Homeಮುಖಪುಟಟ್ರಂಪು ಬಂದಾಗ್ಲೆ ಕರೋನ ಬತ್ತಂತೆ : ಚಂದ್ರೇಗೌಡರ ಕಟ್ಟೆಪುರಾಣ

ಟ್ರಂಪು ಬಂದಾಗ್ಲೆ ಕರೋನ ಬತ್ತಂತೆ : ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ದಿನಬೆಳಗಾಯ್ತೆಂದರೆ ಅವರಿವರ ಮನೆ ಅಟ್ಟಿ ಬಾಗಿಲಿಗೆ ಹೋಗಿ, ಮಾತನಾಡಿಸುತ್ತಿದ್ದ ಜುಮ್ಮಿ, ಈಗ ಮನೆಯೊಳಗೇ ಇರಲು ಒಂದೇ ವಾರಕ್ಕೆ ಸಾಕಾಗಿ ಹೋಗಿತ್ತು. ಆಗ ಬಂದ ವಾಟಿಸ್ಸೆ ನೋಡಿದ ಅವಳು, “ಇನ್ನು ಏಟು ದಿನ ಹಿಂಗೆ ಇರಬೇಕ್ಲ ಮನೆ ವಳಗೆ” ಎಂದಳು.

“ಅದನ್ನು ಮೋದಿ ತೀರಮಾನಸ್ತಾನೆ ಕಣಕ್ಕ”

“ಆ ಕೆರೋನ ಕಾಯ್ಲ ಇರೂ ಜಾಗದಲ್ಲಿ ಅಂಗಿರ್ಲಿ ನಾವಾಕ್ಲ ವಳಗಿರಬೇಕು”

“ಯಾಕಿರಬೇಕು ಅಂದ್ರೇ, ಕರೋನ ವೈರಸ್ ಗಾಳಿಲೆ ಬತ್ತದಂತೆ ಕಣಕ್ಕ”

“ಗಾಳಿಲಿ ಬೆಂಗಳೂರಿಂದ ಇಲ್ಲಿಗಂಟ ಬಂದತ್ಲ”

“ಬೆಂಗಳೂರಲ್ಲ ಕಣಕ್ಕ, ನಮಿಗೆ ತುಮಕೂರು ನಿರ‍್ರು, ಇತ್ಲಗೆ ಮೈಸೂರು ನಿರ‍್ರು. ಅಲ್ಯಾವನಾರ ಕೊರೋನಾ ರ‍್ಯಾಸ್ಕಲ್ ಪವರ್ ಪುಲ್ಲಾಗಿ ಸೀನಿಬುಟ್ಟು ಅದೇ ಟೈಮಿಗೆ ಒಂದು ಬಿರುಗಾಳಿ ಬಂದು ಇಲ್ಯಾಸಿ ಹೋದ್ರೆ ನಾವ್ಯಲ್ಲ ಕೊರೋನಾಗಳಾಯ್ತಿವಿ ಅಂತ ಮೋದಿ ಮನೆವಳಗಿರಿ ಅಂದವುನೆ”

“ಅವುನೇನೊ ಇರತನೆ ನಾವಿರದ್ಯಂಗ್ಲಾ, ಸೊಪ್ಪು ಸ್ಯದೆ ನೋಡಬಾರ್ದೆ, ದನಿಕರಗಳ ಮನೆವಳಗೆ ಏಟುದಿನ ಅಂತ ಕಟಿಗಳಿದ. ಹುಲ್ಲು ಕೊಪ್ಪಲಿಗೋಗಿ ಹುಲ್ಲು ತರಬಾರ್ದೆ, ಸೌದೆ ತರಬಾರ್ದೆ ಬೀದಿ ನಲ್ಲಿಲಿ ನೀರತರಬಾರ್ದೆ”

“ನಿನ್ನ ಕಷ್ಟ ಯಾವು ಅವುನಿಗೆ ಗೊತ್ತಿಲ್ಲ ಕಣಕ್ಕ. ಒಟ್ಟಿನಲ್ಲಿ ಮನೆವಳಗಿರಿ ಈಚೆಗೆ ಬರಬ್ಯಾಡಿ ಅಂದವುನೆ”

“ಇದಿನ್ಯಂಥಾ ಕಾಯಿಲನ್ಲ ಇಲ್ಲಿಗಂಟ ನೋಡಿರಲಿಲ್ಲ”

“ನೋಡಕ್ಕೆ ಕಾಣಬೇಕಲ್ಲಕ್ಕ ಅದೂ ದೇವ್ರಂಗೆ ಕಣ್ಣಿಗೆ ಕಾಣದಿಲವೊ. ಅಂಗೆ ಕೊರೋನಾನು ಕಾಣದಿಲ್ಲ”

“ದೇವುರ ಮಾಡಿದ್ರೆ ಉಸರಾಗದಿಲವೇನ್ಲ”

“ಯಕ್ಕಾ. ಈ ಹಾಳು ಕೊರೊನಾ ಅಂದ್ರೆ ಏನು ತಿಳಕಂಡಿದ್ದೀ? ಅದರ ಒಂದೇಟಿಗೆ ನಿಮ್ಮ ತಿರುಪ್ತಿ ತಿಮ್ಮಣ್ಣ, ಧರುಮಸ್ಥಳದ ಮಂಜಣ್ಣ, ಮ್ಯಾಲುಕೋಟೆ ಚಲುವಣ್ಣನೆ ಬಾಗಲಾಯ್ಕಂಡು ಪರಾರಿಯಾಗ್ಯವರೆ.

