Homeಅಂಕಣಗಳುಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ... ನಾವೇನು ಮಾಡಬೇಕು?

ಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ… ನಾವೇನು ಮಾಡಬೇಕು?

ಟಿವಿ ಆಂಕರ್‌ಗಳು ಕಿರುಚುವ ರೀತಿ, ನಿರ್ದಿಷ್ಟ ಸಮುದಾಯ, ಗುಂಪು, ವ್ಯಕ್ತಿಗಳ ವಿರುದ್ಧ ಪ್ರಚೋದಿಸುವ ರೀತಿಯನ್ನು ನೋಡಿದವರಿಗೆ ಸ್ಪಷ್ಟವಾಗುವ ಸಂಗತಿ ಏನೆಂದರೆ, ಅವರು ಲಿಂಚಿಂಗ್ (ಗುಂಪು ಹತ್ಯೆ)ಗೆ ದಾರಿ ಮಾಡಿಕೊಡುತ್ತಿದ್ದಾರೆ.

- Advertisement -
- Advertisement -

ಇದೀಗ ತಾನೇ ಸುಪ್ರೀಂಕೋರ್ಟು ಟಿವಿ ಚಾನೆಲ್‍ಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ‘ಯುಪಿಎಸ್‍ಸಿ ಜಿಹಾದ್’ ಹೆಸರಿನಲ್ಲಿ ಸುಳ್ಳು ಮತ್ತು ದ್ವೇಷಪೂರಿತವಾದ ವರದಿ ಪ್ರಸಾರ ಮಾಡಿದ ಸುದರ್ಶನ್ ಟಿವಿಯ ವಿಚಾರದಲ್ಲಿ ಕೆಲವು ಸುಪ್ರೀಂಕೋರ್ಟು ನ್ಯಾಯಾಧೀಶರು ನಿಷ್ಠುರವಾದ ಮಾತುಗಳನ್ನು ಆಡಿದ್ದಾರೆ. ಆದರೆ, ಸಮಸ್ಯೆಯೇನೆಂದರೆ ಮಾಧ್ಯಮಗಳನ್ನು ನಿಯಂತ್ರಣ ಮಾಡಬೇಕೆಂದು ಕೋರ್ಟು ಸೂಚಿಸಿದಲ್ಲಿ, ಆ ನಿಯಂತ್ರಣವನ್ನು ಯಾರು ಮಾಡುತ್ತಾರೆ ಮತ್ತು ಯಾರನ್ನು ಮಾಡುತ್ತಾರೆ ಎಂಬ ಪ್ರಶ್ನೆ ಏಳುತ್ತದೆ. ಏಕೆಂದರೆ ಎಲ್ಲಾ ನಿಯಂತ್ರಕ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರವು ನಿಯಂತ್ರಣಕ್ಕೆ ತೆಗೆದುಕೊಂಡಾಗಿದೆ. ಅಂತಹ ಸಾಧ್ಯತೆಯು ಬೇರೆ ಸರ್ಕಾರಗಳಿರುವಾಗಲೂ ಇದೆ. ಹೀಗಾಗಿ ಮಾಧ್ಯಮ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಯಾರೂ ಇಂತಹ ನಿಯಂತ್ರಣವನ್ನು ಎಂತಹ ಸಂದರ್ಭದಲ್ಲೂ ಒಪ್ಪುವುದಿಲ್ಲ.

