Homeಮುಖಪುಟ#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

- Advertisement -
- Advertisement -

ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಅಪರಾಧಿಗಳನ್ನು ರಕ್ಷಿಸುತ್ತಾರೋ, ಅಲ್ಲಿಯವರೆಗೆ ಯಾವುದೇ ಚಳವಳಿ ಅಥವಾ ವರದಿಯಿಂದ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ನಟಿ ತನುಶ್ರೀ ದತ್ತಾ ಹೇಳಿದ್ದಾರೆ.

ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಆಘಾತಕಾರಿ ಕಿರುಕುಳ ಮತ್ತು ಲೈಂಗಿಕ ಶೋಷಣೆಯನ್ನು ಬಹಿರಂಗಪಡಿಸಿದ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.

ತನುಶ್ರೀ ದತ್ತಾ 2018ರಲ್ಲಿ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಬಳಿಕ ಅದು ‘ಮೀಟೂ’ ಅಭಿಯಾನಕ್ಕೆ ನಾಂದಿಯಾಗಿತ್ತು. ಆದರೆ, ನಾನಾ ಪಾಟೇಕರ್ ತನುಶ್ರೀ ಅವರ ಆರೋಪಗಳನ್ನು ನಿರಾಕರಿಸಿದ್ದರು.

‘ಈಗಲೂ ನ್ಯಾಯಕ್ಕಾಗಿ ಕಾಯುತ್ತಿರುವೆ’ ಎಂದಿರುವ ತನುಶ್ರೀ ದತ್ತಾ, ಸಿನಿಮಾ ರಂಗದಲ್ಲಿ ತಾವೆದುರಿಸಿದ ದೌರ್ಜನ್ಯಗಳ ಬಗ್ಗೆ ನ್ಯಾ. ಹೇಮಾ ಸಮಿತಿಗೆ ಮಾಹಿತಿ ನೀಡಿರುವ ಮಹಿಳಾ ಕಲಾವಿದರನ್ನು ಬೆಂಬಲಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿರುವ ತನುಶ್ರೀ ದತ್ತಾ”ಇದು ‘ಮೀಟೂ’ ಪ್ರಕರಣಗಳಂತೆಯೇ ಕಾಣುತ್ತಿದೆ. ಸಮಾಜದೆದುರು ಸಂಭಾವಿತರಂತೆ ಕಾಣಿಸಿಕೊಳ್ಳುವ ಅವರು (ಆರೋಪಿಗಳು), ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ. ಇಂತಹ ವರದಿಗಳಿಂದ ಏನೂ ಆಗುವುದಿಲ್ಲ. ಏಕೆಂದರೆ, ಮಹಿಳೆಯರ ಮೇಲಿನ ದಾಳಿ ಮತ್ತು ದೌರ್ಜನ್ಯಗಳು ಈಗಲೂ ಮುಂದುವರೆದಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೀವು ಮಿಸ್‌ ಇಂಡಿಯಾ ಅಥವಾ ನಟಿ, ಇಲ್ಲವೇ ವಿದ್ಯಾವಂತೆ-ಏನೇ ಆಗಿದ್ದರೂ, ಈ ದೇಶದಲ್ಲಿ ಅದು ಮುಖ್ಯವಾಗುವುದಿಲ್ಲ. ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಕ್ರಿಮಿನಲ್‌ಗಳನ್ನು ರಕ್ಷಿಸುಸುತ್ತಾರೋ, ಅಲ್ಲಿಯವರೆಗೆ ಯಾವ ಚಳವಳಿ ಅಥವಾ ಯಾರೊಬ್ಬರ ವಿಚಾರಗಳು ಏನೂ ಮಾಡಲಾಗದು. ಈಗ ಈ ಸಮಿತಿ ವರದಿ. ಆಗ ವಿಶಾಖ ಸಮಿತಿ (ಮಹಿಳೆಯರ ಕುಂದು ಕೊರತೆ ಸಮಿತಿ). ಅಷ್ಟೇ ಅಲ್ಲ, ಸಾಕಷ್ಟು ಸಮಿತಿಗಳನ್ನು ರಚಿಸಲಾಗಿದೆ. ಬಹಳಷ್ಟು ವರದಿಗಳು ಬಂದಿವೆ. ಆದರೆ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುಂಬಿರುವಾಗ ಹಾಗೂ ಅಕ್ರಮವಾಗಿ ಸಂಪಾದಿಸಿದ ಹಣದಲ್ಲಿ ವ್ಯವಸ್ಥೆಯನ್ನು ಕೊಂಡೊಕೊಳ್ಳುತ್ತಿರುವಾಗ ಅಂತಹ ವ್ಯವಸ್ಥೆಯನ್ನು ಪಾಲಿಸುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

1997ರಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ವಿಶಾಖ ಮಾರ್ಗಸೂಚಿಗಳು, ಖಾಸಗಿ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಲೈಂಗಿಕ ಕಿರುಕುಳದ ದೂರುಗಳ ಪರಿಹಾರಕ್ಕಾಗಿ ಕಾರ್ಯವಿಧಾನವನ್ನು ಸ್ಥಾಪಿಸುವುದನ್ನು ಕಡ್ಡಾಯಗೊಳಿಸಿದೆ.

