Homeಮುಖಪುಟ#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

- Advertisement -
- Advertisement -

ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಅಪರಾಧಿಗಳನ್ನು ರಕ್ಷಿಸುತ್ತಾರೋ, ಅಲ್ಲಿಯವರೆಗೆ ಯಾವುದೇ ಚಳವಳಿ ಅಥವಾ ವರದಿಯಿಂದ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ನಟಿ ತನುಶ್ರೀ ದತ್ತಾ ಹೇಳಿದ್ದಾರೆ.

ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಆಘಾತಕಾರಿ ಕಿರುಕುಳ ಮತ್ತು ಲೈಂಗಿಕ ಶೋಷಣೆಯನ್ನು ಬಹಿರಂಗಪಡಿಸಿದ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.

ತನುಶ್ರೀ ದತ್ತಾ 2018ರಲ್ಲಿ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಬಳಿಕ ಅದು ‘ಮೀಟೂ’ ಅಭಿಯಾನಕ್ಕೆ ನಾಂದಿಯಾಗಿತ್ತು. ಆದರೆ, ನಾನಾ ಪಾಟೇಕರ್ ತನುಶ್ರೀ ಅವರ ಆರೋಪಗಳನ್ನು ನಿರಾಕರಿಸಿದ್ದರು.

‘ಈಗಲೂ ನ್ಯಾಯಕ್ಕಾಗಿ ಕಾಯುತ್ತಿರುವೆ’ ಎಂದಿರುವ ತನುಶ್ರೀ ದತ್ತಾ, ಸಿನಿಮಾ ರಂಗದಲ್ಲಿ ತಾವೆದುರಿಸಿದ ದೌರ್ಜನ್ಯಗಳ ಬಗ್ಗೆ ನ್ಯಾ. ಹೇಮಾ ಸಮಿತಿಗೆ ಮಾಹಿತಿ ನೀಡಿರುವ ಮಹಿಳಾ ಕಲಾವಿದರನ್ನು ಬೆಂಬಲಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿರುವ ತನುಶ್ರೀ ದತ್ತಾ”ಇದು ‘ಮೀಟೂ’ ಪ್ರಕರಣಗಳಂತೆಯೇ ಕಾಣುತ್ತಿದೆ. ಸಮಾಜದೆದುರು ಸಂಭಾವಿತರಂತೆ ಕಾಣಿಸಿಕೊಳ್ಳುವ ಅವರು (ಆರೋಪಿಗಳು), ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ. ಇಂತಹ ವರದಿಗಳಿಂದ ಏನೂ ಆಗುವುದಿಲ್ಲ. ಏಕೆಂದರೆ, ಮಹಿಳೆಯರ ಮೇಲಿನ ದಾಳಿ ಮತ್ತು ದೌರ್ಜನ್ಯಗಳು ಈಗಲೂ ಮುಂದುವರೆದಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೀವು ಮಿಸ್‌ ಇಂಡಿಯಾ ಅಥವಾ ನಟಿ, ಇಲ್ಲವೇ ವಿದ್ಯಾವಂತೆ-ಏನೇ ಆಗಿದ್ದರೂ, ಈ ದೇಶದಲ್ಲಿ ಅದು ಮುಖ್ಯವಾಗುವುದಿಲ್ಲ. ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಕ್ರಿಮಿನಲ್‌ಗಳನ್ನು ರಕ್ಷಿಸುಸುತ್ತಾರೋ, ಅಲ್ಲಿಯವರೆಗೆ ಯಾವ ಚಳವಳಿ ಅಥವಾ ಯಾರೊಬ್ಬರ ವಿಚಾರಗಳು ಏನೂ ಮಾಡಲಾಗದು. ಈಗ ಈ ಸಮಿತಿ ವರದಿ. ಆಗ ವಿಶಾಖ ಸಮಿತಿ (ಮಹಿಳೆಯರ ಕುಂದು ಕೊರತೆ ಸಮಿತಿ). ಅಷ್ಟೇ ಅಲ್ಲ, ಸಾಕಷ್ಟು ಸಮಿತಿಗಳನ್ನು ರಚಿಸಲಾಗಿದೆ. ಬಹಳಷ್ಟು ವರದಿಗಳು ಬಂದಿವೆ. ಆದರೆ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುಂಬಿರುವಾಗ ಹಾಗೂ ಅಕ್ರಮವಾಗಿ ಸಂಪಾದಿಸಿದ ಹಣದಲ್ಲಿ ವ್ಯವಸ್ಥೆಯನ್ನು ಕೊಂಡೊಕೊಳ್ಳುತ್ತಿರುವಾಗ ಅಂತಹ ವ್ಯವಸ್ಥೆಯನ್ನು ಪಾಲಿಸುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

1997ರಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ವಿಶಾಖ ಮಾರ್ಗಸೂಚಿಗಳು, ಖಾಸಗಿ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಲೈಂಗಿಕ ಕಿರುಕುಳದ ದೂರುಗಳ ಪರಿಹಾರಕ್ಕಾಗಿ ಕಾರ್ಯವಿಧಾನವನ್ನು ಸ್ಥಾಪಿಸುವುದನ್ನು ಕಡ್ಡಾಯಗೊಳಿಸಿದೆ.

