Homeಮುಖಪುಟ#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

- Advertisement -
- Advertisement -

ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಅಪರಾಧಿಗಳನ್ನು ರಕ್ಷಿಸುತ್ತಾರೋ, ಅಲ್ಲಿಯವರೆಗೆ ಯಾವುದೇ ಚಳವಳಿ ಅಥವಾ ವರದಿಯಿಂದ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ನಟಿ ತನುಶ್ರೀ ದತ್ತಾ ಹೇಳಿದ್ದಾರೆ.

ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಆಘಾತಕಾರಿ ಕಿರುಕುಳ ಮತ್ತು ಲೈಂಗಿಕ ಶೋಷಣೆಯನ್ನು ಬಹಿರಂಗಪಡಿಸಿದ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.

ತನುಶ್ರೀ ದತ್ತಾ 2018ರಲ್ಲಿ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಬಳಿಕ ಅದು ‘ಮೀಟೂ’ ಅಭಿಯಾನಕ್ಕೆ ನಾಂದಿಯಾಗಿತ್ತು. ಆದರೆ, ನಾನಾ ಪಾಟೇಕರ್ ತನುಶ್ರೀ ಅವರ ಆರೋಪಗಳನ್ನು ನಿರಾಕರಿಸಿದ್ದರು.

‘ಈಗಲೂ ನ್ಯಾಯಕ್ಕಾಗಿ ಕಾಯುತ್ತಿರುವೆ’ ಎಂದಿರುವ ತನುಶ್ರೀ ದತ್ತಾ, ಸಿನಿಮಾ ರಂಗದಲ್ಲಿ ತಾವೆದುರಿಸಿದ ದೌರ್ಜನ್ಯಗಳ ಬಗ್ಗೆ ನ್ಯಾ. ಹೇಮಾ ಸಮಿತಿಗೆ ಮಾಹಿತಿ ನೀಡಿರುವ ಮಹಿಳಾ ಕಲಾವಿದರನ್ನು ಬೆಂಬಲಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿರುವ ತನುಶ್ರೀ ದತ್ತಾ”ಇದು ‘ಮೀಟೂ’ ಪ್ರಕರಣಗಳಂತೆಯೇ ಕಾಣುತ್ತಿದೆ. ಸಮಾಜದೆದುರು ಸಂಭಾವಿತರಂತೆ ಕಾಣಿಸಿಕೊಳ್ಳುವ ಅವರು (ಆರೋಪಿಗಳು), ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ. ಇಂತಹ ವರದಿಗಳಿಂದ ಏನೂ ಆಗುವುದಿಲ್ಲ. ಏಕೆಂದರೆ, ಮಹಿಳೆಯರ ಮೇಲಿನ ದಾಳಿ ಮತ್ತು ದೌರ್ಜನ್ಯಗಳು ಈಗಲೂ ಮುಂದುವರೆದಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೀವು ಮಿಸ್‌ ಇಂಡಿಯಾ ಅಥವಾ ನಟಿ, ಇಲ್ಲವೇ ವಿದ್ಯಾವಂತೆ-ಏನೇ ಆಗಿದ್ದರೂ, ಈ ದೇಶದಲ್ಲಿ ಅದು ಮುಖ್ಯವಾಗುವುದಿಲ್ಲ. ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಕ್ರಿಮಿನಲ್‌ಗಳನ್ನು ರಕ್ಷಿಸುಸುತ್ತಾರೋ, ಅಲ್ಲಿಯವರೆಗೆ ಯಾವ ಚಳವಳಿ ಅಥವಾ ಯಾರೊಬ್ಬರ ವಿಚಾರಗಳು ಏನೂ ಮಾಡಲಾಗದು. ಈಗ ಈ ಸಮಿತಿ ವರದಿ. ಆಗ ವಿಶಾಖ ಸಮಿತಿ (ಮಹಿಳೆಯರ ಕುಂದು ಕೊರತೆ ಸಮಿತಿ). ಅಷ್ಟೇ ಅಲ್ಲ, ಸಾಕಷ್ಟು ಸಮಿತಿಗಳನ್ನು ರಚಿಸಲಾಗಿದೆ. ಬಹಳಷ್ಟು ವರದಿಗಳು ಬಂದಿವೆ. ಆದರೆ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುಂಬಿರುವಾಗ ಹಾಗೂ ಅಕ್ರಮವಾಗಿ ಸಂಪಾದಿಸಿದ ಹಣದಲ್ಲಿ ವ್ಯವಸ್ಥೆಯನ್ನು ಕೊಂಡೊಕೊಳ್ಳುತ್ತಿರುವಾಗ ಅಂತಹ ವ್ಯವಸ್ಥೆಯನ್ನು ಪಾಲಿಸುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

1997ರಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ವಿಶಾಖ ಮಾರ್ಗಸೂಚಿಗಳು, ಖಾಸಗಿ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಲೈಂಗಿಕ ಕಿರುಕುಳದ ದೂರುಗಳ ಪರಿಹಾರಕ್ಕಾಗಿ ಕಾರ್ಯವಿಧಾನವನ್ನು ಸ್ಥಾಪಿಸುವುದನ್ನು ಕಡ್ಡಾಯಗೊಳಿಸಿದೆ.

