Homeಕರ್ನಾಟಕನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ಕೇರಳದಲ್ಲಿ 20,000 ಕೋಟಿ ಪ್ಯಾಕೇಜ್‌‌ ಘೋಷಿಸಲಾಗಿದೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ 1200 ಕೋಟಿ ಪರಿಹಾರ ಸಾಕೆ ಎಂದು ಅವರು ಕೇಳಿದ್ದಾರೆ.

- Advertisement -
- Advertisement -

ಜನಹಿತದ ಲಾಕ್‌ಡೌನ್‌ ಘೋಷಿಸಬೇಕು, ಅದರಲ್ಲಿ ಜನರಿಗೆ ಉಪಯೋಗವಾಗುವ ಪ್ಯಾಕೇಜ್‌ ಇರಬೇಕು ಎಂಬ ಜೆಡಿಎಸ್‌ನ ಆಗ್ರಹದ ನಂತರ ರಾಜ್ಯ ಸರ್ಕಾರ ಪ್ಯಾಕೇಜ್‌ ಘೋಷಿಸಿದೆ. ಆದರೆ, 6.5 ಕೋಟಿ ಜನಸಂಖ್ಯೆ ಇರುವ, ದೇಶಕ್ಕಾಗಿ ಅಪಾರ ಅರ್ಥಿಕ ಕೊಡುಗೆ ನೀಡುವ ಕರ್ನಾಟಕದಂತ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್‌ ಅತ್ಯಂತ ಕಡಿಮೆ. ಇದು ಅವೈಜ್ಞಾನಿ, ಅಸಮರ್ಪಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌. ಡಿ. ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.

ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಅವರು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ. ಟ್ವೀಟ್‌ನಲ್ಲಿ “ಲಾಕ್‌ಡೌನ್‌ ಮಾಡಿ ಎಂದು ನಾನು ಮಾರ್ಚ್‌ನಲ್ಲೇ ಹೇಳಿದ್ದೆ. ಆದರೆ, ಘೋಷಿಸಲಿಲ್ಲ. ನೆರೆಯ ಕೇರಳದಲ್ಲಿ ಮಾರ್ಚ್‌ನಲ್ಲೇ ಲಾಕ್‌ಡೌನ್‌ ಜಾರಿಯಾಯಿತು. 20,000 ಕೋಟಿ ಪ್ಯಾಕೇಜ್‌ ಅನ್ನೂ ಘೋಷಿಸಲಾಯಿತು. ಕರ್ನಾಕಟದ ಎದುರು ಕೇರಳ ಎಲ್ಲ ದೃಷ್ಟಿಯಿಂದಲೂ ಸಣ್ಣ ರಾಜ್ಯ. ಆದರೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ ಈ 1200 ಕೋಟಿ ಪರಿಹಾರ ಸಾಕೆ?” ಎಂದು ಪ್ರಶ್ನಿಸಿದ್ದಾರೆ.

“ಆರ್ಥಿಕ ಸಂಕಷ್ಟದ ಮಧ್ಯೆ ಪ್ಯಾಕೇಜ್‌ ನೀಡುತ್ತಿರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ನನ್ನಿಂದ ಅಧಿಕಾರ ಕಸಿದಾಗ ಇದೇ ಬಿಎಸ್‌ವೈ ಅವರು ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದಿದ್ದರು. 2 ವರ್ಷದಲ್ಲಿ ಆರ್ಥಿಕ ದುಸ್ಥಿತಿ ಬಂದಿದ್ದು ಹೇಗೆ? ರಾಜಕೀಯಕ್ಕಾಗಿ ಮಾಡಿಕೊಂಡ ನಿಗಮಗಳಿಗೆ ನೂರಾರು ಕೋಟಿ ಹಣವಿರುವಾಗ ಜನರ ಪರಿಹಾರಕ್ಕಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಸೋಂಕಿನಿಂದ ಸಾವು ಹೆಚ್ಚುತ್ತಿದೆ; ಕೇಂದ್ರ ಜನರ ಗಮನ ಬೇರೆಡೆ ಸೆಳೆಯುತ್ತಿದೆ: ರಾಹುಲ್ ಗಾಂಧಿ ಆಕ್ರೋಶ

“ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ ಎಂಬ ಯಡಿಯೂರಪ್ಪ ಮಾತು ಒಪ್ಪೋಣ. ಆದರೆ, ನಿಗಮ-ಮಂಡಳಿಗಳಿಗೆ ಅನಗತ್ಯವಾಗಿ ತುಂಬಲಾಗಿರುವ ಬಿಜೆಪಿ ಕಾರ್ಯಕರ್ತರಿಗೆ ಹಣ ನೀಡಲು ಆರ್ಥಿಕ ಸಂಕಷ್ಟ ಇಲ್ಲವೇ? ಜನರೇ ನೀಡಿದ ಹಣವನ್ನು ಜನರಿಗೆ ನೀಡಲು ಮಾತ್ರ ಸಂಕಷ್ಟ ಎದುರಾಗಿದೆಯೇ? ನಿಮ್ಮ ಕಾರ್ಯಕರ್ತರಿಗೆ ನಿಗಮ-ಮಂಡಳಿ ನೆಪದಲ್ಲಿ ನೀಡುತ್ತಿರುವುದು ಜನರ ಹಣವಲ್ಲವೇ?” ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪ್ಯಾಕೇಜ್‌ನಲ್ಲಿ ಕೃಷಿ ರಂಗವನ್ನು ಹೂ ಬೆಳೆಗಾರರು, ಹಣ್ಣ-ತರಕಾರಿ ಬೆಳೆಗಾರರೆಂದು ಪ್ರತ್ಯೇಕಿಸಲಾಗಿದೆ. ಅತ್ಯಂತ ಅವೈಜ್ಞಾನಿಕ ಕ್ರಮವಿದು. ಒಟ್ಟು ಕೃಷಿ ಕ್ಷೇತ್ರ, ಒಟ್ಟು ರೈತ ಸಮುದಾಯ ಎಂಬ ಪರಿಕಲ್ಪನೆಯೇ ಇಲ್ಲಿಲ್ಲ. ಕೃಷಿ ಕ್ಷೇತ್ರದ ಇತರೆ ಕಸುಬುದಾರರನ್ನು ಪ್ಯಾಕೇಜ್‌ನಿಂದ ಹೊರಗಿಟ್ಟಿದ್ದು ಯಾಕೆ? ಪ್ಯಾಕೇಜ್‌ ಹಿಗ್ಗುತ್ತದೆ ಎಂಬ ಭಯವೇ?” ಅವರು ರಾಜ್ಯ ಸರ್ಕಾರಕ್ಕೆ ಪಶ್ನಿಸಿದ್ದಾರೆ.

