Homeಮುಖಪುಟ#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

- Advertisement -
- Advertisement -

ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಅಪರಾಧಿಗಳನ್ನು ರಕ್ಷಿಸುತ್ತಾರೋ, ಅಲ್ಲಿಯವರೆಗೆ ಯಾವುದೇ ಚಳವಳಿ ಅಥವಾ ವರದಿಯಿಂದ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ನಟಿ ತನುಶ್ರೀ ದತ್ತಾ ಹೇಳಿದ್ದಾರೆ.

ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಆಘಾತಕಾರಿ ಕಿರುಕುಳ ಮತ್ತು ಲೈಂಗಿಕ ಶೋಷಣೆಯನ್ನು ಬಹಿರಂಗಪಡಿಸಿದ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.

ತನುಶ್ರೀ ದತ್ತಾ 2018ರಲ್ಲಿ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಬಳಿಕ ಅದು ‘ಮೀಟೂ’ ಅಭಿಯಾನಕ್ಕೆ ನಾಂದಿಯಾಗಿತ್ತು. ಆದರೆ, ನಾನಾ ಪಾಟೇಕರ್ ತನುಶ್ರೀ ಅವರ ಆರೋಪಗಳನ್ನು ನಿರಾಕರಿಸಿದ್ದರು.

‘ಈಗಲೂ ನ್ಯಾಯಕ್ಕಾಗಿ ಕಾಯುತ್ತಿರುವೆ’ ಎಂದಿರುವ ತನುಶ್ರೀ ದತ್ತಾ, ಸಿನಿಮಾ ರಂಗದಲ್ಲಿ ತಾವೆದುರಿಸಿದ ದೌರ್ಜನ್ಯಗಳ ಬಗ್ಗೆ ನ್ಯಾ. ಹೇಮಾ ಸಮಿತಿಗೆ ಮಾಹಿತಿ ನೀಡಿರುವ ಮಹಿಳಾ ಕಲಾವಿದರನ್ನು ಬೆಂಬಲಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿರುವ ತನುಶ್ರೀ ದತ್ತಾ”ಇದು ‘ಮೀಟೂ’ ಪ್ರಕರಣಗಳಂತೆಯೇ ಕಾಣುತ್ತಿದೆ. ಸಮಾಜದೆದುರು ಸಂಭಾವಿತರಂತೆ ಕಾಣಿಸಿಕೊಳ್ಳುವ ಅವರು (ಆರೋಪಿಗಳು), ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ. ಇಂತಹ ವರದಿಗಳಿಂದ ಏನೂ ಆಗುವುದಿಲ್ಲ. ಏಕೆಂದರೆ, ಮಹಿಳೆಯರ ಮೇಲಿನ ದಾಳಿ ಮತ್ತು ದೌರ್ಜನ್ಯಗಳು ಈಗಲೂ ಮುಂದುವರೆದಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೀವು ಮಿಸ್‌ ಇಂಡಿಯಾ ಅಥವಾ ನಟಿ, ಇಲ್ಲವೇ ವಿದ್ಯಾವಂತೆ-ಏನೇ ಆಗಿದ್ದರೂ, ಈ ದೇಶದಲ್ಲಿ ಅದು ಮುಖ್ಯವಾಗುವುದಿಲ್ಲ. ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಕ್ರಿಮಿನಲ್‌ಗಳನ್ನು ರಕ್ಷಿಸುಸುತ್ತಾರೋ, ಅಲ್ಲಿಯವರೆಗೆ ಯಾವ ಚಳವಳಿ ಅಥವಾ ಯಾರೊಬ್ಬರ ವಿಚಾರಗಳು ಏನೂ ಮಾಡಲಾಗದು. ಈಗ ಈ ಸಮಿತಿ ವರದಿ. ಆಗ ವಿಶಾಖ ಸಮಿತಿ (ಮಹಿಳೆಯರ ಕುಂದು ಕೊರತೆ ಸಮಿತಿ). ಅಷ್ಟೇ ಅಲ್ಲ, ಸಾಕಷ್ಟು ಸಮಿತಿಗಳನ್ನು ರಚಿಸಲಾಗಿದೆ. ಬಹಳಷ್ಟು ವರದಿಗಳು ಬಂದಿವೆ. ಆದರೆ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುಂಬಿರುವಾಗ ಹಾಗೂ ಅಕ್ರಮವಾಗಿ ಸಂಪಾದಿಸಿದ ಹಣದಲ್ಲಿ ವ್ಯವಸ್ಥೆಯನ್ನು ಕೊಂಡೊಕೊಳ್ಳುತ್ತಿರುವಾಗ ಅಂತಹ ವ್ಯವಸ್ಥೆಯನ್ನು ಪಾಲಿಸುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

1997ರಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ವಿಶಾಖ ಮಾರ್ಗಸೂಚಿಗಳು, ಖಾಸಗಿ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಲೈಂಗಿಕ ಕಿರುಕುಳದ ದೂರುಗಳ ಪರಿಹಾರಕ್ಕಾಗಿ ಕಾರ್ಯವಿಧಾನವನ್ನು ಸ್ಥಾಪಿಸುವುದನ್ನು ಕಡ್ಡಾಯಗೊಳಿಸಿದೆ.

