Homeಅಂಕಣಗಳುಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ... ನಾವೇನು ಮಾಡಬೇಕು?

ಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ… ನಾವೇನು ಮಾಡಬೇಕು?

ಟಿವಿ ಆಂಕರ್‌ಗಳು ಕಿರುಚುವ ರೀತಿ, ನಿರ್ದಿಷ್ಟ ಸಮುದಾಯ, ಗುಂಪು, ವ್ಯಕ್ತಿಗಳ ವಿರುದ್ಧ ಪ್ರಚೋದಿಸುವ ರೀತಿಯನ್ನು ನೋಡಿದವರಿಗೆ ಸ್ಪಷ್ಟವಾಗುವ ಸಂಗತಿ ಏನೆಂದರೆ, ಅವರು ಲಿಂಚಿಂಗ್ (ಗುಂಪು ಹತ್ಯೆ)ಗೆ ದಾರಿ ಮಾಡಿಕೊಡುತ್ತಿದ್ದಾರೆ.

- Advertisement -
- Advertisement -

ಇದೀಗ ತಾನೇ ಸುಪ್ರೀಂಕೋರ್ಟು ಟಿವಿ ಚಾನೆಲ್‍ಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ‘ಯುಪಿಎಸ್‍ಸಿ ಜಿಹಾದ್’ ಹೆಸರಿನಲ್ಲಿ ಸುಳ್ಳು ಮತ್ತು ದ್ವೇಷಪೂರಿತವಾದ ವರದಿ ಪ್ರಸಾರ ಮಾಡಿದ ಸುದರ್ಶನ್ ಟಿವಿಯ ವಿಚಾರದಲ್ಲಿ ಕೆಲವು ಸುಪ್ರೀಂಕೋರ್ಟು ನ್ಯಾಯಾಧೀಶರು ನಿಷ್ಠುರವಾದ ಮಾತುಗಳನ್ನು ಆಡಿದ್ದಾರೆ. ಆದರೆ, ಸಮಸ್ಯೆಯೇನೆಂದರೆ ಮಾಧ್ಯಮಗಳನ್ನು ನಿಯಂತ್ರಣ ಮಾಡಬೇಕೆಂದು ಕೋರ್ಟು ಸೂಚಿಸಿದಲ್ಲಿ, ಆ ನಿಯಂತ್ರಣವನ್ನು ಯಾರು ಮಾಡುತ್ತಾರೆ ಮತ್ತು ಯಾರನ್ನು ಮಾಡುತ್ತಾರೆ ಎಂಬ ಪ್ರಶ್ನೆ ಏಳುತ್ತದೆ. ಏಕೆಂದರೆ ಎಲ್ಲಾ ನಿಯಂತ್ರಕ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರವು ನಿಯಂತ್ರಣಕ್ಕೆ ತೆಗೆದುಕೊಂಡಾಗಿದೆ. ಅಂತಹ ಸಾಧ್ಯತೆಯು ಬೇರೆ ಸರ್ಕಾರಗಳಿರುವಾಗಲೂ ಇದೆ. ಹೀಗಾಗಿ ಮಾಧ್ಯಮ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಯಾರೂ ಇಂತಹ ನಿಯಂತ್ರಣವನ್ನು ಎಂತಹ ಸಂದರ್ಭದಲ್ಲೂ ಒಪ್ಪುವುದಿಲ್ಲ.

