Homeಅಂಕಣಗಳುಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ... ನಾವೇನು ಮಾಡಬೇಕು?

ಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ… ನಾವೇನು ಮಾಡಬೇಕು?

ಟಿವಿ ಆಂಕರ್‌ಗಳು ಕಿರುಚುವ ರೀತಿ, ನಿರ್ದಿಷ್ಟ ಸಮುದಾಯ, ಗುಂಪು, ವ್ಯಕ್ತಿಗಳ ವಿರುದ್ಧ ಪ್ರಚೋದಿಸುವ ರೀತಿಯನ್ನು ನೋಡಿದವರಿಗೆ ಸ್ಪಷ್ಟವಾಗುವ ಸಂಗತಿ ಏನೆಂದರೆ, ಅವರು ಲಿಂಚಿಂಗ್ (ಗುಂಪು ಹತ್ಯೆ)ಗೆ ದಾರಿ ಮಾಡಿಕೊಡುತ್ತಿದ್ದಾರೆ.

- Advertisement -
- Advertisement -

ಇದೀಗ ತಾನೇ ಸುಪ್ರೀಂಕೋರ್ಟು ಟಿವಿ ಚಾನೆಲ್‍ಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ‘ಯುಪಿಎಸ್‍ಸಿ ಜಿಹಾದ್’ ಹೆಸರಿನಲ್ಲಿ ಸುಳ್ಳು ಮತ್ತು ದ್ವೇಷಪೂರಿತವಾದ ವರದಿ ಪ್ರಸಾರ ಮಾಡಿದ ಸುದರ್ಶನ್ ಟಿವಿಯ ವಿಚಾರದಲ್ಲಿ ಕೆಲವು ಸುಪ್ರೀಂಕೋರ್ಟು ನ್ಯಾಯಾಧೀಶರು ನಿಷ್ಠುರವಾದ ಮಾತುಗಳನ್ನು ಆಡಿದ್ದಾರೆ. ಆದರೆ, ಸಮಸ್ಯೆಯೇನೆಂದರೆ ಮಾಧ್ಯಮಗಳನ್ನು ನಿಯಂತ್ರಣ ಮಾಡಬೇಕೆಂದು ಕೋರ್ಟು ಸೂಚಿಸಿದಲ್ಲಿ, ಆ ನಿಯಂತ್ರಣವನ್ನು ಯಾರು ಮಾಡುತ್ತಾರೆ ಮತ್ತು ಯಾರನ್ನು ಮಾಡುತ್ತಾರೆ ಎಂಬ ಪ್ರಶ್ನೆ ಏಳುತ್ತದೆ. ಏಕೆಂದರೆ ಎಲ್ಲಾ ನಿಯಂತ್ರಕ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರವು ನಿಯಂತ್ರಣಕ್ಕೆ ತೆಗೆದುಕೊಂಡಾಗಿದೆ. ಅಂತಹ ಸಾಧ್ಯತೆಯು ಬೇರೆ ಸರ್ಕಾರಗಳಿರುವಾಗಲೂ ಇದೆ. ಹೀಗಾಗಿ ಮಾಧ್ಯಮ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಯಾರೂ ಇಂತಹ ನಿಯಂತ್ರಣವನ್ನು ಎಂತಹ ಸಂದರ್ಭದಲ್ಲೂ ಒಪ್ಪುವುದಿಲ್ಲ.

