Homeಕರ್ನಾಟಕನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ಕೇರಳದಲ್ಲಿ 20,000 ಕೋಟಿ ಪ್ಯಾಕೇಜ್‌‌ ಘೋಷಿಸಲಾಗಿದೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ 1200 ಕೋಟಿ ಪರಿಹಾರ ಸಾಕೆ ಎಂದು ಅವರು ಕೇಳಿದ್ದಾರೆ.

- Advertisement -
- Advertisement -

ಜನಹಿತದ ಲಾಕ್‌ಡೌನ್‌ ಘೋಷಿಸಬೇಕು, ಅದರಲ್ಲಿ ಜನರಿಗೆ ಉಪಯೋಗವಾಗುವ ಪ್ಯಾಕೇಜ್‌ ಇರಬೇಕು ಎಂಬ ಜೆಡಿಎಸ್‌ನ ಆಗ್ರಹದ ನಂತರ ರಾಜ್ಯ ಸರ್ಕಾರ ಪ್ಯಾಕೇಜ್‌ ಘೋಷಿಸಿದೆ. ಆದರೆ, 6.5 ಕೋಟಿ ಜನಸಂಖ್ಯೆ ಇರುವ, ದೇಶಕ್ಕಾಗಿ ಅಪಾರ ಅರ್ಥಿಕ ಕೊಡುಗೆ ನೀಡುವ ಕರ್ನಾಟಕದಂತ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್‌ ಅತ್ಯಂತ ಕಡಿಮೆ. ಇದು ಅವೈಜ್ಞಾನಿ, ಅಸಮರ್ಪಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌. ಡಿ. ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.

ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಅವರು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ. ಟ್ವೀಟ್‌ನಲ್ಲಿ “ಲಾಕ್‌ಡೌನ್‌ ಮಾಡಿ ಎಂದು ನಾನು ಮಾರ್ಚ್‌ನಲ್ಲೇ ಹೇಳಿದ್ದೆ. ಆದರೆ, ಘೋಷಿಸಲಿಲ್ಲ. ನೆರೆಯ ಕೇರಳದಲ್ಲಿ ಮಾರ್ಚ್‌ನಲ್ಲೇ ಲಾಕ್‌ಡೌನ್‌ ಜಾರಿಯಾಯಿತು. 20,000 ಕೋಟಿ ಪ್ಯಾಕೇಜ್‌ ಅನ್ನೂ ಘೋಷಿಸಲಾಯಿತು. ಕರ್ನಾಕಟದ ಎದುರು ಕೇರಳ ಎಲ್ಲ ದೃಷ್ಟಿಯಿಂದಲೂ ಸಣ್ಣ ರಾಜ್ಯ. ಆದರೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ ಈ 1200 ಕೋಟಿ ಪರಿಹಾರ ಸಾಕೆ?” ಎಂದು ಪ್ರಶ್ನಿಸಿದ್ದಾರೆ.

“ಆರ್ಥಿಕ ಸಂಕಷ್ಟದ ಮಧ್ಯೆ ಪ್ಯಾಕೇಜ್‌ ನೀಡುತ್ತಿರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ನನ್ನಿಂದ ಅಧಿಕಾರ ಕಸಿದಾಗ ಇದೇ ಬಿಎಸ್‌ವೈ ಅವರು ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದಿದ್ದರು. 2 ವರ್ಷದಲ್ಲಿ ಆರ್ಥಿಕ ದುಸ್ಥಿತಿ ಬಂದಿದ್ದು ಹೇಗೆ? ರಾಜಕೀಯಕ್ಕಾಗಿ ಮಾಡಿಕೊಂಡ ನಿಗಮಗಳಿಗೆ ನೂರಾರು ಕೋಟಿ ಹಣವಿರುವಾಗ ಜನರ ಪರಿಹಾರಕ್ಕಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಸೋಂಕಿನಿಂದ ಸಾವು ಹೆಚ್ಚುತ್ತಿದೆ; ಕೇಂದ್ರ ಜನರ ಗಮನ ಬೇರೆಡೆ ಸೆಳೆಯುತ್ತಿದೆ: ರಾಹುಲ್ ಗಾಂಧಿ ಆಕ್ರೋಶ

“ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ ಎಂಬ ಯಡಿಯೂರಪ್ಪ ಮಾತು ಒಪ್ಪೋಣ. ಆದರೆ, ನಿಗಮ-ಮಂಡಳಿಗಳಿಗೆ ಅನಗತ್ಯವಾಗಿ ತುಂಬಲಾಗಿರುವ ಬಿಜೆಪಿ ಕಾರ್ಯಕರ್ತರಿಗೆ ಹಣ ನೀಡಲು ಆರ್ಥಿಕ ಸಂಕಷ್ಟ ಇಲ್ಲವೇ? ಜನರೇ ನೀಡಿದ ಹಣವನ್ನು ಜನರಿಗೆ ನೀಡಲು ಮಾತ್ರ ಸಂಕಷ್ಟ ಎದುರಾಗಿದೆಯೇ? ನಿಮ್ಮ ಕಾರ್ಯಕರ್ತರಿಗೆ ನಿಗಮ-ಮಂಡಳಿ ನೆಪದಲ್ಲಿ ನೀಡುತ್ತಿರುವುದು ಜನರ ಹಣವಲ್ಲವೇ?” ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪ್ಯಾಕೇಜ್‌ನಲ್ಲಿ ಕೃಷಿ ರಂಗವನ್ನು ಹೂ ಬೆಳೆಗಾರರು, ಹಣ್ಣ-ತರಕಾರಿ ಬೆಳೆಗಾರರೆಂದು ಪ್ರತ್ಯೇಕಿಸಲಾಗಿದೆ. ಅತ್ಯಂತ ಅವೈಜ್ಞಾನಿಕ ಕ್ರಮವಿದು. ಒಟ್ಟು ಕೃಷಿ ಕ್ಷೇತ್ರ, ಒಟ್ಟು ರೈತ ಸಮುದಾಯ ಎಂಬ ಪರಿಕಲ್ಪನೆಯೇ ಇಲ್ಲಿಲ್ಲ. ಕೃಷಿ ಕ್ಷೇತ್ರದ ಇತರೆ ಕಸುಬುದಾರರನ್ನು ಪ್ಯಾಕೇಜ್‌ನಿಂದ ಹೊರಗಿಟ್ಟಿದ್ದು ಯಾಕೆ? ಪ್ಯಾಕೇಜ್‌ ಹಿಗ್ಗುತ್ತದೆ ಎಂಬ ಭಯವೇ?” ಅವರು ರಾಜ್ಯ ಸರ್ಕಾರಕ್ಕೆ ಪಶ್ನಿಸಿದ್ದಾರೆ.