ಹಾಗೆಂದು, ಮಾಧ್ಯಮಗಳ ಮೇಲೆ ಯಾರ ಕಡಿವಾಣವೂ ಇರಬಾರದೇ ಎಂಬ ಪ್ರಶ್ನೆಯು ಏಳದೇ ಇರದು. ಏಕೆಂದರೆ ಇದುವರೆಗೆ ಪ್ರಭಾವಶಾಲಿಗಳಾಗಿರುವ ಟಿವಿ ಚಾನೆಲ್‍ಗಳಲ್ಲಿ ಹಲವು ಮಾಧ್ಯಮ ಸಂಸ್ಥೆಗಳಾಗಿ ಉಳಿದಿಲ್ಲ; ಅವು ಲಿಂಚಿಂಗ್ ಕೇಂದ್ರಗಳಾಗಿವೆ. ಇವು ಟಿವಿ ಚಾನೆಲ್‍ಗಳಿಗೆ ಮಾತ್ರ ಸೀಮಿತವಾಗಿಲ್ಲ. ಹಲವಾರು ಪತ್ರಿಕೆಗಳೂ ಅದನ್ನು ಮಾಡಿವೆ. ಪ್ರಜಾತಾಂತ್ರಿಕ ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ನಿಷ್ಠುರವಾದ ಅಭಿಪ್ರಾಯವನ್ನು ಮುಂದಿಟ್ಟ ಸಾಹಿತಿಗಳ ಮೇಲೆ ಅಂತಹ ಸಮರವನ್ನು ಕನ್ನಡದ ಪತ್ರಿಕೆಯ ಸಂಪಾದಕರೊಬ್ಬರು ಆರಂಭಿಸಿದ್ದರು. ಓದುಗರ ಅಭಿಪ್ರಾಯದ ಹೆಸರಿನಲ್ಲಿ ಅವರುಗಳ ಮೇಲೆ ವಾಗ್ದಾಳಿಯನ್ನು ನಡೆಸಲಾಯಿತು. ಈ ಓದುಗರ ಅಭಿಪ್ರಾಯ ಎನ್ನುವುದಕ್ಕೊಂದು ಸಾಧ್ಯತೆ ಇರುತ್ತದೆ. ನಿರ್ದಿಷ್ಟವಾದ ರೀತಿಯ ಅಭಿಪ್ರಾಯವನ್ನು ಜನರು ವ್ಯಕ್ತಪಡಿಸುತ್ತಿದ್ದಾರೆ ಎಂಬುದನ್ನು ಬಿಂಬಿಸಿ, ತಾವು ಆ ಜನಾಭಿಪ್ರಾಯವನ್ನು ಎತ್ತಿ ಹಿಡಿಯುತ್ತಿದ್ದೇವೆ ಎಂದು ಮಾಡುವುದು. ಹಾಗೆ ಮಾಡುವ ಮೂಲಕ ಇತರ ಓದುಗರಿಗೂ ಇದೇ ಪ್ರಬಲವಾದ ಜನಾಭಿಪ್ರಾಯ ಎಂಬ ಭಾವನೆ ಮೂಡುವಂತಾಗುತ್ತದೆ. ಸಮಾಜದ ಪ್ರಬಲ ಅಭಿಪ್ರಾಯ ಯಾವುದೋ ಅದರ ಜೊತೆಗೆ ತೂರಿಕೊಂಡು ಹೋಗುವ ಮಂದೆ ಸ್ವಭಾವ ಯಾವುದೇ ಸಮಾಜದಲ್ಲಿ ಸಾಕಷ್ಟಿರುವುದರಿಂದ, ನಿರ್ದಿಷ್ಟವಾದ ಜನಾಭಿಪ್ರಾಯವನ್ನು ಆ ಮೂಲಕ ಉತ್ಪಾದಿಸಲಾಗುತ್ತದೆ.

ಇಂತಹುದನ್ನು ಮಾಡಲು ಶುರು ಮಾಡಿದ ಮಾಧ್ಯಮಗಳು ಯಾವ ಮಟ್ಟಕ್ಕೆ ಮುಟ್ಟಿದವೆಂದರೆ, ಕರ್ನಾಟಕದ ಖ್ಯಾತ ವಿದ್ವಾಂಸ ಕಲಬುರ್ಗಿಯವರಿಂದ ಅವರದ್ದಲ್ಲದ ಹೇಳಿಕೆಯನ್ನು ತಪ್ಪೆಂದು ಬಿಂಬಿಸಿ ಅವರಿಂದ ಕ್ಷಮೆಯನ್ನೂ ಕೇಳಿಸಿಬಿಟ್ಟವು. ಅದೇ ಸಂಗತಿಯು ಅವರ ಹತ್ಯೆ ಮಾಡಲು ಹೊರಟ ಕಾಲಾಳುವಿಗೆ ಉತ್ತೇಜಿಸಲು ಅನುಕೂಲ ಮಾಡಿಕೊಟ್ಟಿತು.

