Homeಮುಖಪುಟ#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

- Advertisement -
- Advertisement -

ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಅಪರಾಧಿಗಳನ್ನು ರಕ್ಷಿಸುತ್ತಾರೋ, ಅಲ್ಲಿಯವರೆಗೆ ಯಾವುದೇ ಚಳವಳಿ ಅಥವಾ ವರದಿಯಿಂದ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ನಟಿ ತನುಶ್ರೀ ದತ್ತಾ ಹೇಳಿದ್ದಾರೆ.

ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಆಘಾತಕಾರಿ ಕಿರುಕುಳ ಮತ್ತು ಲೈಂಗಿಕ ಶೋಷಣೆಯನ್ನು ಬಹಿರಂಗಪಡಿಸಿದ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.

ತನುಶ್ರೀ ದತ್ತಾ 2018ರಲ್ಲಿ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಬಳಿಕ ಅದು ‘ಮೀಟೂ’ ಅಭಿಯಾನಕ್ಕೆ ನಾಂದಿಯಾಗಿತ್ತು. ಆದರೆ, ನಾನಾ ಪಾಟೇಕರ್ ತನುಶ್ರೀ ಅವರ ಆರೋಪಗಳನ್ನು ನಿರಾಕರಿಸಿದ್ದರು.

‘ಈಗಲೂ ನ್ಯಾಯಕ್ಕಾಗಿ ಕಾಯುತ್ತಿರುವೆ’ ಎಂದಿರುವ ತನುಶ್ರೀ ದತ್ತಾ, ಸಿನಿಮಾ ರಂಗದಲ್ಲಿ ತಾವೆದುರಿಸಿದ ದೌರ್ಜನ್ಯಗಳ ಬಗ್ಗೆ ನ್ಯಾ. ಹೇಮಾ ಸಮಿತಿಗೆ ಮಾಹಿತಿ ನೀಡಿರುವ ಮಹಿಳಾ ಕಲಾವಿದರನ್ನು ಬೆಂಬಲಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿರುವ ತನುಶ್ರೀ ದತ್ತಾ”ಇದು ‘ಮೀಟೂ’ ಪ್ರಕರಣಗಳಂತೆಯೇ ಕಾಣುತ್ತಿದೆ. ಸಮಾಜದೆದುರು ಸಂಭಾವಿತರಂತೆ ಕಾಣಿಸಿಕೊಳ್ಳುವ ಅವರು (ಆರೋಪಿಗಳು), ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ. ಇಂತಹ ವರದಿಗಳಿಂದ ಏನೂ ಆಗುವುದಿಲ್ಲ. ಏಕೆಂದರೆ, ಮಹಿಳೆಯರ ಮೇಲಿನ ದಾಳಿ ಮತ್ತು ದೌರ್ಜನ್ಯಗಳು ಈಗಲೂ ಮುಂದುವರೆದಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೀವು ಮಿಸ್‌ ಇಂಡಿಯಾ ಅಥವಾ ನಟಿ, ಇಲ್ಲವೇ ವಿದ್ಯಾವಂತೆ-ಏನೇ ಆಗಿದ್ದರೂ, ಈ ದೇಶದಲ್ಲಿ ಅದು ಮುಖ್ಯವಾಗುವುದಿಲ್ಲ. ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಕ್ರಿಮಿನಲ್‌ಗಳನ್ನು ರಕ್ಷಿಸುಸುತ್ತಾರೋ, ಅಲ್ಲಿಯವರೆಗೆ ಯಾವ ಚಳವಳಿ ಅಥವಾ ಯಾರೊಬ್ಬರ ವಿಚಾರಗಳು ಏನೂ ಮಾಡಲಾಗದು. ಈಗ ಈ ಸಮಿತಿ ವರದಿ. ಆಗ ವಿಶಾಖ ಸಮಿತಿ (ಮಹಿಳೆಯರ ಕುಂದು ಕೊರತೆ ಸಮಿತಿ). ಅಷ್ಟೇ ಅಲ್ಲ, ಸಾಕಷ್ಟು ಸಮಿತಿಗಳನ್ನು ರಚಿಸಲಾಗಿದೆ. ಬಹಳಷ್ಟು ವರದಿಗಳು ಬಂದಿವೆ. ಆದರೆ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುಂಬಿರುವಾಗ ಹಾಗೂ ಅಕ್ರಮವಾಗಿ ಸಂಪಾದಿಸಿದ ಹಣದಲ್ಲಿ ವ್ಯವಸ್ಥೆಯನ್ನು ಕೊಂಡೊಕೊಳ್ಳುತ್ತಿರುವಾಗ ಅಂತಹ ವ್ಯವಸ್ಥೆಯನ್ನು ಪಾಲಿಸುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

1997ರಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ವಿಶಾಖ ಮಾರ್ಗಸೂಚಿಗಳು, ಖಾಸಗಿ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಲೈಂಗಿಕ ಕಿರುಕುಳದ ದೂರುಗಳ ಪರಿಹಾರಕ್ಕಾಗಿ ಕಾರ್ಯವಿಧಾನವನ್ನು ಸ್ಥಾಪಿಸುವುದನ್ನು ಕಡ್ಡಾಯಗೊಳಿಸಿದೆ.

