Homeಅಂಕಣಗಳುಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ... ನಾವೇನು ಮಾಡಬೇಕು?

ಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ… ನಾವೇನು ಮಾಡಬೇಕು?

ಟಿವಿ ಆಂಕರ್‌ಗಳು ಕಿರುಚುವ ರೀತಿ, ನಿರ್ದಿಷ್ಟ ಸಮುದಾಯ, ಗುಂಪು, ವ್ಯಕ್ತಿಗಳ ವಿರುದ್ಧ ಪ್ರಚೋದಿಸುವ ರೀತಿಯನ್ನು ನೋಡಿದವರಿಗೆ ಸ್ಪಷ್ಟವಾಗುವ ಸಂಗತಿ ಏನೆಂದರೆ, ಅವರು ಲಿಂಚಿಂಗ್ (ಗುಂಪು ಹತ್ಯೆ)ಗೆ ದಾರಿ ಮಾಡಿಕೊಡುತ್ತಿದ್ದಾರೆ.

- Advertisement -
- Advertisement -

ಇದೀಗ ತಾನೇ ಸುಪ್ರೀಂಕೋರ್ಟು ಟಿವಿ ಚಾನೆಲ್‍ಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ‘ಯುಪಿಎಸ್‍ಸಿ ಜಿಹಾದ್’ ಹೆಸರಿನಲ್ಲಿ ಸುಳ್ಳು ಮತ್ತು ದ್ವೇಷಪೂರಿತವಾದ ವರದಿ ಪ್ರಸಾರ ಮಾಡಿದ ಸುದರ್ಶನ್ ಟಿವಿಯ ವಿಚಾರದಲ್ಲಿ ಕೆಲವು ಸುಪ್ರೀಂಕೋರ್ಟು ನ್ಯಾಯಾಧೀಶರು ನಿಷ್ಠುರವಾದ ಮಾತುಗಳನ್ನು ಆಡಿದ್ದಾರೆ. ಆದರೆ, ಸಮಸ್ಯೆಯೇನೆಂದರೆ ಮಾಧ್ಯಮಗಳನ್ನು ನಿಯಂತ್ರಣ ಮಾಡಬೇಕೆಂದು ಕೋರ್ಟು ಸೂಚಿಸಿದಲ್ಲಿ, ಆ ನಿಯಂತ್ರಣವನ್ನು ಯಾರು ಮಾಡುತ್ತಾರೆ ಮತ್ತು ಯಾರನ್ನು ಮಾಡುತ್ತಾರೆ ಎಂಬ ಪ್ರಶ್ನೆ ಏಳುತ್ತದೆ. ಏಕೆಂದರೆ ಎಲ್ಲಾ ನಿಯಂತ್ರಕ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರವು ನಿಯಂತ್ರಣಕ್ಕೆ ತೆಗೆದುಕೊಂಡಾಗಿದೆ. ಅಂತಹ ಸಾಧ್ಯತೆಯು ಬೇರೆ ಸರ್ಕಾರಗಳಿರುವಾಗಲೂ ಇದೆ. ಹೀಗಾಗಿ ಮಾಧ್ಯಮ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಯಾರೂ ಇಂತಹ ನಿಯಂತ್ರಣವನ್ನು ಎಂತಹ ಸಂದರ್ಭದಲ್ಲೂ ಒಪ್ಪುವುದಿಲ್ಲ.

