Homeಮುಖಪುಟಟ್ರಂಪು ಬಂದಾಗ್ಲೆ ಕರೋನ ಬತ್ತಂತೆ : ಚಂದ್ರೇಗೌಡರ ಕಟ್ಟೆಪುರಾಣ

ಟ್ರಂಪು ಬಂದಾಗ್ಲೆ ಕರೋನ ಬತ್ತಂತೆ : ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ದಿನಬೆಳಗಾಯ್ತೆಂದರೆ ಅವರಿವರ ಮನೆ ಅಟ್ಟಿ ಬಾಗಿಲಿಗೆ ಹೋಗಿ, ಮಾತನಾಡಿಸುತ್ತಿದ್ದ ಜುಮ್ಮಿ, ಈಗ ಮನೆಯೊಳಗೇ ಇರಲು ಒಂದೇ ವಾರಕ್ಕೆ ಸಾಕಾಗಿ ಹೋಗಿತ್ತು. ಆಗ ಬಂದ ವಾಟಿಸ್ಸೆ ನೋಡಿದ ಅವಳು, “ಇನ್ನು ಏಟು ದಿನ ಹಿಂಗೆ ಇರಬೇಕ್ಲ ಮನೆ ವಳಗೆ” ಎಂದಳು.

“ಅದನ್ನು ಮೋದಿ ತೀರಮಾನಸ್ತಾನೆ ಕಣಕ್ಕ”

“ಆ ಕೆರೋನ ಕಾಯ್ಲ ಇರೂ ಜಾಗದಲ್ಲಿ ಅಂಗಿರ್ಲಿ ನಾವಾಕ್ಲ ವಳಗಿರಬೇಕು”

“ಯಾಕಿರಬೇಕು ಅಂದ್ರೇ, ಕರೋನ ವೈರಸ್ ಗಾಳಿಲೆ ಬತ್ತದಂತೆ ಕಣಕ್ಕ”

“ಗಾಳಿಲಿ ಬೆಂಗಳೂರಿಂದ ಇಲ್ಲಿಗಂಟ ಬಂದತ್ಲ”

“ಬೆಂಗಳೂರಲ್ಲ ಕಣಕ್ಕ, ನಮಿಗೆ ತುಮಕೂರು ನಿರ‍್ರು, ಇತ್ಲಗೆ ಮೈಸೂರು ನಿರ‍್ರು. ಅಲ್ಯಾವನಾರ ಕೊರೋನಾ ರ‍್ಯಾಸ್ಕಲ್ ಪವರ್ ಪುಲ್ಲಾಗಿ ಸೀನಿಬುಟ್ಟು ಅದೇ ಟೈಮಿಗೆ ಒಂದು ಬಿರುಗಾಳಿ ಬಂದು ಇಲ್ಯಾಸಿ ಹೋದ್ರೆ ನಾವ್ಯಲ್ಲ ಕೊರೋನಾಗಳಾಯ್ತಿವಿ ಅಂತ ಮೋದಿ ಮನೆವಳಗಿರಿ ಅಂದವುನೆ”

“ಅವುನೇನೊ ಇರತನೆ ನಾವಿರದ್ಯಂಗ್ಲಾ, ಸೊಪ್ಪು ಸ್ಯದೆ ನೋಡಬಾರ್ದೆ, ದನಿಕರಗಳ ಮನೆವಳಗೆ ಏಟುದಿನ ಅಂತ ಕಟಿಗಳಿದ. ಹುಲ್ಲು ಕೊಪ್ಪಲಿಗೋಗಿ ಹುಲ್ಲು ತರಬಾರ್ದೆ, ಸೌದೆ ತರಬಾರ್ದೆ ಬೀದಿ ನಲ್ಲಿಲಿ ನೀರತರಬಾರ್ದೆ”

“ನಿನ್ನ ಕಷ್ಟ ಯಾವು ಅವುನಿಗೆ ಗೊತ್ತಿಲ್ಲ ಕಣಕ್ಕ. ಒಟ್ಟಿನಲ್ಲಿ ಮನೆವಳಗಿರಿ ಈಚೆಗೆ ಬರಬ್ಯಾಡಿ ಅಂದವುನೆ”

“ಇದಿನ್ಯಂಥಾ ಕಾಯಿಲನ್ಲ ಇಲ್ಲಿಗಂಟ ನೋಡಿರಲಿಲ್ಲ”

“ನೋಡಕ್ಕೆ ಕಾಣಬೇಕಲ್ಲಕ್ಕ ಅದೂ ದೇವ್ರಂಗೆ ಕಣ್ಣಿಗೆ ಕಾಣದಿಲವೊ. ಅಂಗೆ ಕೊರೋನಾನು ಕಾಣದಿಲ್ಲ”

“ದೇವುರ ಮಾಡಿದ್ರೆ ಉಸರಾಗದಿಲವೇನ್ಲ”

“ಯಕ್ಕಾ. ಈ ಹಾಳು ಕೊರೊನಾ ಅಂದ್ರೆ ಏನು ತಿಳಕಂಡಿದ್ದೀ? ಅದರ ಒಂದೇಟಿಗೆ ನಿಮ್ಮ ತಿರುಪ್ತಿ ತಿಮ್ಮಣ್ಣ, ಧರುಮಸ್ಥಳದ ಮಂಜಣ್ಣ, ಮ್ಯಾಲುಕೋಟೆ ಚಲುವಣ್ಣನೆ ಬಾಗಲಾಯ್ಕಂಡು ಪರಾರಿಯಾಗ್ಯವರೆ.

