Homeಮುಖಪುಟ#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

- Advertisement -
- Advertisement -

ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಅಪರಾಧಿಗಳನ್ನು ರಕ್ಷಿಸುತ್ತಾರೋ, ಅಲ್ಲಿಯವರೆಗೆ ಯಾವುದೇ ಚಳವಳಿ ಅಥವಾ ವರದಿಯಿಂದ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ನಟಿ ತನುಶ್ರೀ ದತ್ತಾ ಹೇಳಿದ್ದಾರೆ.

ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಆಘಾತಕಾರಿ ಕಿರುಕುಳ ಮತ್ತು ಲೈಂಗಿಕ ಶೋಷಣೆಯನ್ನು ಬಹಿರಂಗಪಡಿಸಿದ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.

ತನುಶ್ರೀ ದತ್ತಾ 2018ರಲ್ಲಿ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಬಳಿಕ ಅದು ‘ಮೀಟೂ’ ಅಭಿಯಾನಕ್ಕೆ ನಾಂದಿಯಾಗಿತ್ತು. ಆದರೆ, ನಾನಾ ಪಾಟೇಕರ್ ತನುಶ್ರೀ ಅವರ ಆರೋಪಗಳನ್ನು ನಿರಾಕರಿಸಿದ್ದರು.

‘ಈಗಲೂ ನ್ಯಾಯಕ್ಕಾಗಿ ಕಾಯುತ್ತಿರುವೆ’ ಎಂದಿರುವ ತನುಶ್ರೀ ದತ್ತಾ, ಸಿನಿಮಾ ರಂಗದಲ್ಲಿ ತಾವೆದುರಿಸಿದ ದೌರ್ಜನ್ಯಗಳ ಬಗ್ಗೆ ನ್ಯಾ. ಹೇಮಾ ಸಮಿತಿಗೆ ಮಾಹಿತಿ ನೀಡಿರುವ ಮಹಿಳಾ ಕಲಾವಿದರನ್ನು ಬೆಂಬಲಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿರುವ ತನುಶ್ರೀ ದತ್ತಾ”ಇದು ‘ಮೀಟೂ’ ಪ್ರಕರಣಗಳಂತೆಯೇ ಕಾಣುತ್ತಿದೆ. ಸಮಾಜದೆದುರು ಸಂಭಾವಿತರಂತೆ ಕಾಣಿಸಿಕೊಳ್ಳುವ ಅವರು (ಆರೋಪಿಗಳು), ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ. ಇಂತಹ ವರದಿಗಳಿಂದ ಏನೂ ಆಗುವುದಿಲ್ಲ. ಏಕೆಂದರೆ, ಮಹಿಳೆಯರ ಮೇಲಿನ ದಾಳಿ ಮತ್ತು ದೌರ್ಜನ್ಯಗಳು ಈಗಲೂ ಮುಂದುವರೆದಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೀವು ಮಿಸ್‌ ಇಂಡಿಯಾ ಅಥವಾ ನಟಿ, ಇಲ್ಲವೇ ವಿದ್ಯಾವಂತೆ-ಏನೇ ಆಗಿದ್ದರೂ, ಈ ದೇಶದಲ್ಲಿ ಅದು ಮುಖ್ಯವಾಗುವುದಿಲ್ಲ. ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಕ್ರಿಮಿನಲ್‌ಗಳನ್ನು ರಕ್ಷಿಸುಸುತ್ತಾರೋ, ಅಲ್ಲಿಯವರೆಗೆ ಯಾವ ಚಳವಳಿ ಅಥವಾ ಯಾರೊಬ್ಬರ ವಿಚಾರಗಳು ಏನೂ ಮಾಡಲಾಗದು. ಈಗ ಈ ಸಮಿತಿ ವರದಿ. ಆಗ ವಿಶಾಖ ಸಮಿತಿ (ಮಹಿಳೆಯರ ಕುಂದು ಕೊರತೆ ಸಮಿತಿ). ಅಷ್ಟೇ ಅಲ್ಲ, ಸಾಕಷ್ಟು ಸಮಿತಿಗಳನ್ನು ರಚಿಸಲಾಗಿದೆ. ಬಹಳಷ್ಟು ವರದಿಗಳು ಬಂದಿವೆ. ಆದರೆ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುಂಬಿರುವಾಗ ಹಾಗೂ ಅಕ್ರಮವಾಗಿ ಸಂಪಾದಿಸಿದ ಹಣದಲ್ಲಿ ವ್ಯವಸ್ಥೆಯನ್ನು ಕೊಂಡೊಕೊಳ್ಳುತ್ತಿರುವಾಗ ಅಂತಹ ವ್ಯವಸ್ಥೆಯನ್ನು ಪಾಲಿಸುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

1997ರಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ವಿಶಾಖ ಮಾರ್ಗಸೂಚಿಗಳು, ಖಾಸಗಿ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಲೈಂಗಿಕ ಕಿರುಕುಳದ ದೂರುಗಳ ಪರಿಹಾರಕ್ಕಾಗಿ ಕಾರ್ಯವಿಧಾನವನ್ನು ಸ್ಥಾಪಿಸುವುದನ್ನು ಕಡ್ಡಾಯಗೊಳಿಸಿದೆ.

