Homeಅಂಕಣಗಳುಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? - ಡಿ.ಉಮಾಪತಿ

ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ಬಿಸಿಯೂಟದ ಅಡುಗೆ ಮಾಡುವ ಹೆಣ್ಣುಮಕ್ಕಳು ದಲಿತರೆಂಬ ಕಾರಣಕ್ಕೆ ಪೋಷಕರು ಊಟಕ್ಕೇ ಬಹಿಷ್ಕಾರ ಹಾಕಿದ್ದ ಘಟನೆಗಳು ನಮ್ಮದೇ ಕರ್ನಾಟಕದಿಂದ ವರದಿಯಾಗಿ ತಣ್ಣಗಾಗಿವೆ.

- Advertisement -
- Advertisement -

ಮತ್ತೊಬ್ಬ ದಲಿತ ಮಗಳು ಮೇಲ್ಜಾತಿಯ ಅಹಂಕಾರದ ಬರ್ಬರ ಬೆಂಕಿಯಲ್ಲಿ ಬೆಂದು ಬೂದಿಯಾಗಿ ಮಣ್ಣು ಸೇರಿದ್ದಾಳೆ. ಸದ್ಯದಲ್ಲೇ ಅಂಕಿ ಸಂಖ್ಯೆಯಾಗಿ ಮಾತ್ರವೇ ಇತಿಹಾಸದಲ್ಲಿ ದಾಖಲಾಗಿಬಿಡುತ್ತಾಳೆ.

ದೇಶದ ರಾಜಧಾನಿ ದೆಹಲಿಯಿಂದ ಹೆಚ್ಚು ದೂರವೇನೂ ಇಲ್ಲದ ಹಾಥ್ರಸ್‍ನ ಈ ಮಗಳು ಎದುರಿಸಿದ ಹಿಂಸೆ ಪೈಶಾಚಿಕ ಸ್ವರೂಪದ್ದು. ಹದಿನೈದು ದಿನಗಳ ಕಾಲ ಆಕೆಗೆ ವೈದ್ಯಕೀಯ ಚಿಕಿತ್ಸೆ ನೀಡದೆ ಅಕ್ಷರಶಃ ಕೊಂದ ಕಾರಸ್ಥಾನದಲ್ಲಿ ಸರ್ಕಾರ- ಸಮಾಜದ ಕೈಗಳು ರಕ್ತಸಿಕ್ತವಾಗಿವೆ.

ತನುಶ್ರೀ ಪಾಂಡೆ ಎಂಬ ದೆಹಲಿಯ ಎಳೆಯ ಉತ್ಸಾಹಿ ಟಿವಿ ವರದಿಗಾರ್ತಿಯ ಕಳಕಳಿಯ ಕಸಬುದಾರಿಕೆಯು ಈ ಕೊಲೆಗಡುಕತನವನ್ನು ಬೆತ್ತಲಾಗಿಸಿತು. ಇಲ್ಲದೆ ಹೋಗಿದ್ದರೆ ಹಳ್ಳಿಗಾಡುಗಳಲ್ಲಿ ಸಮಾಧಿಯಾಗುವ ಇಂತಹದೇ ಸಾವಿರಾರು ಪ್ರಕರಣಗಳ ಸಾಲಿಗೆ ಈ ಪ್ರಕರಣವೂ ಸೇರಿ ಹೋಗುತ್ತಿತ್ತು.

ತನುಶ್ರೀ ಪಾಂಡೆ : Photo Courtesy: SheThePeopleTv

ಸಮೂಹ ಮಾಧ್ಯಮಗಳ ಪ್ರಚಾರದ ಮುಂಬೆಳಕು ಬೀಳದ ಹತ್ತಾರು ಸಾವಿರ ನತದೃಷ್ಟ ಪ್ರಕರಣಗಳು ದಶಕಗಳಿಂದ ಕೊಳೆಯುತ್ತಿವೆ. ಸಾಮಾಜಿಕ ಕಳಂಕದ ಕ್ರೂರ ಹೊರೆ ಹೊತ್ತು ದೇಶದ ನಾನಾ ನ್ಯಾಯಾಲಯಗಳಲ್ಲಿ ಧೂಳು ಹಿಡಿದಿರುವ ಕಡತಗಳಲ್ಲಿ ಹೂತು ಹೋಗಿರುವ ಲಕ್ಷಾಂತರ ಹೆಣ್ಣು ಜೀವಗಳ ಮೊರೆಯನ್ನು ಕೇಳುವವರು ಯಾರು?