2009ರ “ಹಾರ್ನ್ ‘ಓಕೆ’ ಪ್ಲೀಸ್” ಚಿತ್ರದ ಸೆಟ್‌ನಲ್ಲಿ ತನ್ನ ನೃತ್ಯದ ಹೆಜ್ಜೆಗಳನ್ನು ತೋರಿಸುವ ನೆಪದಲ್ಲಿ ನಾನಾ ಪಾಟೇಕರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು 2018 ರಲ್ಲಿ ದತ್ತಾ ಆರೋಪಿಸಿದ್ದರು.

ಅವರು ಪಾಟೇಕರ್, ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ, ನಿರ್ದೇಶಕ ರಾಕೇಶ್ ಸಾರಂಗ್ ಮತ್ತು ಚಿತ್ರದ ನಿರ್ಮಾಪಕರ ವಿರುದ್ಧ ದೂರು ದಾಖಲಿಸಿದ್ದರು.

ದತ್ತಾ ಅವರ ಪ್ರಕಾರ, ಅವರು 14 ಸಾಕ್ಷಿಗಳ ಹೆಸರುಗಳನ್ನು ಕೊಟ್ಟಿದ್ದರು. ಆದರೆ, ಪೊಲೀಸರು ಅವರಲ್ಲಿ ಯಾರೊಬ್ಬರಿಂದಲೂ ಹೇಳಿಕೆಗಳನ್ನು ಪಡೆದುಕೊಂಡಿಲ್ಲ. ಬದಲಾಗಿ ಬಿ ರಿಪೋರ್ಟ್ ಹಾಕಲು ಪ್ರಯತ್ನಿಸಿದ್ದರು. ಅಂದರೆ, ಆರೋಪಿಯ ವಿರುದ್ಧ ಆರೋಪ ಅಥವಾ ವಿಚಾರಣೆಗೆ ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿಲ್ಲ ಎಂದರ್ಥ. ಇದರ ವಿರುದ್ಧ ಹೋರಾಡುವುದಾಗಿ ದತ್ತಾ ಹೇಳಿದ್ದಾರೆ.

‘ತಮಗೆ ಸಾರ್ವಜನಿಕರಿಂದ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಹಾಗೂ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ತಮ್ಮನ್ನು ಸಂಪರ್ಕಿಸಿಲ್ಲ ಎಂಬುದಾಗಿ ನಾನು ಉಲ್ಲೇಖಿಸಿರುವ ಸಾಕ್ಷಿದಾರರು ನನಗೆ ಹೇಳಿದ್ದಾರೆ. ಒಬ್ಬ ಸಾಕ್ಷಿದಾರ ಊರನ್ನೇ ತೊರೆದಿದ್ದಾರೆ. ಮತ್ತೊಬ್ಬ ಮಧ್ಯಪ್ರಾಚ್ಯಕ್ಕೆ ಓಡಿಹೋಗಿದ್ದಾರೆ. ಸಾಕ್ಷಿಯಾಗಿದ್ದ ಮತ್ತೊಬ್ಬ ಮಹಿಳೆ ಭಯದಿಂದ ಮುಂದೆ ಬರುತ್ತಿಲ್ಲ. ಪ್ರತಿಭಟನಾ ಅರ್ಜಿ ದಾಖಲಿಸಿದ ನಂತರ, ಅದೂ ಐದು ವರ್ಷಗಳ ಬಳಿಕ ನ್ಯಾಯಾಲಯ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ನನಗೆ ನ್ಯಾಯ ಸಿಗುವುದು ಯಾವಾಗ?’ ಎಂದು ದತ್ತಾ ಪ್ರಶ್ನಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಎಲ್ಲಿಗೆ ಹೋದರೂ, ಅಪರಿಚಿತ ವ್ಯಕ್ತಿಗಳ ಗುಂಪು ನನ್ನನ್ನು ಹಿಂಬಾಲಿಸುತ್ತಿದೆ ಎಂದು ದತ್ತಾ ಆತಂಕ ವ್ಯಕ್ತಪಡಿಸಿದ್ದಾರೆ.

‘2022ರಲ್ಲಿ ಉಜ್ಜಯಿನಿಯಲ್ಲಿ ಅಪಘಾತಕ್ಕೊಳಗಾದೆ. ನಾನು ಪ್ರಯಾಣಿಸುತ್ತಿದ್ದ ಆಟೋರಿಕ್ಷಾದ ಬ್ರೇಕ್‌ ಅನ್ನು ಯಾರೋ ತುಂಡರಿಸಿದ್ದರು. ಕಾಕತಾಳೀಯವೆಂದು ನಿರ್ಲಕ್ಷಿಸಲು, ಆ ರೀತಿ ಆದದ್ದು ಒಮ್ಮೆಯಷ್ಟೇ ಅಲ್ಲ’ ಎಂದು ಹೇಳಿದ್ದಾರೆ.

ನಾನು ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ನಾನೂ ಒಬ್ಬರ ಮಗಳು. ನನಗೆ ಈ ದೇಶದಲ್ಲಿ ಬದುಕುವ ಮತ್ತು ಸುರಕ್ಷಿತವಾಗಿರುವ ಹಕ್ಕಿಲ್ಲವೇ? ಎಂದು ತನುಶ್ರೀ ದತ್ತಾ ಕೇಳಿದ್ದಾರೆ.

ಇದನ್ನೂ ಓದಿ : ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...