Homeಅಂಕಣಗಳುಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ... ನಾವೇನು ಮಾಡಬೇಕು?

ಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ… ನಾವೇನು ಮಾಡಬೇಕು?

ಟಿವಿ ಆಂಕರ್‌ಗಳು ಕಿರುಚುವ ರೀತಿ, ನಿರ್ದಿಷ್ಟ ಸಮುದಾಯ, ಗುಂಪು, ವ್ಯಕ್ತಿಗಳ ವಿರುದ್ಧ ಪ್ರಚೋದಿಸುವ ರೀತಿಯನ್ನು ನೋಡಿದವರಿಗೆ ಸ್ಪಷ್ಟವಾಗುವ ಸಂಗತಿ ಏನೆಂದರೆ, ಅವರು ಲಿಂಚಿಂಗ್ (ಗುಂಪು ಹತ್ಯೆ)ಗೆ ದಾರಿ ಮಾಡಿಕೊಡುತ್ತಿದ್ದಾರೆ.

- Advertisement -
- Advertisement -

ಇದೀಗ ತಾನೇ ಸುಪ್ರೀಂಕೋರ್ಟು ಟಿವಿ ಚಾನೆಲ್‍ಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ‘ಯುಪಿಎಸ್‍ಸಿ ಜಿಹಾದ್’ ಹೆಸರಿನಲ್ಲಿ ಸುಳ್ಳು ಮತ್ತು ದ್ವೇಷಪೂರಿತವಾದ ವರದಿ ಪ್ರಸಾರ ಮಾಡಿದ ಸುದರ್ಶನ್ ಟಿವಿಯ ವಿಚಾರದಲ್ಲಿ ಕೆಲವು ಸುಪ್ರೀಂಕೋರ್ಟು ನ್ಯಾಯಾಧೀಶರು ನಿಷ್ಠುರವಾದ ಮಾತುಗಳನ್ನು ಆಡಿದ್ದಾರೆ. ಆದರೆ, ಸಮಸ್ಯೆಯೇನೆಂದರೆ ಮಾಧ್ಯಮಗಳನ್ನು ನಿಯಂತ್ರಣ ಮಾಡಬೇಕೆಂದು ಕೋರ್ಟು ಸೂಚಿಸಿದಲ್ಲಿ, ಆ ನಿಯಂತ್ರಣವನ್ನು ಯಾರು ಮಾಡುತ್ತಾರೆ ಮತ್ತು ಯಾರನ್ನು ಮಾಡುತ್ತಾರೆ ಎಂಬ ಪ್ರಶ್ನೆ ಏಳುತ್ತದೆ. ಏಕೆಂದರೆ ಎಲ್ಲಾ ನಿಯಂತ್ರಕ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರವು ನಿಯಂತ್ರಣಕ್ಕೆ ತೆಗೆದುಕೊಂಡಾಗಿದೆ. ಅಂತಹ ಸಾಧ್ಯತೆಯು ಬೇರೆ ಸರ್ಕಾರಗಳಿರುವಾಗಲೂ ಇದೆ. ಹೀಗಾಗಿ ಮಾಧ್ಯಮ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಯಾರೂ ಇಂತಹ ನಿಯಂತ್ರಣವನ್ನು ಎಂತಹ ಸಂದರ್ಭದಲ್ಲೂ ಒಪ್ಪುವುದಿಲ್ಲ.

