Homeಮುಖಪುಟ#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

- Advertisement -
- Advertisement -

ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಅಪರಾಧಿಗಳನ್ನು ರಕ್ಷಿಸುತ್ತಾರೋ, ಅಲ್ಲಿಯವರೆಗೆ ಯಾವುದೇ ಚಳವಳಿ ಅಥವಾ ವರದಿಯಿಂದ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ನಟಿ ತನುಶ್ರೀ ದತ್ತಾ ಹೇಳಿದ್ದಾರೆ.

ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಆಘಾತಕಾರಿ ಕಿರುಕುಳ ಮತ್ತು ಲೈಂಗಿಕ ಶೋಷಣೆಯನ್ನು ಬಹಿರಂಗಪಡಿಸಿದ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.

ತನುಶ್ರೀ ದತ್ತಾ 2018ರಲ್ಲಿ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಬಳಿಕ ಅದು ‘ಮೀಟೂ’ ಅಭಿಯಾನಕ್ಕೆ ನಾಂದಿಯಾಗಿತ್ತು. ಆದರೆ, ನಾನಾ ಪಾಟೇಕರ್ ತನುಶ್ರೀ ಅವರ ಆರೋಪಗಳನ್ನು ನಿರಾಕರಿಸಿದ್ದರು.

‘ಈಗಲೂ ನ್ಯಾಯಕ್ಕಾಗಿ ಕಾಯುತ್ತಿರುವೆ’ ಎಂದಿರುವ ತನುಶ್ರೀ ದತ್ತಾ, ಸಿನಿಮಾ ರಂಗದಲ್ಲಿ ತಾವೆದುರಿಸಿದ ದೌರ್ಜನ್ಯಗಳ ಬಗ್ಗೆ ನ್ಯಾ. ಹೇಮಾ ಸಮಿತಿಗೆ ಮಾಹಿತಿ ನೀಡಿರುವ ಮಹಿಳಾ ಕಲಾವಿದರನ್ನು ಬೆಂಬಲಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿರುವ ತನುಶ್ರೀ ದತ್ತಾ”ಇದು ‘ಮೀಟೂ’ ಪ್ರಕರಣಗಳಂತೆಯೇ ಕಾಣುತ್ತಿದೆ. ಸಮಾಜದೆದುರು ಸಂಭಾವಿತರಂತೆ ಕಾಣಿಸಿಕೊಳ್ಳುವ ಅವರು (ಆರೋಪಿಗಳು), ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ. ಇಂತಹ ವರದಿಗಳಿಂದ ಏನೂ ಆಗುವುದಿಲ್ಲ. ಏಕೆಂದರೆ, ಮಹಿಳೆಯರ ಮೇಲಿನ ದಾಳಿ ಮತ್ತು ದೌರ್ಜನ್ಯಗಳು ಈಗಲೂ ಮುಂದುವರೆದಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೀವು ಮಿಸ್‌ ಇಂಡಿಯಾ ಅಥವಾ ನಟಿ, ಇಲ್ಲವೇ ವಿದ್ಯಾವಂತೆ-ಏನೇ ಆಗಿದ್ದರೂ, ಈ ದೇಶದಲ್ಲಿ ಅದು ಮುಖ್ಯವಾಗುವುದಿಲ್ಲ. ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಕ್ರಿಮಿನಲ್‌ಗಳನ್ನು ರಕ್ಷಿಸುಸುತ್ತಾರೋ, ಅಲ್ಲಿಯವರೆಗೆ ಯಾವ ಚಳವಳಿ ಅಥವಾ ಯಾರೊಬ್ಬರ ವಿಚಾರಗಳು ಏನೂ ಮಾಡಲಾಗದು. ಈಗ ಈ ಸಮಿತಿ ವರದಿ. ಆಗ ವಿಶಾಖ ಸಮಿತಿ (ಮಹಿಳೆಯರ ಕುಂದು ಕೊರತೆ ಸಮಿತಿ). ಅಷ್ಟೇ ಅಲ್ಲ, ಸಾಕಷ್ಟು ಸಮಿತಿಗಳನ್ನು ರಚಿಸಲಾಗಿದೆ. ಬಹಳಷ್ಟು ವರದಿಗಳು ಬಂದಿವೆ. ಆದರೆ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುಂಬಿರುವಾಗ ಹಾಗೂ ಅಕ್ರಮವಾಗಿ ಸಂಪಾದಿಸಿದ ಹಣದಲ್ಲಿ ವ್ಯವಸ್ಥೆಯನ್ನು ಕೊಂಡೊಕೊಳ್ಳುತ್ತಿರುವಾಗ ಅಂತಹ ವ್ಯವಸ್ಥೆಯನ್ನು ಪಾಲಿಸುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

1997ರಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ವಿಶಾಖ ಮಾರ್ಗಸೂಚಿಗಳು, ಖಾಸಗಿ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಲೈಂಗಿಕ ಕಿರುಕುಳದ ದೂರುಗಳ ಪರಿಹಾರಕ್ಕಾಗಿ ಕಾರ್ಯವಿಧಾನವನ್ನು ಸ್ಥಾಪಿಸುವುದನ್ನು ಕಡ್ಡಾಯಗೊಳಿಸಿದೆ.

