Homeಅಂಕಣಗಳುಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? - ಡಿ.ಉಮಾಪತಿ

ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ಬಿಸಿಯೂಟದ ಅಡುಗೆ ಮಾಡುವ ಹೆಣ್ಣುಮಕ್ಕಳು ದಲಿತರೆಂಬ ಕಾರಣಕ್ಕೆ ಪೋಷಕರು ಊಟಕ್ಕೇ ಬಹಿಷ್ಕಾರ ಹಾಕಿದ್ದ ಘಟನೆಗಳು ನಮ್ಮದೇ ಕರ್ನಾಟಕದಿಂದ ವರದಿಯಾಗಿ ತಣ್ಣಗಾಗಿವೆ.

- Advertisement -
- Advertisement -

ಮತ್ತೊಬ್ಬ ದಲಿತ ಮಗಳು ಮೇಲ್ಜಾತಿಯ ಅಹಂಕಾರದ ಬರ್ಬರ ಬೆಂಕಿಯಲ್ಲಿ ಬೆಂದು ಬೂದಿಯಾಗಿ ಮಣ್ಣು ಸೇರಿದ್ದಾಳೆ. ಸದ್ಯದಲ್ಲೇ ಅಂಕಿ ಸಂಖ್ಯೆಯಾಗಿ ಮಾತ್ರವೇ ಇತಿಹಾಸದಲ್ಲಿ ದಾಖಲಾಗಿಬಿಡುತ್ತಾಳೆ.

ದೇಶದ ರಾಜಧಾನಿ ದೆಹಲಿಯಿಂದ ಹೆಚ್ಚು ದೂರವೇನೂ ಇಲ್ಲದ ಹಾಥ್ರಸ್‍ನ ಈ ಮಗಳು ಎದುರಿಸಿದ ಹಿಂಸೆ ಪೈಶಾಚಿಕ ಸ್ವರೂಪದ್ದು. ಹದಿನೈದು ದಿನಗಳ ಕಾಲ ಆಕೆಗೆ ವೈದ್ಯಕೀಯ ಚಿಕಿತ್ಸೆ ನೀಡದೆ ಅಕ್ಷರಶಃ ಕೊಂದ ಕಾರಸ್ಥಾನದಲ್ಲಿ ಸರ್ಕಾರ- ಸಮಾಜದ ಕೈಗಳು ರಕ್ತಸಿಕ್ತವಾಗಿವೆ.

ತನುಶ್ರೀ ಪಾಂಡೆ ಎಂಬ ದೆಹಲಿಯ ಎಳೆಯ ಉತ್ಸಾಹಿ ಟಿವಿ ವರದಿಗಾರ್ತಿಯ ಕಳಕಳಿಯ ಕಸಬುದಾರಿಕೆಯು ಈ ಕೊಲೆಗಡುಕತನವನ್ನು ಬೆತ್ತಲಾಗಿಸಿತು. ಇಲ್ಲದೆ ಹೋಗಿದ್ದರೆ ಹಳ್ಳಿಗಾಡುಗಳಲ್ಲಿ ಸಮಾಧಿಯಾಗುವ ಇಂತಹದೇ ಸಾವಿರಾರು ಪ್ರಕರಣಗಳ ಸಾಲಿಗೆ ಈ ಪ್ರಕರಣವೂ ಸೇರಿ ಹೋಗುತ್ತಿತ್ತು.

ತನುಶ್ರೀ ಪಾಂಡೆ : Photo Courtesy: SheThePeopleTv

ಸಮೂಹ ಮಾಧ್ಯಮಗಳ ಪ್ರಚಾರದ ಮುಂಬೆಳಕು ಬೀಳದ ಹತ್ತಾರು ಸಾವಿರ ನತದೃಷ್ಟ ಪ್ರಕರಣಗಳು ದಶಕಗಳಿಂದ ಕೊಳೆಯುತ್ತಿವೆ. ಸಾಮಾಜಿಕ ಕಳಂಕದ ಕ್ರೂರ ಹೊರೆ ಹೊತ್ತು ದೇಶದ ನಾನಾ ನ್ಯಾಯಾಲಯಗಳಲ್ಲಿ ಧೂಳು ಹಿಡಿದಿರುವ ಕಡತಗಳಲ್ಲಿ ಹೂತು ಹೋಗಿರುವ ಲಕ್ಷಾಂತರ ಹೆಣ್ಣು ಜೀವಗಳ ಮೊರೆಯನ್ನು ಕೇಳುವವರು ಯಾರು?