ಇನ್ನ ಈ ಲೋಕಲ್ ದೇವುರಂತು ಕೊರೋನ ತಗಲಿ ಸತ್ತೇ ಹೋಗಿರಬವುದು. ಯಾಕೆ ಅಂದ್ರೇ ಅವೂ ಕಣ್ಣಿಗೆ ಕಾಣೋದಿಲ್ಲ ಆ ಕೊರೊನಾಗೂ ಕಾಣದಿಲ್ಲ. ಯಲ್ಲ ಶೂನ್ಯ ಸಮಾಚಾರ”

“ಅದಿನ್ಯಂಗೆ, ಬತ್ತೊ’’

“ನಮ್ಮ ಜನ ಹೇಳೊ ಪ್ರಕಾರ, ಅಮೇರಿಕಾದ ಟ್ರಂಪಿನ ಜೊತೆಲೆ ಬತ್ತಂತೆ ಕಣಕ್ಕ’’

“ಅಮೆರಿಕಾದ ಟ್ರಂಕು ಅಂದ್ರೆ ಅವುನ್ಯಾರ್ಲ’’

‘‘ಅವುನು ಮೋದಿ ಪ್ರೆಂಡು ಕಣಕ್ಕ. ಅವುನೊಂಥರ ಇವುನಂಗೆಯಾ. ಇಬ್ರೂ ಪ್ರಂಡು. ನಾನು ಉಗ್ರಿ ಇದ್ದಿವಿ ನೋಡು ಆ ಥರದ ಪ್ರೆಂಡು. ನೀನೊಂಥರ ಸೋನಿಯಾ ಗಾಂಧಿ ಇದ್ದಂಗೆ”

“ಅಣಕ ವಡಿಬ್ಯಾಡ ಮುಂದಕ್ಕೇಳ್ಳ”

“ಆ ಟ್ರಂಪು ಒಂದು ಸತಿಯ ಮೋದಿಯ ಅಮೆರಿಕಕ್ಕೆ ಕರಿಸಿಗಂಡು, ಬಾಸಣ ಮಾಡಿಸಿದನಂತೆ. ಇವುನು ಬರುವಾಗ ನೀನು ಬಾ ನಮ್ಮ ದೇಸ ಯಂಗದೆ ನೋಡು ಅಂದಿದ್ನಂತೆ. ಆಗವುನು ಬತ್ತಿನಿ ನಡಿ ಅಂದ ಅಂಗೆ ಬಂದೇ ಬುಟ್ಟ’

“ಇನ್ನ ಇಲ್ಲೇ ಇದ್ದನೆ”

“ಅವುನ್ಯಾಕಿದ್ದನಕ್ಕ ಆಗ್ಲೆ ಹೋದ, ಅವುನ ಬತ್ತನೆ ಅಂತ ಈ ಕಡೆವು, ಟ್ರಂಪಿಗೆ ಕಾಣದಂಗೆ ಸ್ಲಂನ್ಯಲ್ಲ ತಗಿಸಿ ಅಲ್ಲಿಗೆ ಬಣ್ಣದ ಪರದೆ ಬುಟ್ಟಿದ್ರಂತೆ”

“ಅದ್ಯಾಕೆ”

“ಸಾಮಾನ್ಯವಾಗಿ ಬಡುವುರು ಬಡತನ ಮುಚ್ಚಿಡತರೆ ನೋಡು, ಅಂಗೆ ಈ ಮೋದಿ ನೋಟುಬ್ಯಾನು ಜಿ.ಎಸ್.ಟಿ ತಂದು, ಜನ ಕ್ಯಲಸ ಕಳಕಂಡು ಬಡುವುರಾಗಿ ಟ್ರಂಪು ಬರೋ ಜಾಗದಲ್ಲಿ ಟೆಂಟಾಕಿದ್ದವಂತೆ”

“ಪಾಪ ಇನ್ನೆಲ್ಲಿಗೋದವುಲ’’

“ನೀನು ಪಾಪ ಅಂತಿಕಣಕ್ಕ ಮೋದಿ ಶಾ ನು ಪಾಪ ಅನ್ನಬೇಕಲ್ಲ. ಅದ್ಕೆ ಅವುರು, ಟ್ರಂಪು ಬರೊ ಜಾಗದ ಟೆಂಟ ಬುಲ್ಡೋಜರ್ ಹಾಕಿ ಮಟ್ಟ ಮಾಡಿ, ಅಲ್ಲಿಗೆ ಪರದೆ ಬುಟ್ಟು, ಡೆಲ್ಲಿ ಕೆಂಪು ಕೋಟೆ, ಕುತುಬ್ ಮಿನಾರ್, ತಾಜ್ ಮಹಲ್ ಚಿತ್ರ ಹಾಕಿದ್ರಂತೆ”

