Homeಮುಖಪುಟಮಾನವೀಯತೆ ಎಚ್ಚರಗೊಳ್ಳುವುದು ಯಾವಾಗ?: ಇಸ್ರೇಲ್‌ನ ಹಿಂಸಾಚಾರಕ್ಕೆ ಪ್ರಿಯಾಂಕಾ ಗಾಂಧಿ ಕಿಡಿ

ಮಾನವೀಯತೆ ಎಚ್ಚರಗೊಳ್ಳುವುದು ಯಾವಾಗ?: ಇಸ್ರೇಲ್‌ನ ಹಿಂಸಾಚಾರಕ್ಕೆ ಪ್ರಿಯಾಂಕಾ ಗಾಂಧಿ ಕಿಡಿ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್ ನಡೆಸುತ್ತಿರುವ ಹಿಂಸಾಚಾರವನ್ನು ಟೀಕಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಮಾನವೀಯತೆಯು ಎಚ್ಚರಗೊಳ್ಳುವುದು ಯಾವಾಗ?” ಎಂದು ಪ್ರಶ್ನಿಸಿದ್ದಾರೆ.

ಪ್ಯಾಲೇಸ್ತನ್ ಮೇಲೆ ಇಸ್ರೇಲ್‌ ದಾಳಿ ತೀವ್ರಗೊಳಿಸಿದ್ದು, ಕಳೆದ 20 ದಿನಗಳಲ್ಲಿ 7,000 ಕ್ಕೂ ಹೆಚ್ಚು ಫೆಲೆಸ್ತೀನಿಯನ್ನರು ಇಸ್ರೇಲ್‌ ದಾಳಿಗೆ ಬಲಿಯಾಗಿದ್ದಾರೆ ಎಂದು ಗಾಝಾ ಆರೋಗ್ಯ ಇಲಾಖೆ ಹೇಳಿದೆ.

ಈ ಬಗ್ಗೆ ಎಕ್ಸಾನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ”ಗಾಝಾದಲ್ಲಿ 7,000 ಜನರನ್ನು ಕೊಂದ ನಂತರವೂ ರಕ್ತಪಾತ ಮತ್ತು ಹಿಂಸಾಚಾರದ ಚಕ್ರ ನಿಂತಿಲ್ಲ. ಈ 7,000 ಜನರಲ್ಲಿ 3,000 ಮುಗ್ಧ ಮಕ್ಕಳು” ಎಂದು ಪ್ರಿಯಾಂಕಾ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.

”ಇನ್ನೂ ಎಷ್ಟು ಜೀವಗಳನ್ನು ಕಳೆದುಕೊಂಡ ನಂತರ, ಮಾನವೀಯತೆಯ ಸಾಮೂಹಿಕ ಪ್ರಜ್ಞೆಯು ಅಂತಿಮವಾಗಿ ಜಾಗೃತವಾಗುತ್ತದೆ? ಅಥವಾ ಅಂತಹ ಪ್ರಜ್ಞೆಯು ಈಗ ಉಳಿದಿಲ್ಲವೇ?” ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯ ಬಳಿಕ 1,400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಹಮಾಸ್ ಗಾಝಾದಲ್ಲಿ 200ಕ್ಕೂ ಹೆಚ್ಚು ಜನರನ್ನು ಒತ್ತೆಯಾಳಾಗಿ ಇರಿಸಿದೆ.

ಹಮಾಸ್ ಉಗ್ರರ ವಿರುದ್ಧ ಇಸ್ರೇಲ್ ಸೇನಾದಾಳಿ ತೀವ್ರಗೊಂಡಿದ್ದು, ನಿನ್ನೆ ತಡರಾತ್ರಿ ಗಾಜಾಪಟ್ಟಿಗೆ ನುಗ್ಗಿದ್ದ ಇಸ್ರೇಲ್ ಸೇನಾ ಟ್ಯಾಂಕರ್ ಗಳು ಹಮಾಸ್ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ವಾಪಸ್ ಆಗಿವೆ.

ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್), ಗಿವಾಟಿ (ಕಾಲಾಳುಪಡೆ) ಬ್ರಿಗೇಡ್‌ನ ನೇತೃತ್ವದಲ್ಲಿ ರಾತ್ರೋರಾತ್ರಿ ಉತ್ತರ ಗಾಜಾ ಪಟ್ಟಿಯ ಪ್ರದೇಶದಲ್ಲಿ ಟ್ಯಾಂಕ್‌ಗಳನ್ನು ಬಳಸಿಕೊಂಡು ಉದ್ದೇಶಿತ ದಾಳಿಯನ್ನು ನಡೆಸಿತು. ಇದು ಮುಂದಿನ ಹಂತದ ಯುದ್ಧಕ್ಕಾಗಿ ಪ್ರದೇಶವನ್ನು ಸಿದ್ಧಪಡಿಸುವ ಅಂದರೆ ಗಾಜಾಪಟ್ಟಿಗೆ ಸೇನೆ ನುಗ್ಗಿಸುವ ಭಾಗವಾಗಿದೆ ಎಂದು IDF ಹೇಳಿದೆ.

ಕಾರ್ಯಾಚರಣೆಯ ಭಾಗವಾಗಿ, IDF, ಪಡೆಗಳು ಅನೇಕ ಭಯೋತ್ಪಾದಕರನ್ನು ಪತ್ತೆ ಮಾಡಿ ದಾಳಿ ಮಾಡಿತು. ಭಯೋತ್ಪಾದಕ ಮೂಲಸೌಕರ್ಯಗಳನ್ನು ನಾಶಪಡಿಸಿತು, ಟ್ಯಾಂಕ್ ವಿರೋಧಿ ಕ್ಷಿಪಣಿ ಉಡಾವಣೆ ಸ್ಥಾನಗಳನ್ನು ನಾಶಪಡಿಸಿತು ಮತ್ತು ಭವಿಷ್ಯದ ಕಾರ್ಯಾಚರಣೆಗಳಿಗೆ ಪ್ರದೇಶವನ್ನು ಸಿದ್ಧಪಡಿಸುವ ಕೆಲಸವನ್ನು ನಡೆಸಿತು. ಕಾರ್ಯಾಚರಣೆಯ ಕೊನೆಯಲ್ಲಿ IDF ಪಡೆಗಳು ಪ್ರದೇಶವನ್ನು ತೊರೆದು ಇಸ್ರೇಲ್ ಗಡಿಗೆ ವಾಪಸ್ ಆದವು.

ಇದೇ ವೇಳೆ ‘ಇಸ್ರೇಲ್ ತನ್ನ ಅಸ್ತಿತ್ವಕ್ಕಾಗಿ ಯುದ್ಧದಲ್ಲಿದೆ’ ಎಂಬ ತನ್ನ ಮಾತುಗಳನ್ನು ಪುನರುಚ್ಚರಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹಮಾಸ್ ಯುದ್ಧದ ವಿರುದ್ಧ ತನ್ನ ಗುರಿ ‘ದೇಶವನ್ನು ಉಳಿಸುವುದು’ ಮತ್ತು ಗಾಜಾದಲ್ಲಿ ಹಮಾಸ್ ಅನ್ನು ನಾಶಮಾಡುವ ನೆಲದ ಆಕ್ರಮಣವು ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಭರವಸೆ ನೀಡಿದರು ಎಂದು ಟೈಮ್ಸ್ ಆಫ್ ಇಸ್ರೇಲ್ ಬುಧವಾರ ವರದಿ ಮಾಡಿದೆ.

ಇದನ್ನೂ ಓದಿ: ಇಸ್ರೇಲ್‌ ದಾಳಿಗೆ ಅಲ್ ಜಝೀರಾ ಬ್ಯೂರೋ ಮುಖ್ಯಸ್ಥರ ಕುಟುಂಬದ ನಾಲ್ವರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...