Homeಮುಖಪುಟಮಾನವೀಯತೆ ಎಚ್ಚರಗೊಳ್ಳುವುದು ಯಾವಾಗ?: ಇಸ್ರೇಲ್‌ನ ಹಿಂಸಾಚಾರಕ್ಕೆ ಪ್ರಿಯಾಂಕಾ ಗಾಂಧಿ ಕಿಡಿ

ಮಾನವೀಯತೆ ಎಚ್ಚರಗೊಳ್ಳುವುದು ಯಾವಾಗ?: ಇಸ್ರೇಲ್‌ನ ಹಿಂಸಾಚಾರಕ್ಕೆ ಪ್ರಿಯಾಂಕಾ ಗಾಂಧಿ ಕಿಡಿ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್ ನಡೆಸುತ್ತಿರುವ ಹಿಂಸಾಚಾರವನ್ನು ಟೀಕಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಮಾನವೀಯತೆಯು ಎಚ್ಚರಗೊಳ್ಳುವುದು ಯಾವಾಗ?” ಎಂದು ಪ್ರಶ್ನಿಸಿದ್ದಾರೆ.

ಪ್ಯಾಲೇಸ್ತನ್ ಮೇಲೆ ಇಸ್ರೇಲ್‌ ದಾಳಿ ತೀವ್ರಗೊಳಿಸಿದ್ದು, ಕಳೆದ 20 ದಿನಗಳಲ್ಲಿ 7,000 ಕ್ಕೂ ಹೆಚ್ಚು ಫೆಲೆಸ್ತೀನಿಯನ್ನರು ಇಸ್ರೇಲ್‌ ದಾಳಿಗೆ ಬಲಿಯಾಗಿದ್ದಾರೆ ಎಂದು ಗಾಝಾ ಆರೋಗ್ಯ ಇಲಾಖೆ ಹೇಳಿದೆ.

ಈ ಬಗ್ಗೆ ಎಕ್ಸಾನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ”ಗಾಝಾದಲ್ಲಿ 7,000 ಜನರನ್ನು ಕೊಂದ ನಂತರವೂ ರಕ್ತಪಾತ ಮತ್ತು ಹಿಂಸಾಚಾರದ ಚಕ್ರ ನಿಂತಿಲ್ಲ. ಈ 7,000 ಜನರಲ್ಲಿ 3,000 ಮುಗ್ಧ ಮಕ್ಕಳು” ಎಂದು ಪ್ರಿಯಾಂಕಾ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.

”ಇನ್ನೂ ಎಷ್ಟು ಜೀವಗಳನ್ನು ಕಳೆದುಕೊಂಡ ನಂತರ, ಮಾನವೀಯತೆಯ ಸಾಮೂಹಿಕ ಪ್ರಜ್ಞೆಯು ಅಂತಿಮವಾಗಿ ಜಾಗೃತವಾಗುತ್ತದೆ? ಅಥವಾ ಅಂತಹ ಪ್ರಜ್ಞೆಯು ಈಗ ಉಳಿದಿಲ್ಲವೇ?” ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯ ಬಳಿಕ 1,400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಹಮಾಸ್ ಗಾಝಾದಲ್ಲಿ 200ಕ್ಕೂ ಹೆಚ್ಚು ಜನರನ್ನು ಒತ್ತೆಯಾಳಾಗಿ ಇರಿಸಿದೆ.

ಹಮಾಸ್ ಉಗ್ರರ ವಿರುದ್ಧ ಇಸ್ರೇಲ್ ಸೇನಾದಾಳಿ ತೀವ್ರಗೊಂಡಿದ್ದು, ನಿನ್ನೆ ತಡರಾತ್ರಿ ಗಾಜಾಪಟ್ಟಿಗೆ ನುಗ್ಗಿದ್ದ ಇಸ್ರೇಲ್ ಸೇನಾ ಟ್ಯಾಂಕರ್ ಗಳು ಹಮಾಸ್ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ವಾಪಸ್ ಆಗಿವೆ.

ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್), ಗಿವಾಟಿ (ಕಾಲಾಳುಪಡೆ) ಬ್ರಿಗೇಡ್‌ನ ನೇತೃತ್ವದಲ್ಲಿ ರಾತ್ರೋರಾತ್ರಿ ಉತ್ತರ ಗಾಜಾ ಪಟ್ಟಿಯ ಪ್ರದೇಶದಲ್ಲಿ ಟ್ಯಾಂಕ್‌ಗಳನ್ನು ಬಳಸಿಕೊಂಡು ಉದ್ದೇಶಿತ ದಾಳಿಯನ್ನು ನಡೆಸಿತು. ಇದು ಮುಂದಿನ ಹಂತದ ಯುದ್ಧಕ್ಕಾಗಿ ಪ್ರದೇಶವನ್ನು ಸಿದ್ಧಪಡಿಸುವ ಅಂದರೆ ಗಾಜಾಪಟ್ಟಿಗೆ ಸೇನೆ ನುಗ್ಗಿಸುವ ಭಾಗವಾಗಿದೆ ಎಂದು IDF ಹೇಳಿದೆ.

ಕಾರ್ಯಾಚರಣೆಯ ಭಾಗವಾಗಿ, IDF, ಪಡೆಗಳು ಅನೇಕ ಭಯೋತ್ಪಾದಕರನ್ನು ಪತ್ತೆ ಮಾಡಿ ದಾಳಿ ಮಾಡಿತು. ಭಯೋತ್ಪಾದಕ ಮೂಲಸೌಕರ್ಯಗಳನ್ನು ನಾಶಪಡಿಸಿತು, ಟ್ಯಾಂಕ್ ವಿರೋಧಿ ಕ್ಷಿಪಣಿ ಉಡಾವಣೆ ಸ್ಥಾನಗಳನ್ನು ನಾಶಪಡಿಸಿತು ಮತ್ತು ಭವಿಷ್ಯದ ಕಾರ್ಯಾಚರಣೆಗಳಿಗೆ ಪ್ರದೇಶವನ್ನು ಸಿದ್ಧಪಡಿಸುವ ಕೆಲಸವನ್ನು ನಡೆಸಿತು. ಕಾರ್ಯಾಚರಣೆಯ ಕೊನೆಯಲ್ಲಿ IDF ಪಡೆಗಳು ಪ್ರದೇಶವನ್ನು ತೊರೆದು ಇಸ್ರೇಲ್ ಗಡಿಗೆ ವಾಪಸ್ ಆದವು.

ಇದೇ ವೇಳೆ ‘ಇಸ್ರೇಲ್ ತನ್ನ ಅಸ್ತಿತ್ವಕ್ಕಾಗಿ ಯುದ್ಧದಲ್ಲಿದೆ’ ಎಂಬ ತನ್ನ ಮಾತುಗಳನ್ನು ಪುನರುಚ್ಚರಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹಮಾಸ್ ಯುದ್ಧದ ವಿರುದ್ಧ ತನ್ನ ಗುರಿ ‘ದೇಶವನ್ನು ಉಳಿಸುವುದು’ ಮತ್ತು ಗಾಜಾದಲ್ಲಿ ಹಮಾಸ್ ಅನ್ನು ನಾಶಮಾಡುವ ನೆಲದ ಆಕ್ರಮಣವು ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಭರವಸೆ ನೀಡಿದರು ಎಂದು ಟೈಮ್ಸ್ ಆಫ್ ಇಸ್ರೇಲ್ ಬುಧವಾರ ವರದಿ ಮಾಡಿದೆ.

ಇದನ್ನೂ ಓದಿ: ಇಸ್ರೇಲ್‌ ದಾಳಿಗೆ ಅಲ್ ಜಝೀರಾ ಬ್ಯೂರೋ ಮುಖ್ಯಸ್ಥರ ಕುಟುಂಬದ ನಾಲ್ವರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...