Homeಮುಖಪುಟ#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

- Advertisement -
- Advertisement -

ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಅಪರಾಧಿಗಳನ್ನು ರಕ್ಷಿಸುತ್ತಾರೋ, ಅಲ್ಲಿಯವರೆಗೆ ಯಾವುದೇ ಚಳವಳಿ ಅಥವಾ ವರದಿಯಿಂದ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ನಟಿ ತನುಶ್ರೀ ದತ್ತಾ ಹೇಳಿದ್ದಾರೆ.

ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಆಘಾತಕಾರಿ ಕಿರುಕುಳ ಮತ್ತು ಲೈಂಗಿಕ ಶೋಷಣೆಯನ್ನು ಬಹಿರಂಗಪಡಿಸಿದ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.

ತನುಶ್ರೀ ದತ್ತಾ 2018ರಲ್ಲಿ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಬಳಿಕ ಅದು ‘ಮೀಟೂ’ ಅಭಿಯಾನಕ್ಕೆ ನಾಂದಿಯಾಗಿತ್ತು. ಆದರೆ, ನಾನಾ ಪಾಟೇಕರ್ ತನುಶ್ರೀ ಅವರ ಆರೋಪಗಳನ್ನು ನಿರಾಕರಿಸಿದ್ದರು.

‘ಈಗಲೂ ನ್ಯಾಯಕ್ಕಾಗಿ ಕಾಯುತ್ತಿರುವೆ’ ಎಂದಿರುವ ತನುಶ್ರೀ ದತ್ತಾ, ಸಿನಿಮಾ ರಂಗದಲ್ಲಿ ತಾವೆದುರಿಸಿದ ದೌರ್ಜನ್ಯಗಳ ಬಗ್ಗೆ ನ್ಯಾ. ಹೇಮಾ ಸಮಿತಿಗೆ ಮಾಹಿತಿ ನೀಡಿರುವ ಮಹಿಳಾ ಕಲಾವಿದರನ್ನು ಬೆಂಬಲಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿರುವ ತನುಶ್ರೀ ದತ್ತಾ”ಇದು ‘ಮೀಟೂ’ ಪ್ರಕರಣಗಳಂತೆಯೇ ಕಾಣುತ್ತಿದೆ. ಸಮಾಜದೆದುರು ಸಂಭಾವಿತರಂತೆ ಕಾಣಿಸಿಕೊಳ್ಳುವ ಅವರು (ಆರೋಪಿಗಳು), ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ. ಇಂತಹ ವರದಿಗಳಿಂದ ಏನೂ ಆಗುವುದಿಲ್ಲ. ಏಕೆಂದರೆ, ಮಹಿಳೆಯರ ಮೇಲಿನ ದಾಳಿ ಮತ್ತು ದೌರ್ಜನ್ಯಗಳು ಈಗಲೂ ಮುಂದುವರೆದಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೀವು ಮಿಸ್‌ ಇಂಡಿಯಾ ಅಥವಾ ನಟಿ, ಇಲ್ಲವೇ ವಿದ್ಯಾವಂತೆ-ಏನೇ ಆಗಿದ್ದರೂ, ಈ ದೇಶದಲ್ಲಿ ಅದು ಮುಖ್ಯವಾಗುವುದಿಲ್ಲ. ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಕ್ರಿಮಿನಲ್‌ಗಳನ್ನು ರಕ್ಷಿಸುಸುತ್ತಾರೋ, ಅಲ್ಲಿಯವರೆಗೆ ಯಾವ ಚಳವಳಿ ಅಥವಾ ಯಾರೊಬ್ಬರ ವಿಚಾರಗಳು ಏನೂ ಮಾಡಲಾಗದು. ಈಗ ಈ ಸಮಿತಿ ವರದಿ. ಆಗ ವಿಶಾಖ ಸಮಿತಿ (ಮಹಿಳೆಯರ ಕುಂದು ಕೊರತೆ ಸಮಿತಿ). ಅಷ್ಟೇ ಅಲ್ಲ, ಸಾಕಷ್ಟು ಸಮಿತಿಗಳನ್ನು ರಚಿಸಲಾಗಿದೆ. ಬಹಳಷ್ಟು ವರದಿಗಳು ಬಂದಿವೆ. ಆದರೆ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುಂಬಿರುವಾಗ ಹಾಗೂ ಅಕ್ರಮವಾಗಿ ಸಂಪಾದಿಸಿದ ಹಣದಲ್ಲಿ ವ್ಯವಸ್ಥೆಯನ್ನು ಕೊಂಡೊಕೊಳ್ಳುತ್ತಿರುವಾಗ ಅಂತಹ ವ್ಯವಸ್ಥೆಯನ್ನು ಪಾಲಿಸುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

1997ರಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ವಿಶಾಖ ಮಾರ್ಗಸೂಚಿಗಳು, ಖಾಸಗಿ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಲೈಂಗಿಕ ಕಿರುಕುಳದ ದೂರುಗಳ ಪರಿಹಾರಕ್ಕಾಗಿ ಕಾರ್ಯವಿಧಾನವನ್ನು ಸ್ಥಾಪಿಸುವುದನ್ನು ಕಡ್ಡಾಯಗೊಳಿಸಿದೆ.

