Homeಮುಖಪುಟಟ್ರಂಪು ಬಂದಾಗ್ಲೆ ಕರೋನ ಬತ್ತಂತೆ : ಚಂದ್ರೇಗೌಡರ ಕಟ್ಟೆಪುರಾಣ

ಟ್ರಂಪು ಬಂದಾಗ್ಲೆ ಕರೋನ ಬತ್ತಂತೆ : ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ದಿನಬೆಳಗಾಯ್ತೆಂದರೆ ಅವರಿವರ ಮನೆ ಅಟ್ಟಿ ಬಾಗಿಲಿಗೆ ಹೋಗಿ, ಮಾತನಾಡಿಸುತ್ತಿದ್ದ ಜುಮ್ಮಿ, ಈಗ ಮನೆಯೊಳಗೇ ಇರಲು ಒಂದೇ ವಾರಕ್ಕೆ ಸಾಕಾಗಿ ಹೋಗಿತ್ತು. ಆಗ ಬಂದ ವಾಟಿಸ್ಸೆ ನೋಡಿದ ಅವಳು, “ಇನ್ನು ಏಟು ದಿನ ಹಿಂಗೆ ಇರಬೇಕ್ಲ ಮನೆ ವಳಗೆ” ಎಂದಳು.

“ಅದನ್ನು ಮೋದಿ ತೀರಮಾನಸ್ತಾನೆ ಕಣಕ್ಕ”

“ಆ ಕೆರೋನ ಕಾಯ್ಲ ಇರೂ ಜಾಗದಲ್ಲಿ ಅಂಗಿರ್ಲಿ ನಾವಾಕ್ಲ ವಳಗಿರಬೇಕು”

“ಯಾಕಿರಬೇಕು ಅಂದ್ರೇ, ಕರೋನ ವೈರಸ್ ಗಾಳಿಲೆ ಬತ್ತದಂತೆ ಕಣಕ್ಕ”

“ಗಾಳಿಲಿ ಬೆಂಗಳೂರಿಂದ ಇಲ್ಲಿಗಂಟ ಬಂದತ್ಲ”

“ಬೆಂಗಳೂರಲ್ಲ ಕಣಕ್ಕ, ನಮಿಗೆ ತುಮಕೂರು ನಿರ‍್ರು, ಇತ್ಲಗೆ ಮೈಸೂರು ನಿರ‍್ರು. ಅಲ್ಯಾವನಾರ ಕೊರೋನಾ ರ‍್ಯಾಸ್ಕಲ್ ಪವರ್ ಪುಲ್ಲಾಗಿ ಸೀನಿಬುಟ್ಟು ಅದೇ ಟೈಮಿಗೆ ಒಂದು ಬಿರುಗಾಳಿ ಬಂದು ಇಲ್ಯಾಸಿ ಹೋದ್ರೆ ನಾವ್ಯಲ್ಲ ಕೊರೋನಾಗಳಾಯ್ತಿವಿ ಅಂತ ಮೋದಿ ಮನೆವಳಗಿರಿ ಅಂದವುನೆ”

“ಅವುನೇನೊ ಇರತನೆ ನಾವಿರದ್ಯಂಗ್ಲಾ, ಸೊಪ್ಪು ಸ್ಯದೆ ನೋಡಬಾರ್ದೆ, ದನಿಕರಗಳ ಮನೆವಳಗೆ ಏಟುದಿನ ಅಂತ ಕಟಿಗಳಿದ. ಹುಲ್ಲು ಕೊಪ್ಪಲಿಗೋಗಿ ಹುಲ್ಲು ತರಬಾರ್ದೆ, ಸೌದೆ ತರಬಾರ್ದೆ ಬೀದಿ ನಲ್ಲಿಲಿ ನೀರತರಬಾರ್ದೆ”

“ನಿನ್ನ ಕಷ್ಟ ಯಾವು ಅವುನಿಗೆ ಗೊತ್ತಿಲ್ಲ ಕಣಕ್ಕ. ಒಟ್ಟಿನಲ್ಲಿ ಮನೆವಳಗಿರಿ ಈಚೆಗೆ ಬರಬ್ಯಾಡಿ ಅಂದವುನೆ”

“ಇದಿನ್ಯಂಥಾ ಕಾಯಿಲನ್ಲ ಇಲ್ಲಿಗಂಟ ನೋಡಿರಲಿಲ್ಲ”

“ನೋಡಕ್ಕೆ ಕಾಣಬೇಕಲ್ಲಕ್ಕ ಅದೂ ದೇವ್ರಂಗೆ ಕಣ್ಣಿಗೆ ಕಾಣದಿಲವೊ. ಅಂಗೆ ಕೊರೋನಾನು ಕಾಣದಿಲ್ಲ”

“ದೇವುರ ಮಾಡಿದ್ರೆ ಉಸರಾಗದಿಲವೇನ್ಲ”

“ಯಕ್ಕಾ. ಈ ಹಾಳು ಕೊರೊನಾ ಅಂದ್ರೆ ಏನು ತಿಳಕಂಡಿದ್ದೀ? ಅದರ ಒಂದೇಟಿಗೆ ನಿಮ್ಮ ತಿರುಪ್ತಿ ತಿಮ್ಮಣ್ಣ, ಧರುಮಸ್ಥಳದ ಮಂಜಣ್ಣ, ಮ್ಯಾಲುಕೋಟೆ ಚಲುವಣ್ಣನೆ ಬಾಗಲಾಯ್ಕಂಡು ಪರಾರಿಯಾಗ್ಯವರೆ.