ಕೊಂಬೆ ಕೊಂಬೆಗಳಲ್ಲಿ ಚಿನ್ನದ ಹಕ್ಕಿಗಳು ಕೂಗುತ್ತಿದ್ದವೆಂದು ಹೇಳಲಾಗುವ ಭವ್ಯ ಇತಿಹಾಸದ ಭಾರತ ದೇಶದ ಹಿಂದೂಗಳಿಗೆ ದಲಿತರು ಮನುಷ್ಯರಂತೆ ಯಾವ ಕಾಲಕ್ಕೆ ಕಾಣಬಹುದು ಎಂಬ ಪ್ರಶ್ನೆ ನಿರಂತರ ಪ್ರಶ್ನೆಯಾಗಿಯೇ ಉಳಿಯಲಿದೆ. ರಕ್ತದಲ್ಲಿ ಬೆರೆತು ಹೋಗಿರುವ ಈ ಅಸಮಾನತೆ ಅಳಿಯುವ ಸಾಧ್ಯತೆ ದೂರ ದಿಗಂತದ ಚುಕ್ಕೆಯಾಗಿಯೂ ಕಾಣಬರುತ್ತಿಲ್ಲ.

photo courtesy : Pratirodh

ಇಂಡಿಯಾ ದೇಶದಲ್ಲಿ ನೀವು ಸವರ್ಣೀಯರಾಗಿದ್ದರೆ, ದಲಿತ ಸಮುದಾಯದಿಂದ ಬಂದ ವ್ಯಕ್ತಿಯೊಬ್ಬನಿಗೆ ಏನಾಗುತ್ತಿದೆಯೆಂದು ಅರಿಯುವುದು ನಿಮಗೆ ಸಾಧ್ಯವೇ ಇಲ್ಲ. ದಲಿತರನ್ನು ಹೇಗೆ ಕಾಣಲಾಗುತ್ತಿದೆ ಮತ್ತು ಅವರ ಜಗತ್ತು ವಾಸ್ತವದಲ್ಲಿ ಹೇಗಿದೆ ಎಂಬ ಸಂಗತಿಯನ್ನು ಬೆರಳೆಣಿಕೆಯ ಜನರಷ್ಟೇ ಬಲ್ಲರು ಎನ್ನುತ್ತಾರೆ ಸಂವೇದನಾಶೀಲ ಚಲನಚಿತ್ರ ನಿರ್ದೇಶಕ ಶ್ಯಾಮ್ ಬೆನೆಗಲ್.

ನಖಶಿಖಾಂತ ಮೇಲು ಕೀಳನ್ನು ಸಾರಿ ಹೇಳುವ ವರ್ಣವ್ಯವಸ್ಥೆಯು ಇಂಡಿಯಾದ ಕೆಳವರ್ಗಗಳ ದಿಕ್ಕೆಟ್ಟ ಬದುಕುಗಳಿಗೆ ಬೀಸಿ ಬಡಿಯುತ್ತಲೇ ಇರುವ ತೀರದ ಶಾಪ. ಈ ವ್ಯವಸ್ಥೆಯನ್ನು ಅನವರತ ಜೀವಂತ ಇರಿಸುವುದನ್ನೇ ಪರಮವೈಭವ ಎಂದು ಭಾವಿಸುತ್ತಾರೆ ಯಥಾಸ್ಥಿತಿವಾದಿಗಳು. ನಾವೆಲ್ಲ ಒಂದು ಎಂದು ಹೇಳುತ್ತಲೇ ವಂಚಿತ ಸಮುದಾಯಗಳ ಇಹದ ಬದುಕನ್ನು ನರಕ ಆಗಿಸುತ್ತಿದ್ದಾರೆ. ಇಲ್ಲವೇ ಅವರನ್ನು ಕೊಂದು ನಿವಾರಿಸಿ ಭರತಭೂಮಿಗೆ ಅಂಟಿರುವ ‘ಪಾಪ’- ‘ಕಳಂಕ’ವನ್ನು ತೊಳೆಯತೊಡಗಿದ್ದಾರೆ.