ಹಾಗೆಂದು, ಮಾಧ್ಯಮಗಳ ಮೇಲೆ ಯಾರ ಕಡಿವಾಣವೂ ಇರಬಾರದೇ ಎಂಬ ಪ್ರಶ್ನೆಯು ಏಳದೇ ಇರದು. ಏಕೆಂದರೆ ಇದುವರೆಗೆ ಪ್ರಭಾವಶಾಲಿಗಳಾಗಿರುವ ಟಿವಿ ಚಾನೆಲ್‍ಗಳಲ್ಲಿ ಹಲವು ಮಾಧ್ಯಮ ಸಂಸ್ಥೆಗಳಾಗಿ ಉಳಿದಿಲ್ಲ; ಅವು ಲಿಂಚಿಂಗ್ ಕೇಂದ್ರಗಳಾಗಿವೆ. ಇವು ಟಿವಿ ಚಾನೆಲ್‍ಗಳಿಗೆ ಮಾತ್ರ ಸೀಮಿತವಾಗಿಲ್ಲ. ಹಲವಾರು ಪತ್ರಿಕೆಗಳೂ ಅದನ್ನು ಮಾಡಿವೆ. ಪ್ರಜಾತಾಂತ್ರಿಕ ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ನಿಷ್ಠುರವಾದ ಅಭಿಪ್ರಾಯವನ್ನು ಮುಂದಿಟ್ಟ ಸಾಹಿತಿಗಳ ಮೇಲೆ ಅಂತಹ ಸಮರವನ್ನು ಕನ್ನಡದ ಪತ್ರಿಕೆಯ ಸಂಪಾದಕರೊಬ್ಬರು ಆರಂಭಿಸಿದ್ದರು. ಓದುಗರ ಅಭಿಪ್ರಾಯದ ಹೆಸರಿನಲ್ಲಿ ಅವರುಗಳ ಮೇಲೆ ವಾಗ್ದಾಳಿಯನ್ನು ನಡೆಸಲಾಯಿತು. ಈ ಓದುಗರ ಅಭಿಪ್ರಾಯ ಎನ್ನುವುದಕ್ಕೊಂದು ಸಾಧ್ಯತೆ ಇರುತ್ತದೆ. ನಿರ್ದಿಷ್ಟವಾದ ರೀತಿಯ ಅಭಿಪ್ರಾಯವನ್ನು ಜನರು ವ್ಯಕ್ತಪಡಿಸುತ್ತಿದ್ದಾರೆ ಎಂಬುದನ್ನು ಬಿಂಬಿಸಿ, ತಾವು ಆ ಜನಾಭಿಪ್ರಾಯವನ್ನು ಎತ್ತಿ ಹಿಡಿಯುತ್ತಿದ್ದೇವೆ ಎಂದು ಮಾಡುವುದು. ಹಾಗೆ ಮಾಡುವ ಮೂಲಕ ಇತರ ಓದುಗರಿಗೂ ಇದೇ ಪ್ರಬಲವಾದ ಜನಾಭಿಪ್ರಾಯ ಎಂಬ ಭಾವನೆ ಮೂಡುವಂತಾಗುತ್ತದೆ. ಸಮಾಜದ ಪ್ರಬಲ ಅಭಿಪ್ರಾಯ ಯಾವುದೋ ಅದರ ಜೊತೆಗೆ ತೂರಿಕೊಂಡು ಹೋಗುವ ಮಂದೆ ಸ್ವಭಾವ ಯಾವುದೇ ಸಮಾಜದಲ್ಲಿ ಸಾಕಷ್ಟಿರುವುದರಿಂದ, ನಿರ್ದಿಷ್ಟವಾದ ಜನಾಭಿಪ್ರಾಯವನ್ನು ಆ ಮೂಲಕ ಉತ್ಪಾದಿಸಲಾಗುತ್ತದೆ.

ಇಂತಹುದನ್ನು ಮಾಡಲು ಶುರು ಮಾಡಿದ ಮಾಧ್ಯಮಗಳು ಯಾವ ಮಟ್ಟಕ್ಕೆ ಮುಟ್ಟಿದವೆಂದರೆ, ಕರ್ನಾಟಕದ ಖ್ಯಾತ ವಿದ್ವಾಂಸ ಕಲಬುರ್ಗಿಯವರಿಂದ ಅವರದ್ದಲ್ಲದ ಹೇಳಿಕೆಯನ್ನು ತಪ್ಪೆಂದು ಬಿಂಬಿಸಿ ಅವರಿಂದ ಕ್ಷಮೆಯನ್ನೂ ಕೇಳಿಸಿಬಿಟ್ಟವು. ಅದೇ ಸಂಗತಿಯು ಅವರ ಹತ್ಯೆ ಮಾಡಲು ಹೊರಟ ಕಾಲಾಳುವಿಗೆ ಉತ್ತೇಜಿಸಲು ಅನುಕೂಲ ಮಾಡಿಕೊಟ್ಟಿತು.

