Homeಅಂಕಣಗಳುಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? - ಡಿ.ಉಮಾಪತಿ

ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ಬಿಸಿಯೂಟದ ಅಡುಗೆ ಮಾಡುವ ಹೆಣ್ಣುಮಕ್ಕಳು ದಲಿತರೆಂಬ ಕಾರಣಕ್ಕೆ ಪೋಷಕರು ಊಟಕ್ಕೇ ಬಹಿಷ್ಕಾರ ಹಾಕಿದ್ದ ಘಟನೆಗಳು ನಮ್ಮದೇ ಕರ್ನಾಟಕದಿಂದ ವರದಿಯಾಗಿ ತಣ್ಣಗಾಗಿವೆ.

- Advertisement -
- Advertisement -

ಮತ್ತೊಬ್ಬ ದಲಿತ ಮಗಳು ಮೇಲ್ಜಾತಿಯ ಅಹಂಕಾರದ ಬರ್ಬರ ಬೆಂಕಿಯಲ್ಲಿ ಬೆಂದು ಬೂದಿಯಾಗಿ ಮಣ್ಣು ಸೇರಿದ್ದಾಳೆ. ಸದ್ಯದಲ್ಲೇ ಅಂಕಿ ಸಂಖ್ಯೆಯಾಗಿ ಮಾತ್ರವೇ ಇತಿಹಾಸದಲ್ಲಿ ದಾಖಲಾಗಿಬಿಡುತ್ತಾಳೆ.

ದೇಶದ ರಾಜಧಾನಿ ದೆಹಲಿಯಿಂದ ಹೆಚ್ಚು ದೂರವೇನೂ ಇಲ್ಲದ ಹಾಥ್ರಸ್‍ನ ಈ ಮಗಳು ಎದುರಿಸಿದ ಹಿಂಸೆ ಪೈಶಾಚಿಕ ಸ್ವರೂಪದ್ದು. ಹದಿನೈದು ದಿನಗಳ ಕಾಲ ಆಕೆಗೆ ವೈದ್ಯಕೀಯ ಚಿಕಿತ್ಸೆ ನೀಡದೆ ಅಕ್ಷರಶಃ ಕೊಂದ ಕಾರಸ್ಥಾನದಲ್ಲಿ ಸರ್ಕಾರ- ಸಮಾಜದ ಕೈಗಳು ರಕ್ತಸಿಕ್ತವಾಗಿವೆ.

ತನುಶ್ರೀ ಪಾಂಡೆ ಎಂಬ ದೆಹಲಿಯ ಎಳೆಯ ಉತ್ಸಾಹಿ ಟಿವಿ ವರದಿಗಾರ್ತಿಯ ಕಳಕಳಿಯ ಕಸಬುದಾರಿಕೆಯು ಈ ಕೊಲೆಗಡುಕತನವನ್ನು ಬೆತ್ತಲಾಗಿಸಿತು. ಇಲ್ಲದೆ ಹೋಗಿದ್ದರೆ ಹಳ್ಳಿಗಾಡುಗಳಲ್ಲಿ ಸಮಾಧಿಯಾಗುವ ಇಂತಹದೇ ಸಾವಿರಾರು ಪ್ರಕರಣಗಳ ಸಾಲಿಗೆ ಈ ಪ್ರಕರಣವೂ ಸೇರಿ ಹೋಗುತ್ತಿತ್ತು.

ತನುಶ್ರೀ ಪಾಂಡೆ : Photo Courtesy: SheThePeopleTv

ಸಮೂಹ ಮಾಧ್ಯಮಗಳ ಪ್ರಚಾರದ ಮುಂಬೆಳಕು ಬೀಳದ ಹತ್ತಾರು ಸಾವಿರ ನತದೃಷ್ಟ ಪ್ರಕರಣಗಳು ದಶಕಗಳಿಂದ ಕೊಳೆಯುತ್ತಿವೆ. ಸಾಮಾಜಿಕ ಕಳಂಕದ ಕ್ರೂರ ಹೊರೆ ಹೊತ್ತು ದೇಶದ ನಾನಾ ನ್ಯಾಯಾಲಯಗಳಲ್ಲಿ ಧೂಳು ಹಿಡಿದಿರುವ ಕಡತಗಳಲ್ಲಿ ಹೂತು ಹೋಗಿರುವ ಲಕ್ಷಾಂತರ ಹೆಣ್ಣು ಜೀವಗಳ ಮೊರೆಯನ್ನು ಕೇಳುವವರು ಯಾರು?

