Homeಮುಖಪುಟ#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

- Advertisement -
- Advertisement -

ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಅಪರಾಧಿಗಳನ್ನು ರಕ್ಷಿಸುತ್ತಾರೋ, ಅಲ್ಲಿಯವರೆಗೆ ಯಾವುದೇ ಚಳವಳಿ ಅಥವಾ ವರದಿಯಿಂದ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ನಟಿ ತನುಶ್ರೀ ದತ್ತಾ ಹೇಳಿದ್ದಾರೆ.

ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಆಘಾತಕಾರಿ ಕಿರುಕುಳ ಮತ್ತು ಲೈಂಗಿಕ ಶೋಷಣೆಯನ್ನು ಬಹಿರಂಗಪಡಿಸಿದ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.

ತನುಶ್ರೀ ದತ್ತಾ 2018ರಲ್ಲಿ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಬಳಿಕ ಅದು ‘ಮೀಟೂ’ ಅಭಿಯಾನಕ್ಕೆ ನಾಂದಿಯಾಗಿತ್ತು. ಆದರೆ, ನಾನಾ ಪಾಟೇಕರ್ ತನುಶ್ರೀ ಅವರ ಆರೋಪಗಳನ್ನು ನಿರಾಕರಿಸಿದ್ದರು.

‘ಈಗಲೂ ನ್ಯಾಯಕ್ಕಾಗಿ ಕಾಯುತ್ತಿರುವೆ’ ಎಂದಿರುವ ತನುಶ್ರೀ ದತ್ತಾ, ಸಿನಿಮಾ ರಂಗದಲ್ಲಿ ತಾವೆದುರಿಸಿದ ದೌರ್ಜನ್ಯಗಳ ಬಗ್ಗೆ ನ್ಯಾ. ಹೇಮಾ ಸಮಿತಿಗೆ ಮಾಹಿತಿ ನೀಡಿರುವ ಮಹಿಳಾ ಕಲಾವಿದರನ್ನು ಬೆಂಬಲಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿರುವ ತನುಶ್ರೀ ದತ್ತಾ”ಇದು ‘ಮೀಟೂ’ ಪ್ರಕರಣಗಳಂತೆಯೇ ಕಾಣುತ್ತಿದೆ. ಸಮಾಜದೆದುರು ಸಂಭಾವಿತರಂತೆ ಕಾಣಿಸಿಕೊಳ್ಳುವ ಅವರು (ಆರೋಪಿಗಳು), ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ. ಇಂತಹ ವರದಿಗಳಿಂದ ಏನೂ ಆಗುವುದಿಲ್ಲ. ಏಕೆಂದರೆ, ಮಹಿಳೆಯರ ಮೇಲಿನ ದಾಳಿ ಮತ್ತು ದೌರ್ಜನ್ಯಗಳು ಈಗಲೂ ಮುಂದುವರೆದಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೀವು ಮಿಸ್‌ ಇಂಡಿಯಾ ಅಥವಾ ನಟಿ, ಇಲ್ಲವೇ ವಿದ್ಯಾವಂತೆ-ಏನೇ ಆಗಿದ್ದರೂ, ಈ ದೇಶದಲ್ಲಿ ಅದು ಮುಖ್ಯವಾಗುವುದಿಲ್ಲ. ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಕ್ರಿಮಿನಲ್‌ಗಳನ್ನು ರಕ್ಷಿಸುಸುತ್ತಾರೋ, ಅಲ್ಲಿಯವರೆಗೆ ಯಾವ ಚಳವಳಿ ಅಥವಾ ಯಾರೊಬ್ಬರ ವಿಚಾರಗಳು ಏನೂ ಮಾಡಲಾಗದು. ಈಗ ಈ ಸಮಿತಿ ವರದಿ. ಆಗ ವಿಶಾಖ ಸಮಿತಿ (ಮಹಿಳೆಯರ ಕುಂದು ಕೊರತೆ ಸಮಿತಿ). ಅಷ್ಟೇ ಅಲ್ಲ, ಸಾಕಷ್ಟು ಸಮಿತಿಗಳನ್ನು ರಚಿಸಲಾಗಿದೆ. ಬಹಳಷ್ಟು ವರದಿಗಳು ಬಂದಿವೆ. ಆದರೆ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುಂಬಿರುವಾಗ ಹಾಗೂ ಅಕ್ರಮವಾಗಿ ಸಂಪಾದಿಸಿದ ಹಣದಲ್ಲಿ ವ್ಯವಸ್ಥೆಯನ್ನು ಕೊಂಡೊಕೊಳ್ಳುತ್ತಿರುವಾಗ ಅಂತಹ ವ್ಯವಸ್ಥೆಯನ್ನು ಪಾಲಿಸುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

1997ರಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ವಿಶಾಖ ಮಾರ್ಗಸೂಚಿಗಳು, ಖಾಸಗಿ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಲೈಂಗಿಕ ಕಿರುಕುಳದ ದೂರುಗಳ ಪರಿಹಾರಕ್ಕಾಗಿ ಕಾರ್ಯವಿಧಾನವನ್ನು ಸ್ಥಾಪಿಸುವುದನ್ನು ಕಡ್ಡಾಯಗೊಳಿಸಿದೆ.