ಎಂ ಎಂ ಕಲಬುರ್ಗಿ. ಚಿತ್ರಕೃಪೆ: Deccan Herald

ಇಂಥದ್ದೇ ಕೆಲಸವನ್ನು ಉಮರ್ ಖಾಲಿದ್, ಕನ್ಹಯ್ಯ ಕುಮಾರ್ ಥರದ ಜೆಎನ್‍ಯು ವಿದ್ಯಾರ್ಥಿಗಳ ಮೇಲೂ ಮಾಡಲಾಯಿತು. 8-10 ತಿಂಗಳ ಕೆಳಗೆ ಅಮೂಲ್ಯ ಎಂಬ ವಿದ್ಯಾರ್ಥಿನಿಯು ತನ್ನ ಬಾಲಿಶತನದ ಕಾರಣಕ್ಕಾಗಿ, ಸಾರ್ವಜನಿಕ ಸಭೆಯೊಂದರಲ್ಲಿ ಏನೋ ಹೇಳಲು ಹೋಗಿ ಇನ್ನೇನೋ ಹೇಳಿದಾಗಲೂ ಅದೇ ನಡೆಯಿತು. ಅಂದು ಕನ್ನಡದ ಟಿವಿ ಚಾನೆಲ್‍ನಲ್ಲಿ ಆಂಕರ್ ಕೂಗಿದ್ದನ್ನು ಕೇಳಿದ ಅಧಿಕಾರಿಯೊಬ್ಬರು ಗಾಬರಿಯಾಗಿ ಫೋನ್ ಮಾಡಿದರು.He  is asking for her blood, how can he do like that? Something has to be done about it ಎಂದಿದ್ದರು.

ತೀರಾ ಇತ್ತೀಚೆಗೆ ಕಾಂಗ್ರೆಸ್‍ನ ರಾಜ್ಯಸಭಾ ಸದಸ್ಯ ರಾಜೀವ್ ತ್ಯಾಗಿಯವರು ಟಿವಿ ಚಾನೆಲ್ಲೊಂದರಲ್ಲಿ ಪ್ಯಾನೆಲ್ ಚರ್ಚೆ ಮುಗಿಸಿಕೊಂಡು ಮನೆಗೆ ಹೋಗಿ ಹೃದಯಾಘಾತದಿಂದ ತೀರಿಕೊಂಡರು. ಸಾಯುವ ಮುನ್ನ ಟಿವಿ ಆಂಕರ್‌ಗಳ ಕುರಿತು ಅವರಾಡಿದ ಕೊನೆ ಮಾತೆಂದರೆ, ‘ಇವರು ನನ್ನನ್ನು ಅವಹೇಳನ ಮಾಡಿದರು, ನನ್ನನ್ನು ಕೊಂದುಬಿಟ್ಟರು’. ಇದನ್ನು ಕೇಳಿದ ಇನ್ನೊಬ್ಬ ಕಾಂಗ್ರೆಸ್ ವಕ್ತಾರ ಪ್ರೊ.ಗೌರವ್ ವಲ್ಲಭ್, ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್‍ರಿಗೆ ‘ಟಿವಿಗೊಂದು ನೀತಿ ಸಂಹಿತೆ ರೂಪಿಸಲು’ ಆನ್‍ಲೈನ್ ಪಿಟಿಷನ್ ಆರಂಭಿಸಿದ್ದಾರೆ.