ಕೊಂಬೆ ಕೊಂಬೆಗಳಲ್ಲಿ ಚಿನ್ನದ ಹಕ್ಕಿಗಳು ಕೂಗುತ್ತಿದ್ದವೆಂದು ಹೇಳಲಾಗುವ ಭವ್ಯ ಇತಿಹಾಸದ ಭಾರತ ದೇಶದ ಹಿಂದೂಗಳಿಗೆ ದಲಿತರು ಮನುಷ್ಯರಂತೆ ಯಾವ ಕಾಲಕ್ಕೆ ಕಾಣಬಹುದು ಎಂಬ ಪ್ರಶ್ನೆ ನಿರಂತರ ಪ್ರಶ್ನೆಯಾಗಿಯೇ ಉಳಿಯಲಿದೆ. ರಕ್ತದಲ್ಲಿ ಬೆರೆತು ಹೋಗಿರುವ ಈ ಅಸಮಾನತೆ ಅಳಿಯುವ ಸಾಧ್ಯತೆ ದೂರ ದಿಗಂತದ ಚುಕ್ಕೆಯಾಗಿಯೂ ಕಾಣಬರುತ್ತಿಲ್ಲ.

photo courtesy : Pratirodh

ಇಂಡಿಯಾ ದೇಶದಲ್ಲಿ ನೀವು ಸವರ್ಣೀಯರಾಗಿದ್ದರೆ, ದಲಿತ ಸಮುದಾಯದಿಂದ ಬಂದ ವ್ಯಕ್ತಿಯೊಬ್ಬನಿಗೆ ಏನಾಗುತ್ತಿದೆಯೆಂದು ಅರಿಯುವುದು ನಿಮಗೆ ಸಾಧ್ಯವೇ ಇಲ್ಲ. ದಲಿತರನ್ನು ಹೇಗೆ ಕಾಣಲಾಗುತ್ತಿದೆ ಮತ್ತು ಅವರ ಜಗತ್ತು ವಾಸ್ತವದಲ್ಲಿ ಹೇಗಿದೆ ಎಂಬ ಸಂಗತಿಯನ್ನು ಬೆರಳೆಣಿಕೆಯ ಜನರಷ್ಟೇ ಬಲ್ಲರು ಎನ್ನುತ್ತಾರೆ ಸಂವೇದನಾಶೀಲ ಚಲನಚಿತ್ರ ನಿರ್ದೇಶಕ ಶ್ಯಾಮ್ ಬೆನೆಗಲ್.

ನಖಶಿಖಾಂತ ಮೇಲು ಕೀಳನ್ನು ಸಾರಿ ಹೇಳುವ ವರ್ಣವ್ಯವಸ್ಥೆಯು ಇಂಡಿಯಾದ ಕೆಳವರ್ಗಗಳ ದಿಕ್ಕೆಟ್ಟ ಬದುಕುಗಳಿಗೆ ಬೀಸಿ ಬಡಿಯುತ್ತಲೇ ಇರುವ ತೀರದ ಶಾಪ. ಈ ವ್ಯವಸ್ಥೆಯನ್ನು ಅನವರತ ಜೀವಂತ ಇರಿಸುವುದನ್ನೇ ಪರಮವೈಭವ ಎಂದು ಭಾವಿಸುತ್ತಾರೆ ಯಥಾಸ್ಥಿತಿವಾದಿಗಳು. ನಾವೆಲ್ಲ ಒಂದು ಎಂದು ಹೇಳುತ್ತಲೇ ವಂಚಿತ ಸಮುದಾಯಗಳ ಇಹದ ಬದುಕನ್ನು ನರಕ ಆಗಿಸುತ್ತಿದ್ದಾರೆ. ಇಲ್ಲವೇ ಅವರನ್ನು ಕೊಂದು ನಿವಾರಿಸಿ ಭರತಭೂಮಿಗೆ ಅಂಟಿರುವ ‘ಪಾಪ’- ‘ಕಳಂಕ’ವನ್ನು ತೊಳೆಯತೊಡಗಿದ್ದಾರೆ.