2009ರ “ಹಾರ್ನ್ ‘ಓಕೆ’ ಪ್ಲೀಸ್” ಚಿತ್ರದ ಸೆಟ್‌ನಲ್ಲಿ ತನ್ನ ನೃತ್ಯದ ಹೆಜ್ಜೆಗಳನ್ನು ತೋರಿಸುವ ನೆಪದಲ್ಲಿ ನಾನಾ ಪಾಟೇಕರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು 2018 ರಲ್ಲಿ ದತ್ತಾ ಆರೋಪಿಸಿದ್ದರು.

ಅವರು ಪಾಟೇಕರ್, ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ, ನಿರ್ದೇಶಕ ರಾಕೇಶ್ ಸಾರಂಗ್ ಮತ್ತು ಚಿತ್ರದ ನಿರ್ಮಾಪಕರ ವಿರುದ್ಧ ದೂರು ದಾಖಲಿಸಿದ್ದರು.

ದತ್ತಾ ಅವರ ಪ್ರಕಾರ, ಅವರು 14 ಸಾಕ್ಷಿಗಳ ಹೆಸರುಗಳನ್ನು ಕೊಟ್ಟಿದ್ದರು. ಆದರೆ, ಪೊಲೀಸರು ಅವರಲ್ಲಿ ಯಾರೊಬ್ಬರಿಂದಲೂ ಹೇಳಿಕೆಗಳನ್ನು ಪಡೆದುಕೊಂಡಿಲ್ಲ. ಬದಲಾಗಿ ಬಿ ರಿಪೋರ್ಟ್ ಹಾಕಲು ಪ್ರಯತ್ನಿಸಿದ್ದರು. ಅಂದರೆ, ಆರೋಪಿಯ ವಿರುದ್ಧ ಆರೋಪ ಅಥವಾ ವಿಚಾರಣೆಗೆ ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿಲ್ಲ ಎಂದರ್ಥ. ಇದರ ವಿರುದ್ಧ ಹೋರಾಡುವುದಾಗಿ ದತ್ತಾ ಹೇಳಿದ್ದಾರೆ.

‘ತಮಗೆ ಸಾರ್ವಜನಿಕರಿಂದ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಹಾಗೂ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ತಮ್ಮನ್ನು ಸಂಪರ್ಕಿಸಿಲ್ಲ ಎಂಬುದಾಗಿ ನಾನು ಉಲ್ಲೇಖಿಸಿರುವ ಸಾಕ್ಷಿದಾರರು ನನಗೆ ಹೇಳಿದ್ದಾರೆ. ಒಬ್ಬ ಸಾಕ್ಷಿದಾರ ಊರನ್ನೇ ತೊರೆದಿದ್ದಾರೆ. ಮತ್ತೊಬ್ಬ ಮಧ್ಯಪ್ರಾಚ್ಯಕ್ಕೆ ಓಡಿಹೋಗಿದ್ದಾರೆ. ಸಾಕ್ಷಿಯಾಗಿದ್ದ ಮತ್ತೊಬ್ಬ ಮಹಿಳೆ ಭಯದಿಂದ ಮುಂದೆ ಬರುತ್ತಿಲ್ಲ. ಪ್ರತಿಭಟನಾ ಅರ್ಜಿ ದಾಖಲಿಸಿದ ನಂತರ, ಅದೂ ಐದು ವರ್ಷಗಳ ಬಳಿಕ ನ್ಯಾಯಾಲಯ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ನನಗೆ ನ್ಯಾಯ ಸಿಗುವುದು ಯಾವಾಗ?’ ಎಂದು ದತ್ತಾ ಪ್ರಶ್ನಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಎಲ್ಲಿಗೆ ಹೋದರೂ, ಅಪರಿಚಿತ ವ್ಯಕ್ತಿಗಳ ಗುಂಪು ನನ್ನನ್ನು ಹಿಂಬಾಲಿಸುತ್ತಿದೆ ಎಂದು ದತ್ತಾ ಆತಂಕ ವ್ಯಕ್ತಪಡಿಸಿದ್ದಾರೆ.

‘2022ರಲ್ಲಿ ಉಜ್ಜಯಿನಿಯಲ್ಲಿ ಅಪಘಾತಕ್ಕೊಳಗಾದೆ. ನಾನು ಪ್ರಯಾಣಿಸುತ್ತಿದ್ದ ಆಟೋರಿಕ್ಷಾದ ಬ್ರೇಕ್‌ ಅನ್ನು ಯಾರೋ ತುಂಡರಿಸಿದ್ದರು. ಕಾಕತಾಳೀಯವೆಂದು ನಿರ್ಲಕ್ಷಿಸಲು, ಆ ರೀತಿ ಆದದ್ದು ಒಮ್ಮೆಯಷ್ಟೇ ಅಲ್ಲ’ ಎಂದು ಹೇಳಿದ್ದಾರೆ.

ನಾನು ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ನಾನೂ ಒಬ್ಬರ ಮಗಳು. ನನಗೆ ಈ ದೇಶದಲ್ಲಿ ಬದುಕುವ ಮತ್ತು ಸುರಕ್ಷಿತವಾಗಿರುವ ಹಕ್ಕಿಲ್ಲವೇ? ಎಂದು ತನುಶ್ರೀ ದತ್ತಾ ಕೇಳಿದ್ದಾರೆ.

ಇದನ್ನೂ ಓದಿ : ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...