ರಾಜೀವ್ ತ್ಯಾಗಿ:Photo Courtesy: National Herald

ಟಿವಿ ಆಂಕರ್‌ಗಳು ಕಿರುಚುವ ರೀತಿ, ನಿರ್ದಿಷ್ಟ ಸಮುದಾಯ, ಗುಂಪು, ವ್ಯಕ್ತಿಗಳ ವಿರುದ್ಧ ಪ್ರಚೋದಿಸುವ ರೀತಿಯನ್ನು ನೋಡಿದವರಿಗೆ ಸ್ಪಷ್ಟವಾಗುವ ಸಂಗತಿ ಏನೆಂದರೆ, ಅವರು ಲಿಂಚಿಂಗ್ (ಗುಂಪು ಹತ್ಯೆ)ಗೆ ದಾರಿ ಮಾಡಿಕೊಡುತ್ತಿದ್ದಾರೆ. ಬೇರೆ ಬೇರೆ ರೀತಿಯ ಲಿಂಚಿಂಗ್‍ಗೆ ಸಮ್ಮತಿಯನ್ನು ಉತ್ಪಾದಿಸುತ್ತಿದ್ದಾರೆ. ಇದರಲ್ಲಿ ಸಂದೇಹವೇ ಇಲ್ಲ.

ಎಂದಿನಂತೆ ಪ್ರಶ್ನೆಯಿರುವುದು ಇದರ ಕುರಿತು ಇನ್ನಷ್ಟು ವಿಶ್ಲೇಷಣೆ ಮಾಡುವುದರಲ್ಲಲ್ಲ. ಬದಲಿಗೆ ಇದನ್ನು ಹೇಗೆ ಬದಲಿಸುತ್ತೇವೆ ಎಂಬುದರಲ್ಲಿ. ಇಂದಿನ ಪರಿಸ್ಥಿತಿಯಲ್ಲಿ ಟಿವಿ ಚಾನೆಲ್‍ಗಳ ಮೇಲೆ ನಿಯಂತ್ರಣ ಹೇರಿ ಎಂದು ಸರ್ಕಾರ ಅಥವಾ ನ್ಯಾಯಾಲಯದ ಮೊರೆ ಹೋಗುವುದು ಮೂರ್ಖತನದ ಕೆಲಸವಾದೀತು. ಬದಲಿಗೆ ಪ್ರಜಾತಾಂತ್ರಿಕವಾದ ಮಾಧ್ಯಮ ಸಾಧ್ಯತೆಗಳನ್ನು ಅವಿಷ್ಕರಿಸಿ ವ್ಯಾಪಕವಾದ ಮತ್ತು ಬೃಹತ್ತಾದ ಪ್ರಮಾಣದಲ್ಲಿ ಜಾರಿಗೊಳಿಸುವುದು ಮಾತ್ರ ಇದನ್ನು ತಡೆಯಬಲ್ಲುದು ಮತ್ತು ಇಂದಿನ ಮುಖ್ಯವಾಹಿನಿಯನ್ನು ಅಪ್ರಸ್ತುತಗೊಳಿಸಬಲ್ಲದು. ಆ ನಿಟ್ಟಿನಲ್ಲಿ ಈಗಾಗಲೇ ದೇಶದ ಕೆಲವೆಡೆ ಸೃಜನಶೀಲವಾದ ಪ್ರಯತ್ನಗಳು ನಡೆಯುತ್ತಿದೆ. ಗೌರಿ ಮೀಡಿಯಾ ಸಹಾ ಅದಕ್ಕೆ ಪೂರಕವಾದ ಕೆಲಸದಲ್ಲಿ ತೊಡಗಿದೆ. ನಮ್ಮ ಪ್ರಜ್ಞಾವಂತ ಓದುಗರೂ ಜೊತೆಯಾಗುತ್ತಾರೆಂಬ ವಿಶ್ವಾಸವಿದೆ.


ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...