ಅವಮಾನಿತ ಕೆಳಜಾತಿಗಳ ದಮನದ ಅಮಾನುಷ ಮುಖಗಳು ಹತ್ತು ಹಲವು. ದಲಿತರು ಚಪ್ಪಲಿ ಧರಿಸುವುದನ್ನು ನಿಷೇಧಿಸಿರುವ, ಊರು ಪ್ರವೇಶ ಮಾಡುವ ಮುನ್ನ ಚಪ್ಪಲಿಯನ್ನು ಕಳಚಿ ಕೈಲಿ ಹಿಡಿದು ನಡೆಯಬೇಕಾದ, ಏರಿದ್ದ ಸೈಕಲ್ಲನ್ನು ಇಳಿದು ಅದನ್ನು ತಳ್ಳಿಕೊಂಡೇ ಮೇಲ್ಜಾತಿಗಳ ವಸತಿಯನ್ನು ಹಾದು ಹೋಗಬೇಕಾದ ರೂಢಿ ಇಂದಿಗೂ ಜಾರಿಯಲ್ಲಿರುವ ಸಾವಿರಾರು ಹಳ್ಳಿಗಳಿವೆ.

ಉತ್ತರಭಾರತದ ಮದುವೆಗಳಲ್ಲಿ ವರ ಕುದುರೆಯೇರಿ ದಿಬ್ಬಣ ಹೊರಡುವ ರಿವಾಜಿದೆ. ದಲಿತರು ಕುದುರೆ ಏರುವಂತಿಲ್ಲ. ಆನೆ ಕುದುರೆ ಎತ್ತಿನ ಗಾಡಿ ಏರಿದ ದಲಿತ ಮದುಮಕ್ಕಳನ್ನು ಮೇಲು ಜಾತಿಗಳು ಥಳಿಸಿ ರಂಪ ಮಾಡುವ ವಿದ್ಯಮಾನಗಳು ಇಂದಿಗೂ ಅಳಿದಿಲ್ಲ.

ಮೋಟರ್ ಸೈಕಲ್ ಸವಾರಿ ಮಾಡುವ ದಲಿತ ಯುವಕನ ಮೂಗು ಕತ್ತರಿಸುವ, ಅಂಬೇಡ್ಕರ್ ರಿಂಗ್‍ಟೋನನ್ನು ತೆಗೆದು ಹಾಕಲಿಲ್ಲವೆಂದು ದಲಿತ ತರುಣನ ಪ್ರಾಣವನ್ನೇ ತೆಗೆಯುವ, ದಲಿತ ಪ್ರೊಫೆಸರಿಗೆ ಬಾಡಿಗೆ ಮನೆ ನಿರಾಕರಿಸುವ, ಮೂರು ವರ್ಷದ ದಲಿತ ಹಸುಳೆಗೆ ಕ್ಷೌರ ಮಾಡಲು ನಿರಾಕರಿಸುವ, ಮೇಲ್ಜಾತಿಯ ಮಕ್ಕಳ ತಟ್ಟೆ ಮುಟ್ಟಿದನೆಂದು ಎಳೆಯ ದಲಿತ ಜೀವವನ್ನು ಥಳಿಸುವ ಘಟನೆಗಳು ಈ ಸಮಾಜದ ಆತ್ಮಸಾಕ್ಷಿಯನ್ನು ಕಲಕುವುದೇ ಇಲ್ಲ.

ಅತ್ಯಾಚಾರವನ್ನು ಪ್ರತಿಭಟಿಸಿದ ದಲಿತ ಬಾಲಕಿಯೊಬ್ಬಳ ಮೂಗು, ಕಿವಿ ಹಾಗೂ ತೋಳನ್ನು ಕತ್ತರಿಸಿ ಒಗೆದವರು ಮೇಲ್ಚಾತಿಗಳ ಬಲಾತ್ಕಾರಿಗಳು. ಆಕೆಯ ದುಪಟ್ಟಾದಿಂದಲೇ ಬಾಲೆಯ ಕಣ್ಣು ಕಟ್ಟಿದ ಧೂರ್ತರು ಮೂಗು ಕಿವಿ ತೋಳನ್ನು ಕೊಡಲಿಯಿಂದ ಕತ್ತರಿಸಿ ಒಗೆದ ಘಟನೆ ನಡೆದದ್ದು ಮಧ್ಯಪ್ರದೇಶದಲ್ಲಿ.