ಇನ್ನ ಈ ಲೋಕಲ್ ದೇವುರಂತು ಕೊರೋನ ತಗಲಿ ಸತ್ತೇ ಹೋಗಿರಬವುದು. ಯಾಕೆ ಅಂದ್ರೇ ಅವೂ ಕಣ್ಣಿಗೆ ಕಾಣೋದಿಲ್ಲ ಆ ಕೊರೊನಾಗೂ ಕಾಣದಿಲ್ಲ. ಯಲ್ಲ ಶೂನ್ಯ ಸಮಾಚಾರ”

“ಅದಿನ್ಯಂಗೆ, ಬತ್ತೊ’’

“ನಮ್ಮ ಜನ ಹೇಳೊ ಪ್ರಕಾರ, ಅಮೇರಿಕಾದ ಟ್ರಂಪಿನ ಜೊತೆಲೆ ಬತ್ತಂತೆ ಕಣಕ್ಕ’’

“ಅಮೆರಿಕಾದ ಟ್ರಂಕು ಅಂದ್ರೆ ಅವುನ್ಯಾರ್ಲ’’

‘‘ಅವುನು ಮೋದಿ ಪ್ರೆಂಡು ಕಣಕ್ಕ. ಅವುನೊಂಥರ ಇವುನಂಗೆಯಾ. ಇಬ್ರೂ ಪ್ರಂಡು. ನಾನು ಉಗ್ರಿ ಇದ್ದಿವಿ ನೋಡು ಆ ಥರದ ಪ್ರೆಂಡು. ನೀನೊಂಥರ ಸೋನಿಯಾ ಗಾಂಧಿ ಇದ್ದಂಗೆ”

“ಅಣಕ ವಡಿಬ್ಯಾಡ ಮುಂದಕ್ಕೇಳ್ಳ”

“ಆ ಟ್ರಂಪು ಒಂದು ಸತಿಯ ಮೋದಿಯ ಅಮೆರಿಕಕ್ಕೆ ಕರಿಸಿಗಂಡು, ಬಾಸಣ ಮಾಡಿಸಿದನಂತೆ. ಇವುನು ಬರುವಾಗ ನೀನು ಬಾ ನಮ್ಮ ದೇಸ ಯಂಗದೆ ನೋಡು ಅಂದಿದ್ನಂತೆ. ಆಗವುನು ಬತ್ತಿನಿ ನಡಿ ಅಂದ ಅಂಗೆ ಬಂದೇ ಬುಟ್ಟ’

“ಇನ್ನ ಇಲ್ಲೇ ಇದ್ದನೆ”

“ಅವುನ್ಯಾಕಿದ್ದನಕ್ಕ ಆಗ್ಲೆ ಹೋದ, ಅವುನ ಬತ್ತನೆ ಅಂತ ಈ ಕಡೆವು, ಟ್ರಂಪಿಗೆ ಕಾಣದಂಗೆ ಸ್ಲಂನ್ಯಲ್ಲ ತಗಿಸಿ ಅಲ್ಲಿಗೆ ಬಣ್ಣದ ಪರದೆ ಬುಟ್ಟಿದ್ರಂತೆ”

“ಅದ್ಯಾಕೆ”

“ಸಾಮಾನ್ಯವಾಗಿ ಬಡುವುರು ಬಡತನ ಮುಚ್ಚಿಡತರೆ ನೋಡು, ಅಂಗೆ ಈ ಮೋದಿ ನೋಟುಬ್ಯಾನು ಜಿ.ಎಸ್.ಟಿ ತಂದು, ಜನ ಕ್ಯಲಸ ಕಳಕಂಡು ಬಡುವುರಾಗಿ ಟ್ರಂಪು ಬರೋ ಜಾಗದಲ್ಲಿ ಟೆಂಟಾಕಿದ್ದವಂತೆ”

“ಪಾಪ ಇನ್ನೆಲ್ಲಿಗೋದವುಲ’’

“ನೀನು ಪಾಪ ಅಂತಿಕಣಕ್ಕ ಮೋದಿ ಶಾ ನು ಪಾಪ ಅನ್ನಬೇಕಲ್ಲ. ಅದ್ಕೆ ಅವುರು, ಟ್ರಂಪು ಬರೊ ಜಾಗದ ಟೆಂಟ ಬುಲ್ಡೋಜರ್ ಹಾಕಿ ಮಟ್ಟ ಮಾಡಿ, ಅಲ್ಲಿಗೆ ಪರದೆ ಬುಟ್ಟು, ಡೆಲ್ಲಿ ಕೆಂಪು ಕೋಟೆ, ಕುತುಬ್ ಮಿನಾರ್, ತಾಜ್ ಮಹಲ್ ಚಿತ್ರ ಹಾಕಿದ್ರಂತೆ”