ಹಾಗೆಂದು, ಮಾಧ್ಯಮಗಳ ಮೇಲೆ ಯಾರ ಕಡಿವಾಣವೂ ಇರಬಾರದೇ ಎಂಬ ಪ್ರಶ್ನೆಯು ಏಳದೇ ಇರದು. ಏಕೆಂದರೆ ಇದುವರೆಗೆ ಪ್ರಭಾವಶಾಲಿಗಳಾಗಿರುವ ಟಿವಿ ಚಾನೆಲ್‍ಗಳಲ್ಲಿ ಹಲವು ಮಾಧ್ಯಮ ಸಂಸ್ಥೆಗಳಾಗಿ ಉಳಿದಿಲ್ಲ; ಅವು ಲಿಂಚಿಂಗ್ ಕೇಂದ್ರಗಳಾಗಿವೆ. ಇವು ಟಿವಿ ಚಾನೆಲ್‍ಗಳಿಗೆ ಮಾತ್ರ ಸೀಮಿತವಾಗಿಲ್ಲ. ಹಲವಾರು ಪತ್ರಿಕೆಗಳೂ ಅದನ್ನು ಮಾಡಿವೆ. ಪ್ರಜಾತಾಂತ್ರಿಕ ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ನಿಷ್ಠುರವಾದ ಅಭಿಪ್ರಾಯವನ್ನು ಮುಂದಿಟ್ಟ ಸಾಹಿತಿಗಳ ಮೇಲೆ ಅಂತಹ ಸಮರವನ್ನು ಕನ್ನಡದ ಪತ್ರಿಕೆಯ ಸಂಪಾದಕರೊಬ್ಬರು ಆರಂಭಿಸಿದ್ದರು. ಓದುಗರ ಅಭಿಪ್ರಾಯದ ಹೆಸರಿನಲ್ಲಿ ಅವರುಗಳ ಮೇಲೆ ವಾಗ್ದಾಳಿಯನ್ನು ನಡೆಸಲಾಯಿತು. ಈ ಓದುಗರ ಅಭಿಪ್ರಾಯ ಎನ್ನುವುದಕ್ಕೊಂದು ಸಾಧ್ಯತೆ ಇರುತ್ತದೆ. ನಿರ್ದಿಷ್ಟವಾದ ರೀತಿಯ ಅಭಿಪ್ರಾಯವನ್ನು ಜನರು ವ್ಯಕ್ತಪಡಿಸುತ್ತಿದ್ದಾರೆ ಎಂಬುದನ್ನು ಬಿಂಬಿಸಿ, ತಾವು ಆ ಜನಾಭಿಪ್ರಾಯವನ್ನು ಎತ್ತಿ ಹಿಡಿಯುತ್ತಿದ್ದೇವೆ ಎಂದು ಮಾಡುವುದು. ಹಾಗೆ ಮಾಡುವ ಮೂಲಕ ಇತರ ಓದುಗರಿಗೂ ಇದೇ ಪ್ರಬಲವಾದ ಜನಾಭಿಪ್ರಾಯ ಎಂಬ ಭಾವನೆ ಮೂಡುವಂತಾಗುತ್ತದೆ. ಸಮಾಜದ ಪ್ರಬಲ ಅಭಿಪ್ರಾಯ ಯಾವುದೋ ಅದರ ಜೊತೆಗೆ ತೂರಿಕೊಂಡು ಹೋಗುವ ಮಂದೆ ಸ್ವಭಾವ ಯಾವುದೇ ಸಮಾಜದಲ್ಲಿ ಸಾಕಷ್ಟಿರುವುದರಿಂದ, ನಿರ್ದಿಷ್ಟವಾದ ಜನಾಭಿಪ್ರಾಯವನ್ನು ಆ ಮೂಲಕ ಉತ್ಪಾದಿಸಲಾಗುತ್ತದೆ.

ಇಂತಹುದನ್ನು ಮಾಡಲು ಶುರು ಮಾಡಿದ ಮಾಧ್ಯಮಗಳು ಯಾವ ಮಟ್ಟಕ್ಕೆ ಮುಟ್ಟಿದವೆಂದರೆ, ಕರ್ನಾಟಕದ ಖ್ಯಾತ ವಿದ್ವಾಂಸ ಕಲಬುರ್ಗಿಯವರಿಂದ ಅವರದ್ದಲ್ಲದ ಹೇಳಿಕೆಯನ್ನು ತಪ್ಪೆಂದು ಬಿಂಬಿಸಿ ಅವರಿಂದ ಕ್ಷಮೆಯನ್ನೂ ಕೇಳಿಸಿಬಿಟ್ಟವು. ಅದೇ ಸಂಗತಿಯು ಅವರ ಹತ್ಯೆ ಮಾಡಲು ಹೊರಟ ಕಾಲಾಳುವಿಗೆ ಉತ್ತೇಜಿಸಲು ಅನುಕೂಲ ಮಾಡಿಕೊಟ್ಟಿತು.