ಎಂ ಎಂ ಕಲಬುರ್ಗಿ. ಚಿತ್ರಕೃಪೆ: Deccan Herald

ಇಂಥದ್ದೇ ಕೆಲಸವನ್ನು ಉಮರ್ ಖಾಲಿದ್, ಕನ್ಹಯ್ಯ ಕುಮಾರ್ ಥರದ ಜೆಎನ್‍ಯು ವಿದ್ಯಾರ್ಥಿಗಳ ಮೇಲೂ ಮಾಡಲಾಯಿತು. 8-10 ತಿಂಗಳ ಕೆಳಗೆ ಅಮೂಲ್ಯ ಎಂಬ ವಿದ್ಯಾರ್ಥಿನಿಯು ತನ್ನ ಬಾಲಿಶತನದ ಕಾರಣಕ್ಕಾಗಿ, ಸಾರ್ವಜನಿಕ ಸಭೆಯೊಂದರಲ್ಲಿ ಏನೋ ಹೇಳಲು ಹೋಗಿ ಇನ್ನೇನೋ ಹೇಳಿದಾಗಲೂ ಅದೇ ನಡೆಯಿತು. ಅಂದು ಕನ್ನಡದ ಟಿವಿ ಚಾನೆಲ್‍ನಲ್ಲಿ ಆಂಕರ್ ಕೂಗಿದ್ದನ್ನು ಕೇಳಿದ ಅಧಿಕಾರಿಯೊಬ್ಬರು ಗಾಬರಿಯಾಗಿ ಫೋನ್ ಮಾಡಿದರು.He  is asking for her blood, how can he do like that? Something has to be done about it ಎಂದಿದ್ದರು.

ತೀರಾ ಇತ್ತೀಚೆಗೆ ಕಾಂಗ್ರೆಸ್‍ನ ರಾಜ್ಯಸಭಾ ಸದಸ್ಯ ರಾಜೀವ್ ತ್ಯಾಗಿಯವರು ಟಿವಿ ಚಾನೆಲ್ಲೊಂದರಲ್ಲಿ ಪ್ಯಾನೆಲ್ ಚರ್ಚೆ ಮುಗಿಸಿಕೊಂಡು ಮನೆಗೆ ಹೋಗಿ ಹೃದಯಾಘಾತದಿಂದ ತೀರಿಕೊಂಡರು. ಸಾಯುವ ಮುನ್ನ ಟಿವಿ ಆಂಕರ್‌ಗಳ ಕುರಿತು ಅವರಾಡಿದ ಕೊನೆ ಮಾತೆಂದರೆ, ‘ಇವರು ನನ್ನನ್ನು ಅವಹೇಳನ ಮಾಡಿದರು, ನನ್ನನ್ನು ಕೊಂದುಬಿಟ್ಟರು’. ಇದನ್ನು ಕೇಳಿದ ಇನ್ನೊಬ್ಬ ಕಾಂಗ್ರೆಸ್ ವಕ್ತಾರ ಪ್ರೊ.ಗೌರವ್ ವಲ್ಲಭ್, ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್‍ರಿಗೆ ‘ಟಿವಿಗೊಂದು ನೀತಿ ಸಂಹಿತೆ ರೂಪಿಸಲು’ ಆನ್‍ಲೈನ್ ಪಿಟಿಷನ್ ಆರಂಭಿಸಿದ್ದಾರೆ.

