Homeಅಂಕಣಗಳುಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ... ನಾವೇನು ಮಾಡಬೇಕು?

ಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ… ನಾವೇನು ಮಾಡಬೇಕು?

ಟಿವಿ ಆಂಕರ್‌ಗಳು ಕಿರುಚುವ ರೀತಿ, ನಿರ್ದಿಷ್ಟ ಸಮುದಾಯ, ಗುಂಪು, ವ್ಯಕ್ತಿಗಳ ವಿರುದ್ಧ ಪ್ರಚೋದಿಸುವ ರೀತಿಯನ್ನು ನೋಡಿದವರಿಗೆ ಸ್ಪಷ್ಟವಾಗುವ ಸಂಗತಿ ಏನೆಂದರೆ, ಅವರು ಲಿಂಚಿಂಗ್ (ಗುಂಪು ಹತ್ಯೆ)ಗೆ ದಾರಿ ಮಾಡಿಕೊಡುತ್ತಿದ್ದಾರೆ.

- Advertisement -
- Advertisement -

ಇದೀಗ ತಾನೇ ಸುಪ್ರೀಂಕೋರ್ಟು ಟಿವಿ ಚಾನೆಲ್‍ಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ‘ಯುಪಿಎಸ್‍ಸಿ ಜಿಹಾದ್’ ಹೆಸರಿನಲ್ಲಿ ಸುಳ್ಳು ಮತ್ತು ದ್ವೇಷಪೂರಿತವಾದ ವರದಿ ಪ್ರಸಾರ ಮಾಡಿದ ಸುದರ್ಶನ್ ಟಿವಿಯ ವಿಚಾರದಲ್ಲಿ ಕೆಲವು ಸುಪ್ರೀಂಕೋರ್ಟು ನ್ಯಾಯಾಧೀಶರು ನಿಷ್ಠುರವಾದ ಮಾತುಗಳನ್ನು ಆಡಿದ್ದಾರೆ. ಆದರೆ, ಸಮಸ್ಯೆಯೇನೆಂದರೆ ಮಾಧ್ಯಮಗಳನ್ನು ನಿಯಂತ್ರಣ ಮಾಡಬೇಕೆಂದು ಕೋರ್ಟು ಸೂಚಿಸಿದಲ್ಲಿ, ಆ ನಿಯಂತ್ರಣವನ್ನು ಯಾರು ಮಾಡುತ್ತಾರೆ ಮತ್ತು ಯಾರನ್ನು ಮಾಡುತ್ತಾರೆ ಎಂಬ ಪ್ರಶ್ನೆ ಏಳುತ್ತದೆ. ಏಕೆಂದರೆ ಎಲ್ಲಾ ನಿಯಂತ್ರಕ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರವು ನಿಯಂತ್ರಣಕ್ಕೆ ತೆಗೆದುಕೊಂಡಾಗಿದೆ. ಅಂತಹ ಸಾಧ್ಯತೆಯು ಬೇರೆ ಸರ್ಕಾರಗಳಿರುವಾಗಲೂ ಇದೆ. ಹೀಗಾಗಿ ಮಾಧ್ಯಮ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಯಾರೂ ಇಂತಹ ನಿಯಂತ್ರಣವನ್ನು ಎಂತಹ ಸಂದರ್ಭದಲ್ಲೂ ಒಪ್ಪುವುದಿಲ್ಲ.