ಹಾಗೆಂದು, ಮಾಧ್ಯಮಗಳ ಮೇಲೆ ಯಾರ ಕಡಿವಾಣವೂ ಇರಬಾರದೇ ಎಂಬ ಪ್ರಶ್ನೆಯು ಏಳದೇ ಇರದು. ಏಕೆಂದರೆ ಇದುವರೆಗೆ ಪ್ರಭಾವಶಾಲಿಗಳಾಗಿರುವ ಟಿವಿ ಚಾನೆಲ್‍ಗಳಲ್ಲಿ ಹಲವು ಮಾಧ್ಯಮ ಸಂಸ್ಥೆಗಳಾಗಿ ಉಳಿದಿಲ್ಲ; ಅವು ಲಿಂಚಿಂಗ್ ಕೇಂದ್ರಗಳಾಗಿವೆ. ಇವು ಟಿವಿ ಚಾನೆಲ್‍ಗಳಿಗೆ ಮಾತ್ರ ಸೀಮಿತವಾಗಿಲ್ಲ. ಹಲವಾರು ಪತ್ರಿಕೆಗಳೂ ಅದನ್ನು ಮಾಡಿವೆ. ಪ್ರಜಾತಾಂತ್ರಿಕ ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ನಿಷ್ಠುರವಾದ ಅಭಿಪ್ರಾಯವನ್ನು ಮುಂದಿಟ್ಟ ಸಾಹಿತಿಗಳ ಮೇಲೆ ಅಂತಹ ಸಮರವನ್ನು ಕನ್ನಡದ ಪತ್ರಿಕೆಯ ಸಂಪಾದಕರೊಬ್ಬರು ಆರಂಭಿಸಿದ್ದರು. ಓದುಗರ ಅಭಿಪ್ರಾಯದ ಹೆಸರಿನಲ್ಲಿ ಅವರುಗಳ ಮೇಲೆ ವಾಗ್ದಾಳಿಯನ್ನು ನಡೆಸಲಾಯಿತು. ಈ ಓದುಗರ ಅಭಿಪ್ರಾಯ ಎನ್ನುವುದಕ್ಕೊಂದು ಸಾಧ್ಯತೆ ಇರುತ್ತದೆ. ನಿರ್ದಿಷ್ಟವಾದ ರೀತಿಯ ಅಭಿಪ್ರಾಯವನ್ನು ಜನರು ವ್ಯಕ್ತಪಡಿಸುತ್ತಿದ್ದಾರೆ ಎಂಬುದನ್ನು ಬಿಂಬಿಸಿ, ತಾವು ಆ ಜನಾಭಿಪ್ರಾಯವನ್ನು ಎತ್ತಿ ಹಿಡಿಯುತ್ತಿದ್ದೇವೆ ಎಂದು ಮಾಡುವುದು. ಹಾಗೆ ಮಾಡುವ ಮೂಲಕ ಇತರ ಓದುಗರಿಗೂ ಇದೇ ಪ್ರಬಲವಾದ ಜನಾಭಿಪ್ರಾಯ ಎಂಬ ಭಾವನೆ ಮೂಡುವಂತಾಗುತ್ತದೆ. ಸಮಾಜದ ಪ್ರಬಲ ಅಭಿಪ್ರಾಯ ಯಾವುದೋ ಅದರ ಜೊತೆಗೆ ತೂರಿಕೊಂಡು ಹೋಗುವ ಮಂದೆ ಸ್ವಭಾವ ಯಾವುದೇ ಸಮಾಜದಲ್ಲಿ ಸಾಕಷ್ಟಿರುವುದರಿಂದ, ನಿರ್ದಿಷ್ಟವಾದ ಜನಾಭಿಪ್ರಾಯವನ್ನು ಆ ಮೂಲಕ ಉತ್ಪಾದಿಸಲಾಗುತ್ತದೆ.

ಇಂತಹುದನ್ನು ಮಾಡಲು ಶುರು ಮಾಡಿದ ಮಾಧ್ಯಮಗಳು ಯಾವ ಮಟ್ಟಕ್ಕೆ ಮುಟ್ಟಿದವೆಂದರೆ, ಕರ್ನಾಟಕದ ಖ್ಯಾತ ವಿದ್ವಾಂಸ ಕಲಬುರ್ಗಿಯವರಿಂದ ಅವರದ್ದಲ್ಲದ ಹೇಳಿಕೆಯನ್ನು ತಪ್ಪೆಂದು ಬಿಂಬಿಸಿ ಅವರಿಂದ ಕ್ಷಮೆಯನ್ನೂ ಕೇಳಿಸಿಬಿಟ್ಟವು. ಅದೇ ಸಂಗತಿಯು ಅವರ ಹತ್ಯೆ ಮಾಡಲು ಹೊರಟ ಕಾಲಾಳುವಿಗೆ ಉತ್ತೇಜಿಸಲು ಅನುಕೂಲ ಮಾಡಿಕೊಟ್ಟಿತು.