2009ರ “ಹಾರ್ನ್ ‘ಓಕೆ’ ಪ್ಲೀಸ್” ಚಿತ್ರದ ಸೆಟ್‌ನಲ್ಲಿ ತನ್ನ ನೃತ್ಯದ ಹೆಜ್ಜೆಗಳನ್ನು ತೋರಿಸುವ ನೆಪದಲ್ಲಿ ನಾನಾ ಪಾಟೇಕರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು 2018 ರಲ್ಲಿ ದತ್ತಾ ಆರೋಪಿಸಿದ್ದರು.

ಅವರು ಪಾಟೇಕರ್, ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ, ನಿರ್ದೇಶಕ ರಾಕೇಶ್ ಸಾರಂಗ್ ಮತ್ತು ಚಿತ್ರದ ನಿರ್ಮಾಪಕರ ವಿರುದ್ಧ ದೂರು ದಾಖಲಿಸಿದ್ದರು.

ದತ್ತಾ ಅವರ ಪ್ರಕಾರ, ಅವರು 14 ಸಾಕ್ಷಿಗಳ ಹೆಸರುಗಳನ್ನು ಕೊಟ್ಟಿದ್ದರು. ಆದರೆ, ಪೊಲೀಸರು ಅವರಲ್ಲಿ ಯಾರೊಬ್ಬರಿಂದಲೂ ಹೇಳಿಕೆಗಳನ್ನು ಪಡೆದುಕೊಂಡಿಲ್ಲ. ಬದಲಾಗಿ ಬಿ ರಿಪೋರ್ಟ್ ಹಾಕಲು ಪ್ರಯತ್ನಿಸಿದ್ದರು. ಅಂದರೆ, ಆರೋಪಿಯ ವಿರುದ್ಧ ಆರೋಪ ಅಥವಾ ವಿಚಾರಣೆಗೆ ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿಲ್ಲ ಎಂದರ್ಥ. ಇದರ ವಿರುದ್ಧ ಹೋರಾಡುವುದಾಗಿ ದತ್ತಾ ಹೇಳಿದ್ದಾರೆ.

‘ತಮಗೆ ಸಾರ್ವಜನಿಕರಿಂದ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಹಾಗೂ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ತಮ್ಮನ್ನು ಸಂಪರ್ಕಿಸಿಲ್ಲ ಎಂಬುದಾಗಿ ನಾನು ಉಲ್ಲೇಖಿಸಿರುವ ಸಾಕ್ಷಿದಾರರು ನನಗೆ ಹೇಳಿದ್ದಾರೆ. ಒಬ್ಬ ಸಾಕ್ಷಿದಾರ ಊರನ್ನೇ ತೊರೆದಿದ್ದಾರೆ. ಮತ್ತೊಬ್ಬ ಮಧ್ಯಪ್ರಾಚ್ಯಕ್ಕೆ ಓಡಿಹೋಗಿದ್ದಾರೆ. ಸಾಕ್ಷಿಯಾಗಿದ್ದ ಮತ್ತೊಬ್ಬ ಮಹಿಳೆ ಭಯದಿಂದ ಮುಂದೆ ಬರುತ್ತಿಲ್ಲ. ಪ್ರತಿಭಟನಾ ಅರ್ಜಿ ದಾಖಲಿಸಿದ ನಂತರ, ಅದೂ ಐದು ವರ್ಷಗಳ ಬಳಿಕ ನ್ಯಾಯಾಲಯ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ನನಗೆ ನ್ಯಾಯ ಸಿಗುವುದು ಯಾವಾಗ?’ ಎಂದು ದತ್ತಾ ಪ್ರಶ್ನಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಎಲ್ಲಿಗೆ ಹೋದರೂ, ಅಪರಿಚಿತ ವ್ಯಕ್ತಿಗಳ ಗುಂಪು ನನ್ನನ್ನು ಹಿಂಬಾಲಿಸುತ್ತಿದೆ ಎಂದು ದತ್ತಾ ಆತಂಕ ವ್ಯಕ್ತಪಡಿಸಿದ್ದಾರೆ.

‘2022ರಲ್ಲಿ ಉಜ್ಜಯಿನಿಯಲ್ಲಿ ಅಪಘಾತಕ್ಕೊಳಗಾದೆ. ನಾನು ಪ್ರಯಾಣಿಸುತ್ತಿದ್ದ ಆಟೋರಿಕ್ಷಾದ ಬ್ರೇಕ್‌ ಅನ್ನು ಯಾರೋ ತುಂಡರಿಸಿದ್ದರು. ಕಾಕತಾಳೀಯವೆಂದು ನಿರ್ಲಕ್ಷಿಸಲು, ಆ ರೀತಿ ಆದದ್ದು ಒಮ್ಮೆಯಷ್ಟೇ ಅಲ್ಲ’ ಎಂದು ಹೇಳಿದ್ದಾರೆ.

ನಾನು ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ನಾನೂ ಒಬ್ಬರ ಮಗಳು. ನನಗೆ ಈ ದೇಶದಲ್ಲಿ ಬದುಕುವ ಮತ್ತು ಸುರಕ್ಷಿತವಾಗಿರುವ ಹಕ್ಕಿಲ್ಲವೇ? ಎಂದು ತನುಶ್ರೀ ದತ್ತಾ ಕೇಳಿದ್ದಾರೆ.

ಇದನ್ನೂ ಓದಿ : ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...