ಹಾಗೆಂದು, ಮಾಧ್ಯಮಗಳ ಮೇಲೆ ಯಾರ ಕಡಿವಾಣವೂ ಇರಬಾರದೇ ಎಂಬ ಪ್ರಶ್ನೆಯು ಏಳದೇ ಇರದು. ಏಕೆಂದರೆ ಇದುವರೆಗೆ ಪ್ರಭಾವಶಾಲಿಗಳಾಗಿರುವ ಟಿವಿ ಚಾನೆಲ್‍ಗಳಲ್ಲಿ ಹಲವು ಮಾಧ್ಯಮ ಸಂಸ್ಥೆಗಳಾಗಿ ಉಳಿದಿಲ್ಲ; ಅವು ಲಿಂಚಿಂಗ್ ಕೇಂದ್ರಗಳಾಗಿವೆ. ಇವು ಟಿವಿ ಚಾನೆಲ್‍ಗಳಿಗೆ ಮಾತ್ರ ಸೀಮಿತವಾಗಿಲ್ಲ. ಹಲವಾರು ಪತ್ರಿಕೆಗಳೂ ಅದನ್ನು ಮಾಡಿವೆ. ಪ್ರಜಾತಾಂತ್ರಿಕ ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ನಿಷ್ಠುರವಾದ ಅಭಿಪ್ರಾಯವನ್ನು ಮುಂದಿಟ್ಟ ಸಾಹಿತಿಗಳ ಮೇಲೆ ಅಂತಹ ಸಮರವನ್ನು ಕನ್ನಡದ ಪತ್ರಿಕೆಯ ಸಂಪಾದಕರೊಬ್ಬರು ಆರಂಭಿಸಿದ್ದರು. ಓದುಗರ ಅಭಿಪ್ರಾಯದ ಹೆಸರಿನಲ್ಲಿ ಅವರುಗಳ ಮೇಲೆ ವಾಗ್ದಾಳಿಯನ್ನು ನಡೆಸಲಾಯಿತು. ಈ ಓದುಗರ ಅಭಿಪ್ರಾಯ ಎನ್ನುವುದಕ್ಕೊಂದು ಸಾಧ್ಯತೆ ಇರುತ್ತದೆ. ನಿರ್ದಿಷ್ಟವಾದ ರೀತಿಯ ಅಭಿಪ್ರಾಯವನ್ನು ಜನರು ವ್ಯಕ್ತಪಡಿಸುತ್ತಿದ್ದಾರೆ ಎಂಬುದನ್ನು ಬಿಂಬಿಸಿ, ತಾವು ಆ ಜನಾಭಿಪ್ರಾಯವನ್ನು ಎತ್ತಿ ಹಿಡಿಯುತ್ತಿದ್ದೇವೆ ಎಂದು ಮಾಡುವುದು. ಹಾಗೆ ಮಾಡುವ ಮೂಲಕ ಇತರ ಓದುಗರಿಗೂ ಇದೇ ಪ್ರಬಲವಾದ ಜನಾಭಿಪ್ರಾಯ ಎಂಬ ಭಾವನೆ ಮೂಡುವಂತಾಗುತ್ತದೆ. ಸಮಾಜದ ಪ್ರಬಲ ಅಭಿಪ್ರಾಯ ಯಾವುದೋ ಅದರ ಜೊತೆಗೆ ತೂರಿಕೊಂಡು ಹೋಗುವ ಮಂದೆ ಸ್ವಭಾವ ಯಾವುದೇ ಸಮಾಜದಲ್ಲಿ ಸಾಕಷ್ಟಿರುವುದರಿಂದ, ನಿರ್ದಿಷ್ಟವಾದ ಜನಾಭಿಪ್ರಾಯವನ್ನು ಆ ಮೂಲಕ ಉತ್ಪಾದಿಸಲಾಗುತ್ತದೆ.

ಇಂತಹುದನ್ನು ಮಾಡಲು ಶುರು ಮಾಡಿದ ಮಾಧ್ಯಮಗಳು ಯಾವ ಮಟ್ಟಕ್ಕೆ ಮುಟ್ಟಿದವೆಂದರೆ, ಕರ್ನಾಟಕದ ಖ್ಯಾತ ವಿದ್ವಾಂಸ ಕಲಬುರ್ಗಿಯವರಿಂದ ಅವರದ್ದಲ್ಲದ ಹೇಳಿಕೆಯನ್ನು ತಪ್ಪೆಂದು ಬಿಂಬಿಸಿ ಅವರಿಂದ ಕ್ಷಮೆಯನ್ನೂ ಕೇಳಿಸಿಬಿಟ್ಟವು. ಅದೇ ಸಂಗತಿಯು ಅವರ ಹತ್ಯೆ ಮಾಡಲು ಹೊರಟ ಕಾಲಾಳುವಿಗೆ ಉತ್ತೇಜಿಸಲು ಅನುಕೂಲ ಮಾಡಿಕೊಟ್ಟಿತು.