“ಕಡಿಗೂ ಈ ನನ್ನ ಮಕ್ಕಳು ಸಾಬುರು ಕಟ್ಟಿದ್ದ ಸ್ಮಾರಕ ತೋರಿದ್ರೆ ವರತೂ ಇವುರ ಕಟ್ಟಿದ್ದೇನೂ ಇರಲಿಲ್ಲ ನೋಡು” ಎಂದ ಉಗ್ರಿ

‘‘ಇವುರದಿನ್ನ ಲೇಟಲ್ಲವೇನೋ ಇನ್ನ ಸಾವುರಾರು ಗೋರಿ ಕಟ್ಟಬೇಕಾಗ್ಯದೆ. ಅದ್ಕೆ ಕಾಂಗ್ರೆಸ್ಸಿಗೆ ಯಪ್ಪತೊರಸ ಕೊಟ್ಟಿರೊ ನೀವು ನಮಿಗೆ ಯಪ್ಪತ್ತು ತಿಂಗಳನಾರ ಕೊಡಿ ಅಂತ ಮೋದಿ ಕೇಳಿದ್ದ ಗೊತ್ತೆ”

“ಯಪ್ಪತ್ತು ತಿಂಗಳಾಯ್ತಲ್ಲೊ ಆಗ್ಲೆಯ”

“ಅದ್ಕೆ ದೇಸದ ಕತೆನೆ ಮುಗಿತಾ ಅದಲ್ಲೊ”

“ಅದೇನೊ ನಿಜ ಕಣೊ, ಮುಂದಿನ ದಿನ ನ್ಯನಿಸಿಗಂಡ್ರೆ ನ್ಯನಿಸಿಗಳಕ್ಕೆ ಭಯಾಯ್ತದೆ”

“ಅದೇನು ಟ್ರಂಕಿನ ಸುದ್ದಿ ಹೇಳ್ಳ”

‘‘ಸಾರಿ ಕಣಕ್ಕ, ಆ ಟ್ರಂಪು ಬಂದಾಗ್ಲೆ ಕೊರೋನಾ ಬಂದಿರದು ಯಾಕೆ ಅಂದ್ರೆ, ಅಮೆರಿಕ ದೇಸಕ್ಕಾಗ್ಲೆ ಕೊರೊನಾ ಬಂದಿತ್ತಂತೆ. ಅವುನ ಜೊತೆ ಬಂದೋರು, ಅದ ತಂದು ಇಲ್ಲಿ ಬುಟ್ಟು ಹೋದರಂತೆ ಅಮ್ಯಾಲೆ ಹರಡಿಕತ್ತು”

“ಅದಂಗಲ್ಲ ಕಣೊ”

“ಅಂಗೆ ಕಣೊ ಉಗ್ರಿ ಟ್ರಂಪು ಬಂದು ಹೋಗಗಂಟ ಅವುನ ಕಣ್ಣಲ್ಲಿ ಕಣ್ಣಿಟ್ಟು ನೋಡಿಕಳುವಾಗ, ಕಣ್ಣಿಗೆ ಕಾಣದ ಕರೊನ ಯಾರಿಗೂ ಕಾಣಲಿಲ್ಲ. ಅವುನು ಹೋದ ಮ್ಯಾಲೆ ಅಟಗಾಸಿಗತ್ತು”

“ಈಗ್ಯಂಗೆ ವಾಸಿ ಮಾಡಿಕಳದು”

“ಮನಿವಳಿಗಿರಬೇಕಂತೆ”

“ಏಟು ದಿನ”

“ತಿರಿಗ ಪ್ರಧಾನಿ ಹೇಳತನೆ, ಅದ ಕಡ್ಡಿರಂಗ ಹೇಳತನೆ. ಅಲ್ಲಿ ಗಂಟ ಕಡ್ಡಿರಂಗ ಹೇಳಿದಂಗ ಕೇಳಬೇಕು”

“ಅವುನ್ಯಾರರ್ಲ”

“ಏ ಅದೊಂದು ಪೋಲಿಬಡ್ಡೆತ್ತದ್ದು ಕಣಕ್ಕ. ತಲಿ ಕೆಟ್ಟೋಗ್ಯದೆ. ಪಬ್ಲಿಕ್ ಟಿ.ವಿ ವಳಗಡೆ ಕುತುಗಂಡು, ಯಾಕ್ರಿ ಈಚಿಗೆ ಬತ್ತಿರಿ. ಮನೆವಳಗಿರಿ ಇಲ್ಲ ನೇಣಾಯ್ಕಂಡು ಸಾಯಿರಿ ಅಂದವುನೆ”

“ಅಂಗಂದ ಆ ಸೂಳೆಮಗನ್ನ ಯಳಕಂಡು ಬಾರ್ಲ ಇಲ್ಲಿ, ಯಕ್ಕಡದಲ್ಲಿ ಹೊಡಿತಿನಿ”

“ಹೋಗ್ಲಿ ಬುಡಕ್ಕ ಪೂರ್ ಬ್ರಾಹ್ಮಿನ್ ಪೆಲೊ”

*****

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...