ಯ ಹೆಚ್ಚಿಸಿ, ಕೂಲಿ ಕಾರ್ಮಿಕರ ಆದಾಯ ವೃದ್ಧಿಸಲು ಇದ್ದ ಅವಕಾಶವನ್ನು ಸರ್ಕಾರ ಕಳೆದುಕೊಂಡಿದೆ. ಈ ಸರ್ಕಾರಕ್ಕೆ ದೂರಾಲೋಚನೆಗಳೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ಈಗ ನಿಗದಿ ಮಾಡಿರುವ 3 ತಿಂಗಳ ಅವಧಿಯ ಸಾಲ ಮರುಪಾವತಿಯ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕಾಗಿತ್ತು. ಮೂರು ತಿಂಗಳಿಗೆ ಸರ್ಕಾರವೇ ಸಾಲ ಮರು ಪಾವತಿ ಮಾಡಬೇಕಾಗಿತ್ತು ಅಥವಾ ಮರುಪಾವತಿಯನ್ನು ಮನ್ನಾ ಮಾಡಬೇಕಾಗಿತ್ತು. ನಾನು ರೈತರ ಸಾಲ ಮನ್ನಾ ಮಾಡಿ ಸರ್ಕಾರದಿಂದ ಹೊರ ಬಂದಿದ್ದೆ. ಹೀಗಾಗಿ ರೈತರ ಸಾಲದ ಹೊರೆ ದೊಡ್ಡದೇನೂ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

“ನಿತ್ಯ 6 ಲಕ್ಷ ಮಂದಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರ ಪಡೆಯುತ್ತಿರುವುದಾಗಿ ಹೇಳಲಾಗಿದೆ. ಇಂದಿರಾ ಕ್ಯಾಂಟೀನ್‌ಗಳ ಎದುರು ಜನರೇ ಇಲ್ಲ. ಆದರೆ, ಪ್ರತಿ ದಿನ 6 ಲಕ್ಷ ಜನರ ಲೆಕ್ಕ ಕೊಟ್ಟು ಸರ್ಕಾರ ಯಾವ ಕಂಟ್ರಾಕ್ಟರ್‌ ಅನ್ನು ಉದ್ದಾರ ಮಾಡುತ್ತಿದೆ. ಕ್ಯಾಂಟೀನ್‌ಗಳ ಎದುರು ಇರುವ ಜನಸಂದಣಿಯನ್ನು ಸರ್ಕಾರ ವಿಡಿಯೊ ಮಾಡಿ ಬಿಡುಗಡೆ ಮಾಡಬಲ್ಲದೇ?” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ ಉಪ ಚುನಾವಣೆಯಲ್ಲಿ ಕೋವಿಡ್‌ಗೆ ಏಳು ನಾಯಕರು ಬಲಿ: ಸರ್ಕಾರದ ವಿರುದ್ಧ ಮೃತರ ಕುಟುಂಬಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...