ಛತ್ತೀಸ್‍ಗಢದ ಬಡ ಓರಾನ್ ಆದಿವಾಸಿ ಕುಟುಂಬದ ಮಗಳು ಹದಿನಾರರ ಮೀನಾ ಖಾಲ್ಕೋ. ಒಂದು ಸಂಜೆ ಸೈಕಲ್ ಹತ್ತಿ ಗೆಳತಿಯ ಮನೆಗೆ ತೆರಳಿದವಳು ಪತ್ತೆಯಾದದ್ದು ಆಸ್ಪತ್ರೆಯಲ್ಲಿ. ಸಾವು ಬದುಕಿನ ನಡುವಣ ಹೋರಾಟದಲ್ಲಿ. ಬಾಲೆಯನ್ನು ಅಪಹರಿಸಿದ ಪೊಲೀಸರು ಸಾಮೂಹಿಕ ಬಲಾತ್ಕಾರ ಎಸಗಿ ಗುಂಡು ಹೊಡೆದು ಆಕೆಗೆ ಮಾವೋವಾದಿಯ ಹಣೆಪಟ್ಟಿ ಕಟ್ಟಿದ್ದರು.

ಮಧ್ಯಾಹ್ನದ ಬಿಸಿಯೂಟ ನೀಡಲು ದಲಿತ ಮಕ್ಕಳನ್ನು ದೂರ ಬೇರೆ ಪಂಕ್ತಿಯಲ್ಲಿ ಕೂರಿಸುವ ರೂಢಿ ಕೇವಲ ಮಧ್ಯಪ್ರದೇಶಕ್ಕೆ ಮಾತ್ರ ಸೀಮಿತ ಅಲ್ಲ. ಇತರೆ ಮಕ್ಕಳಿಗೆ ನೀಡುವ ಪ್ರಮಾಣದ ಕಾಲು ಭಾಗದಷ್ಟನ್ನು ಮಾತ್ರವೇ ದಲಿತ ಮಕ್ಕಳಿಗೆ ಬಡಿಸಿ, ಎರಡನೆಯ ಬಾರಿ ಕೇಳಿದರೆ ಅವಮಾನ ಮಾಡುವ ಪ್ರಕರಣಗಳು ಸರ್ವೇ ಸಾಧಾರಣ. ಮೇಲ್ಜಾತಿಯ ಮಕ್ಕಳಿಗೆ ಬಡಿಸಿ ಉಳಿದ ಚೂರು ಪಾರನ್ನು ದಲಿತ ಮಕ್ಕಳಿಗೆ ಹಾಕುವ ಶಿಕ್ಷಕರ ಮನಸ್ಥಿತಿಗಳು ಅಪರೂಪ ಅಲ್ಲ.

ಬಿಸಿಯೂಟದ ಅಡುಗೆ ಮಾಡುವ ಹೆಣ್ಣುಮಕ್ಕಳು ದಲಿತರೆಂಬ ಕಾರಣಕ್ಕೆ ಪೋಷಕರು ಊಟಕ್ಕೇ ಬಹಿಷ್ಕಾರ ಹಾಕಿದ್ದ ಘಟನೆಗಳು ನಮ್ಮದೇ ಕರ್ನಾಟಕದಿಂದ ವರದಿಯಾಗಿ ತಣ್ಣಗಾಗಿವೆ.