ಇನ್ನ ಈ ಲೋಕಲ್ ದೇವುರಂತು ಕೊರೋನ ತಗಲಿ ಸತ್ತೇ ಹೋಗಿರಬವುದು. ಯಾಕೆ ಅಂದ್ರೇ ಅವೂ ಕಣ್ಣಿಗೆ ಕಾಣೋದಿಲ್ಲ ಆ ಕೊರೊನಾಗೂ ಕಾಣದಿಲ್ಲ. ಯಲ್ಲ ಶೂನ್ಯ ಸಮಾಚಾರ”

“ಅದಿನ್ಯಂಗೆ, ಬತ್ತೊ’’

“ನಮ್ಮ ಜನ ಹೇಳೊ ಪ್ರಕಾರ, ಅಮೇರಿಕಾದ ಟ್ರಂಪಿನ ಜೊತೆಲೆ ಬತ್ತಂತೆ ಕಣಕ್ಕ’’

“ಅಮೆರಿಕಾದ ಟ್ರಂಕು ಅಂದ್ರೆ ಅವುನ್ಯಾರ್ಲ’’

‘‘ಅವುನು ಮೋದಿ ಪ್ರೆಂಡು ಕಣಕ್ಕ. ಅವುನೊಂಥರ ಇವುನಂಗೆಯಾ. ಇಬ್ರೂ ಪ್ರಂಡು. ನಾನು ಉಗ್ರಿ ಇದ್ದಿವಿ ನೋಡು ಆ ಥರದ ಪ್ರೆಂಡು. ನೀನೊಂಥರ ಸೋನಿಯಾ ಗಾಂಧಿ ಇದ್ದಂಗೆ”

“ಅಣಕ ವಡಿಬ್ಯಾಡ ಮುಂದಕ್ಕೇಳ್ಳ”

“ಆ ಟ್ರಂಪು ಒಂದು ಸತಿಯ ಮೋದಿಯ ಅಮೆರಿಕಕ್ಕೆ ಕರಿಸಿಗಂಡು, ಬಾಸಣ ಮಾಡಿಸಿದನಂತೆ. ಇವುನು ಬರುವಾಗ ನೀನು ಬಾ ನಮ್ಮ ದೇಸ ಯಂಗದೆ ನೋಡು ಅಂದಿದ್ನಂತೆ. ಆಗವುನು ಬತ್ತಿನಿ ನಡಿ ಅಂದ ಅಂಗೆ ಬಂದೇ ಬುಟ್ಟ’

“ಇನ್ನ ಇಲ್ಲೇ ಇದ್ದನೆ”

“ಅವುನ್ಯಾಕಿದ್ದನಕ್ಕ ಆಗ್ಲೆ ಹೋದ, ಅವುನ ಬತ್ತನೆ ಅಂತ ಈ ಕಡೆವು, ಟ್ರಂಪಿಗೆ ಕಾಣದಂಗೆ ಸ್ಲಂನ್ಯಲ್ಲ ತಗಿಸಿ ಅಲ್ಲಿಗೆ ಬಣ್ಣದ ಪರದೆ ಬುಟ್ಟಿದ್ರಂತೆ”

“ಅದ್ಯಾಕೆ”

“ಸಾಮಾನ್ಯವಾಗಿ ಬಡುವುರು ಬಡತನ ಮುಚ್ಚಿಡತರೆ ನೋಡು, ಅಂಗೆ ಈ ಮೋದಿ ನೋಟುಬ್ಯಾನು ಜಿ.ಎಸ್.ಟಿ ತಂದು, ಜನ ಕ್ಯಲಸ ಕಳಕಂಡು ಬಡುವುರಾಗಿ ಟ್ರಂಪು ಬರೋ ಜಾಗದಲ್ಲಿ ಟೆಂಟಾಕಿದ್ದವಂತೆ”

“ಪಾಪ ಇನ್ನೆಲ್ಲಿಗೋದವುಲ’’

“ನೀನು ಪಾಪ ಅಂತಿಕಣಕ್ಕ ಮೋದಿ ಶಾ ನು ಪಾಪ ಅನ್ನಬೇಕಲ್ಲ. ಅದ್ಕೆ ಅವುರು, ಟ್ರಂಪು ಬರೊ ಜಾಗದ ಟೆಂಟ ಬುಲ್ಡೋಜರ್ ಹಾಕಿ ಮಟ್ಟ ಮಾಡಿ, ಅಲ್ಲಿಗೆ ಪರದೆ ಬುಟ್ಟು, ಡೆಲ್ಲಿ ಕೆಂಪು ಕೋಟೆ, ಕುತುಬ್ ಮಿನಾರ್, ತಾಜ್ ಮಹಲ್ ಚಿತ್ರ ಹಾಕಿದ್ರಂತೆ”