ಎಂ ಎಂ ಕಲಬುರ್ಗಿ. ಚಿತ್ರಕೃಪೆ: Deccan Herald

ಇಂಥದ್ದೇ ಕೆಲಸವನ್ನು ಉಮರ್ ಖಾಲಿದ್, ಕನ್ಹಯ್ಯ ಕುಮಾರ್ ಥರದ ಜೆಎನ್‍ಯು ವಿದ್ಯಾರ್ಥಿಗಳ ಮೇಲೂ ಮಾಡಲಾಯಿತು. 8-10 ತಿಂಗಳ ಕೆಳಗೆ ಅಮೂಲ್ಯ ಎಂಬ ವಿದ್ಯಾರ್ಥಿನಿಯು ತನ್ನ ಬಾಲಿಶತನದ ಕಾರಣಕ್ಕಾಗಿ, ಸಾರ್ವಜನಿಕ ಸಭೆಯೊಂದರಲ್ಲಿ ಏನೋ ಹೇಳಲು ಹೋಗಿ ಇನ್ನೇನೋ ಹೇಳಿದಾಗಲೂ ಅದೇ ನಡೆಯಿತು. ಅಂದು ಕನ್ನಡದ ಟಿವಿ ಚಾನೆಲ್‍ನಲ್ಲಿ ಆಂಕರ್ ಕೂಗಿದ್ದನ್ನು ಕೇಳಿದ ಅಧಿಕಾರಿಯೊಬ್ಬರು ಗಾಬರಿಯಾಗಿ ಫೋನ್ ಮಾಡಿದರು.He  is asking for her blood, how can he do like that? Something has to be done about it ಎಂದಿದ್ದರು.

ತೀರಾ ಇತ್ತೀಚೆಗೆ ಕಾಂಗ್ರೆಸ್‍ನ ರಾಜ್ಯಸಭಾ ಸದಸ್ಯ ರಾಜೀವ್ ತ್ಯಾಗಿಯವರು ಟಿವಿ ಚಾನೆಲ್ಲೊಂದರಲ್ಲಿ ಪ್ಯಾನೆಲ್ ಚರ್ಚೆ ಮುಗಿಸಿಕೊಂಡು ಮನೆಗೆ ಹೋಗಿ ಹೃದಯಾಘಾತದಿಂದ ತೀರಿಕೊಂಡರು. ಸಾಯುವ ಮುನ್ನ ಟಿವಿ ಆಂಕರ್‌ಗಳ ಕುರಿತು ಅವರಾಡಿದ ಕೊನೆ ಮಾತೆಂದರೆ, ‘ಇವರು ನನ್ನನ್ನು ಅವಹೇಳನ ಮಾಡಿದರು, ನನ್ನನ್ನು ಕೊಂದುಬಿಟ್ಟರು’. ಇದನ್ನು ಕೇಳಿದ ಇನ್ನೊಬ್ಬ ಕಾಂಗ್ರೆಸ್ ವಕ್ತಾರ ಪ್ರೊ.ಗೌರವ್ ವಲ್ಲಭ್, ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್‍ರಿಗೆ ‘ಟಿವಿಗೊಂದು ನೀತಿ ಸಂಹಿತೆ ರೂಪಿಸಲು’ ಆನ್‍ಲೈನ್ ಪಿಟಿಷನ್ ಆರಂಭಿಸಿದ್ದಾರೆ.