ಅವಮಾನಿತ ಕೆಳಜಾತಿಗಳ ದಮನದ ಅಮಾನುಷ ಮುಖಗಳು ಹತ್ತು ಹಲವು. ದಲಿತರು ಚಪ್ಪಲಿ ಧರಿಸುವುದನ್ನು ನಿಷೇಧಿಸಿರುವ, ಊರು ಪ್ರವೇಶ ಮಾಡುವ ಮುನ್ನ ಚಪ್ಪಲಿಯನ್ನು ಕಳಚಿ ಕೈಲಿ ಹಿಡಿದು ನಡೆಯಬೇಕಾದ, ಏರಿದ್ದ ಸೈಕಲ್ಲನ್ನು ಇಳಿದು ಅದನ್ನು ತಳ್ಳಿಕೊಂಡೇ ಮೇಲ್ಜಾತಿಗಳ ವಸತಿಯನ್ನು ಹಾದು ಹೋಗಬೇಕಾದ ರೂಢಿ ಇಂದಿಗೂ ಜಾರಿಯಲ್ಲಿರುವ ಸಾವಿರಾರು ಹಳ್ಳಿಗಳಿವೆ.

ಉತ್ತರಭಾರತದ ಮದುವೆಗಳಲ್ಲಿ ವರ ಕುದುರೆಯೇರಿ ದಿಬ್ಬಣ ಹೊರಡುವ ರಿವಾಜಿದೆ. ದಲಿತರು ಕುದುರೆ ಏರುವಂತಿಲ್ಲ. ಆನೆ ಕುದುರೆ ಎತ್ತಿನ ಗಾಡಿ ಏರಿದ ದಲಿತ ಮದುಮಕ್ಕಳನ್ನು ಮೇಲು ಜಾತಿಗಳು ಥಳಿಸಿ ರಂಪ ಮಾಡುವ ವಿದ್ಯಮಾನಗಳು ಇಂದಿಗೂ ಅಳಿದಿಲ್ಲ.

ಮೋಟರ್ ಸೈಕಲ್ ಸವಾರಿ ಮಾಡುವ ದಲಿತ ಯುವಕನ ಮೂಗು ಕತ್ತರಿಸುವ, ಅಂಬೇಡ್ಕರ್ ರಿಂಗ್‍ಟೋನನ್ನು ತೆಗೆದು ಹಾಕಲಿಲ್ಲವೆಂದು ದಲಿತ ತರುಣನ ಪ್ರಾಣವನ್ನೇ ತೆಗೆಯುವ, ದಲಿತ ಪ್ರೊಫೆಸರಿಗೆ ಬಾಡಿಗೆ ಮನೆ ನಿರಾಕರಿಸುವ, ಮೂರು ವರ್ಷದ ದಲಿತ ಹಸುಳೆಗೆ ಕ್ಷೌರ ಮಾಡಲು ನಿರಾಕರಿಸುವ, ಮೇಲ್ಜಾತಿಯ ಮಕ್ಕಳ ತಟ್ಟೆ ಮುಟ್ಟಿದನೆಂದು ಎಳೆಯ ದಲಿತ ಜೀವವನ್ನು ಥಳಿಸುವ ಘಟನೆಗಳು ಈ ಸಮಾಜದ ಆತ್ಮಸಾಕ್ಷಿಯನ್ನು ಕಲಕುವುದೇ ಇಲ್ಲ.

ಅತ್ಯಾಚಾರವನ್ನು ಪ್ರತಿಭಟಿಸಿದ ದಲಿತ ಬಾಲಕಿಯೊಬ್ಬಳ ಮೂಗು, ಕಿವಿ ಹಾಗೂ ತೋಳನ್ನು ಕತ್ತರಿಸಿ ಒಗೆದವರು ಮೇಲ್ಚಾತಿಗಳ ಬಲಾತ್ಕಾರಿಗಳು. ಆಕೆಯ ದುಪಟ್ಟಾದಿಂದಲೇ ಬಾಲೆಯ ಕಣ್ಣು ಕಟ್ಟಿದ ಧೂರ್ತರು ಮೂಗು ಕಿವಿ ತೋಳನ್ನು ಕೊಡಲಿಯಿಂದ ಕತ್ತರಿಸಿ ಒಗೆದ ಘಟನೆ ನಡೆದದ್ದು ಮಧ್ಯಪ್ರದೇಶದಲ್ಲಿ.

