Homeಮುಖಪುಟ#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

- Advertisement -
- Advertisement -

ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಅಪರಾಧಿಗಳನ್ನು ರಕ್ಷಿಸುತ್ತಾರೋ, ಅಲ್ಲಿಯವರೆಗೆ ಯಾವುದೇ ಚಳವಳಿ ಅಥವಾ ವರದಿಯಿಂದ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ನಟಿ ತನುಶ್ರೀ ದತ್ತಾ ಹೇಳಿದ್ದಾರೆ.

ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಆಘಾತಕಾರಿ ಕಿರುಕುಳ ಮತ್ತು ಲೈಂಗಿಕ ಶೋಷಣೆಯನ್ನು ಬಹಿರಂಗಪಡಿಸಿದ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.

ತನುಶ್ರೀ ದತ್ತಾ 2018ರಲ್ಲಿ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಬಳಿಕ ಅದು ‘ಮೀಟೂ’ ಅಭಿಯಾನಕ್ಕೆ ನಾಂದಿಯಾಗಿತ್ತು. ಆದರೆ, ನಾನಾ ಪಾಟೇಕರ್ ತನುಶ್ರೀ ಅವರ ಆರೋಪಗಳನ್ನು ನಿರಾಕರಿಸಿದ್ದರು.

‘ಈಗಲೂ ನ್ಯಾಯಕ್ಕಾಗಿ ಕಾಯುತ್ತಿರುವೆ’ ಎಂದಿರುವ ತನುಶ್ರೀ ದತ್ತಾ, ಸಿನಿಮಾ ರಂಗದಲ್ಲಿ ತಾವೆದುರಿಸಿದ ದೌರ್ಜನ್ಯಗಳ ಬಗ್ಗೆ ನ್ಯಾ. ಹೇಮಾ ಸಮಿತಿಗೆ ಮಾಹಿತಿ ನೀಡಿರುವ ಮಹಿಳಾ ಕಲಾವಿದರನ್ನು ಬೆಂಬಲಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿರುವ ತನುಶ್ರೀ ದತ್ತಾ”ಇದು ‘ಮೀಟೂ’ ಪ್ರಕರಣಗಳಂತೆಯೇ ಕಾಣುತ್ತಿದೆ. ಸಮಾಜದೆದುರು ಸಂಭಾವಿತರಂತೆ ಕಾಣಿಸಿಕೊಳ್ಳುವ ಅವರು (ಆರೋಪಿಗಳು), ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ. ಇಂತಹ ವರದಿಗಳಿಂದ ಏನೂ ಆಗುವುದಿಲ್ಲ. ಏಕೆಂದರೆ, ಮಹಿಳೆಯರ ಮೇಲಿನ ದಾಳಿ ಮತ್ತು ದೌರ್ಜನ್ಯಗಳು ಈಗಲೂ ಮುಂದುವರೆದಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೀವು ಮಿಸ್‌ ಇಂಡಿಯಾ ಅಥವಾ ನಟಿ, ಇಲ್ಲವೇ ವಿದ್ಯಾವಂತೆ-ಏನೇ ಆಗಿದ್ದರೂ, ಈ ದೇಶದಲ್ಲಿ ಅದು ಮುಖ್ಯವಾಗುವುದಿಲ್ಲ. ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಕ್ರಿಮಿನಲ್‌ಗಳನ್ನು ರಕ್ಷಿಸುಸುತ್ತಾರೋ, ಅಲ್ಲಿಯವರೆಗೆ ಯಾವ ಚಳವಳಿ ಅಥವಾ ಯಾರೊಬ್ಬರ ವಿಚಾರಗಳು ಏನೂ ಮಾಡಲಾಗದು. ಈಗ ಈ ಸಮಿತಿ ವರದಿ. ಆಗ ವಿಶಾಖ ಸಮಿತಿ (ಮಹಿಳೆಯರ ಕುಂದು ಕೊರತೆ ಸಮಿತಿ). ಅಷ್ಟೇ ಅಲ್ಲ, ಸಾಕಷ್ಟು ಸಮಿತಿಗಳನ್ನು ರಚಿಸಲಾಗಿದೆ. ಬಹಳಷ್ಟು ವರದಿಗಳು ಬಂದಿವೆ. ಆದರೆ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುಂಬಿರುವಾಗ ಹಾಗೂ ಅಕ್ರಮವಾಗಿ ಸಂಪಾದಿಸಿದ ಹಣದಲ್ಲಿ ವ್ಯವಸ್ಥೆಯನ್ನು ಕೊಂಡೊಕೊಳ್ಳುತ್ತಿರುವಾಗ ಅಂತಹ ವ್ಯವಸ್ಥೆಯನ್ನು ಪಾಲಿಸುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

1997ರಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ವಿಶಾಖ ಮಾರ್ಗಸೂಚಿಗಳು, ಖಾಸಗಿ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಲೈಂಗಿಕ ಕಿರುಕುಳದ ದೂರುಗಳ ಪರಿಹಾರಕ್ಕಾಗಿ ಕಾರ್ಯವಿಧಾನವನ್ನು ಸ್ಥಾಪಿಸುವುದನ್ನು ಕಡ್ಡಾಯಗೊಳಿಸಿದೆ.