ಎಂ ಎಂ ಕಲಬುರ್ಗಿ. ಚಿತ್ರಕೃಪೆ: Deccan Herald

ಇಂಥದ್ದೇ ಕೆಲಸವನ್ನು ಉಮರ್ ಖಾಲಿದ್, ಕನ್ಹಯ್ಯ ಕುಮಾರ್ ಥರದ ಜೆಎನ್‍ಯು ವಿದ್ಯಾರ್ಥಿಗಳ ಮೇಲೂ ಮಾಡಲಾಯಿತು. 8-10 ತಿಂಗಳ ಕೆಳಗೆ ಅಮೂಲ್ಯ ಎಂಬ ವಿದ್ಯಾರ್ಥಿನಿಯು ತನ್ನ ಬಾಲಿಶತನದ ಕಾರಣಕ್ಕಾಗಿ, ಸಾರ್ವಜನಿಕ ಸಭೆಯೊಂದರಲ್ಲಿ ಏನೋ ಹೇಳಲು ಹೋಗಿ ಇನ್ನೇನೋ ಹೇಳಿದಾಗಲೂ ಅದೇ ನಡೆಯಿತು. ಅಂದು ಕನ್ನಡದ ಟಿವಿ ಚಾನೆಲ್‍ನಲ್ಲಿ ಆಂಕರ್ ಕೂಗಿದ್ದನ್ನು ಕೇಳಿದ ಅಧಿಕಾರಿಯೊಬ್ಬರು ಗಾಬರಿಯಾಗಿ ಫೋನ್ ಮಾಡಿದರು.He  is asking for her blood, how can he do like that? Something has to be done about it ಎಂದಿದ್ದರು.

ತೀರಾ ಇತ್ತೀಚೆಗೆ ಕಾಂಗ್ರೆಸ್‍ನ ರಾಜ್ಯಸಭಾ ಸದಸ್ಯ ರಾಜೀವ್ ತ್ಯಾಗಿಯವರು ಟಿವಿ ಚಾನೆಲ್ಲೊಂದರಲ್ಲಿ ಪ್ಯಾನೆಲ್ ಚರ್ಚೆ ಮುಗಿಸಿಕೊಂಡು ಮನೆಗೆ ಹೋಗಿ ಹೃದಯಾಘಾತದಿಂದ ತೀರಿಕೊಂಡರು. ಸಾಯುವ ಮುನ್ನ ಟಿವಿ ಆಂಕರ್‌ಗಳ ಕುರಿತು ಅವರಾಡಿದ ಕೊನೆ ಮಾತೆಂದರೆ, ‘ಇವರು ನನ್ನನ್ನು ಅವಹೇಳನ ಮಾಡಿದರು, ನನ್ನನ್ನು ಕೊಂದುಬಿಟ್ಟರು’. ಇದನ್ನು ಕೇಳಿದ ಇನ್ನೊಬ್ಬ ಕಾಂಗ್ರೆಸ್ ವಕ್ತಾರ ಪ್ರೊ.ಗೌರವ್ ವಲ್ಲಭ್, ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್‍ರಿಗೆ ‘ಟಿವಿಗೊಂದು ನೀತಿ ಸಂಹಿತೆ ರೂಪಿಸಲು’ ಆನ್‍ಲೈನ್ ಪಿಟಿಷನ್ ಆರಂಭಿಸಿದ್ದಾರೆ.