2009ರ “ಹಾರ್ನ್ ‘ಓಕೆ’ ಪ್ಲೀಸ್” ಚಿತ್ರದ ಸೆಟ್‌ನಲ್ಲಿ ತನ್ನ ನೃತ್ಯದ ಹೆಜ್ಜೆಗಳನ್ನು ತೋರಿಸುವ ನೆಪದಲ್ಲಿ ನಾನಾ ಪಾಟೇಕರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು 2018 ರಲ್ಲಿ ದತ್ತಾ ಆರೋಪಿಸಿದ್ದರು.

ಅವರು ಪಾಟೇಕರ್, ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ, ನಿರ್ದೇಶಕ ರಾಕೇಶ್ ಸಾರಂಗ್ ಮತ್ತು ಚಿತ್ರದ ನಿರ್ಮಾಪಕರ ವಿರುದ್ಧ ದೂರು ದಾಖಲಿಸಿದ್ದರು.

ದತ್ತಾ ಅವರ ಪ್ರಕಾರ, ಅವರು 14 ಸಾಕ್ಷಿಗಳ ಹೆಸರುಗಳನ್ನು ಕೊಟ್ಟಿದ್ದರು. ಆದರೆ, ಪೊಲೀಸರು ಅವರಲ್ಲಿ ಯಾರೊಬ್ಬರಿಂದಲೂ ಹೇಳಿಕೆಗಳನ್ನು ಪಡೆದುಕೊಂಡಿಲ್ಲ. ಬದಲಾಗಿ ಬಿ ರಿಪೋರ್ಟ್ ಹಾಕಲು ಪ್ರಯತ್ನಿಸಿದ್ದರು. ಅಂದರೆ, ಆರೋಪಿಯ ವಿರುದ್ಧ ಆರೋಪ ಅಥವಾ ವಿಚಾರಣೆಗೆ ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿಲ್ಲ ಎಂದರ್ಥ. ಇದರ ವಿರುದ್ಧ ಹೋರಾಡುವುದಾಗಿ ದತ್ತಾ ಹೇಳಿದ್ದಾರೆ.

‘ತಮಗೆ ಸಾರ್ವಜನಿಕರಿಂದ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಹಾಗೂ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ತಮ್ಮನ್ನು ಸಂಪರ್ಕಿಸಿಲ್ಲ ಎಂಬುದಾಗಿ ನಾನು ಉಲ್ಲೇಖಿಸಿರುವ ಸಾಕ್ಷಿದಾರರು ನನಗೆ ಹೇಳಿದ್ದಾರೆ. ಒಬ್ಬ ಸಾಕ್ಷಿದಾರ ಊರನ್ನೇ ತೊರೆದಿದ್ದಾರೆ. ಮತ್ತೊಬ್ಬ ಮಧ್ಯಪ್ರಾಚ್ಯಕ್ಕೆ ಓಡಿಹೋಗಿದ್ದಾರೆ. ಸಾಕ್ಷಿಯಾಗಿದ್ದ ಮತ್ತೊಬ್ಬ ಮಹಿಳೆ ಭಯದಿಂದ ಮುಂದೆ ಬರುತ್ತಿಲ್ಲ. ಪ್ರತಿಭಟನಾ ಅರ್ಜಿ ದಾಖಲಿಸಿದ ನಂತರ, ಅದೂ ಐದು ವರ್ಷಗಳ ಬಳಿಕ ನ್ಯಾಯಾಲಯ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ನನಗೆ ನ್ಯಾಯ ಸಿಗುವುದು ಯಾವಾಗ?’ ಎಂದು ದತ್ತಾ ಪ್ರಶ್ನಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಎಲ್ಲಿಗೆ ಹೋದರೂ, ಅಪರಿಚಿತ ವ್ಯಕ್ತಿಗಳ ಗುಂಪು ನನ್ನನ್ನು ಹಿಂಬಾಲಿಸುತ್ತಿದೆ ಎಂದು ದತ್ತಾ ಆತಂಕ ವ್ಯಕ್ತಪಡಿಸಿದ್ದಾರೆ.

‘2022ರಲ್ಲಿ ಉಜ್ಜಯಿನಿಯಲ್ಲಿ ಅಪಘಾತಕ್ಕೊಳಗಾದೆ. ನಾನು ಪ್ರಯಾಣಿಸುತ್ತಿದ್ದ ಆಟೋರಿಕ್ಷಾದ ಬ್ರೇಕ್‌ ಅನ್ನು ಯಾರೋ ತುಂಡರಿಸಿದ್ದರು. ಕಾಕತಾಳೀಯವೆಂದು ನಿರ್ಲಕ್ಷಿಸಲು, ಆ ರೀತಿ ಆದದ್ದು ಒಮ್ಮೆಯಷ್ಟೇ ಅಲ್ಲ’ ಎಂದು ಹೇಳಿದ್ದಾರೆ.

ನಾನು ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ನಾನೂ ಒಬ್ಬರ ಮಗಳು. ನನಗೆ ಈ ದೇಶದಲ್ಲಿ ಬದುಕುವ ಮತ್ತು ಸುರಕ್ಷಿತವಾಗಿರುವ ಹಕ್ಕಿಲ್ಲವೇ? ಎಂದು ತನುಶ್ರೀ ದತ್ತಾ ಕೇಳಿದ್ದಾರೆ.

ಇದನ್ನೂ ಓದಿ : ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....