2009ರ “ಹಾರ್ನ್ ‘ಓಕೆ’ ಪ್ಲೀಸ್” ಚಿತ್ರದ ಸೆಟ್‌ನಲ್ಲಿ ತನ್ನ ನೃತ್ಯದ ಹೆಜ್ಜೆಗಳನ್ನು ತೋರಿಸುವ ನೆಪದಲ್ಲಿ ನಾನಾ ಪಾಟೇಕರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು 2018 ರಲ್ಲಿ ದತ್ತಾ ಆರೋಪಿಸಿದ್ದರು.

ಅವರು ಪಾಟೇಕರ್, ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ, ನಿರ್ದೇಶಕ ರಾಕೇಶ್ ಸಾರಂಗ್ ಮತ್ತು ಚಿತ್ರದ ನಿರ್ಮಾಪಕರ ವಿರುದ್ಧ ದೂರು ದಾಖಲಿಸಿದ್ದರು.

ದತ್ತಾ ಅವರ ಪ್ರಕಾರ, ಅವರು 14 ಸಾಕ್ಷಿಗಳ ಹೆಸರುಗಳನ್ನು ಕೊಟ್ಟಿದ್ದರು. ಆದರೆ, ಪೊಲೀಸರು ಅವರಲ್ಲಿ ಯಾರೊಬ್ಬರಿಂದಲೂ ಹೇಳಿಕೆಗಳನ್ನು ಪಡೆದುಕೊಂಡಿಲ್ಲ. ಬದಲಾಗಿ ಬಿ ರಿಪೋರ್ಟ್ ಹಾಕಲು ಪ್ರಯತ್ನಿಸಿದ್ದರು. ಅಂದರೆ, ಆರೋಪಿಯ ವಿರುದ್ಧ ಆರೋಪ ಅಥವಾ ವಿಚಾರಣೆಗೆ ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿಲ್ಲ ಎಂದರ್ಥ. ಇದರ ವಿರುದ್ಧ ಹೋರಾಡುವುದಾಗಿ ದತ್ತಾ ಹೇಳಿದ್ದಾರೆ.

‘ತಮಗೆ ಸಾರ್ವಜನಿಕರಿಂದ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಹಾಗೂ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ತಮ್ಮನ್ನು ಸಂಪರ್ಕಿಸಿಲ್ಲ ಎಂಬುದಾಗಿ ನಾನು ಉಲ್ಲೇಖಿಸಿರುವ ಸಾಕ್ಷಿದಾರರು ನನಗೆ ಹೇಳಿದ್ದಾರೆ. ಒಬ್ಬ ಸಾಕ್ಷಿದಾರ ಊರನ್ನೇ ತೊರೆದಿದ್ದಾರೆ. ಮತ್ತೊಬ್ಬ ಮಧ್ಯಪ್ರಾಚ್ಯಕ್ಕೆ ಓಡಿಹೋಗಿದ್ದಾರೆ. ಸಾಕ್ಷಿಯಾಗಿದ್ದ ಮತ್ತೊಬ್ಬ ಮಹಿಳೆ ಭಯದಿಂದ ಮುಂದೆ ಬರುತ್ತಿಲ್ಲ. ಪ್ರತಿಭಟನಾ ಅರ್ಜಿ ದಾಖಲಿಸಿದ ನಂತರ, ಅದೂ ಐದು ವರ್ಷಗಳ ಬಳಿಕ ನ್ಯಾಯಾಲಯ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ನನಗೆ ನ್ಯಾಯ ಸಿಗುವುದು ಯಾವಾಗ?’ ಎಂದು ದತ್ತಾ ಪ್ರಶ್ನಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಎಲ್ಲಿಗೆ ಹೋದರೂ, ಅಪರಿಚಿತ ವ್ಯಕ್ತಿಗಳ ಗುಂಪು ನನ್ನನ್ನು ಹಿಂಬಾಲಿಸುತ್ತಿದೆ ಎಂದು ದತ್ತಾ ಆತಂಕ ವ್ಯಕ್ತಪಡಿಸಿದ್ದಾರೆ.

‘2022ರಲ್ಲಿ ಉಜ್ಜಯಿನಿಯಲ್ಲಿ ಅಪಘಾತಕ್ಕೊಳಗಾದೆ. ನಾನು ಪ್ರಯಾಣಿಸುತ್ತಿದ್ದ ಆಟೋರಿಕ್ಷಾದ ಬ್ರೇಕ್‌ ಅನ್ನು ಯಾರೋ ತುಂಡರಿಸಿದ್ದರು. ಕಾಕತಾಳೀಯವೆಂದು ನಿರ್ಲಕ್ಷಿಸಲು, ಆ ರೀತಿ ಆದದ್ದು ಒಮ್ಮೆಯಷ್ಟೇ ಅಲ್ಲ’ ಎಂದು ಹೇಳಿದ್ದಾರೆ.

ನಾನು ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ನಾನೂ ಒಬ್ಬರ ಮಗಳು. ನನಗೆ ಈ ದೇಶದಲ್ಲಿ ಬದುಕುವ ಮತ್ತು ಸುರಕ್ಷಿತವಾಗಿರುವ ಹಕ್ಕಿಲ್ಲವೇ? ಎಂದು ತನುಶ್ರೀ ದತ್ತಾ ಕೇಳಿದ್ದಾರೆ.

ಇದನ್ನೂ ಓದಿ : ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...