ಛತ್ತೀಸ್‍ಗಢದ ಬಡ ಓರಾನ್ ಆದಿವಾಸಿ ಕುಟುಂಬದ ಮಗಳು ಹದಿನಾರರ ಮೀನಾ ಖಾಲ್ಕೋ. ಒಂದು ಸಂಜೆ ಸೈಕಲ್ ಹತ್ತಿ ಗೆಳತಿಯ ಮನೆಗೆ ತೆರಳಿದವಳು ಪತ್ತೆಯಾದದ್ದು ಆಸ್ಪತ್ರೆಯಲ್ಲಿ. ಸಾವು ಬದುಕಿನ ನಡುವಣ ಹೋರಾಟದಲ್ಲಿ. ಬಾಲೆಯನ್ನು ಅಪಹರಿಸಿದ ಪೊಲೀಸರು ಸಾಮೂಹಿಕ ಬಲಾತ್ಕಾರ ಎಸಗಿ ಗುಂಡು ಹೊಡೆದು ಆಕೆಗೆ ಮಾವೋವಾದಿಯ ಹಣೆಪಟ್ಟಿ ಕಟ್ಟಿದ್ದರು.

ಮಧ್ಯಾಹ್ನದ ಬಿಸಿಯೂಟ ನೀಡಲು ದಲಿತ ಮಕ್ಕಳನ್ನು ದೂರ ಬೇರೆ ಪಂಕ್ತಿಯಲ್ಲಿ ಕೂರಿಸುವ ರೂಢಿ ಕೇವಲ ಮಧ್ಯಪ್ರದೇಶಕ್ಕೆ ಮಾತ್ರ ಸೀಮಿತ ಅಲ್ಲ. ಇತರೆ ಮಕ್ಕಳಿಗೆ ನೀಡುವ ಪ್ರಮಾಣದ ಕಾಲು ಭಾಗದಷ್ಟನ್ನು ಮಾತ್ರವೇ ದಲಿತ ಮಕ್ಕಳಿಗೆ ಬಡಿಸಿ, ಎರಡನೆಯ ಬಾರಿ ಕೇಳಿದರೆ ಅವಮಾನ ಮಾಡುವ ಪ್ರಕರಣಗಳು ಸರ್ವೇ ಸಾಧಾರಣ. ಮೇಲ್ಜಾತಿಯ ಮಕ್ಕಳಿಗೆ ಬಡಿಸಿ ಉಳಿದ ಚೂರು ಪಾರನ್ನು ದಲಿತ ಮಕ್ಕಳಿಗೆ ಹಾಕುವ ಶಿಕ್ಷಕರ ಮನಸ್ಥಿತಿಗಳು ಅಪರೂಪ ಅಲ್ಲ.

ಬಿಸಿಯೂಟದ ಅಡುಗೆ ಮಾಡುವ ಹೆಣ್ಣುಮಕ್ಕಳು ದಲಿತರೆಂಬ ಕಾರಣಕ್ಕೆ ಪೋಷಕರು ಊಟಕ್ಕೇ ಬಹಿಷ್ಕಾರ ಹಾಕಿದ್ದ ಘಟನೆಗಳು ನಮ್ಮದೇ ಕರ್ನಾಟಕದಿಂದ ವರದಿಯಾಗಿ ತಣ್ಣಗಾಗಿವೆ.