ರಾಜೀವ್ ತ್ಯಾಗಿ:Photo Courtesy: National Herald

ಟಿವಿ ಆಂಕರ್‌ಗಳು ಕಿರುಚುವ ರೀತಿ, ನಿರ್ದಿಷ್ಟ ಸಮುದಾಯ, ಗುಂಪು, ವ್ಯಕ್ತಿಗಳ ವಿರುದ್ಧ ಪ್ರಚೋದಿಸುವ ರೀತಿಯನ್ನು ನೋಡಿದವರಿಗೆ ಸ್ಪಷ್ಟವಾಗುವ ಸಂಗತಿ ಏನೆಂದರೆ, ಅವರು ಲಿಂಚಿಂಗ್ (ಗುಂಪು ಹತ್ಯೆ)ಗೆ ದಾರಿ ಮಾಡಿಕೊಡುತ್ತಿದ್ದಾರೆ. ಬೇರೆ ಬೇರೆ ರೀತಿಯ ಲಿಂಚಿಂಗ್‍ಗೆ ಸಮ್ಮತಿಯನ್ನು ಉತ್ಪಾದಿಸುತ್ತಿದ್ದಾರೆ. ಇದರಲ್ಲಿ ಸಂದೇಹವೇ ಇಲ್ಲ.

ಎಂದಿನಂತೆ ಪ್ರಶ್ನೆಯಿರುವುದು ಇದರ ಕುರಿತು ಇನ್ನಷ್ಟು ವಿಶ್ಲೇಷಣೆ ಮಾಡುವುದರಲ್ಲಲ್ಲ. ಬದಲಿಗೆ ಇದನ್ನು ಹೇಗೆ ಬದಲಿಸುತ್ತೇವೆ ಎಂಬುದರಲ್ಲಿ. ಇಂದಿನ ಪರಿಸ್ಥಿತಿಯಲ್ಲಿ ಟಿವಿ ಚಾನೆಲ್‍ಗಳ ಮೇಲೆ ನಿಯಂತ್ರಣ ಹೇರಿ ಎಂದು ಸರ್ಕಾರ ಅಥವಾ ನ್ಯಾಯಾಲಯದ ಮೊರೆ ಹೋಗುವುದು ಮೂರ್ಖತನದ ಕೆಲಸವಾದೀತು. ಬದಲಿಗೆ ಪ್ರಜಾತಾಂತ್ರಿಕವಾದ ಮಾಧ್ಯಮ ಸಾಧ್ಯತೆಗಳನ್ನು ಅವಿಷ್ಕರಿಸಿ ವ್ಯಾಪಕವಾದ ಮತ್ತು ಬೃಹತ್ತಾದ ಪ್ರಮಾಣದಲ್ಲಿ ಜಾರಿಗೊಳಿಸುವುದು ಮಾತ್ರ ಇದನ್ನು ತಡೆಯಬಲ್ಲುದು ಮತ್ತು ಇಂದಿನ ಮುಖ್ಯವಾಹಿನಿಯನ್ನು ಅಪ್ರಸ್ತುತಗೊಳಿಸಬಲ್ಲದು. ಆ ನಿಟ್ಟಿನಲ್ಲಿ ಈಗಾಗಲೇ ದೇಶದ ಕೆಲವೆಡೆ ಸೃಜನಶೀಲವಾದ ಪ್ರಯತ್ನಗಳು ನಡೆಯುತ್ತಿದೆ. ಗೌರಿ ಮೀಡಿಯಾ ಸಹಾ ಅದಕ್ಕೆ ಪೂರಕವಾದ ಕೆಲಸದಲ್ಲಿ ತೊಡಗಿದೆ. ನಮ್ಮ ಪ್ರಜ್ಞಾವಂತ ಓದುಗರೂ ಜೊತೆಯಾಗುತ್ತಾರೆಂಬ ವಿಶ್ವಾಸವಿದೆ.


ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...