“ಕಡಿಗೂ ಈ ನನ್ನ ಮಕ್ಕಳು ಸಾಬುರು ಕಟ್ಟಿದ್ದ ಸ್ಮಾರಕ ತೋರಿದ್ರೆ ವರತೂ ಇವುರ ಕಟ್ಟಿದ್ದೇನೂ ಇರಲಿಲ್ಲ ನೋಡು” ಎಂದ ಉಗ್ರಿ

‘‘ಇವುರದಿನ್ನ ಲೇಟಲ್ಲವೇನೋ ಇನ್ನ ಸಾವುರಾರು ಗೋರಿ ಕಟ್ಟಬೇಕಾಗ್ಯದೆ. ಅದ್ಕೆ ಕಾಂಗ್ರೆಸ್ಸಿಗೆ ಯಪ್ಪತೊರಸ ಕೊಟ್ಟಿರೊ ನೀವು ನಮಿಗೆ ಯಪ್ಪತ್ತು ತಿಂಗಳನಾರ ಕೊಡಿ ಅಂತ ಮೋದಿ ಕೇಳಿದ್ದ ಗೊತ್ತೆ”

“ಯಪ್ಪತ್ತು ತಿಂಗಳಾಯ್ತಲ್ಲೊ ಆಗ್ಲೆಯ”

“ಅದ್ಕೆ ದೇಸದ ಕತೆನೆ ಮುಗಿತಾ ಅದಲ್ಲೊ”

“ಅದೇನೊ ನಿಜ ಕಣೊ, ಮುಂದಿನ ದಿನ ನ್ಯನಿಸಿಗಂಡ್ರೆ ನ್ಯನಿಸಿಗಳಕ್ಕೆ ಭಯಾಯ್ತದೆ”

“ಅದೇನು ಟ್ರಂಕಿನ ಸುದ್ದಿ ಹೇಳ್ಳ”

‘‘ಸಾರಿ ಕಣಕ್ಕ, ಆ ಟ್ರಂಪು ಬಂದಾಗ್ಲೆ ಕೊರೋನಾ ಬಂದಿರದು ಯಾಕೆ ಅಂದ್ರೆ, ಅಮೆರಿಕ ದೇಸಕ್ಕಾಗ್ಲೆ ಕೊರೊನಾ ಬಂದಿತ್ತಂತೆ. ಅವುನ ಜೊತೆ ಬಂದೋರು, ಅದ ತಂದು ಇಲ್ಲಿ ಬುಟ್ಟು ಹೋದರಂತೆ ಅಮ್ಯಾಲೆ ಹರಡಿಕತ್ತು”

“ಅದಂಗಲ್ಲ ಕಣೊ”

“ಅಂಗೆ ಕಣೊ ಉಗ್ರಿ ಟ್ರಂಪು ಬಂದು ಹೋಗಗಂಟ ಅವುನ ಕಣ್ಣಲ್ಲಿ ಕಣ್ಣಿಟ್ಟು ನೋಡಿಕಳುವಾಗ, ಕಣ್ಣಿಗೆ ಕಾಣದ ಕರೊನ ಯಾರಿಗೂ ಕಾಣಲಿಲ್ಲ. ಅವುನು ಹೋದ ಮ್ಯಾಲೆ ಅಟಗಾಸಿಗತ್ತು”

“ಈಗ್ಯಂಗೆ ವಾಸಿ ಮಾಡಿಕಳದು”

“ಮನಿವಳಿಗಿರಬೇಕಂತೆ”

“ಏಟು ದಿನ”

“ತಿರಿಗ ಪ್ರಧಾನಿ ಹೇಳತನೆ, ಅದ ಕಡ್ಡಿರಂಗ ಹೇಳತನೆ. ಅಲ್ಲಿ ಗಂಟ ಕಡ್ಡಿರಂಗ ಹೇಳಿದಂಗ ಕೇಳಬೇಕು”

“ಅವುನ್ಯಾರರ್ಲ”

“ಏ ಅದೊಂದು ಪೋಲಿಬಡ್ಡೆತ್ತದ್ದು ಕಣಕ್ಕ. ತಲಿ ಕೆಟ್ಟೋಗ್ಯದೆ. ಪಬ್ಲಿಕ್ ಟಿ.ವಿ ವಳಗಡೆ ಕುತುಗಂಡು, ಯಾಕ್ರಿ ಈಚಿಗೆ ಬತ್ತಿರಿ. ಮನೆವಳಗಿರಿ ಇಲ್ಲ ನೇಣಾಯ್ಕಂಡು ಸಾಯಿರಿ ಅಂದವುನೆ”

“ಅಂಗಂದ ಆ ಸೂಳೆಮಗನ್ನ ಯಳಕಂಡು ಬಾರ್ಲ ಇಲ್ಲಿ, ಯಕ್ಕಡದಲ್ಲಿ ಹೊಡಿತಿನಿ”

“ಹೋಗ್ಲಿ ಬುಡಕ್ಕ ಪೂರ್ ಬ್ರಾಹ್ಮಿನ್ ಪೆಲೊ”

*****

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...