ಥಳಗುಟ್ಟುವ ಭಾರತದ ಆಚೆಗೆ ಬದುಕಿರುವ ಕಗ್ಗತ್ತಲ ಉದ್ದಗಲಗಳಲ್ಲಿ ಜಾತಿ ಬಲವುಳ್ಳವರು, ಹಣದ ಸೊಕ್ಕಿನವರು, ಧರ್ಮದುರಂಧರರು, ಪಿತೃಪ್ರಧಾನ್ಯತೆಯ ಪರಿಪಾಲಕರು, ಪೊಲೀಸರು, ಪ್ಯಾರಾಮಿಲಿಟರಿಗಳ ಅಟ್ಟಹಾಸಗಳಲ್ಲಿ ಈ ಜೀವಗಳು ನಲುಗಿಹೋಗುತ್ತಿವೆ. ಇವರು ಮಾತು ಸತ್ತವರು, ಕಾಸಿಲ್ಲದವರು, ತುಳಿಸಿಕೊಂಡವರು, ಒಕ್ಕಲೆಬ್ಬಿಸಿ ದಬ್ಬಲಾದ ಅನಾಥ ಆದಿವಾಸಿಗಳು. ತಮ್ಮ ಮಾನ ಪ್ರಾಣ ಕಣ್ಣೀರುಗಳಿಗೆ ಕಾಸಿನ ಕಿಮ್ಮತ್ತೂ ಇಲ್ಲದ ದೈನೇಸಿಗಳು. ಖೈರ್ಲಾಂಜಿ, ಕಂಬಾಲಪಲ್ಲಿಗಳಲ್ಲಿ ಬೂದಿಯಾದವರು ಇವರು.

ಭಾರತೀಯ ಸೇನೆಯ ಹನ್ನೊಂದು ಮಂದಿ ಸಿಪಾಯಿಗಳು ಚಿತ್ರಹಿಂಸೆಯ ನಂತರ ಸಾಮೂಹಿಕ ಮಾನಭಂಗ ಮಾಡಿ ಜನನೇಂದ್ರಿಯಕ್ಕೆ ಕಾಡತೂಸುಗಳ ಸಿಡಿಸಿ ಕೊಂದ ಪ್ರಕರಣದ ಬಲಿಪಶು ಮಣಿಪುರದ ಥಂಗ್ಲಾಮ್ ಮನೋರಮಾದೇವಿ ಎಂಬ ಯುವತಿ. 2004ರ ಈ ಪ್ರಕರಣದ ಅಪರಾಧಿಗಳನ್ನು ಕಾನೂನಿನ ಕೈಗಳು ಈಗಲೂ ಮುಟ್ಟಿಲ್ಲ. 1991ರಲ್ಲಿ ಕಾಶ್ಮೀರದ ಮೂವತ್ತು ಮಹಿಳೆಯರ ಮೇಲೆ ಸೇನೆ ನಡೆಸಿತೆನ್ನಲಾದ ಅತ್ಯಾಚಾರ ಪ್ರಕರಣದ ಮರುವಿಚಾರಣೆ ಇನ್ನೂ ಮುಗಿದಿಲ್ಲ.

ಶೇ.75ರಷ್ಟು ಅತ್ಯಾಚಾರ ಪ್ರಕರಣಗಳು ನಡೆಯುವುದು ಗ್ರಾಮೀಣ ಭಾರತದಲ್ಲಿ ಎಂಬುದಾಗಿ ದಿಲ್ಲಿಯ ನ್ಯಾಷನಲ್ ಲಾ ಯೂನಿವರ್ಸಿಟಿಯ ಸಮೀಕ್ಷೆಯಿಂದ ತಿಳಿದುಬಂದಿತ್ತು. ಗ್ರಾಮೀಣ ಪ್ರದೇಶಗಳ ಅತ್ಯಾಚಾರ ಪ್ರಕರಣಗಳನ್ನು ಜಾತಿ – ವರ್ಗ ಹಾಗೂ ಊಳಿಗಮಾನ್ಯ ವ್ಯವಸ್ಥೆಗಳು ಅಲ್ಲಲ್ಲಿಯೇ ಅದುಮಿ ಹೂತು ಹಾಕುತ್ತಿವೆ.

ಪ್ರಾಣ ಮತ್ತು ಮಾನಹರಣದ ಶುದ್ಧೀಕರಣದ ಹಿಂದೂ ಮಹಾಯಜ್ಞಕ್ಕೆ ದಲಿತರು ಈ ದೇಶದಲ್ಲಿ ನಿರಂತರ ಬಲಿಪಶುಗಳು.


ಇದನ್ನೂ ಓದಿ: ರಾಜಕೀಯ ಸಾಧನವಾಗಿ ಅತ್ಯಾಚಾರದ ಕಲ್ಪನೆಯನ್ನು ಸಾವರ್ಕರ್ ಸಮರ್ಥಿಸಿಕೊಂಡಿದ್ದು ಹೀಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....