ಕೊಂಬೆ ಕೊಂಬೆಗಳಲ್ಲಿ ಚಿನ್ನದ ಹಕ್ಕಿಗಳು ಕೂಗುತ್ತಿದ್ದವೆಂದು ಹೇಳಲಾಗುವ ಭವ್ಯ ಇತಿಹಾಸದ ಭಾರತ ದೇಶದ ಹಿಂದೂಗಳಿಗೆ ದಲಿತರು ಮನುಷ್ಯರಂತೆ ಯಾವ ಕಾಲಕ್ಕೆ ಕಾಣಬಹುದು ಎಂಬ ಪ್ರಶ್ನೆ ನಿರಂತರ ಪ್ರಶ್ನೆಯಾಗಿಯೇ ಉಳಿಯಲಿದೆ. ರಕ್ತದಲ್ಲಿ ಬೆರೆತು ಹೋಗಿರುವ ಈ ಅಸಮಾನತೆ ಅಳಿಯುವ ಸಾಧ್ಯತೆ ದೂರ ದಿಗಂತದ ಚುಕ್ಕೆಯಾಗಿಯೂ ಕಾಣಬರುತ್ತಿಲ್ಲ.

photo courtesy : Pratirodh

ಇಂಡಿಯಾ ದೇಶದಲ್ಲಿ ನೀವು ಸವರ್ಣೀಯರಾಗಿದ್ದರೆ, ದಲಿತ ಸಮುದಾಯದಿಂದ ಬಂದ ವ್ಯಕ್ತಿಯೊಬ್ಬನಿಗೆ ಏನಾಗುತ್ತಿದೆಯೆಂದು ಅರಿಯುವುದು ನಿಮಗೆ ಸಾಧ್ಯವೇ ಇಲ್ಲ. ದಲಿತರನ್ನು ಹೇಗೆ ಕಾಣಲಾಗುತ್ತಿದೆ ಮತ್ತು ಅವರ ಜಗತ್ತು ವಾಸ್ತವದಲ್ಲಿ ಹೇಗಿದೆ ಎಂಬ ಸಂಗತಿಯನ್ನು ಬೆರಳೆಣಿಕೆಯ ಜನರಷ್ಟೇ ಬಲ್ಲರು ಎನ್ನುತ್ತಾರೆ ಸಂವೇದನಾಶೀಲ ಚಲನಚಿತ್ರ ನಿರ್ದೇಶಕ ಶ್ಯಾಮ್ ಬೆನೆಗಲ್.

ನಖಶಿಖಾಂತ ಮೇಲು ಕೀಳನ್ನು ಸಾರಿ ಹೇಳುವ ವರ್ಣವ್ಯವಸ್ಥೆಯು ಇಂಡಿಯಾದ ಕೆಳವರ್ಗಗಳ ದಿಕ್ಕೆಟ್ಟ ಬದುಕುಗಳಿಗೆ ಬೀಸಿ ಬಡಿಯುತ್ತಲೇ ಇರುವ ತೀರದ ಶಾಪ. ಈ ವ್ಯವಸ್ಥೆಯನ್ನು ಅನವರತ ಜೀವಂತ ಇರಿಸುವುದನ್ನೇ ಪರಮವೈಭವ ಎಂದು ಭಾವಿಸುತ್ತಾರೆ ಯಥಾಸ್ಥಿತಿವಾದಿಗಳು. ನಾವೆಲ್ಲ ಒಂದು ಎಂದು ಹೇಳುತ್ತಲೇ ವಂಚಿತ ಸಮುದಾಯಗಳ ಇಹದ ಬದುಕನ್ನು ನರಕ ಆಗಿಸುತ್ತಿದ್ದಾರೆ. ಇಲ್ಲವೇ ಅವರನ್ನು ಕೊಂದು ನಿವಾರಿಸಿ ಭರತಭೂಮಿಗೆ ಅಂಟಿರುವ ‘ಪಾಪ’- ‘ಕಳಂಕ’ವನ್ನು ತೊಳೆಯತೊಡಗಿದ್ದಾರೆ.