ಹಾಗೆಂದು, ಮಾಧ್ಯಮಗಳ ಮೇಲೆ ಯಾರ ಕಡಿವಾಣವೂ ಇರಬಾರದೇ ಎಂಬ ಪ್ರಶ್ನೆಯು ಏಳದೇ ಇರದು. ಏಕೆಂದರೆ ಇದುವರೆಗೆ ಪ್ರಭಾವಶಾಲಿಗಳಾಗಿರುವ ಟಿವಿ ಚಾನೆಲ್‍ಗಳಲ್ಲಿ ಹಲವು ಮಾಧ್ಯಮ ಸಂಸ್ಥೆಗಳಾಗಿ ಉಳಿದಿಲ್ಲ; ಅವು ಲಿಂಚಿಂಗ್ ಕೇಂದ್ರಗಳಾಗಿವೆ. ಇವು ಟಿವಿ ಚಾನೆಲ್‍ಗಳಿಗೆ ಮಾತ್ರ ಸೀಮಿತವಾಗಿಲ್ಲ. ಹಲವಾರು ಪತ್ರಿಕೆಗಳೂ ಅದನ್ನು ಮಾಡಿವೆ. ಪ್ರಜಾತಾಂತ್ರಿಕ ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ನಿಷ್ಠುರವಾದ ಅಭಿಪ್ರಾಯವನ್ನು ಮುಂದಿಟ್ಟ ಸಾಹಿತಿಗಳ ಮೇಲೆ ಅಂತಹ ಸಮರವನ್ನು ಕನ್ನಡದ ಪತ್ರಿಕೆಯ ಸಂಪಾದಕರೊಬ್ಬರು ಆರಂಭಿಸಿದ್ದರು. ಓದುಗರ ಅಭಿಪ್ರಾಯದ ಹೆಸರಿನಲ್ಲಿ ಅವರುಗಳ ಮೇಲೆ ವಾಗ್ದಾಳಿಯನ್ನು ನಡೆಸಲಾಯಿತು. ಈ ಓದುಗರ ಅಭಿಪ್ರಾಯ ಎನ್ನುವುದಕ್ಕೊಂದು ಸಾಧ್ಯತೆ ಇರುತ್ತದೆ. ನಿರ್ದಿಷ್ಟವಾದ ರೀತಿಯ ಅಭಿಪ್ರಾಯವನ್ನು ಜನರು ವ್ಯಕ್ತಪಡಿಸುತ್ತಿದ್ದಾರೆ ಎಂಬುದನ್ನು ಬಿಂಬಿಸಿ, ತಾವು ಆ ಜನಾಭಿಪ್ರಾಯವನ್ನು ಎತ್ತಿ ಹಿಡಿಯುತ್ತಿದ್ದೇವೆ ಎಂದು ಮಾಡುವುದು. ಹಾಗೆ ಮಾಡುವ ಮೂಲಕ ಇತರ ಓದುಗರಿಗೂ ಇದೇ ಪ್ರಬಲವಾದ ಜನಾಭಿಪ್ರಾಯ ಎಂಬ ಭಾವನೆ ಮೂಡುವಂತಾಗುತ್ತದೆ. ಸಮಾಜದ ಪ್ರಬಲ ಅಭಿಪ್ರಾಯ ಯಾವುದೋ ಅದರ ಜೊತೆಗೆ ತೂರಿಕೊಂಡು ಹೋಗುವ ಮಂದೆ ಸ್ವಭಾವ ಯಾವುದೇ ಸಮಾಜದಲ್ಲಿ ಸಾಕಷ್ಟಿರುವುದರಿಂದ, ನಿರ್ದಿಷ್ಟವಾದ ಜನಾಭಿಪ್ರಾಯವನ್ನು ಆ ಮೂಲಕ ಉತ್ಪಾದಿಸಲಾಗುತ್ತದೆ.

ಇಂತಹುದನ್ನು ಮಾಡಲು ಶುರು ಮಾಡಿದ ಮಾಧ್ಯಮಗಳು ಯಾವ ಮಟ್ಟಕ್ಕೆ ಮುಟ್ಟಿದವೆಂದರೆ, ಕರ್ನಾಟಕದ ಖ್ಯಾತ ವಿದ್ವಾಂಸ ಕಲಬುರ್ಗಿಯವರಿಂದ ಅವರದ್ದಲ್ಲದ ಹೇಳಿಕೆಯನ್ನು ತಪ್ಪೆಂದು ಬಿಂಬಿಸಿ ಅವರಿಂದ ಕ್ಷಮೆಯನ್ನೂ ಕೇಳಿಸಿಬಿಟ್ಟವು. ಅದೇ ಸಂಗತಿಯು ಅವರ ಹತ್ಯೆ ಮಾಡಲು ಹೊರಟ ಕಾಲಾಳುವಿಗೆ ಉತ್ತೇಜಿಸಲು ಅನುಕೂಲ ಮಾಡಿಕೊಟ್ಟಿತು.