“2.10 ಲಕ್ಷ ಚಾಲಕ ವರ್ಗಕ್ಕೆ ₹3000 ಪರಿಹಾರ ನೀಡುವುದಾಗಿ ಹೇಳಲಾಗಿದೆ. ಕಳೆದ ಬಾರಿಯ ಲಾಕ್‌ಡೌನ್‌ನಲ್ಲಿ 7.50 ಲಕ್ಷ ಇದ್ದ ಚಾಲಕರ ಸಂಖ್ಯೆ ಈ ಬಾರಿ 2.10 ಲಕ್ಷಕ್ಕೆ ಇಳಿದಿದೆ. ಚಾಲಕರಿಗೆ ಈಗ ಪರಿಹಾರಕ್ಕಿಂತಲೂ ಮುಖ್ಯವಾಗಿ, ಆರ್‌ಟಿಒ ಶುಲ್ಕಗಳು, ತೆರಿಗೆಯಿಂದ ವಿನಾಯಿತಿ ಸಿಗಬೇಕಿತ್ತು. ಈಗಿನ ಪರಿಹಾರದಿಂದ ಅವರ ಕುಟುಂಬ ನಡೆಯಲು ಸಾಧ್ಯವೇ?” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

“ಕೂಲಿ ಕಾರ್ಮಿಕರು ಸದ್ಯ ನಗರ ತೊರೆದು ಹಳ್ಳಿ ಸೇರಿದ್ದಾರೆ. ಅವರ ಅದಾಯ ವೃದ್ಧಿಗಾಗಿ ನರೇಗಾವನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅವಕಾಶವಿತ್ತು. ನರೇಗಾಕ್ಕೆ ಹೆಚ್ಚಿನ ಅನುದಾನ ಒದಗಿಸಿ, ಗ್ರಾಮೀಣ ಮೂಲಸೌಕರ್ಯ ಹೆಚ್ಚಿಸಿ, ಕೂಲಿ ಕಾರ್ಮಿಕರ ಆದಾಯ ವೃದ್ಧಿಸಲು ಇದ್ದ ಅವಕಾಶವನ್ನು ಸರ್ಕಾರ ಕಳೆದುಕೊಂಡಿದೆ. ಈ ಸರ್ಕಾರಕ್ಕೆ ದೂರಾಲೋಚನೆಗಳೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ಈಗ ನಿಗದಿ ಮಾಡಿರುವ 3 ತಿಂಗಳ ಅವಧಿಯ ಸಾಲ ಮರುಪಾವತಿಯ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕಾಗಿತ್ತು. ಮೂರು ತಿಂಗಳಿಗೆ ಸರ್ಕಾರವೇ ಸಾಲ ಮರು ಪಾವತಿ ಮಾಡಬೇಕಾಗಿತ್ತು ಅಥವಾ ಮರುಪಾವತಿಯನ್ನು ಮನ್ನಾ ಮಾಡಬೇಕಾಗಿತ್ತು. ನಾನು ರೈತರ ಸಾಲ ಮನ್ನಾ ಮಾಡಿ ಸರ್ಕಾರದಿಂದ ಹೊರ ಬಂದಿದ್ದೆ. ಹೀಗಾಗಿ ರೈತರ ಸಾಲದ ಹೊರೆ ದೊಡ್ಡದೇನೂ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

“ನಿತ್ಯ 6 ಲಕ್ಷ ಮಂದಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರ ಪಡೆಯುತ್ತಿರುವುದಾಗಿ ಹೇಳಲಾಗಿದೆ. ಇಂದಿರಾ ಕ್ಯಾಂಟೀನ್‌ಗಳ ಎದುರು ಜನರೇ ಇಲ್ಲ. ಆದರೆ, ಪ್ರತಿ ದಿನ 6 ಲಕ್ಷ ಜನರ ಲೆಕ್ಕ ಕೊಟ್ಟು ಸರ್ಕಾರ ಯಾವ ಕಂಟ್ರಾಕ್ಟರ್‌ ಅನ್ನು ಉದ್ದಾರ ಮಾಡುತ್ತಿದೆ. ಕ್ಯಾಂಟೀನ್‌ಗಳ ಎದುರು ಇರುವ ಜನಸಂದಣಿಯನ್ನು ಸರ್ಕಾರ ವಿಡಿಯೊ ಮಾಡಿ ಬಿಡುಗಡೆ ಮಾಡಬಲ್ಲದೇ?” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ ಉಪ ಚುನಾವಣೆಯಲ್ಲಿ ಕೋವಿಡ್‌ಗೆ ಏಳು ನಾಯಕರು ಬಲಿ: ಸರ್ಕಾರದ ವಿರುದ್ಧ ಮೃತರ ಕುಟುಂಬಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...