2009ರ “ಹಾರ್ನ್ ‘ಓಕೆ’ ಪ್ಲೀಸ್” ಚಿತ್ರದ ಸೆಟ್‌ನಲ್ಲಿ ತನ್ನ ನೃತ್ಯದ ಹೆಜ್ಜೆಗಳನ್ನು ತೋರಿಸುವ ನೆಪದಲ್ಲಿ ನಾನಾ ಪಾಟೇಕರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು 2018 ರಲ್ಲಿ ದತ್ತಾ ಆರೋಪಿಸಿದ್ದರು.

ಅವರು ಪಾಟೇಕರ್, ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ, ನಿರ್ದೇಶಕ ರಾಕೇಶ್ ಸಾರಂಗ್ ಮತ್ತು ಚಿತ್ರದ ನಿರ್ಮಾಪಕರ ವಿರುದ್ಧ ದೂರು ದಾಖಲಿಸಿದ್ದರು.

ದತ್ತಾ ಅವರ ಪ್ರಕಾರ, ಅವರು 14 ಸಾಕ್ಷಿಗಳ ಹೆಸರುಗಳನ್ನು ಕೊಟ್ಟಿದ್ದರು. ಆದರೆ, ಪೊಲೀಸರು ಅವರಲ್ಲಿ ಯಾರೊಬ್ಬರಿಂದಲೂ ಹೇಳಿಕೆಗಳನ್ನು ಪಡೆದುಕೊಂಡಿಲ್ಲ. ಬದಲಾಗಿ ಬಿ ರಿಪೋರ್ಟ್ ಹಾಕಲು ಪ್ರಯತ್ನಿಸಿದ್ದರು. ಅಂದರೆ, ಆರೋಪಿಯ ವಿರುದ್ಧ ಆರೋಪ ಅಥವಾ ವಿಚಾರಣೆಗೆ ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿಲ್ಲ ಎಂದರ್ಥ. ಇದರ ವಿರುದ್ಧ ಹೋರಾಡುವುದಾಗಿ ದತ್ತಾ ಹೇಳಿದ್ದಾರೆ.

‘ತಮಗೆ ಸಾರ್ವಜನಿಕರಿಂದ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಹಾಗೂ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ತಮ್ಮನ್ನು ಸಂಪರ್ಕಿಸಿಲ್ಲ ಎಂಬುದಾಗಿ ನಾನು ಉಲ್ಲೇಖಿಸಿರುವ ಸಾಕ್ಷಿದಾರರು ನನಗೆ ಹೇಳಿದ್ದಾರೆ. ಒಬ್ಬ ಸಾಕ್ಷಿದಾರ ಊರನ್ನೇ ತೊರೆದಿದ್ದಾರೆ. ಮತ್ತೊಬ್ಬ ಮಧ್ಯಪ್ರಾಚ್ಯಕ್ಕೆ ಓಡಿಹೋಗಿದ್ದಾರೆ. ಸಾಕ್ಷಿಯಾಗಿದ್ದ ಮತ್ತೊಬ್ಬ ಮಹಿಳೆ ಭಯದಿಂದ ಮುಂದೆ ಬರುತ್ತಿಲ್ಲ. ಪ್ರತಿಭಟನಾ ಅರ್ಜಿ ದಾಖಲಿಸಿದ ನಂತರ, ಅದೂ ಐದು ವರ್ಷಗಳ ಬಳಿಕ ನ್ಯಾಯಾಲಯ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ನನಗೆ ನ್ಯಾಯ ಸಿಗುವುದು ಯಾವಾಗ?’ ಎಂದು ದತ್ತಾ ಪ್ರಶ್ನಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಎಲ್ಲಿಗೆ ಹೋದರೂ, ಅಪರಿಚಿತ ವ್ಯಕ್ತಿಗಳ ಗುಂಪು ನನ್ನನ್ನು ಹಿಂಬಾಲಿಸುತ್ತಿದೆ ಎಂದು ದತ್ತಾ ಆತಂಕ ವ್ಯಕ್ತಪಡಿಸಿದ್ದಾರೆ.

‘2022ರಲ್ಲಿ ಉಜ್ಜಯಿನಿಯಲ್ಲಿ ಅಪಘಾತಕ್ಕೊಳಗಾದೆ. ನಾನು ಪ್ರಯಾಣಿಸುತ್ತಿದ್ದ ಆಟೋರಿಕ್ಷಾದ ಬ್ರೇಕ್‌ ಅನ್ನು ಯಾರೋ ತುಂಡರಿಸಿದ್ದರು. ಕಾಕತಾಳೀಯವೆಂದು ನಿರ್ಲಕ್ಷಿಸಲು, ಆ ರೀತಿ ಆದದ್ದು ಒಮ್ಮೆಯಷ್ಟೇ ಅಲ್ಲ’ ಎಂದು ಹೇಳಿದ್ದಾರೆ.

ನಾನು ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ನಾನೂ ಒಬ್ಬರ ಮಗಳು. ನನಗೆ ಈ ದೇಶದಲ್ಲಿ ಬದುಕುವ ಮತ್ತು ಸುರಕ್ಷಿತವಾಗಿರುವ ಹಕ್ಕಿಲ್ಲವೇ? ಎಂದು ತನುಶ್ರೀ ದತ್ತಾ ಕೇಳಿದ್ದಾರೆ.

ಇದನ್ನೂ ಓದಿ : ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...

ನೇಪಾಳದಲ್ಲಿ ಜಲಪ್ರಳಯ: 300 ಭಾರತೀಯರು ಸೇರಿ 1,500 ಮಂದಿ ನಾಪತ್ತೆ, ಸಾವಿನ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ಈ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್...