ಎಂ ಎಂ ಕಲಬುರ್ಗಿ. ಚಿತ್ರಕೃಪೆ: Deccan Herald

ಇಂಥದ್ದೇ ಕೆಲಸವನ್ನು ಉಮರ್ ಖಾಲಿದ್, ಕನ್ಹಯ್ಯ ಕುಮಾರ್ ಥರದ ಜೆಎನ್‍ಯು ವಿದ್ಯಾರ್ಥಿಗಳ ಮೇಲೂ ಮಾಡಲಾಯಿತು. 8-10 ತಿಂಗಳ ಕೆಳಗೆ ಅಮೂಲ್ಯ ಎಂಬ ವಿದ್ಯಾರ್ಥಿನಿಯು ತನ್ನ ಬಾಲಿಶತನದ ಕಾರಣಕ್ಕಾಗಿ, ಸಾರ್ವಜನಿಕ ಸಭೆಯೊಂದರಲ್ಲಿ ಏನೋ ಹೇಳಲು ಹೋಗಿ ಇನ್ನೇನೋ ಹೇಳಿದಾಗಲೂ ಅದೇ ನಡೆಯಿತು. ಅಂದು ಕನ್ನಡದ ಟಿವಿ ಚಾನೆಲ್‍ನಲ್ಲಿ ಆಂಕರ್ ಕೂಗಿದ್ದನ್ನು ಕೇಳಿದ ಅಧಿಕಾರಿಯೊಬ್ಬರು ಗಾಬರಿಯಾಗಿ ಫೋನ್ ಮಾಡಿದರು.He  is asking for her blood, how can he do like that? Something has to be done about it ಎಂದಿದ್ದರು.

ತೀರಾ ಇತ್ತೀಚೆಗೆ ಕಾಂಗ್ರೆಸ್‍ನ ರಾಜ್ಯಸಭಾ ಸದಸ್ಯ ರಾಜೀವ್ ತ್ಯಾಗಿಯವರು ಟಿವಿ ಚಾನೆಲ್ಲೊಂದರಲ್ಲಿ ಪ್ಯಾನೆಲ್ ಚರ್ಚೆ ಮುಗಿಸಿಕೊಂಡು ಮನೆಗೆ ಹೋಗಿ ಹೃದಯಾಘಾತದಿಂದ ತೀರಿಕೊಂಡರು. ಸಾಯುವ ಮುನ್ನ ಟಿವಿ ಆಂಕರ್‌ಗಳ ಕುರಿತು ಅವರಾಡಿದ ಕೊನೆ ಮಾತೆಂದರೆ, ‘ಇವರು ನನ್ನನ್ನು ಅವಹೇಳನ ಮಾಡಿದರು, ನನ್ನನ್ನು ಕೊಂದುಬಿಟ್ಟರು’. ಇದನ್ನು ಕೇಳಿದ ಇನ್ನೊಬ್ಬ ಕಾಂಗ್ರೆಸ್ ವಕ್ತಾರ ಪ್ರೊ.ಗೌರವ್ ವಲ್ಲಭ್, ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್‍ರಿಗೆ ‘ಟಿವಿಗೊಂದು ನೀತಿ ಸಂಹಿತೆ ರೂಪಿಸಲು’ ಆನ್‍ಲೈನ್ ಪಿಟಿಷನ್ ಆರಂಭಿಸಿದ್ದಾರೆ.