ಥಳಗುಟ್ಟುವ ಭಾರತದ ಆಚೆಗೆ ಬದುಕಿರುವ ಕಗ್ಗತ್ತಲ ಉದ್ದಗಲಗಳಲ್ಲಿ ಜಾತಿ ಬಲವುಳ್ಳವರು, ಹಣದ ಸೊಕ್ಕಿನವರು, ಧರ್ಮದುರಂಧರರು, ಪಿತೃಪ್ರಧಾನ್ಯತೆಯ ಪರಿಪಾಲಕರು, ಪೊಲೀಸರು, ಪ್ಯಾರಾಮಿಲಿಟರಿಗಳ ಅಟ್ಟಹಾಸಗಳಲ್ಲಿ ಈ ಜೀವಗಳು ನಲುಗಿಹೋಗುತ್ತಿವೆ. ಇವರು ಮಾತು ಸತ್ತವರು, ಕಾಸಿಲ್ಲದವರು, ತುಳಿಸಿಕೊಂಡವರು, ಒಕ್ಕಲೆಬ್ಬಿಸಿ ದಬ್ಬಲಾದ ಅನಾಥ ಆದಿವಾಸಿಗಳು. ತಮ್ಮ ಮಾನ ಪ್ರಾಣ ಕಣ್ಣೀರುಗಳಿಗೆ ಕಾಸಿನ ಕಿಮ್ಮತ್ತೂ ಇಲ್ಲದ ದೈನೇಸಿಗಳು. ಖೈರ್ಲಾಂಜಿ, ಕಂಬಾಲಪಲ್ಲಿಗಳಲ್ಲಿ ಬೂದಿಯಾದವರು ಇವರು.

ಭಾರತೀಯ ಸೇನೆಯ ಹನ್ನೊಂದು ಮಂದಿ ಸಿಪಾಯಿಗಳು ಚಿತ್ರಹಿಂಸೆಯ ನಂತರ ಸಾಮೂಹಿಕ ಮಾನಭಂಗ ಮಾಡಿ ಜನನೇಂದ್ರಿಯಕ್ಕೆ ಕಾಡತೂಸುಗಳ ಸಿಡಿಸಿ ಕೊಂದ ಪ್ರಕರಣದ ಬಲಿಪಶು ಮಣಿಪುರದ ಥಂಗ್ಲಾಮ್ ಮನೋರಮಾದೇವಿ ಎಂಬ ಯುವತಿ. 2004ರ ಈ ಪ್ರಕರಣದ ಅಪರಾಧಿಗಳನ್ನು ಕಾನೂನಿನ ಕೈಗಳು ಈಗಲೂ ಮುಟ್ಟಿಲ್ಲ. 1991ರಲ್ಲಿ ಕಾಶ್ಮೀರದ ಮೂವತ್ತು ಮಹಿಳೆಯರ ಮೇಲೆ ಸೇನೆ ನಡೆಸಿತೆನ್ನಲಾದ ಅತ್ಯಾಚಾರ ಪ್ರಕರಣದ ಮರುವಿಚಾರಣೆ ಇನ್ನೂ ಮುಗಿದಿಲ್ಲ.

ಶೇ.75ರಷ್ಟು ಅತ್ಯಾಚಾರ ಪ್ರಕರಣಗಳು ನಡೆಯುವುದು ಗ್ರಾಮೀಣ ಭಾರತದಲ್ಲಿ ಎಂಬುದಾಗಿ ದಿಲ್ಲಿಯ ನ್ಯಾಷನಲ್ ಲಾ ಯೂನಿವರ್ಸಿಟಿಯ ಸಮೀಕ್ಷೆಯಿಂದ ತಿಳಿದುಬಂದಿತ್ತು. ಗ್ರಾಮೀಣ ಪ್ರದೇಶಗಳ ಅತ್ಯಾಚಾರ ಪ್ರಕರಣಗಳನ್ನು ಜಾತಿ – ವರ್ಗ ಹಾಗೂ ಊಳಿಗಮಾನ್ಯ ವ್ಯವಸ್ಥೆಗಳು ಅಲ್ಲಲ್ಲಿಯೇ ಅದುಮಿ ಹೂತು ಹಾಕುತ್ತಿವೆ.

ಪ್ರಾಣ ಮತ್ತು ಮಾನಹರಣದ ಶುದ್ಧೀಕರಣದ ಹಿಂದೂ ಮಹಾಯಜ್ಞಕ್ಕೆ ದಲಿತರು ಈ ದೇಶದಲ್ಲಿ ನಿರಂತರ ಬಲಿಪಶುಗಳು.


ಇದನ್ನೂ ಓದಿ: ರಾಜಕೀಯ ಸಾಧನವಾಗಿ ಅತ್ಯಾಚಾರದ ಕಲ್ಪನೆಯನ್ನು ಸಾವರ್ಕರ್ ಸಮರ್ಥಿಸಿಕೊಂಡಿದ್ದು ಹೀಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...