ಅವಮಾನಿತ ಕೆಳಜಾತಿಗಳ ದಮನದ ಅಮಾನುಷ ಮುಖಗಳು ಹತ್ತು ಹಲವು. ದಲಿತರು ಚಪ್ಪಲಿ ಧರಿಸುವುದನ್ನು ನಿಷೇಧಿಸಿರುವ, ಊರು ಪ್ರವೇಶ ಮಾಡುವ ಮುನ್ನ ಚಪ್ಪಲಿಯನ್ನು ಕಳಚಿ ಕೈಲಿ ಹಿಡಿದು ನಡೆಯಬೇಕಾದ, ಏರಿದ್ದ ಸೈಕಲ್ಲನ್ನು ಇಳಿದು ಅದನ್ನು ತಳ್ಳಿಕೊಂಡೇ ಮೇಲ್ಜಾತಿಗಳ ವಸತಿಯನ್ನು ಹಾದು ಹೋಗಬೇಕಾದ ರೂಢಿ ಇಂದಿಗೂ ಜಾರಿಯಲ್ಲಿರುವ ಸಾವಿರಾರು ಹಳ್ಳಿಗಳಿವೆ.

ಉತ್ತರಭಾರತದ ಮದುವೆಗಳಲ್ಲಿ ವರ ಕುದುರೆಯೇರಿ ದಿಬ್ಬಣ ಹೊರಡುವ ರಿವಾಜಿದೆ. ದಲಿತರು ಕುದುರೆ ಏರುವಂತಿಲ್ಲ. ಆನೆ ಕುದುರೆ ಎತ್ತಿನ ಗಾಡಿ ಏರಿದ ದಲಿತ ಮದುಮಕ್ಕಳನ್ನು ಮೇಲು ಜಾತಿಗಳು ಥಳಿಸಿ ರಂಪ ಮಾಡುವ ವಿದ್ಯಮಾನಗಳು ಇಂದಿಗೂ ಅಳಿದಿಲ್ಲ.

ಮೋಟರ್ ಸೈಕಲ್ ಸವಾರಿ ಮಾಡುವ ದಲಿತ ಯುವಕನ ಮೂಗು ಕತ್ತರಿಸುವ, ಅಂಬೇಡ್ಕರ್ ರಿಂಗ್‍ಟೋನನ್ನು ತೆಗೆದು ಹಾಕಲಿಲ್ಲವೆಂದು ದಲಿತ ತರುಣನ ಪ್ರಾಣವನ್ನೇ ತೆಗೆಯುವ, ದಲಿತ ಪ್ರೊಫೆಸರಿಗೆ ಬಾಡಿಗೆ ಮನೆ ನಿರಾಕರಿಸುವ, ಮೂರು ವರ್ಷದ ದಲಿತ ಹಸುಳೆಗೆ ಕ್ಷೌರ ಮಾಡಲು ನಿರಾಕರಿಸುವ, ಮೇಲ್ಜಾತಿಯ ಮಕ್ಕಳ ತಟ್ಟೆ ಮುಟ್ಟಿದನೆಂದು ಎಳೆಯ ದಲಿತ ಜೀವವನ್ನು ಥಳಿಸುವ ಘಟನೆಗಳು ಈ ಸಮಾಜದ ಆತ್ಮಸಾಕ್ಷಿಯನ್ನು ಕಲಕುವುದೇ ಇಲ್ಲ.

ಅತ್ಯಾಚಾರವನ್ನು ಪ್ರತಿಭಟಿಸಿದ ದಲಿತ ಬಾಲಕಿಯೊಬ್ಬಳ ಮೂಗು, ಕಿವಿ ಹಾಗೂ ತೋಳನ್ನು ಕತ್ತರಿಸಿ ಒಗೆದವರು ಮೇಲ್ಚಾತಿಗಳ ಬಲಾತ್ಕಾರಿಗಳು. ಆಕೆಯ ದುಪಟ್ಟಾದಿಂದಲೇ ಬಾಲೆಯ ಕಣ್ಣು ಕಟ್ಟಿದ ಧೂರ್ತರು ಮೂಗು ಕಿವಿ ತೋಳನ್ನು ಕೊಡಲಿಯಿಂದ ಕತ್ತರಿಸಿ ಒಗೆದ ಘಟನೆ ನಡೆದದ್ದು ಮಧ್ಯಪ್ರದೇಶದಲ್ಲಿ.