ರಾಜೀವ್ ತ್ಯಾಗಿ:Photo Courtesy: National Herald

ಟಿವಿ ಆಂಕರ್‌ಗಳು ಕಿರುಚುವ ರೀತಿ, ನಿರ್ದಿಷ್ಟ ಸಮುದಾಯ, ಗುಂಪು, ವ್ಯಕ್ತಿಗಳ ವಿರುದ್ಧ ಪ್ರಚೋದಿಸುವ ರೀತಿಯನ್ನು ನೋಡಿದವರಿಗೆ ಸ್ಪಷ್ಟವಾಗುವ ಸಂಗತಿ ಏನೆಂದರೆ, ಅವರು ಲಿಂಚಿಂಗ್ (ಗುಂಪು ಹತ್ಯೆ)ಗೆ ದಾರಿ ಮಾಡಿಕೊಡುತ್ತಿದ್ದಾರೆ. ಬೇರೆ ಬೇರೆ ರೀತಿಯ ಲಿಂಚಿಂಗ್‍ಗೆ ಸಮ್ಮತಿಯನ್ನು ಉತ್ಪಾದಿಸುತ್ತಿದ್ದಾರೆ. ಇದರಲ್ಲಿ ಸಂದೇಹವೇ ಇಲ್ಲ.

ಎಂದಿನಂತೆ ಪ್ರಶ್ನೆಯಿರುವುದು ಇದರ ಕುರಿತು ಇನ್ನಷ್ಟು ವಿಶ್ಲೇಷಣೆ ಮಾಡುವುದರಲ್ಲಲ್ಲ. ಬದಲಿಗೆ ಇದನ್ನು ಹೇಗೆ ಬದಲಿಸುತ್ತೇವೆ ಎಂಬುದರಲ್ಲಿ. ಇಂದಿನ ಪರಿಸ್ಥಿತಿಯಲ್ಲಿ ಟಿವಿ ಚಾನೆಲ್‍ಗಳ ಮೇಲೆ ನಿಯಂತ್ರಣ ಹೇರಿ ಎಂದು ಸರ್ಕಾರ ಅಥವಾ ನ್ಯಾಯಾಲಯದ ಮೊರೆ ಹೋಗುವುದು ಮೂರ್ಖತನದ ಕೆಲಸವಾದೀತು. ಬದಲಿಗೆ ಪ್ರಜಾತಾಂತ್ರಿಕವಾದ ಮಾಧ್ಯಮ ಸಾಧ್ಯತೆಗಳನ್ನು ಅವಿಷ್ಕರಿಸಿ ವ್ಯಾಪಕವಾದ ಮತ್ತು ಬೃಹತ್ತಾದ ಪ್ರಮಾಣದಲ್ಲಿ ಜಾರಿಗೊಳಿಸುವುದು ಮಾತ್ರ ಇದನ್ನು ತಡೆಯಬಲ್ಲುದು ಮತ್ತು ಇಂದಿನ ಮುಖ್ಯವಾಹಿನಿಯನ್ನು ಅಪ್ರಸ್ತುತಗೊಳಿಸಬಲ್ಲದು. ಆ ನಿಟ್ಟಿನಲ್ಲಿ ಈಗಾಗಲೇ ದೇಶದ ಕೆಲವೆಡೆ ಸೃಜನಶೀಲವಾದ ಪ್ರಯತ್ನಗಳು ನಡೆಯುತ್ತಿದೆ. ಗೌರಿ ಮೀಡಿಯಾ ಸಹಾ ಅದಕ್ಕೆ ಪೂರಕವಾದ ಕೆಲಸದಲ್ಲಿ ತೊಡಗಿದೆ. ನಮ್ಮ ಪ್ರಜ್ಞಾವಂತ ಓದುಗರೂ ಜೊತೆಯಾಗುತ್ತಾರೆಂಬ ವಿಶ್ವಾಸವಿದೆ.


ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...