ರಾಜೀವ್ ತ್ಯಾಗಿ:Photo Courtesy: National Herald

ಟಿವಿ ಆಂಕರ್‌ಗಳು ಕಿರುಚುವ ರೀತಿ, ನಿರ್ದಿಷ್ಟ ಸಮುದಾಯ, ಗುಂಪು, ವ್ಯಕ್ತಿಗಳ ವಿರುದ್ಧ ಪ್ರಚೋದಿಸುವ ರೀತಿಯನ್ನು ನೋಡಿದವರಿಗೆ ಸ್ಪಷ್ಟವಾಗುವ ಸಂಗತಿ ಏನೆಂದರೆ, ಅವರು ಲಿಂಚಿಂಗ್ (ಗುಂಪು ಹತ್ಯೆ)ಗೆ ದಾರಿ ಮಾಡಿಕೊಡುತ್ತಿದ್ದಾರೆ. ಬೇರೆ ಬೇರೆ ರೀತಿಯ ಲಿಂಚಿಂಗ್‍ಗೆ ಸಮ್ಮತಿಯನ್ನು ಉತ್ಪಾದಿಸುತ್ತಿದ್ದಾರೆ. ಇದರಲ್ಲಿ ಸಂದೇಹವೇ ಇಲ್ಲ.

ಎಂದಿನಂತೆ ಪ್ರಶ್ನೆಯಿರುವುದು ಇದರ ಕುರಿತು ಇನ್ನಷ್ಟು ವಿಶ್ಲೇಷಣೆ ಮಾಡುವುದರಲ್ಲಲ್ಲ. ಬದಲಿಗೆ ಇದನ್ನು ಹೇಗೆ ಬದಲಿಸುತ್ತೇವೆ ಎಂಬುದರಲ್ಲಿ. ಇಂದಿನ ಪರಿಸ್ಥಿತಿಯಲ್ಲಿ ಟಿವಿ ಚಾನೆಲ್‍ಗಳ ಮೇಲೆ ನಿಯಂತ್ರಣ ಹೇರಿ ಎಂದು ಸರ್ಕಾರ ಅಥವಾ ನ್ಯಾಯಾಲಯದ ಮೊರೆ ಹೋಗುವುದು ಮೂರ್ಖತನದ ಕೆಲಸವಾದೀತು. ಬದಲಿಗೆ ಪ್ರಜಾತಾಂತ್ರಿಕವಾದ ಮಾಧ್ಯಮ ಸಾಧ್ಯತೆಗಳನ್ನು ಅವಿಷ್ಕರಿಸಿ ವ್ಯಾಪಕವಾದ ಮತ್ತು ಬೃಹತ್ತಾದ ಪ್ರಮಾಣದಲ್ಲಿ ಜಾರಿಗೊಳಿಸುವುದು ಮಾತ್ರ ಇದನ್ನು ತಡೆಯಬಲ್ಲುದು ಮತ್ತು ಇಂದಿನ ಮುಖ್ಯವಾಹಿನಿಯನ್ನು ಅಪ್ರಸ್ತುತಗೊಳಿಸಬಲ್ಲದು. ಆ ನಿಟ್ಟಿನಲ್ಲಿ ಈಗಾಗಲೇ ದೇಶದ ಕೆಲವೆಡೆ ಸೃಜನಶೀಲವಾದ ಪ್ರಯತ್ನಗಳು ನಡೆಯುತ್ತಿದೆ. ಗೌರಿ ಮೀಡಿಯಾ ಸಹಾ ಅದಕ್ಕೆ ಪೂರಕವಾದ ಕೆಲಸದಲ್ಲಿ ತೊಡಗಿದೆ. ನಮ್ಮ ಪ್ರಜ್ಞಾವಂತ ಓದುಗರೂ ಜೊತೆಯಾಗುತ್ತಾರೆಂಬ ವಿಶ್ವಾಸವಿದೆ.


ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...