ಛತ್ತೀಸ್‍ಗಢದ ಬಡ ಓರಾನ್ ಆದಿವಾಸಿ ಕುಟುಂಬದ ಮಗಳು ಹದಿನಾರರ ಮೀನಾ ಖಾಲ್ಕೋ. ಒಂದು ಸಂಜೆ ಸೈಕಲ್ ಹತ್ತಿ ಗೆಳತಿಯ ಮನೆಗೆ ತೆರಳಿದವಳು ಪತ್ತೆಯಾದದ್ದು ಆಸ್ಪತ್ರೆಯಲ್ಲಿ. ಸಾವು ಬದುಕಿನ ನಡುವಣ ಹೋರಾಟದಲ್ಲಿ. ಬಾಲೆಯನ್ನು ಅಪಹರಿಸಿದ ಪೊಲೀಸರು ಸಾಮೂಹಿಕ ಬಲಾತ್ಕಾರ ಎಸಗಿ ಗುಂಡು ಹೊಡೆದು ಆಕೆಗೆ ಮಾವೋವಾದಿಯ ಹಣೆಪಟ್ಟಿ ಕಟ್ಟಿದ್ದರು.

ಮಧ್ಯಾಹ್ನದ ಬಿಸಿಯೂಟ ನೀಡಲು ದಲಿತ ಮಕ್ಕಳನ್ನು ದೂರ ಬೇರೆ ಪಂಕ್ತಿಯಲ್ಲಿ ಕೂರಿಸುವ ರೂಢಿ ಕೇವಲ ಮಧ್ಯಪ್ರದೇಶಕ್ಕೆ ಮಾತ್ರ ಸೀಮಿತ ಅಲ್ಲ. ಇತರೆ ಮಕ್ಕಳಿಗೆ ನೀಡುವ ಪ್ರಮಾಣದ ಕಾಲು ಭಾಗದಷ್ಟನ್ನು ಮಾತ್ರವೇ ದಲಿತ ಮಕ್ಕಳಿಗೆ ಬಡಿಸಿ, ಎರಡನೆಯ ಬಾರಿ ಕೇಳಿದರೆ ಅವಮಾನ ಮಾಡುವ ಪ್ರಕರಣಗಳು ಸರ್ವೇ ಸಾಧಾರಣ. ಮೇಲ್ಜಾತಿಯ ಮಕ್ಕಳಿಗೆ ಬಡಿಸಿ ಉಳಿದ ಚೂರು ಪಾರನ್ನು ದಲಿತ ಮಕ್ಕಳಿಗೆ ಹಾಕುವ ಶಿಕ್ಷಕರ ಮನಸ್ಥಿತಿಗಳು ಅಪರೂಪ ಅಲ್ಲ.

ಬಿಸಿಯೂಟದ ಅಡುಗೆ ಮಾಡುವ ಹೆಣ್ಣುಮಕ್ಕಳು ದಲಿತರೆಂಬ ಕಾರಣಕ್ಕೆ ಪೋಷಕರು ಊಟಕ್ಕೇ ಬಹಿಷ್ಕಾರ ಹಾಕಿದ್ದ ಘಟನೆಗಳು ನಮ್ಮದೇ ಕರ್ನಾಟಕದಿಂದ ವರದಿಯಾಗಿ ತಣ್ಣಗಾಗಿವೆ.

