Homeಕರ್ನಾಟಕನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ಕೇರಳದಲ್ಲಿ 20,000 ಕೋಟಿ ಪ್ಯಾಕೇಜ್‌‌ ಘೋಷಿಸಲಾಗಿದೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ 1200 ಕೋಟಿ ಪರಿಹಾರ ಸಾಕೆ ಎಂದು ಅವರು ಕೇಳಿದ್ದಾರೆ.

- Advertisement -
- Advertisement -

ಜನಹಿತದ ಲಾಕ್‌ಡೌನ್‌ ಘೋಷಿಸಬೇಕು, ಅದರಲ್ಲಿ ಜನರಿಗೆ ಉಪಯೋಗವಾಗುವ ಪ್ಯಾಕೇಜ್‌ ಇರಬೇಕು ಎಂಬ ಜೆಡಿಎಸ್‌ನ ಆಗ್ರಹದ ನಂತರ ರಾಜ್ಯ ಸರ್ಕಾರ ಪ್ಯಾಕೇಜ್‌ ಘೋಷಿಸಿದೆ. ಆದರೆ, 6.5 ಕೋಟಿ ಜನಸಂಖ್ಯೆ ಇರುವ, ದೇಶಕ್ಕಾಗಿ ಅಪಾರ ಅರ್ಥಿಕ ಕೊಡುಗೆ ನೀಡುವ ಕರ್ನಾಟಕದಂತ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್‌ ಅತ್ಯಂತ ಕಡಿಮೆ. ಇದು ಅವೈಜ್ಞಾನಿ, ಅಸಮರ್ಪಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌. ಡಿ. ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.

ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಅವರು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ. ಟ್ವೀಟ್‌ನಲ್ಲಿ “ಲಾಕ್‌ಡೌನ್‌ ಮಾಡಿ ಎಂದು ನಾನು ಮಾರ್ಚ್‌ನಲ್ಲೇ ಹೇಳಿದ್ದೆ. ಆದರೆ, ಘೋಷಿಸಲಿಲ್ಲ. ನೆರೆಯ ಕೇರಳದಲ್ಲಿ ಮಾರ್ಚ್‌ನಲ್ಲೇ ಲಾಕ್‌ಡೌನ್‌ ಜಾರಿಯಾಯಿತು. 20,000 ಕೋಟಿ ಪ್ಯಾಕೇಜ್‌ ಅನ್ನೂ ಘೋಷಿಸಲಾಯಿತು. ಕರ್ನಾಕಟದ ಎದುರು ಕೇರಳ ಎಲ್ಲ ದೃಷ್ಟಿಯಿಂದಲೂ ಸಣ್ಣ ರಾಜ್ಯ. ಆದರೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ ಈ 1200 ಕೋಟಿ ಪರಿಹಾರ ಸಾಕೆ?” ಎಂದು ಪ್ರಶ್ನಿಸಿದ್ದಾರೆ.

“ಆರ್ಥಿಕ ಸಂಕಷ್ಟದ ಮಧ್ಯೆ ಪ್ಯಾಕೇಜ್‌ ನೀಡುತ್ತಿರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ನನ್ನಿಂದ ಅಧಿಕಾರ ಕಸಿದಾಗ ಇದೇ ಬಿಎಸ್‌ವೈ ಅವರು ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದಿದ್ದರು. 2 ವರ್ಷದಲ್ಲಿ ಆರ್ಥಿಕ ದುಸ್ಥಿತಿ ಬಂದಿದ್ದು ಹೇಗೆ? ರಾಜಕೀಯಕ್ಕಾಗಿ ಮಾಡಿಕೊಂಡ ನಿಗಮಗಳಿಗೆ ನೂರಾರು ಕೋಟಿ ಹಣವಿರುವಾಗ ಜನರ ಪರಿಹಾರಕ್ಕಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಸೋಂಕಿನಿಂದ ಸಾವು ಹೆಚ್ಚುತ್ತಿದೆ; ಕೇಂದ್ರ ಜನರ ಗಮನ ಬೇರೆಡೆ ಸೆಳೆಯುತ್ತಿದೆ: ರಾಹುಲ್ ಗಾಂಧಿ ಆಕ್ರೋಶ

“ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ ಎಂಬ ಯಡಿಯೂರಪ್ಪ ಮಾತು ಒಪ್ಪೋಣ. ಆದರೆ, ನಿಗಮ-ಮಂಡಳಿಗಳಿಗೆ ಅನಗತ್ಯವಾಗಿ ತುಂಬಲಾಗಿರುವ ಬಿಜೆಪಿ ಕಾರ್ಯಕರ್ತರಿಗೆ ಹಣ ನೀಡಲು ಆರ್ಥಿಕ ಸಂಕಷ್ಟ ಇಲ್ಲವೇ? ಜನರೇ ನೀಡಿದ ಹಣವನ್ನು ಜನರಿಗೆ ನೀಡಲು ಮಾತ್ರ ಸಂಕಷ್ಟ ಎದುರಾಗಿದೆಯೇ? ನಿಮ್ಮ ಕಾರ್ಯಕರ್ತರಿಗೆ ನಿಗಮ-ಮಂಡಳಿ ನೆಪದಲ್ಲಿ ನೀಡುತ್ತಿರುವುದು ಜನರ ಹಣವಲ್ಲವೇ?” ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪ್ಯಾಕೇಜ್‌ನಲ್ಲಿ ಕೃಷಿ ರಂಗವನ್ನು ಹೂ ಬೆಳೆಗಾರರು, ಹಣ್ಣ-ತರಕಾರಿ ಬೆಳೆಗಾರರೆಂದು ಪ್ರತ್ಯೇಕಿಸಲಾಗಿದೆ. ಅತ್ಯಂತ ಅವೈಜ್ಞಾನಿಕ ಕ್ರಮವಿದು. ಒಟ್ಟು ಕೃಷಿ ಕ್ಷೇತ್ರ, ಒಟ್ಟು ರೈತ ಸಮುದಾಯ ಎಂಬ ಪರಿಕಲ್ಪನೆಯೇ ಇಲ್ಲಿಲ್ಲ. ಕೃಷಿ ಕ್ಷೇತ್ರದ ಇತರೆ ಕಸುಬುದಾರರನ್ನು ಪ್ಯಾಕೇಜ್‌ನಿಂದ ಹೊರಗಿಟ್ಟಿದ್ದು ಯಾಕೆ? ಪ್ಯಾಕೇಜ್‌ ಹಿಗ್ಗುತ್ತದೆ ಎಂಬ ಭಯವೇ?” ಅವರು ರಾಜ್ಯ ಸರ್ಕಾರಕ್ಕೆ ಪಶ್ನಿಸಿದ್ದಾರೆ.