2009ರ “ಹಾರ್ನ್ ‘ಓಕೆ’ ಪ್ಲೀಸ್” ಚಿತ್ರದ ಸೆಟ್‌ನಲ್ಲಿ ತನ್ನ ನೃತ್ಯದ ಹೆಜ್ಜೆಗಳನ್ನು ತೋರಿಸುವ ನೆಪದಲ್ಲಿ ನಾನಾ ಪಾಟೇಕರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು 2018 ರಲ್ಲಿ ದತ್ತಾ ಆರೋಪಿಸಿದ್ದರು.

ಅವರು ಪಾಟೇಕರ್, ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ, ನಿರ್ದೇಶಕ ರಾಕೇಶ್ ಸಾರಂಗ್ ಮತ್ತು ಚಿತ್ರದ ನಿರ್ಮಾಪಕರ ವಿರುದ್ಧ ದೂರು ದಾಖಲಿಸಿದ್ದರು.

ದತ್ತಾ ಅವರ ಪ್ರಕಾರ, ಅವರು 14 ಸಾಕ್ಷಿಗಳ ಹೆಸರುಗಳನ್ನು ಕೊಟ್ಟಿದ್ದರು. ಆದರೆ, ಪೊಲೀಸರು ಅವರಲ್ಲಿ ಯಾರೊಬ್ಬರಿಂದಲೂ ಹೇಳಿಕೆಗಳನ್ನು ಪಡೆದುಕೊಂಡಿಲ್ಲ. ಬದಲಾಗಿ ಬಿ ರಿಪೋರ್ಟ್ ಹಾಕಲು ಪ್ರಯತ್ನಿಸಿದ್ದರು. ಅಂದರೆ, ಆರೋಪಿಯ ವಿರುದ್ಧ ಆರೋಪ ಅಥವಾ ವಿಚಾರಣೆಗೆ ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿಲ್ಲ ಎಂದರ್ಥ. ಇದರ ವಿರುದ್ಧ ಹೋರಾಡುವುದಾಗಿ ದತ್ತಾ ಹೇಳಿದ್ದಾರೆ.

‘ತಮಗೆ ಸಾರ್ವಜನಿಕರಿಂದ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಹಾಗೂ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ತಮ್ಮನ್ನು ಸಂಪರ್ಕಿಸಿಲ್ಲ ಎಂಬುದಾಗಿ ನಾನು ಉಲ್ಲೇಖಿಸಿರುವ ಸಾಕ್ಷಿದಾರರು ನನಗೆ ಹೇಳಿದ್ದಾರೆ. ಒಬ್ಬ ಸಾಕ್ಷಿದಾರ ಊರನ್ನೇ ತೊರೆದಿದ್ದಾರೆ. ಮತ್ತೊಬ್ಬ ಮಧ್ಯಪ್ರಾಚ್ಯಕ್ಕೆ ಓಡಿಹೋಗಿದ್ದಾರೆ. ಸಾಕ್ಷಿಯಾಗಿದ್ದ ಮತ್ತೊಬ್ಬ ಮಹಿಳೆ ಭಯದಿಂದ ಮುಂದೆ ಬರುತ್ತಿಲ್ಲ. ಪ್ರತಿಭಟನಾ ಅರ್ಜಿ ದಾಖಲಿಸಿದ ನಂತರ, ಅದೂ ಐದು ವರ್ಷಗಳ ಬಳಿಕ ನ್ಯಾಯಾಲಯ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ನನಗೆ ನ್ಯಾಯ ಸಿಗುವುದು ಯಾವಾಗ?’ ಎಂದು ದತ್ತಾ ಪ್ರಶ್ನಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಎಲ್ಲಿಗೆ ಹೋದರೂ, ಅಪರಿಚಿತ ವ್ಯಕ್ತಿಗಳ ಗುಂಪು ನನ್ನನ್ನು ಹಿಂಬಾಲಿಸುತ್ತಿದೆ ಎಂದು ದತ್ತಾ ಆತಂಕ ವ್ಯಕ್ತಪಡಿಸಿದ್ದಾರೆ.

‘2022ರಲ್ಲಿ ಉಜ್ಜಯಿನಿಯಲ್ಲಿ ಅಪಘಾತಕ್ಕೊಳಗಾದೆ. ನಾನು ಪ್ರಯಾಣಿಸುತ್ತಿದ್ದ ಆಟೋರಿಕ್ಷಾದ ಬ್ರೇಕ್‌ ಅನ್ನು ಯಾರೋ ತುಂಡರಿಸಿದ್ದರು. ಕಾಕತಾಳೀಯವೆಂದು ನಿರ್ಲಕ್ಷಿಸಲು, ಆ ರೀತಿ ಆದದ್ದು ಒಮ್ಮೆಯಷ್ಟೇ ಅಲ್ಲ’ ಎಂದು ಹೇಳಿದ್ದಾರೆ.

ನಾನು ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ನಾನೂ ಒಬ್ಬರ ಮಗಳು. ನನಗೆ ಈ ದೇಶದಲ್ಲಿ ಬದುಕುವ ಮತ್ತು ಸುರಕ್ಷಿತವಾಗಿರುವ ಹಕ್ಕಿಲ್ಲವೇ? ಎಂದು ತನುಶ್ರೀ ದತ್ತಾ ಕೇಳಿದ್ದಾರೆ.

ಇದನ್ನೂ ಓದಿ : ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...