“ಕಡಿಗೂ ಈ ನನ್ನ ಮಕ್ಕಳು ಸಾಬುರು ಕಟ್ಟಿದ್ದ ಸ್ಮಾರಕ ತೋರಿದ್ರೆ ವರತೂ ಇವುರ ಕಟ್ಟಿದ್ದೇನೂ ಇರಲಿಲ್ಲ ನೋಡು” ಎಂದ ಉಗ್ರಿ

‘‘ಇವುರದಿನ್ನ ಲೇಟಲ್ಲವೇನೋ ಇನ್ನ ಸಾವುರಾರು ಗೋರಿ ಕಟ್ಟಬೇಕಾಗ್ಯದೆ. ಅದ್ಕೆ ಕಾಂಗ್ರೆಸ್ಸಿಗೆ ಯಪ್ಪತೊರಸ ಕೊಟ್ಟಿರೊ ನೀವು ನಮಿಗೆ ಯಪ್ಪತ್ತು ತಿಂಗಳನಾರ ಕೊಡಿ ಅಂತ ಮೋದಿ ಕೇಳಿದ್ದ ಗೊತ್ತೆ”

“ಯಪ್ಪತ್ತು ತಿಂಗಳಾಯ್ತಲ್ಲೊ ಆಗ್ಲೆಯ”

“ಅದ್ಕೆ ದೇಸದ ಕತೆನೆ ಮುಗಿತಾ ಅದಲ್ಲೊ”

“ಅದೇನೊ ನಿಜ ಕಣೊ, ಮುಂದಿನ ದಿನ ನ್ಯನಿಸಿಗಂಡ್ರೆ ನ್ಯನಿಸಿಗಳಕ್ಕೆ ಭಯಾಯ್ತದೆ”

“ಅದೇನು ಟ್ರಂಕಿನ ಸುದ್ದಿ ಹೇಳ್ಳ”

‘‘ಸಾರಿ ಕಣಕ್ಕ, ಆ ಟ್ರಂಪು ಬಂದಾಗ್ಲೆ ಕೊರೋನಾ ಬಂದಿರದು ಯಾಕೆ ಅಂದ್ರೆ, ಅಮೆರಿಕ ದೇಸಕ್ಕಾಗ್ಲೆ ಕೊರೊನಾ ಬಂದಿತ್ತಂತೆ. ಅವುನ ಜೊತೆ ಬಂದೋರು, ಅದ ತಂದು ಇಲ್ಲಿ ಬುಟ್ಟು ಹೋದರಂತೆ ಅಮ್ಯಾಲೆ ಹರಡಿಕತ್ತು”

“ಅದಂಗಲ್ಲ ಕಣೊ”

“ಅಂಗೆ ಕಣೊ ಉಗ್ರಿ ಟ್ರಂಪು ಬಂದು ಹೋಗಗಂಟ ಅವುನ ಕಣ್ಣಲ್ಲಿ ಕಣ್ಣಿಟ್ಟು ನೋಡಿಕಳುವಾಗ, ಕಣ್ಣಿಗೆ ಕಾಣದ ಕರೊನ ಯಾರಿಗೂ ಕಾಣಲಿಲ್ಲ. ಅವುನು ಹೋದ ಮ್ಯಾಲೆ ಅಟಗಾಸಿಗತ್ತು”

“ಈಗ್ಯಂಗೆ ವಾಸಿ ಮಾಡಿಕಳದು”

“ಮನಿವಳಿಗಿರಬೇಕಂತೆ”

“ಏಟು ದಿನ”

“ತಿರಿಗ ಪ್ರಧಾನಿ ಹೇಳತನೆ, ಅದ ಕಡ್ಡಿರಂಗ ಹೇಳತನೆ. ಅಲ್ಲಿ ಗಂಟ ಕಡ್ಡಿರಂಗ ಹೇಳಿದಂಗ ಕೇಳಬೇಕು”

“ಅವುನ್ಯಾರರ್ಲ”

“ಏ ಅದೊಂದು ಪೋಲಿಬಡ್ಡೆತ್ತದ್ದು ಕಣಕ್ಕ. ತಲಿ ಕೆಟ್ಟೋಗ್ಯದೆ. ಪಬ್ಲಿಕ್ ಟಿ.ವಿ ವಳಗಡೆ ಕುತುಗಂಡು, ಯಾಕ್ರಿ ಈಚಿಗೆ ಬತ್ತಿರಿ. ಮನೆವಳಗಿರಿ ಇಲ್ಲ ನೇಣಾಯ್ಕಂಡು ಸಾಯಿರಿ ಅಂದವುನೆ”

“ಅಂಗಂದ ಆ ಸೂಳೆಮಗನ್ನ ಯಳಕಂಡು ಬಾರ್ಲ ಇಲ್ಲಿ, ಯಕ್ಕಡದಲ್ಲಿ ಹೊಡಿತಿನಿ”

“ಹೋಗ್ಲಿ ಬುಡಕ್ಕ ಪೂರ್ ಬ್ರಾಹ್ಮಿನ್ ಪೆಲೊ”

*****

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...