ಥಳಗುಟ್ಟುವ ಭಾರತದ ಆಚೆಗೆ ಬದುಕಿರುವ ಕಗ್ಗತ್ತಲ ಉದ್ದಗಲಗಳಲ್ಲಿ ಜಾತಿ ಬಲವುಳ್ಳವರು, ಹಣದ ಸೊಕ್ಕಿನವರು, ಧರ್ಮದುರಂಧರರು, ಪಿತೃಪ್ರಧಾನ್ಯತೆಯ ಪರಿಪಾಲಕರು, ಪೊಲೀಸರು, ಪ್ಯಾರಾಮಿಲಿಟರಿಗಳ ಅಟ್ಟಹಾಸಗಳಲ್ಲಿ ಈ ಜೀವಗಳು ನಲುಗಿಹೋಗುತ್ತಿವೆ. ಇವರು ಮಾತು ಸತ್ತವರು, ಕಾಸಿಲ್ಲದವರು, ತುಳಿಸಿಕೊಂಡವರು, ಒಕ್ಕಲೆಬ್ಬಿಸಿ ದಬ್ಬಲಾದ ಅನಾಥ ಆದಿವಾಸಿಗಳು. ತಮ್ಮ ಮಾನ ಪ್ರಾಣ ಕಣ್ಣೀರುಗಳಿಗೆ ಕಾಸಿನ ಕಿಮ್ಮತ್ತೂ ಇಲ್ಲದ ದೈನೇಸಿಗಳು. ಖೈರ್ಲಾಂಜಿ, ಕಂಬಾಲಪಲ್ಲಿಗಳಲ್ಲಿ ಬೂದಿಯಾದವರು ಇವರು.

ಭಾರತೀಯ ಸೇನೆಯ ಹನ್ನೊಂದು ಮಂದಿ ಸಿಪಾಯಿಗಳು ಚಿತ್ರಹಿಂಸೆಯ ನಂತರ ಸಾಮೂಹಿಕ ಮಾನಭಂಗ ಮಾಡಿ ಜನನೇಂದ್ರಿಯಕ್ಕೆ ಕಾಡತೂಸುಗಳ ಸಿಡಿಸಿ ಕೊಂದ ಪ್ರಕರಣದ ಬಲಿಪಶು ಮಣಿಪುರದ ಥಂಗ್ಲಾಮ್ ಮನೋರಮಾದೇವಿ ಎಂಬ ಯುವತಿ. 2004ರ ಈ ಪ್ರಕರಣದ ಅಪರಾಧಿಗಳನ್ನು ಕಾನೂನಿನ ಕೈಗಳು ಈಗಲೂ ಮುಟ್ಟಿಲ್ಲ. 1991ರಲ್ಲಿ ಕಾಶ್ಮೀರದ ಮೂವತ್ತು ಮಹಿಳೆಯರ ಮೇಲೆ ಸೇನೆ ನಡೆಸಿತೆನ್ನಲಾದ ಅತ್ಯಾಚಾರ ಪ್ರಕರಣದ ಮರುವಿಚಾರಣೆ ಇನ್ನೂ ಮುಗಿದಿಲ್ಲ.

ಶೇ.75ರಷ್ಟು ಅತ್ಯಾಚಾರ ಪ್ರಕರಣಗಳು ನಡೆಯುವುದು ಗ್ರಾಮೀಣ ಭಾರತದಲ್ಲಿ ಎಂಬುದಾಗಿ ದಿಲ್ಲಿಯ ನ್ಯಾಷನಲ್ ಲಾ ಯೂನಿವರ್ಸಿಟಿಯ ಸಮೀಕ್ಷೆಯಿಂದ ತಿಳಿದುಬಂದಿತ್ತು. ಗ್ರಾಮೀಣ ಪ್ರದೇಶಗಳ ಅತ್ಯಾಚಾರ ಪ್ರಕರಣಗಳನ್ನು ಜಾತಿ – ವರ್ಗ ಹಾಗೂ ಊಳಿಗಮಾನ್ಯ ವ್ಯವಸ್ಥೆಗಳು ಅಲ್ಲಲ್ಲಿಯೇ ಅದುಮಿ ಹೂತು ಹಾಕುತ್ತಿವೆ.

ಪ್ರಾಣ ಮತ್ತು ಮಾನಹರಣದ ಶುದ್ಧೀಕರಣದ ಹಿಂದೂ ಮಹಾಯಜ್ಞಕ್ಕೆ ದಲಿತರು ಈ ದೇಶದಲ್ಲಿ ನಿರಂತರ ಬಲಿಪಶುಗಳು.


ಇದನ್ನೂ ಓದಿ: ರಾಜಕೀಯ ಸಾಧನವಾಗಿ ಅತ್ಯಾಚಾರದ ಕಲ್ಪನೆಯನ್ನು ಸಾವರ್ಕರ್ ಸಮರ್ಥಿಸಿಕೊಂಡಿದ್ದು ಹೀಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...