ಎಂ ಎಂ ಕಲಬುರ್ಗಿ. ಚಿತ್ರಕೃಪೆ: Deccan Herald

ಇಂಥದ್ದೇ ಕೆಲಸವನ್ನು ಉಮರ್ ಖಾಲಿದ್, ಕನ್ಹಯ್ಯ ಕುಮಾರ್ ಥರದ ಜೆಎನ್‍ಯು ವಿದ್ಯಾರ್ಥಿಗಳ ಮೇಲೂ ಮಾಡಲಾಯಿತು. 8-10 ತಿಂಗಳ ಕೆಳಗೆ ಅಮೂಲ್ಯ ಎಂಬ ವಿದ್ಯಾರ್ಥಿನಿಯು ತನ್ನ ಬಾಲಿಶತನದ ಕಾರಣಕ್ಕಾಗಿ, ಸಾರ್ವಜನಿಕ ಸಭೆಯೊಂದರಲ್ಲಿ ಏನೋ ಹೇಳಲು ಹೋಗಿ ಇನ್ನೇನೋ ಹೇಳಿದಾಗಲೂ ಅದೇ ನಡೆಯಿತು. ಅಂದು ಕನ್ನಡದ ಟಿವಿ ಚಾನೆಲ್‍ನಲ್ಲಿ ಆಂಕರ್ ಕೂಗಿದ್ದನ್ನು ಕೇಳಿದ ಅಧಿಕಾರಿಯೊಬ್ಬರು ಗಾಬರಿಯಾಗಿ ಫೋನ್ ಮಾಡಿದರು.He  is asking for her blood, how can he do like that? Something has to be done about it ಎಂದಿದ್ದರು.

ತೀರಾ ಇತ್ತೀಚೆಗೆ ಕಾಂಗ್ರೆಸ್‍ನ ರಾಜ್ಯಸಭಾ ಸದಸ್ಯ ರಾಜೀವ್ ತ್ಯಾಗಿಯವರು ಟಿವಿ ಚಾನೆಲ್ಲೊಂದರಲ್ಲಿ ಪ್ಯಾನೆಲ್ ಚರ್ಚೆ ಮುಗಿಸಿಕೊಂಡು ಮನೆಗೆ ಹೋಗಿ ಹೃದಯಾಘಾತದಿಂದ ತೀರಿಕೊಂಡರು. ಸಾಯುವ ಮುನ್ನ ಟಿವಿ ಆಂಕರ್‌ಗಳ ಕುರಿತು ಅವರಾಡಿದ ಕೊನೆ ಮಾತೆಂದರೆ, ‘ಇವರು ನನ್ನನ್ನು ಅವಹೇಳನ ಮಾಡಿದರು, ನನ್ನನ್ನು ಕೊಂದುಬಿಟ್ಟರು’. ಇದನ್ನು ಕೇಳಿದ ಇನ್ನೊಬ್ಬ ಕಾಂಗ್ರೆಸ್ ವಕ್ತಾರ ಪ್ರೊ.ಗೌರವ್ ವಲ್ಲಭ್, ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್‍ರಿಗೆ ‘ಟಿವಿಗೊಂದು ನೀತಿ ಸಂಹಿತೆ ರೂಪಿಸಲು’ ಆನ್‍ಲೈನ್ ಪಿಟಿಷನ್ ಆರಂಭಿಸಿದ್ದಾರೆ.