2009ರ “ಹಾರ್ನ್ ‘ಓಕೆ’ ಪ್ಲೀಸ್” ಚಿತ್ರದ ಸೆಟ್‌ನಲ್ಲಿ ತನ್ನ ನೃತ್ಯದ ಹೆಜ್ಜೆಗಳನ್ನು ತೋರಿಸುವ ನೆಪದಲ್ಲಿ ನಾನಾ ಪಾಟೇಕರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು 2018 ರಲ್ಲಿ ದತ್ತಾ ಆರೋಪಿಸಿದ್ದರು.

ಅವರು ಪಾಟೇಕರ್, ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ, ನಿರ್ದೇಶಕ ರಾಕೇಶ್ ಸಾರಂಗ್ ಮತ್ತು ಚಿತ್ರದ ನಿರ್ಮಾಪಕರ ವಿರುದ್ಧ ದೂರು ದಾಖಲಿಸಿದ್ದರು.

ದತ್ತಾ ಅವರ ಪ್ರಕಾರ, ಅವರು 14 ಸಾಕ್ಷಿಗಳ ಹೆಸರುಗಳನ್ನು ಕೊಟ್ಟಿದ್ದರು. ಆದರೆ, ಪೊಲೀಸರು ಅವರಲ್ಲಿ ಯಾರೊಬ್ಬರಿಂದಲೂ ಹೇಳಿಕೆಗಳನ್ನು ಪಡೆದುಕೊಂಡಿಲ್ಲ. ಬದಲಾಗಿ ಬಿ ರಿಪೋರ್ಟ್ ಹಾಕಲು ಪ್ರಯತ್ನಿಸಿದ್ದರು. ಅಂದರೆ, ಆರೋಪಿಯ ವಿರುದ್ಧ ಆರೋಪ ಅಥವಾ ವಿಚಾರಣೆಗೆ ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿಲ್ಲ ಎಂದರ್ಥ. ಇದರ ವಿರುದ್ಧ ಹೋರಾಡುವುದಾಗಿ ದತ್ತಾ ಹೇಳಿದ್ದಾರೆ.

‘ತಮಗೆ ಸಾರ್ವಜನಿಕರಿಂದ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಹಾಗೂ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ತಮ್ಮನ್ನು ಸಂಪರ್ಕಿಸಿಲ್ಲ ಎಂಬುದಾಗಿ ನಾನು ಉಲ್ಲೇಖಿಸಿರುವ ಸಾಕ್ಷಿದಾರರು ನನಗೆ ಹೇಳಿದ್ದಾರೆ. ಒಬ್ಬ ಸಾಕ್ಷಿದಾರ ಊರನ್ನೇ ತೊರೆದಿದ್ದಾರೆ. ಮತ್ತೊಬ್ಬ ಮಧ್ಯಪ್ರಾಚ್ಯಕ್ಕೆ ಓಡಿಹೋಗಿದ್ದಾರೆ. ಸಾಕ್ಷಿಯಾಗಿದ್ದ ಮತ್ತೊಬ್ಬ ಮಹಿಳೆ ಭಯದಿಂದ ಮುಂದೆ ಬರುತ್ತಿಲ್ಲ. ಪ್ರತಿಭಟನಾ ಅರ್ಜಿ ದಾಖಲಿಸಿದ ನಂತರ, ಅದೂ ಐದು ವರ್ಷಗಳ ಬಳಿಕ ನ್ಯಾಯಾಲಯ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ನನಗೆ ನ್ಯಾಯ ಸಿಗುವುದು ಯಾವಾಗ?’ ಎಂದು ದತ್ತಾ ಪ್ರಶ್ನಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಎಲ್ಲಿಗೆ ಹೋದರೂ, ಅಪರಿಚಿತ ವ್ಯಕ್ತಿಗಳ ಗುಂಪು ನನ್ನನ್ನು ಹಿಂಬಾಲಿಸುತ್ತಿದೆ ಎಂದು ದತ್ತಾ ಆತಂಕ ವ್ಯಕ್ತಪಡಿಸಿದ್ದಾರೆ.

‘2022ರಲ್ಲಿ ಉಜ್ಜಯಿನಿಯಲ್ಲಿ ಅಪಘಾತಕ್ಕೊಳಗಾದೆ. ನಾನು ಪ್ರಯಾಣಿಸುತ್ತಿದ್ದ ಆಟೋರಿಕ್ಷಾದ ಬ್ರೇಕ್‌ ಅನ್ನು ಯಾರೋ ತುಂಡರಿಸಿದ್ದರು. ಕಾಕತಾಳೀಯವೆಂದು ನಿರ್ಲಕ್ಷಿಸಲು, ಆ ರೀತಿ ಆದದ್ದು ಒಮ್ಮೆಯಷ್ಟೇ ಅಲ್ಲ’ ಎಂದು ಹೇಳಿದ್ದಾರೆ.

ನಾನು ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ನಾನೂ ಒಬ್ಬರ ಮಗಳು. ನನಗೆ ಈ ದೇಶದಲ್ಲಿ ಬದುಕುವ ಮತ್ತು ಸುರಕ್ಷಿತವಾಗಿರುವ ಹಕ್ಕಿಲ್ಲವೇ? ಎಂದು ತನುಶ್ರೀ ದತ್ತಾ ಕೇಳಿದ್ದಾರೆ.

ಇದನ್ನೂ ಓದಿ : ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...