“2.10 ಲಕ್ಷ ಚಾಲಕ ವರ್ಗಕ್ಕೆ ₹3000 ಪರಿಹಾರ ನೀಡುವುದಾಗಿ ಹೇಳಲಾಗಿದೆ. ಕಳೆದ ಬಾರಿಯ ಲಾಕ್‌ಡೌನ್‌ನಲ್ಲಿ 7.50 ಲಕ್ಷ ಇದ್ದ ಚಾಲಕರ ಸಂಖ್ಯೆ ಈ ಬಾರಿ 2.10 ಲಕ್ಷಕ್ಕೆ ಇಳಿದಿದೆ. ಚಾಲಕರಿಗೆ ಈಗ ಪರಿಹಾರಕ್ಕಿಂತಲೂ ಮುಖ್ಯವಾಗಿ, ಆರ್‌ಟಿಒ ಶುಲ್ಕಗಳು, ತೆರಿಗೆಯಿಂದ ವಿನಾಯಿತಿ ಸಿಗಬೇಕಿತ್ತು. ಈಗಿನ ಪರಿಹಾರದಿಂದ ಅವರ ಕುಟುಂಬ ನಡೆಯಲು ಸಾಧ್ಯವೇ?” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

“ಕೂಲಿ ಕಾರ್ಮಿಕರು ಸದ್ಯ ನಗರ ತೊರೆದು ಹಳ್ಳಿ ಸೇರಿದ್ದಾರೆ. ಅವರ ಅದಾಯ ವೃದ್ಧಿಗಾಗಿ ನರೇಗಾವನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅವಕಾಶವಿತ್ತು. ನರೇಗಾಕ್ಕೆ ಹೆಚ್ಚಿನ ಅನುದಾನ ಒದಗಿಸಿ, ಗ್ರಾಮೀಣ ಮೂಲಸೌಕರ್ಯ ಹೆಚ್ಚಿಸಿ, ಕೂಲಿ ಕಾರ್ಮಿಕರ ಆದಾಯ ವೃದ್ಧಿಸಲು ಇದ್ದ ಅವಕಾಶವನ್ನು ಸರ್ಕಾರ ಕಳೆದುಕೊಂಡಿದೆ. ಈ ಸರ್ಕಾರಕ್ಕೆ ದೂರಾಲೋಚನೆಗಳೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ಈಗ ನಿಗದಿ ಮಾಡಿರುವ 3 ತಿಂಗಳ ಅವಧಿಯ ಸಾಲ ಮರುಪಾವತಿಯ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕಾಗಿತ್ತು. ಮೂರು ತಿಂಗಳಿಗೆ ಸರ್ಕಾರವೇ ಸಾಲ ಮರು ಪಾವತಿ ಮಾಡಬೇಕಾಗಿತ್ತು ಅಥವಾ ಮರುಪಾವತಿಯನ್ನು ಮನ್ನಾ ಮಾಡಬೇಕಾಗಿತ್ತು. ನಾನು ರೈತರ ಸಾಲ ಮನ್ನಾ ಮಾಡಿ ಸರ್ಕಾರದಿಂದ ಹೊರ ಬಂದಿದ್ದೆ. ಹೀಗಾಗಿ ರೈತರ ಸಾಲದ ಹೊರೆ ದೊಡ್ಡದೇನೂ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

“ನಿತ್ಯ 6 ಲಕ್ಷ ಮಂದಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರ ಪಡೆಯುತ್ತಿರುವುದಾಗಿ ಹೇಳಲಾಗಿದೆ. ಇಂದಿರಾ ಕ್ಯಾಂಟೀನ್‌ಗಳ ಎದುರು ಜನರೇ ಇಲ್ಲ. ಆದರೆ, ಪ್ರತಿ ದಿನ 6 ಲಕ್ಷ ಜನರ ಲೆಕ್ಕ ಕೊಟ್ಟು ಸರ್ಕಾರ ಯಾವ ಕಂಟ್ರಾಕ್ಟರ್‌ ಅನ್ನು ಉದ್ದಾರ ಮಾಡುತ್ತಿದೆ. ಕ್ಯಾಂಟೀನ್‌ಗಳ ಎದುರು ಇರುವ ಜನಸಂದಣಿಯನ್ನು ಸರ್ಕಾರ ವಿಡಿಯೊ ಮಾಡಿ ಬಿಡುಗಡೆ ಮಾಡಬಲ್ಲದೇ?” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ ಉಪ ಚುನಾವಣೆಯಲ್ಲಿ ಕೋವಿಡ್‌ಗೆ ಏಳು ನಾಯಕರು ಬಲಿ: ಸರ್ಕಾರದ ವಿರುದ್ಧ ಮೃತರ ಕುಟುಂಬಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...