ರಾಜೀವ್ ತ್ಯಾಗಿ:Photo Courtesy: National Herald

ಟಿವಿ ಆಂಕರ್‌ಗಳು ಕಿರುಚುವ ರೀತಿ, ನಿರ್ದಿಷ್ಟ ಸಮುದಾಯ, ಗುಂಪು, ವ್ಯಕ್ತಿಗಳ ವಿರುದ್ಧ ಪ್ರಚೋದಿಸುವ ರೀತಿಯನ್ನು ನೋಡಿದವರಿಗೆ ಸ್ಪಷ್ಟವಾಗುವ ಸಂಗತಿ ಏನೆಂದರೆ, ಅವರು ಲಿಂಚಿಂಗ್ (ಗುಂಪು ಹತ್ಯೆ)ಗೆ ದಾರಿ ಮಾಡಿಕೊಡುತ್ತಿದ್ದಾರೆ. ಬೇರೆ ಬೇರೆ ರೀತಿಯ ಲಿಂಚಿಂಗ್‍ಗೆ ಸಮ್ಮತಿಯನ್ನು ಉತ್ಪಾದಿಸುತ್ತಿದ್ದಾರೆ. ಇದರಲ್ಲಿ ಸಂದೇಹವೇ ಇಲ್ಲ.

ಎಂದಿನಂತೆ ಪ್ರಶ್ನೆಯಿರುವುದು ಇದರ ಕುರಿತು ಇನ್ನಷ್ಟು ವಿಶ್ಲೇಷಣೆ ಮಾಡುವುದರಲ್ಲಲ್ಲ. ಬದಲಿಗೆ ಇದನ್ನು ಹೇಗೆ ಬದಲಿಸುತ್ತೇವೆ ಎಂಬುದರಲ್ಲಿ. ಇಂದಿನ ಪರಿಸ್ಥಿತಿಯಲ್ಲಿ ಟಿವಿ ಚಾನೆಲ್‍ಗಳ ಮೇಲೆ ನಿಯಂತ್ರಣ ಹೇರಿ ಎಂದು ಸರ್ಕಾರ ಅಥವಾ ನ್ಯಾಯಾಲಯದ ಮೊರೆ ಹೋಗುವುದು ಮೂರ್ಖತನದ ಕೆಲಸವಾದೀತು. ಬದಲಿಗೆ ಪ್ರಜಾತಾಂತ್ರಿಕವಾದ ಮಾಧ್ಯಮ ಸಾಧ್ಯತೆಗಳನ್ನು ಅವಿಷ್ಕರಿಸಿ ವ್ಯಾಪಕವಾದ ಮತ್ತು ಬೃಹತ್ತಾದ ಪ್ರಮಾಣದಲ್ಲಿ ಜಾರಿಗೊಳಿಸುವುದು ಮಾತ್ರ ಇದನ್ನು ತಡೆಯಬಲ್ಲುದು ಮತ್ತು ಇಂದಿನ ಮುಖ್ಯವಾಹಿನಿಯನ್ನು ಅಪ್ರಸ್ತುತಗೊಳಿಸಬಲ್ಲದು. ಆ ನಿಟ್ಟಿನಲ್ಲಿ ಈಗಾಗಲೇ ದೇಶದ ಕೆಲವೆಡೆ ಸೃಜನಶೀಲವಾದ ಪ್ರಯತ್ನಗಳು ನಡೆಯುತ್ತಿದೆ. ಗೌರಿ ಮೀಡಿಯಾ ಸಹಾ ಅದಕ್ಕೆ ಪೂರಕವಾದ ಕೆಲಸದಲ್ಲಿ ತೊಡಗಿದೆ. ನಮ್ಮ ಪ್ರಜ್ಞಾವಂತ ಓದುಗರೂ ಜೊತೆಯಾಗುತ್ತಾರೆಂಬ ವಿಶ್ವಾಸವಿದೆ.


ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...