ರಾಜೀವ್ ತ್ಯಾಗಿ:Photo Courtesy: National Herald

ಟಿವಿ ಆಂಕರ್‌ಗಳು ಕಿರುಚುವ ರೀತಿ, ನಿರ್ದಿಷ್ಟ ಸಮುದಾಯ, ಗುಂಪು, ವ್ಯಕ್ತಿಗಳ ವಿರುದ್ಧ ಪ್ರಚೋದಿಸುವ ರೀತಿಯನ್ನು ನೋಡಿದವರಿಗೆ ಸ್ಪಷ್ಟವಾಗುವ ಸಂಗತಿ ಏನೆಂದರೆ, ಅವರು ಲಿಂಚಿಂಗ್ (ಗುಂಪು ಹತ್ಯೆ)ಗೆ ದಾರಿ ಮಾಡಿಕೊಡುತ್ತಿದ್ದಾರೆ. ಬೇರೆ ಬೇರೆ ರೀತಿಯ ಲಿಂಚಿಂಗ್‍ಗೆ ಸಮ್ಮತಿಯನ್ನು ಉತ್ಪಾದಿಸುತ್ತಿದ್ದಾರೆ. ಇದರಲ್ಲಿ ಸಂದೇಹವೇ ಇಲ್ಲ.

ಎಂದಿನಂತೆ ಪ್ರಶ್ನೆಯಿರುವುದು ಇದರ ಕುರಿತು ಇನ್ನಷ್ಟು ವಿಶ್ಲೇಷಣೆ ಮಾಡುವುದರಲ್ಲಲ್ಲ. ಬದಲಿಗೆ ಇದನ್ನು ಹೇಗೆ ಬದಲಿಸುತ್ತೇವೆ ಎಂಬುದರಲ್ಲಿ. ಇಂದಿನ ಪರಿಸ್ಥಿತಿಯಲ್ಲಿ ಟಿವಿ ಚಾನೆಲ್‍ಗಳ ಮೇಲೆ ನಿಯಂತ್ರಣ ಹೇರಿ ಎಂದು ಸರ್ಕಾರ ಅಥವಾ ನ್ಯಾಯಾಲಯದ ಮೊರೆ ಹೋಗುವುದು ಮೂರ್ಖತನದ ಕೆಲಸವಾದೀತು. ಬದಲಿಗೆ ಪ್ರಜಾತಾಂತ್ರಿಕವಾದ ಮಾಧ್ಯಮ ಸಾಧ್ಯತೆಗಳನ್ನು ಅವಿಷ್ಕರಿಸಿ ವ್ಯಾಪಕವಾದ ಮತ್ತು ಬೃಹತ್ತಾದ ಪ್ರಮಾಣದಲ್ಲಿ ಜಾರಿಗೊಳಿಸುವುದು ಮಾತ್ರ ಇದನ್ನು ತಡೆಯಬಲ್ಲುದು ಮತ್ತು ಇಂದಿನ ಮುಖ್ಯವಾಹಿನಿಯನ್ನು ಅಪ್ರಸ್ತುತಗೊಳಿಸಬಲ್ಲದು. ಆ ನಿಟ್ಟಿನಲ್ಲಿ ಈಗಾಗಲೇ ದೇಶದ ಕೆಲವೆಡೆ ಸೃಜನಶೀಲವಾದ ಪ್ರಯತ್ನಗಳು ನಡೆಯುತ್ತಿದೆ. ಗೌರಿ ಮೀಡಿಯಾ ಸಹಾ ಅದಕ್ಕೆ ಪೂರಕವಾದ ಕೆಲಸದಲ್ಲಿ ತೊಡಗಿದೆ. ನಮ್ಮ ಪ್ರಜ್ಞಾವಂತ ಓದುಗರೂ ಜೊತೆಯಾಗುತ್ತಾರೆಂಬ ವಿಶ್ವಾಸವಿದೆ.


ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...