2009ರ “ಹಾರ್ನ್ ‘ಓಕೆ’ ಪ್ಲೀಸ್” ಚಿತ್ರದ ಸೆಟ್‌ನಲ್ಲಿ ತನ್ನ ನೃತ್ಯದ ಹೆಜ್ಜೆಗಳನ್ನು ತೋರಿಸುವ ನೆಪದಲ್ಲಿ ನಾನಾ ಪಾಟೇಕರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು 2018 ರಲ್ಲಿ ದತ್ತಾ ಆರೋಪಿಸಿದ್ದರು.

ಅವರು ಪಾಟೇಕರ್, ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ, ನಿರ್ದೇಶಕ ರಾಕೇಶ್ ಸಾರಂಗ್ ಮತ್ತು ಚಿತ್ರದ ನಿರ್ಮಾಪಕರ ವಿರುದ್ಧ ದೂರು ದಾಖಲಿಸಿದ್ದರು.

ದತ್ತಾ ಅವರ ಪ್ರಕಾರ, ಅವರು 14 ಸಾಕ್ಷಿಗಳ ಹೆಸರುಗಳನ್ನು ಕೊಟ್ಟಿದ್ದರು. ಆದರೆ, ಪೊಲೀಸರು ಅವರಲ್ಲಿ ಯಾರೊಬ್ಬರಿಂದಲೂ ಹೇಳಿಕೆಗಳನ್ನು ಪಡೆದುಕೊಂಡಿಲ್ಲ. ಬದಲಾಗಿ ಬಿ ರಿಪೋರ್ಟ್ ಹಾಕಲು ಪ್ರಯತ್ನಿಸಿದ್ದರು. ಅಂದರೆ, ಆರೋಪಿಯ ವಿರುದ್ಧ ಆರೋಪ ಅಥವಾ ವಿಚಾರಣೆಗೆ ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿಲ್ಲ ಎಂದರ್ಥ. ಇದರ ವಿರುದ್ಧ ಹೋರಾಡುವುದಾಗಿ ದತ್ತಾ ಹೇಳಿದ್ದಾರೆ.

‘ತಮಗೆ ಸಾರ್ವಜನಿಕರಿಂದ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಹಾಗೂ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ತಮ್ಮನ್ನು ಸಂಪರ್ಕಿಸಿಲ್ಲ ಎಂಬುದಾಗಿ ನಾನು ಉಲ್ಲೇಖಿಸಿರುವ ಸಾಕ್ಷಿದಾರರು ನನಗೆ ಹೇಳಿದ್ದಾರೆ. ಒಬ್ಬ ಸಾಕ್ಷಿದಾರ ಊರನ್ನೇ ತೊರೆದಿದ್ದಾರೆ. ಮತ್ತೊಬ್ಬ ಮಧ್ಯಪ್ರಾಚ್ಯಕ್ಕೆ ಓಡಿಹೋಗಿದ್ದಾರೆ. ಸಾಕ್ಷಿಯಾಗಿದ್ದ ಮತ್ತೊಬ್ಬ ಮಹಿಳೆ ಭಯದಿಂದ ಮುಂದೆ ಬರುತ್ತಿಲ್ಲ. ಪ್ರತಿಭಟನಾ ಅರ್ಜಿ ದಾಖಲಿಸಿದ ನಂತರ, ಅದೂ ಐದು ವರ್ಷಗಳ ಬಳಿಕ ನ್ಯಾಯಾಲಯ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ನನಗೆ ನ್ಯಾಯ ಸಿಗುವುದು ಯಾವಾಗ?’ ಎಂದು ದತ್ತಾ ಪ್ರಶ್ನಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಎಲ್ಲಿಗೆ ಹೋದರೂ, ಅಪರಿಚಿತ ವ್ಯಕ್ತಿಗಳ ಗುಂಪು ನನ್ನನ್ನು ಹಿಂಬಾಲಿಸುತ್ತಿದೆ ಎಂದು ದತ್ತಾ ಆತಂಕ ವ್ಯಕ್ತಪಡಿಸಿದ್ದಾರೆ.

‘2022ರಲ್ಲಿ ಉಜ್ಜಯಿನಿಯಲ್ಲಿ ಅಪಘಾತಕ್ಕೊಳಗಾದೆ. ನಾನು ಪ್ರಯಾಣಿಸುತ್ತಿದ್ದ ಆಟೋರಿಕ್ಷಾದ ಬ್ರೇಕ್‌ ಅನ್ನು ಯಾರೋ ತುಂಡರಿಸಿದ್ದರು. ಕಾಕತಾಳೀಯವೆಂದು ನಿರ್ಲಕ್ಷಿಸಲು, ಆ ರೀತಿ ಆದದ್ದು ಒಮ್ಮೆಯಷ್ಟೇ ಅಲ್ಲ’ ಎಂದು ಹೇಳಿದ್ದಾರೆ.

ನಾನು ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ನಾನೂ ಒಬ್ಬರ ಮಗಳು. ನನಗೆ ಈ ದೇಶದಲ್ಲಿ ಬದುಕುವ ಮತ್ತು ಸುರಕ್ಷಿತವಾಗಿರುವ ಹಕ್ಕಿಲ್ಲವೇ? ಎಂದು ತನುಶ್ರೀ ದತ್ತಾ ಕೇಳಿದ್ದಾರೆ.

ಇದನ್ನೂ ಓದಿ : ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...