“2.10 ಲಕ್ಷ ಚಾಲಕ ವರ್ಗಕ್ಕೆ ₹3000 ಪರಿಹಾರ ನೀಡುವುದಾಗಿ ಹೇಳಲಾಗಿದೆ. ಕಳೆದ ಬಾರಿಯ ಲಾಕ್‌ಡೌನ್‌ನಲ್ಲಿ 7.50 ಲಕ್ಷ ಇದ್ದ ಚಾಲಕರ ಸಂಖ್ಯೆ ಈ ಬಾರಿ 2.10 ಲಕ್ಷಕ್ಕೆ ಇಳಿದಿದೆ. ಚಾಲಕರಿಗೆ ಈಗ ಪರಿಹಾರಕ್ಕಿಂತಲೂ ಮುಖ್ಯವಾಗಿ, ಆರ್‌ಟಿಒ ಶುಲ್ಕಗಳು, ತೆರಿಗೆಯಿಂದ ವಿನಾಯಿತಿ ಸಿಗಬೇಕಿತ್ತು. ಈಗಿನ ಪರಿಹಾರದಿಂದ ಅವರ ಕುಟುಂಬ ನಡೆಯಲು ಸಾಧ್ಯವೇ?” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

“ಕೂಲಿ ಕಾರ್ಮಿಕರು ಸದ್ಯ ನಗರ ತೊರೆದು ಹಳ್ಳಿ ಸೇರಿದ್ದಾರೆ. ಅವರ ಅದಾಯ ವೃದ್ಧಿಗಾಗಿ ನರೇಗಾವನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅವಕಾಶವಿತ್ತು. ನರೇಗಾಕ್ಕೆ ಹೆಚ್ಚಿನ ಅನುದಾನ ಒದಗಿಸಿ, ಗ್ರಾಮೀಣ ಮೂಲಸೌಕರ್ಯ ಹೆಚ್ಚಿಸಿ, ಕೂಲಿ ಕಾರ್ಮಿಕರ ಆದಾಯ ವೃದ್ಧಿಸಲು ಇದ್ದ ಅವಕಾಶವನ್ನು ಸರ್ಕಾರ ಕಳೆದುಕೊಂಡಿದೆ. ಈ ಸರ್ಕಾರಕ್ಕೆ ದೂರಾಲೋಚನೆಗಳೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ಈಗ ನಿಗದಿ ಮಾಡಿರುವ 3 ತಿಂಗಳ ಅವಧಿಯ ಸಾಲ ಮರುಪಾವತಿಯ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕಾಗಿತ್ತು. ಮೂರು ತಿಂಗಳಿಗೆ ಸರ್ಕಾರವೇ ಸಾಲ ಮರು ಪಾವತಿ ಮಾಡಬೇಕಾಗಿತ್ತು ಅಥವಾ ಮರುಪಾವತಿಯನ್ನು ಮನ್ನಾ ಮಾಡಬೇಕಾಗಿತ್ತು. ನಾನು ರೈತರ ಸಾಲ ಮನ್ನಾ ಮಾಡಿ ಸರ್ಕಾರದಿಂದ ಹೊರ ಬಂದಿದ್ದೆ. ಹೀಗಾಗಿ ರೈತರ ಸಾಲದ ಹೊರೆ ದೊಡ್ಡದೇನೂ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

“ನಿತ್ಯ 6 ಲಕ್ಷ ಮಂದಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರ ಪಡೆಯುತ್ತಿರುವುದಾಗಿ ಹೇಳಲಾಗಿದೆ. ಇಂದಿರಾ ಕ್ಯಾಂಟೀನ್‌ಗಳ ಎದುರು ಜನರೇ ಇಲ್ಲ. ಆದರೆ, ಪ್ರತಿ ದಿನ 6 ಲಕ್ಷ ಜನರ ಲೆಕ್ಕ ಕೊಟ್ಟು ಸರ್ಕಾರ ಯಾವ ಕಂಟ್ರಾಕ್ಟರ್‌ ಅನ್ನು ಉದ್ದಾರ ಮಾಡುತ್ತಿದೆ. ಕ್ಯಾಂಟೀನ್‌ಗಳ ಎದುರು ಇರುವ ಜನಸಂದಣಿಯನ್ನು ಸರ್ಕಾರ ವಿಡಿಯೊ ಮಾಡಿ ಬಿಡುಗಡೆ ಮಾಡಬಲ್ಲದೇ?” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ ಉಪ ಚುನಾವಣೆಯಲ್ಲಿ ಕೋವಿಡ್‌ಗೆ ಏಳು ನಾಯಕರು ಬಲಿ: ಸರ್ಕಾರದ ವಿರುದ್ಧ ಮೃತರ ಕುಟುಂಬಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...