2009ರ “ಹಾರ್ನ್ ‘ಓಕೆ’ ಪ್ಲೀಸ್” ಚಿತ್ರದ ಸೆಟ್‌ನಲ್ಲಿ ತನ್ನ ನೃತ್ಯದ ಹೆಜ್ಜೆಗಳನ್ನು ತೋರಿಸುವ ನೆಪದಲ್ಲಿ ನಾನಾ ಪಾಟೇಕರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು 2018 ರಲ್ಲಿ ದತ್ತಾ ಆರೋಪಿಸಿದ್ದರು.

ಅವರು ಪಾಟೇಕರ್, ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ, ನಿರ್ದೇಶಕ ರಾಕೇಶ್ ಸಾರಂಗ್ ಮತ್ತು ಚಿತ್ರದ ನಿರ್ಮಾಪಕರ ವಿರುದ್ಧ ದೂರು ದಾಖಲಿಸಿದ್ದರು.

ದತ್ತಾ ಅವರ ಪ್ರಕಾರ, ಅವರು 14 ಸಾಕ್ಷಿಗಳ ಹೆಸರುಗಳನ್ನು ಕೊಟ್ಟಿದ್ದರು. ಆದರೆ, ಪೊಲೀಸರು ಅವರಲ್ಲಿ ಯಾರೊಬ್ಬರಿಂದಲೂ ಹೇಳಿಕೆಗಳನ್ನು ಪಡೆದುಕೊಂಡಿಲ್ಲ. ಬದಲಾಗಿ ಬಿ ರಿಪೋರ್ಟ್ ಹಾಕಲು ಪ್ರಯತ್ನಿಸಿದ್ದರು. ಅಂದರೆ, ಆರೋಪಿಯ ವಿರುದ್ಧ ಆರೋಪ ಅಥವಾ ವಿಚಾರಣೆಗೆ ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿಲ್ಲ ಎಂದರ್ಥ. ಇದರ ವಿರುದ್ಧ ಹೋರಾಡುವುದಾಗಿ ದತ್ತಾ ಹೇಳಿದ್ದಾರೆ.

‘ತಮಗೆ ಸಾರ್ವಜನಿಕರಿಂದ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಹಾಗೂ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ತಮ್ಮನ್ನು ಸಂಪರ್ಕಿಸಿಲ್ಲ ಎಂಬುದಾಗಿ ನಾನು ಉಲ್ಲೇಖಿಸಿರುವ ಸಾಕ್ಷಿದಾರರು ನನಗೆ ಹೇಳಿದ್ದಾರೆ. ಒಬ್ಬ ಸಾಕ್ಷಿದಾರ ಊರನ್ನೇ ತೊರೆದಿದ್ದಾರೆ. ಮತ್ತೊಬ್ಬ ಮಧ್ಯಪ್ರಾಚ್ಯಕ್ಕೆ ಓಡಿಹೋಗಿದ್ದಾರೆ. ಸಾಕ್ಷಿಯಾಗಿದ್ದ ಮತ್ತೊಬ್ಬ ಮಹಿಳೆ ಭಯದಿಂದ ಮುಂದೆ ಬರುತ್ತಿಲ್ಲ. ಪ್ರತಿಭಟನಾ ಅರ್ಜಿ ದಾಖಲಿಸಿದ ನಂತರ, ಅದೂ ಐದು ವರ್ಷಗಳ ಬಳಿಕ ನ್ಯಾಯಾಲಯ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ನನಗೆ ನ್ಯಾಯ ಸಿಗುವುದು ಯಾವಾಗ?’ ಎಂದು ದತ್ತಾ ಪ್ರಶ್ನಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಎಲ್ಲಿಗೆ ಹೋದರೂ, ಅಪರಿಚಿತ ವ್ಯಕ್ತಿಗಳ ಗುಂಪು ನನ್ನನ್ನು ಹಿಂಬಾಲಿಸುತ್ತಿದೆ ಎಂದು ದತ್ತಾ ಆತಂಕ ವ್ಯಕ್ತಪಡಿಸಿದ್ದಾರೆ.

‘2022ರಲ್ಲಿ ಉಜ್ಜಯಿನಿಯಲ್ಲಿ ಅಪಘಾತಕ್ಕೊಳಗಾದೆ. ನಾನು ಪ್ರಯಾಣಿಸುತ್ತಿದ್ದ ಆಟೋರಿಕ್ಷಾದ ಬ್ರೇಕ್‌ ಅನ್ನು ಯಾರೋ ತುಂಡರಿಸಿದ್ದರು. ಕಾಕತಾಳೀಯವೆಂದು ನಿರ್ಲಕ್ಷಿಸಲು, ಆ ರೀತಿ ಆದದ್ದು ಒಮ್ಮೆಯಷ್ಟೇ ಅಲ್ಲ’ ಎಂದು ಹೇಳಿದ್ದಾರೆ.

ನಾನು ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ನಾನೂ ಒಬ್ಬರ ಮಗಳು. ನನಗೆ ಈ ದೇಶದಲ್ಲಿ ಬದುಕುವ ಮತ್ತು ಸುರಕ್ಷಿತವಾಗಿರುವ ಹಕ್ಕಿಲ್ಲವೇ? ಎಂದು ತನುಶ್ರೀ ದತ್ತಾ ಕೇಳಿದ್ದಾರೆ.

ಇದನ್ನೂ ಓದಿ : ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...